ಬೀದರ್‌ | ನೂತನ ಮಾರುಕಟ್ಟೆ ನಿರ್ಮಾಣಕ್ಕೆ ಪ್ರಯತ್ನ : ಸಂಸದ ಸಾಗರ್‌ ಖಂಡ್ರೆ

Date:

ಬೀದರ್ ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ನೂತನ ವಿಶಾಲ ಮಾರುಕಟ್ಟೆ ನಿರ್ಮಾಣಕ್ಕೆ ಪ್ರಯತ್ನಿಸಲಾಗುವುದು ಎಂದು ಸಂಸದ ಸಾಗರ್ ಖಂಡ್ರೆ ಭರವಸೆ ನೀಡಿದರು.

ಇಲ್ಲಿಯ ಗಾಂಧಿಗಂಜ್‍ನ ಬಸವೇಶ್ವರ ದೇವಸ್ಥಾನದಲ್ಲಿ ದಿ ಗ್ರೇನ್ ಆ್ಯಂಡ್ ಸೀಡ್ಸ್ ಮರ್ಚಂಟ್ಸ್ ಅಸೋಸಿಯೇಷನ್ ವತಿಯಿಂದ ಈಚೆಗೆ ಹಮ್ಮಿಕೊಂಡಿದ್ದ ಅಭಿನಂದನಾ ಸಮಾರಂಭದಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿ, ʼಹೊಸ ಮಾರುಕಟ್ಟೆ ನಿರ್ಮಾಣ ವ್ಯಾಪಾರಿಗಳ ಹಾಗೂ ರೈತರ ಬೇಡಿಕೆಯಾಗಿದೆ. ಇದನ್ನು ಈಡೇರಿಸುವ ದಿಸೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಅವರೊಂದಿಗೆ ಚರ್ಚಿಸಲಾಗುವುದುʼ ಎಂದರು.

ʼಕಿರಿಯ ವಯಸ್ಸಿನಲ್ಲೇ ನನ್ನನ್ನು ಸಂಸತ್ತಿಗೆ ಆರಿಸಿ ಕಳುಹಿಸಿದ್ದಕ್ಕೆ ಮತದಾರರಿಗೆ ಕೃತಜ್ಞನಾಗಿರುವೆ. ಹಿರಿಯರ ಮಾರ್ಗದರ್ಶನದೊಂದಿಗೆ ಜಿಲ್ಲೆಯ ಅಭಿವೃದ್ಧಿ ಹಾಗೂ ಜನರ ಆಶೋತ್ತರಗಳನ್ನು ಈಡೇರಿಸಲು ಶ್ರಮಿಸುವೆʼ ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ದಿ ಗ್ರೇನ್ ಆ್ಯಂಡ್ ಸೀಡ್ಸ್ ಮರ್ಚಂಟ್ಸ್ ಅಸೋಸಿಯೇಷನ್ ಅಧ್ಯಕ್ಷ ಬಸವರಾಜ ಧನ್ನೂರ ಮಾತನಾಡಿ, ʼಹೊಸ ಮಾದರಿ ಮಾರುಕಟ್ಟೆ ನಿರ್ಮಾಣದ ಅಗತ್ಯತೆವಿದೆ. ಬೀದರ್ ಎಪಿಎಂಸಿ ಮಾರುಕಟ್ಟೆ ಪ್ರಮುಖ ವಾಣಿಜ್ಯ ಕೇಂದ್ರವಾಗಿದ್ದು, ಜಿಲ್ಲೆಯ ಆರ್ಥಿಕತೆಯ ಬೆನ್ನೆಲುಬಾಗಿದೆ. 60 ವರ್ಷಗಳ ಹಿಂದೆ ಆಗಿ ಅವಶ್ಯಕತೆಗೆ ಅನುಗುಣವಾಗಿ ಮಾರುಕಟ್ಟೆ ನಿರ್ಮಿಸಲಾಗಿತ್ತು. ಇದೀಗ ತೀರಾ ಚಿಕ್ಕದಾಗಿದೆʼ ಎಂದು ಹೇಳಿದರು.

ʼಸದ್ಯ ಮಾರುಕಟ್ಟೆಗೆ ಕೃಷಿ ಉತ್ಪನ್ನಗಳ ಆವಕ ಹೆಚ್ಚಾಗಿದೆ. ವ್ಯಾಪಾರಿಗಳ ಸಂಖ್ಯೆಯೂ ವೃದ್ಧಿಸಿದೆ. ಎಲ್ಲರ ಅನುಕೂಲಕ್ಕಾಗಿ ವಿಶಾಲವಾದ ಮಾರುಕಟ್ಟೆ ನಿರ್ಮಾಣ ತುರ್ತಾಗಿ ಆಗಬೇಕಿದೆ. ಅಸೋಸಿಯೇಷನ್ ಈ ನಿಟ್ಟಿನಲ್ಲಿ ದಶಕದಿಂದ ಬೇಡಿಕೆ ಮಂಡಿಸುತ್ತಲೇ ಬಂದಿದೆʼ ಎಂದು ತಿಳಿಸಿದರು.

ಈ ಕುರಿತ ಅಸೋಸಿಯೇಷನ್ ಪದಾಧಿಕಾರಿಗಳು ಮನವಿ ಪತ್ರವನ್ನು ಸಂಸದ ಸಾಗರ್ ಖಂಡ್ರೆ ಅವರಿಗೆ ಸಲ್ಲಿಸಿದರು.

ಸಮಾರಂಭದಲ್ಲಿ ಬುಡಾ ಅಧ್ಯಕ್ಷ ಬಸವರಾಜ ಜಾಬಶೆಟ್ಟಿ ಮಾತನಾಡಿದರು. ಎಪಿಎಂಸಿ ಕಾರ್ಯದರ್ಶಿ ಪರಮೇಶ್ವರಿ ಫುಲೇಕರ್, ಕೃಷಿ ಮಾರಾಟ ಇಲಾಖೆಯ ಸಹಾಯಕ ನಿರ್ದೇಶಕ ಶಿವಾನಂದ ಕುಂಬಾರ, ಅಸೋಸಿಯೇಷನ್ ಉಪಾಧ್ಯಕ್ಷ ನಾಗಶೆಟ್ಟೆಪ್ಪ ದಾಡಗಿ, ಕಾರ್ಯದರ್ಶಿ ಭಗವಂತ ಔದತ್‍ಪುರ, ದಾಲ್ ಮಿಲ್ ಅಸೋಸಿಯೇಷನ್ ಅಧ್ಯಕ್ಷ ಅಶೋಕ ರೇಜಂತಲ್, ಟ್ರಾನ್ಸ್‍ಪೋರ್ಟ್ ಅಸೋಸಿಯೇಷನ್ ಅಧ್ಯಕ್ಷ ಸೋಮಶೇಖರ ಪಾಟೀಲ ಗಾದಗಿ, ಕಾರ್ಯದರ್ಶಿ ಶಿವರುದ್ರಪ್ಪ ಗಿರಿ, ರೈಸ್ ಮರ್ಚಂಟ್ಸ್ ಅಸೋಸಿಯೇಷನ್ ಅಧ್ಯಕ್ಷ ಶಂಕರ ಗುನ್ನಳ್ಳಿ, ಕಾರ್ಯದರ್ಶಿ ರಾಜು ಬಗದಲ್, ಫರ್ಟಿಲೈಸರ್ಸ್ ಅಸೋಸಿಯೇಷನ್ ಉಪಾಧ್ಯಕ್ಷ ಕಂಟೆಪ್ಪ ಪಾಟೀಲ ಕನ್ನಳ್ಳಿ, ದಿ ಗ್ರೇನ್ ಆ್ಯಂಡ್ ಸೀಡ್ಸ್ ಮರ್ಚಂಟ್ಸ್ ಅಸೋಸಿಯೇಷನ್ ಕಾರ್ಯಕಾರಿಣಿ ಸದಸ್ಯರಾದ ರಾಜಕುಮಾರ ಬಿರಾದಾರ ಗುನ್ನಳ್ಳಿ, ಸೋಮನಾಥ ಗಂಗಶೆಟ್ಟಿ, ನಾಗಶೆಟ್ಟೆಪ್ಪ ಕಾರಾಮುಂಗಿ, ಬಂಡೆಪ್ಪ, ಬಾಲಾಜಿ, ಗೋವಿಂದರಾವ್ ನೀಲಮನಳ್ಳಿ, ಪ್ರಭುಶೆಟ್ಟಿ ಮುದ್ದಣ್ಣ, ವಿಶ್ವನಾಥ ಕಾಜಿ, ಹನುಮಾನದಾಸ್ ಅಗರವಾಲ್, ಪ್ರಮುಖರಾದ ಶಾಮರಾವ್ ಸುಲಗುಂಟೆ, ಶ್ಯಾಮಸುಂದರ ಬೋರಾ, ಅಣ್ಣಾರಾವ್ ಮೊಗಶೆಟ್ಟಿ, ನಾಗರಾಜ ನಂದಗಾಂವ್, ದಿಗಂಬರ್ ಪೋಲಾ ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು, ಗಾಂಧಿಗಂಜ್ ವ್ಯಾಪಾರಿಗಳು, ಮುನೀಮರು, ರೈತರು ಹಾಗೂ ಕೃಷಿ ಕೂಲಿ ಕಾರ್ಮಿಕರು ಪಾಲ್ಗೊಂಡಿದ್ದರು.

ಈ ಸುದ್ದಿ ಓದಿದ್ದೀರಾ? ಬೀದರ್‌ | ಸ್ಮಶಾನದ ಬಳಿ ಆಸ್ಪತ್ರೆ : ಮಗುವಿಗೆ ಕೇಡಾಗುತ್ತೆ ಎಂಬ ಕಾರಣಕ್ಕೆ ಹೆರಿಗೆಗೆ ಬಾರದ ಗರ್ಭಿಣಿಯರು!

ಕಲಾವಿದ ಶಿವಕುಮಾರ ಪಾಂಚಾಳ ಸಂಗೀತ ನಡೆಸಿಕೊಟ್ಟರು. ದೀಪಕ್ ಥಮಕೆ ನಿರೂಪಿಸಿದರು. ಪ್ರಕಾಶ ಗೌಡಪ್ಪನೋರ್ ವಂದಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...