‘ಈ ದಿನ’ ಫಲಶೃತಿ | ಚಿಕ್ಕಮಗಳೂರಿನ ಬೆಳಗೋಡು ಅಂಗನವಾಡಿಗೆ ‘ವಿದ್ಯುತ್ ಭಾಗ್ಯ’

Date:

ಅಗತ್ಯ ಮೂಲಭೂತ ಸೌಕರ್ಯಗಳ ಕೊರತೆ ಎದುರಿಸುತ್ತಿದ್ದ ಅಂಗನವಾಡಿಗೆ ಕೊನೆಗೂ ‘ವಿದ್ಯುತ್ ಭಾಗ್ಯ’ ಲಭಿಸಿದೆ. ಹೌದು. ಇದಕ್ಕೆ ಕಾರಣವಾದದ್ದು ಈ ದಿನ.ಕಾಮ್.

ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ದೊಡ್ಡಮಾಗರವಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿರುವ ಬೆಳಗೋಡು ಗ್ರಾಮದ ಅಂಗನವಾಡಿ ಕೇಂದ್ರವು ಹಲವು ಮೂಲ ಸೌಕರ್ಯಗಳಿಂದ ವಂಚಿತವಾಗಿತ್ತು. ಮಕ್ಕಳು ಹಾಗೂ ಅಂಗನವಾಡಿ ಶಿಕ್ಷಕಿಯರು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಈ ದಿನ.ಕಾಮ್ ವಿಸ್ತಾರವಾಗಿ ವರದಿ ಹಾಗೂ ವಿಡಿಯೋ ವರದಿಯನ್ನು ಆಗಸ್ಟ್ 13ರಂದು ಪ್ರಕಟಿಸಿತ್ತು. ಈ ದಿನ ವರದಿಯ ಬೆನ್ನಲ್ಲೇ ಸಂಬಂಧಪಟ್ಟ ಅಧಿಕಾರಿಗಳು ಅಂಗನವಾಡಿಗೆ ಭೇಟಿ ನೀಡಿದ್ದು, ಅಗತ್ಯ ಮೂಲಭೂತ ಸೌಕರ್ಯಗಳನ್ನು ಒದಗಿಸುವ ಭರವಸೆ ನೀಡಿದ್ದಾರೆ.

ಬೆಳಗೋಡು ಗ್ರಾಮದ ಅಂಗನವಾಡಿಗೆ ದಿನನಿತ್ಯ 10-15 ಕ್ಕಿಂತ ಹೆಚ್ಚು ಮಕ್ಕಳು ಬರುತ್ತಾರೆ. ಅಂಗನವಾಡಿಯಲ್ಲಿ ಮಕ್ಕಳಿಗೆ ಸರಿಯಾದ ಶೌಚಾಲಯ ವ್ಯವಸ್ಥೆ ಇಲ್ಲದಾಗಿತ್ತು. ಮಕ್ಕಳಿಗೆ ಶೌಚಾಲಯಕ್ಕೆ ಹೋಗಬೇಕಾದರೆ ಕಾಡಿನ ಮಧ್ಯೆ ಹಾಗೂ ಹಸಿರು ಗಿಡ ಗಂಟಿಗಳ ಪೊದೆಗಳ ಮಧ್ಯೆ ಹೋಗಬೇಕಿತ್ತು. ಆ ಜಾಗಗಳಲ್ಲಿ ಹಾವು ಉಪಟಳಗಳು ಹಾಗೂ ಕೀಟಗಳ ಕಾಟ ಎದುರಾಗುತ್ತಿದ್ದವು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸರಿಯಾದ ಶೌಚಾಲಯ ಹಾಗೂ ವಿದ್ಯುತ್ ವ್ಯವಸ್ಥೆ ಅಂಗನವಾಡಿಯಲ್ಲಿ ಇರಲಿಲ್ಲ. ಸರಿಯಾದ ಕುರ್ಚಿ,ಟೇಬಲ್ ವ್ಯವಸ್ಥೆ ಕೂಡ ಇರಲಿಲ್ಲ. ಅರ್ಧಕ್ಕೆ ನಿಲ್ಲಿಸಲಾಗಿದ್ದ ಶೌಚಾಲಯ ಹಾಗೂ ಅದಕ್ಕಾಗಿ ತೆಗೆದಿರುವ ಪಿಟ್ ಗುಂಡಿಯಲ್ಲಿ ನೀರು ಸೋರಿಕೆ ಉಂಟಾಗಿತ್ತು. ಅಂಗನವಾಡಿ ಅಡುಗೆ ಮನೆಯು ಪಕ್ಕದಲ್ಲಿರುವುದರಿಂದ ದುರ್ವಾಸನೆ ಬೀರುತ್ತಿದ್ದವು. ಇದರಿಂದಾಗಿ ಮಕ್ಕಳಿಗೆ ತುಂಬಾ ತೊಂದರೆಯಾಗುತ್ತಿದೆ ಎಂದು ಈದಿನ.ಕಾಮ್ ವಿಡಿಯೋ ಸಹಿತ ವರದಿ ಮಾಡಿತ್ತು.

1001422413
ಅಂಗನವಾಡಿ ಮುಂದೆ ಅಳವಡಿಸಲಾದ ವಿದ್ಯುತ್ ಕಂಬ ಹಾಗೂ ತಂತಿ

ಈ ದಿ‌ನ.ಕಾಮ್ನ ವರದಿಯನ್ನು ಗಮನಿಸಿದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಿಡಿಪಿಓ ರಂಗನಾಥ್ ಮತ್ತು ಸೂಪರ್ ವೈಸರ್ ಶಿವಕುಮಾರಿ ಅವರು ಬೆಳಗೋಡು ಗ್ರಾಮಕ್ಕೆ ಭೇಟಿ ನೀಡಿದ್ದಾರೆ. ಆ ಬಳಿಕ ಸಂಬಂಧಿಸಿದ ಇಲಾಖೆಯ ಮೂಲಕ ವಿದ್ಯುತ್ ಕಂಬ ಹಾಗೂ ವಿದ್ಯುತ್ ತಂತಿ ಅಳವಡಿಸಿದ್ದಾರೆ.

ಅಂಗನವಾಡಿ ಮಕ್ಕಳಿಗೆ ಕುಳಿತು ಕೊಳ್ಳುವುದಕ್ಕೆ ಬೆಂಚು, ಕುರ್ಚಿ, ಟೇಬಲ್, ಅಡುಗೆ ಮನೆ ಉಪಕರಣ, ಮಕ್ಕಳಿಗೆ ಪುಸ್ತಕ ಇಡುವುದಕ್ಕೆ ಟೇಬಲ್ ಮತ್ತು ಪಿಟ್ ಗುಂಡಿ ಸಮಸ್ಯೆ ಸರಿಪಡಿಸುತ್ತೇವೆಂದು ಸ್ಥಳಕ್ಕೆ ಬಂದು ಸಮಸ್ಯೆಯನ್ನು ಪರಿಶೀಲಿಸಿ ಕೆಲಸ ಮಾಡಿಸಿ ಕೊಡುತ್ತೇವೆಂದು ಭರವಸೆ ನೀಡಿದ್ದಾರೆ.

ಇದನ್ನು ಓದಿದ್ದೀರಾ? ರೇಣುಕಾಸ್ವಾಮಿ ಕೊಲೆ | ಹಾಸ್ಯನಟ ಚಿಕ್ಕಣ್ಣಗೆ ಮತ್ತೆ ಸಂಕಷ್ಟ?

ಅಂಗನವಾಡಿ ಸಮಸ್ಯೆಯನ್ನು ಬಗೆಹರಿಸಲು ವರದಿ ಮಾಡಿದ್ದಕ್ಕಾಗಿ ಈ ದಿನ. ಕಾಮ್ ತಂಡಕ್ಕೆ ಅಂಗನವಾಡಿಯ ಶಿಕ್ಷಕಿ ದ್ರಾಕ್ಷಾಯಿಣಿ, ಸಹಾಯಕಿ ಚಂದ್ರಕಲಾ ಹಾಗೂ ಪೋಷಕರು ಧನ್ಯವಾದ ಸಲ್ಲಿಸಿದ್ದಾರೆ.

WhatsApp Image 2025 11 17 at 3.46.17 PM
ಗಿರಿಜಾ ಎಸ್‌ ಜಿ
+ posts

ಪತ್ರಕರ್ತೆ, ಸಾಮಾಜಿಕ ಕಾರ್ಯಕರ್ತೆ, ಮಹಿಳಾ ಪರ ಹೋರಾಟಗಾರ್ತಿ.

ಪೋಸ್ಟ್ ಹಂಚಿಕೊಳ್ಳಿ:

ಗಿರಿಜಾ ಎಸ್‌ ಜಿ
ಗಿರಿಜಾ ಎಸ್‌ ಜಿ
ಪತ್ರಕರ್ತೆ, ಸಾಮಾಜಿಕ ಕಾರ್ಯಕರ್ತೆ, ಮಹಿಳಾ ಪರ ಹೋರಾಟಗಾರ್ತಿ.

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...