‘ಈ ದಿನ’ ವರದಿಗೆ ಎಚ್ಚೆತ್ತ ಅಧಿಕಾರಿಗಳು: ಚಿಕ್ಕಮಗಳೂರಿನ ‘ಕುನ್ನಿಹಳ್ಳ’ಕ್ಕೆ ಭೇಟಿ; ಪರಿಹಾರದ ಭರವಸೆ

Date:

ಚಿಕ್ಕಮಗಳೂರು ಜಿಲ್ಲೆಯ ಕಳಸ ತಾಲೂಕಿನ ಸಂಸೆ ಗ್ರಾಮದ ವ್ಯಾಪ್ತಿಗೆ ಬರುವ ಕುದುರೆ ಮುಖಕ್ಕೆ ಸೇರುವ ಒಂದು ಪುಟ್ಟ ಗ್ರಾಮ ಕುನ್ನಿಹಳ್ಳ. ಈ ಗ್ರಾಮದಲ್ಲಿ ಮೂರು ಮನೆ, ಮೂರೇ ಜನ ವಾಸ ಮಾಡುತ್ತಿದ್ದಾರೆ. ಆ ಮೂರು ಜನ ಎದುರಿಸುತ್ತಿದ್ದ ಸಮಸ್ಯೆಗಳ ಬಗ್ಗೆ ಈ ದಿನ.ಕಾಮ್ ಕಳೆದ ಆಗಸ್ಟ್ 3ರಂದು ‘ಈ ಹಳ್ಳಿಯಲ್ಲಿರುವುದು ಮೂರೇ ಮನೆ, ಮೂರೇ ಜನ’ ಎಂದು ವಿಡಿಯೋ ಸಹಿತ ವರದಿ ಮಾಡಿತ್ತು.

ಈ ವರದಿಯ ಬಳಿಕ ಎಚ್ಚೆತ್ತ ಕುನ್ನಿಹಳ್ಳಕ್ಕೆ ಭೇಟಿ ನೀಡಿರುವ ಕಳಸ ತಾಲೂಕಿನ ಅಧಿಕಾರಿಗಳು, ಪರಿಹಾರ ಕಲ್ಪಿಸುವ ಭರವಸೆ ನೀಡಿದ್ದಾರೆ.

WhatsApp Image 2024 08 23 at 4.31.50 PM

ಈ ದಿನ.ಕಾಮ್ ವಿಡಿಯೋ ಮೂಲಕ ಮಾಡಿದ್ದ ವರದಿ ಗಮನಿಸಿದ ಕೂಡಲೇ ಕಳಸ ತಹಶೀಲ್ದಾರ್, ಉಪ ತಹಶೀಲ್ದಾರ್, ಕಂದಾಯ ಅಧಿಕಾರಿ, ಪಿಡಿಒ, ಗ್ರಾಮ ಲೆಕ್ಕಾಧಿಕಾರಿ ಕುನ್ನಿಹಳ್ಳಕ್ಕೆ ಭೇಟಿ ನೀಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಬಗ್ಗೆ ಈ ದಿನ.ಕಾಮ್ ಜೊತೆ ಮಾತನಾಡಿರುವ ಕಳಸ ತಾಲೂಕು ತಹಶೀಲ್ದಾರ್ ದಯಾನಂದ ಹಾಗೂ ಶರತ್ ಕುಮಾರ್ (ಎಫ್.ಡಿ.ಎ), “ಅಲ್ಲಿನ ಮೂವರ ಸಮಸ್ಯೆಗಳನ್ನು ಆಲಿಸಿದ್ದೇವೆ. ನಮ್ಮ ಕಡೆಯಿಂದ ಪರ್ಯಾಯ ವ್ಯವಸ್ಥೆ ಮಾಡುತ್ತೇವೆ. ಈಗ ಪರಿಹಾರ ಮತ್ತು ಮೂಲಭೂತ ಸೌಕರ್ಯ ವ್ಯವಸ್ಥೆಗೆ ಅರಣ್ಯ ಇಲಾಖೆಯವರು ಈ-ಸ್ವತ್ತು ಕೊಡಬೇಕೆಂದು ಕೇಳುತ್ತಿದ್ದಾರೆ. ಆದರೆ ಈ-ಸ್ವತ್ತನ್ನು ಪಟ್ಟಣ ಪಂಚಾಯಿತಿಯಿಂದ ಒದಗಿಸಬೇಕಾಗಿದೆ. ನಾವು ಅವರ ಗಮನಕ್ಕೆ ತಂದಿದ್ದೇವೆ ಭೇಟಿ ನೀಡಿದ ದಿನ ಅರ್ಜಿ ಸಲ್ಲಿಸಿದ್ದಾರೆ” ತಿಳಿಸಿದ್ದಾರೆ.

‘ನಮ್ಮನ್ನು ಸ್ಥಳಾಂತರ ಮಾಡಿ’ ಎಂದು ಗೋಗರೆದಿದ್ದ ಮೂವರು

ಚಿಕ್ಕಮಗಳೂರು ಜಿಲ್ಲೆ ಕಳಸ ತಾಲೂಕಿನ ರಾಷ್ಟ್ರೀಯ ಉದ್ಯಾನವನದ ಅಂಚಿನ ಕುನ್ನಿಹಳ್ಳ ಗ್ರಾಮದಲ್ಲಿ ದೇವರಾಜ್, ನಾಗರತ್ನ, ಶ್ಯಾಮಲಾ ಎಂಬುವರು ಮಾತ್ರ ವಾಸಿಸುತ್ತಿದ್ದಾರೆ.

ಕುದುರೆಮುಖ ಕಂಪನಿ ಆರಂಭವಾದಾಗಿನಿಂದಲೂ ಈ ಮೂವರು ಇಲ್ಲೇ ವಾಸವಿದ್ದಾರೆ. ಇವರಿಗೆ ರಸ್ತೆ, ನೀರು, ಕರೆಂಟ್ ಯಾವ ವ್ಯವಸ್ಥೆಯೂ ಇಲ್ಲ. ಸರ್ಕಾರದಿಂದ ಕೊಟ್ಟಿರುವ ಸೋಲಾರ್ ಲೈಟ್ ಇದೆ. ಆದರೆ, ವರ್ಷದ 6 ತಿಂಗಳು ಯಥೇಚ್ಛವಾಗಿ ಮಳೆ ಬೀಳುವ ಕಾರಣ ಸೋಲಾರ್ ಲೈಟ್​ ಕೂಡ ಕೈಕೊಡುತ್ತಿತ್ತು. ಈ ಪ್ರದೇಶದಲ್ಲಿ ಕಾಡು ಪ್ರಾಣಿಗಳ ಕಾಟ ಕೂಡ ಹೆಚ್ಚಾಗಿಯೇ ಇದೆ. ಇಲ್ಲಿಂದ ಸ್ಥಳಾಂತರಿಸಿ ಎಂದು ಮನವಿ‌ ಮಾಡಿದರೂ ಯಾವುದೇ ಸ್ಪಂದನೆ ದೊರೆತಿಲ್ಲ ಎಂದು ಆರೋಪಿಸಿದ್ದರು.

WhatsApp Image 2024 08 23 at 4.31.41 PM

“ಪ್ರತಿಯೊಂದು ವಸ್ತು ಖರೀದಿ ಮಾಡಲು ಕಳಸಕ್ಕೆ ಹೋಗಬೇಕಾಗುತ್ತದೆ. ರೇಷನ್ ಒಂದು ಕುದುರೆಮುಖದಲ್ಲಿ ಸಿಗುತ್ತದೆ. ಅದನ್ನ ಬಿಟ್ಟು ಎಲ್ಲದಕ್ಕೂ ಕಳಸಕ್ಕೆ ಬರಬೇಕಾದ ಪರಿಸ್ಥಿತಿ ಇದೆ. ಮನೆ-ಜಾಗ ಎಲ್ಲದಕ್ಕೂ ಹಕ್ಕು ಪತ್ರಗಳಿವೆ. ಮನೆಯಲ್ಲಿ ಜನರಿಗಿಂತ ಜಾಸ್ತಿ ಹಾವು ಕಪ್ಪೆಗಳೇ ಕಾಣಿಸಿಕೊಳ್ಳುತ್ತವೆ. ತಮ್ಮನ್ನು ಬೇರೊಂದು ಸ್ಥಳಕ್ಕೆ ಸ್ಥಳಾಂತರಿಸಲು ಮನವಿ ಮಾಡುತ್ತಲೇ ಇದ್ದರೂ ಇದಕ್ಕೆ ಯಾರು ಸ್ಪಂದಿಸುತ್ತಿಲ್ಲ” ಎಂದು ಅಳಲು ತೋಡಿಕೊಂಡಿದ್ದರು.

ಇವರ ಸಮಸ್ಯೆಯನ್ನು ಈ ದಿನ.ಕಾಮ್ ಕಳೆದ ಆಗಸ್ಟ್ 3ರಂದು ವಿಡಿಯೋ ವರದಿಯ ಮೂಲಕ ಪ್ರಕಟಿಸಿತ್ತು. ಈ ವಿಡಿಯೋ ವರದಿಯನ್ನು ಯೂಟ್ಯೂಬ್‌ನಲ್ಲಿ ಸುಮಾರು ಒಂದೂವರೆ ಲಕ್ಷಕ್ಕೂ ಅಧಿಕ ಮಂದಿ ವೀಕ್ಷಿಸಿದ್ದರು. ಅಲ್ಲದೇ, 100ಕ್ಕೂ ಅಧಿಕ ಮಂದಿ ಕಾಮೆಂಟ್ ಮಾಡಿ, ಅವರಿಗೆ ಅಧಿಕಾರಿಗಳು ನೆರವಾಗುವಂತೆ ವಿನಂತಿಸಿದ್ದರು.

ಕುನ್ನಿಹಳ್ಳ
WhatsApp Image 2025 11 17 at 3.46.17 PM
ಗಿರಿಜಾ ಎಸ್‌ ಜಿ
+ posts

ಪತ್ರಕರ್ತೆ, ಸಾಮಾಜಿಕ ಕಾರ್ಯಕರ್ತೆ, ಮಹಿಳಾ ಪರ ಹೋರಾಟಗಾರ್ತಿ.

ಪೋಸ್ಟ್ ಹಂಚಿಕೊಳ್ಳಿ:

ಗಿರಿಜಾ ಎಸ್‌ ಜಿ
ಗಿರಿಜಾ ಎಸ್‌ ಜಿ
ಪತ್ರಕರ್ತೆ, ಸಾಮಾಜಿಕ ಕಾರ್ಯಕರ್ತೆ, ಮಹಿಳಾ ಪರ ಹೋರಾಟಗಾರ್ತಿ.

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...