ಈದಿನ ವರದಿ ಫಲಶೃತಿ: ಹಾಗಲಗಂಚಿ ಗ್ರಾಮಸ್ಥರ ಮನವಿಗೆ ಸ್ಪಂದಿಸಿದ ಶೃಂಗೇರಿ ಶಾಸಕ

Date:

ಚಿಕ್ಕಮಗಳೂರು ಜಿಲ್ಲೆ ಶೃಂಗೇರಿ ತಾಲೂಕಿನ ಅಗಲಗಂಡಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಹಾಗಲಗಂಚಿ ಗ್ರಾಮಸ್ಥರ ಮನವಿ ಕೊನೆಗೂ ಶಾಸಕರ ಕಿವಿಗೆ ಬಿದ್ದಿದೆ.

ಹಾಗಲಗಂಚಿ ಗ್ರಾಮದಲ್ಲಿ ಸುಮಾರು 70ಕ್ಕೂ ಅಧಿಕ ಕುಟುಂಬಗಳು ವಾಸ ಮಾಡುತ್ತಿವೆ. ಸುತ್ತಲಿನ ಎಂಟರಿಂದ ಹತ್ತು ಗ್ರಾಮಗಳ ಜನರು ಹಾಗಲಗಂಚಿ ಗ್ರಾಮದ ಮಾರ್ಗವಾಗಿಯೇ ಸಾಗಬೇಕು. ಹಾಗೆಯೇ ಶೃಂಗೇರಿ ಮತ್ತು ಕೊಪ್ಪ ತಾಲೂಕಿಗೆ ಹಾದು ಹೋಗುವ ಸಂಪರ್ಕ ರಸ್ತೆ ಕೂಡ ಇದೇ ಆಗಿದೆ. ಪ್ರತಿನಿತ್ಯ ಸಾವಿರಾರು ಮಂದಿ ಓಡಾಡುವ ಈ ರಸ್ತೆ ಡಾಂಬರು ಕಂಡಿರಲಿಲ್ಲ. ಸೂಕ್ತ ರಸ್ತೆ ಇಲ್ಲದೆ ಪಾದಚಾರಿಗಳು, ಅಲ್ಲಿನ ನಿವಾಸಿಗಳು, ವಾಹನ ಸವಾರರು ಪರದಾಡುವಂತಾಗಿತ್ತು.

ಈ ಬಗ್ಗೆ ಜ. 31ರಂದು ಈದಿನ ಡಾಟ್‌ ಕಾಮ್‌ ಗ್ರೌಂಡ್ ರಿಪೋರ್ಟ್ ಮಾಡಿ “ಚಿಕ್ಕಮಗಳೂರು l ಶಾಸಕರಿಗೆ ಪದೆ ಪದೇ ಮನವಿ ಮಾಡಿದರೂ, ಡಾಂಬರೀಕರಣ ಆಗದ ರಸ್ತೆ” ಶೀರ್ಷಿಕೆಯಡಿ ವರದಿ ಮಾಡಿತ್ತು. ಈದಿನ ವರದಿಯ ಫಲವಾಗಿ ಇದೀಗ ಹಾಗಲಗಂಚಿ ಗ್ರಾಮದ ರಸ್ತೆ ದುರಸ್ಥಿ ಕಾರ್ಯ ಆರಂಭವಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
Screenshot 2025 02 20 21 40 25 76 7352322957d4404136654ef4adb64504

ಸುದ್ದಿ ಪ್ರಕಟವಾದ ಬಳಿಕ ಗ್ರಾಮಸ್ಥರು ಹಾಗೂ ಮುಖಂಡರ ಜೊತೆ ಶಾಸಕರು ಸಭೆ ನಡೆಸಿ, ರಸ್ತೆ ಮಾಡಿಕೊಡುವ ಭರವಸೆ ಕೊಟ್ಟಿದ್ದಾರೆ. ಹಾಗೂ ಸುದ್ದಿ ಮಾಡಿದ ಎರಡು ದಿನದ ನಂತರ ಜೆಸಿಬಿ ಮೂಲಕ ರಸ್ತೆಯನ್ನು ಅಗಲೀಕರಣ ಮಾಡಿ ಮಣ್ಣು ಹಾಕಿಸುವ ಕೆಲಸ ಆಗುತ್ತಿದೆ. ಈ ಕೆಲಸ ಮುಗಿದ ತಕ್ಷಣ ಡಾಂಬರೀಕರಣ ಮಾಡಲಾಗುತ್ತದೆ ಎಂದು ಶೃಂಗೇರಿ ಕ್ಷೇತ್ರದ ಶಾಸಕ ಟಿ ಡಿ ರಾಜೇಗೌಡ ಭರವಸೆ ನೀಡಿದ್ದಾರೆ.

ಈ ಸುದ್ದಿ ಓದಿದ್ದೀರಾ?: ಚಿಕ್ಕಮಗಳೂರು l ತುಂಗೆಯ ದಡದಲ್ಲಿ ಕಲುಷಿತ ಮಣ್ಣು; ಸ್ಥಳೀಯರಲ್ಲಿ ಭವಿಷ್ಯದ ಆತಂಕ

ಸದ್ಯ ಹಾಗಲಗಂಚಿ ಗ್ರಾಮಸ್ಥರು ನಿಟ್ಟುಸಿರು ಬಿಟ್ಟಿದ್ದು, ಆದಷ್ಟು ಬೇಗ  ಮಣ್ಣಿನ ಕೆಲಸ ಮುಗಿದು, ರಸ್ತೆಗೆ ಡಾಂಬರೀಕರಣ ಆಗಲಿ ಎಂದು ಎದುರು ನೋಡುತ್ತಿದ್ದಾರೆ.

WhatsApp Image 2025 11 17 at 3.46.17 PM
ಗಿರಿಜಾ ಎಸ್‌ ಜಿ
+ posts

ಪತ್ರಕರ್ತೆ, ಸಾಮಾಜಿಕ ಕಾರ್ಯಕರ್ತೆ, ಮಹಿಳಾ ಪರ ಹೋರಾಟಗಾರ್ತಿ.

ಪೋಸ್ಟ್ ಹಂಚಿಕೊಳ್ಳಿ:

ಗಿರಿಜಾ ಎಸ್‌ ಜಿ
ಗಿರಿಜಾ ಎಸ್‌ ಜಿ
ಪತ್ರಕರ್ತೆ, ಸಾಮಾಜಿಕ ಕಾರ್ಯಕರ್ತೆ, ಮಹಿಳಾ ಪರ ಹೋರಾಟಗಾರ್ತಿ.

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...