ಮೊಟ್ಟೆ ಬೆಲೆ ಏರಿಕೆ; ಮಧ್ಯಾಹ್ನದ ಬಿಸಿಯೂಟಕ್ಕೆ ಬಜೆಟ್‌ ಕೊರತೆ

Date:

2023-24ನೇ ಶೈಕ್ಷಣಿಕ ಸಾಲಿನಲ್ಲಿ ಶಾಲೆಗಳು ಮುಂದಿನ ವಾರದಿಂದ ಪ್ರಾರಂಭವಾಗಲಿವೆ. ಈ ನಡುವೆ, ಮೊಟ್ಟೆ ಬೆಲೆ ಗಗನಕ್ಕೇರುತ್ತಿದೆ. ಹೀಗಾಗಿ, ಶೈಕ್ಷಣಿಕ ವರ್ಷದಲ್ಲಿ ಮಧ್ಯಾಹ್ನದ ಬಿಸಿಯೂಟ ಕಾರ್ಯಕ್ರಮಕ್ಕೆ ಸರ್ಕಾರವು ಬಜೆಟ್‌ ಹಂಚಿಕೆಯಲ್ಲಿ ಅನುದಾನವನ್ನು ಹೆಚ್ಚಿಸಬೇಕೆಂದು ಅಕ್ಷರ ದಾಸೋಹದ ನೌಕರರು ಆಶಿಸುತ್ತಿದ್ದಾರೆ.

ಕಳೆದ ಶೈಕ್ಷಣಿಕ ವರ್ಷದಲ್ಲಿ (2022-23) ರಾಜ್ಯ ಸರ್ಕಾರವು ಶಾಲೆಗಳಲ್ಲಿ ಮಧ್ಯಾಹ್ನದ ಬಿಸಿಯೂಟದಲ್ಲಿ ಮೊಟ್ಟೆ, ಚಿಕ್ಕಿ ಮತ್ತು ಬಾಳೆಹಣ್ಣು ನೀಡಲು ಆರಂಭಿಸಿತು. ಈ ಒಂದು ವರ್ಷದಲ್ಲಿ ಮೊಟ್ಟೆಯ ಬೆಲೆ ಏರಿಕೆ ಕಂಡಿದೆ. ಆದರೂ, ಶಾಲೆಗಳಲ್ಲಿ ಮೊಟ್ಟೆ ನೀಡಲು ನಿಗದಿಯಾಗಿದ್ದ ದರ ಏರಿಕೆಯಾಗಿಲ್ಲ ಎಂದು ತಿಳಿದುಬಂದಿದೆ.

ಕಳೆದ ವರ್ಷ ಜುಲೈನಲ್ಲಿ ಮೊಟ್ಟೆ ನೀಡಲು ಆರಂಭಿಸಿದಾಗ ಸರ್ಕಾರ ಮೊಟ್ಟೆಗೂ ನಿಧಿ ಹಂಚಿಕೆ ಮಾಡಿತ್ತು. ಅದರಂತೆ, ಪ್ರತಿ ಮೊಟ್ಟೆಗೆ 6 ರೂ. ನಿಗದಿಪಡಿಸಲಾಗಿತ್ತು. ಅದರಲ್ಲಿ, ಮೊಟ್ಟೆ ಖರೀದಿಗೆ 5 ರೂ., ಮೊಟ್ಟೆ ಬೇಯಿಸಲು 50 ಪೈಸೆ, ಬೇಯಿಸಿದ ಮೊಟ್ಟೆಯನ್ನು ಸುಲಿಯಲು 30 ಪೈಸೆ, ಸಾಗಾಣಿಕೆ ವೆಚ್ಚ 20 ಪೈಸೆ ಎಂದು ನಿಗದಿ ಮಾಡಲಾಗಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಮೊತ್ತ ನಿಗದಿಯಾದ ಜುಲೈನಲ್ಲಿ ಮೊಟ್ಟೆ ಬೆಲೆ 4.70 ರೂ. ಇತ್ತು. ಆದರೆ, ಈಗ (ಮೇ 24) ಮೊಟ್ಟೆಯ ಬೆಲೆ ಬೆಂಗಳೂರಿನಲ್ಲಿ ಸಗಟು ಮತ್ತು ಚಿಲ್ಲರೆ ದರಗಳು ಕ್ರಮವಾಗಿ 5.50 ರೂ ಮತ್ತು 6 ರೂ. ಇದೆ. ಅಂತೆಯೇ, ಮಂಗಳೂರಿನಲ್ಲಿ ಕ್ರಮವಾಗಿ 5.60 ಮತ್ತು 5.80 ರೂ. ಇದೆ. ಇನ್ನು ರಾಯಚೂರಿನಲ್ಲಿ 5.70 ರೂ ಮತ್ತು 6 ರೂ. ಇದೆ. ಅಲ್ಲದೆ, ಕಳೆದ ಎರಡು ತಿಂಗಳುಗಳ ಹಿಂದೆ ಮೊಟ್ಟೆ ಬೆಲೆ 6.50 ರೂ. ದಾಟಿತ್ತು. ಹೀಗೆ, ದರಗಳು ಏರಿಳಿತ ಕಾಣುತ್ತಿರುವುದರಿಂದ ಬಜೆಟ್‌ ಬ್ಯಾಲೆನ್ಸ್‌ ಮಾಡುವುದು ಕಷ್ಟವಾಗಿದೆ. ಸರ್ಕಾರ ಮೊಟ್ಟೆಗೆ ನಿಗದಿಪಡಿಸಿರುವ ಬಜೆಟ್‌ ಮೊತ್ತವನ್ನು ಹೆಚ್ಚಿಸಬೇಕು ಎಂದು ಅಕ್ಷರ ದಾಸೋಹದ ಕಾರ್ಯನಿರ್ವಾಹಕ ಅಧಿಕಾರಿಗಳು ಹೇಳುತ್ತಿದ್ದಾರೆ.

ಈ ಸುದ್ದಿ ಓದಿದ್ದೀರಾ?: ‘ಇಂದಿರಾ ಕ್ಯಾಂಟೀನ್’ ಸ್ಥಿತಿಗತಿ ಪರಿಶೀಲಿಸಿ ವರದಿ ನೀಡಲು ಸೂಚನೆ

ಶಾಲೆಗಳಲ್ಲಿ ಬಹುತೇಕ ಮಕ್ಕಳು ಮೊಟ್ಟೆಯನ್ನೇ ತಿನ್ನ ಬಯಸುತ್ತಾರೆ. ಕೆಲವರಷ್ಟೇ ಮೊಟ್ಟೆ ಬದಲಿಗೆ ಚಿಕ್ಕಿಯನ್ನು ಕೇಳುತ್ತಾರೆ. ಮೊಟ್ಟೆಯ ಬೆಲೆ ಏರಿಕೆಯಾಗುತ್ತಿರುವ ಕಾರಣ, ಸರ್ಕಾರ ಮೊಟ್ಟೆಗೆ ನಿಗದಿ ಮಾಡಿರುವ ದರವನ್ನು ಹೆಚ್ಚಿಸಬೇಕು” ಎಂದು ದಕ್ಷಿಣ ಕನ್ನಡದ ಅಕ್ಷರ ದಾಸೋಹ ಅಧಿಕಾರಿ ಉಷಾ ಹೇಳಿದ್ದಾರೆ.

“ಮೊಟ್ಟೆಗೆ ಬಜೆಟ್‌ ಹಂಚಿಕೆಯನ್ನು ಹೆಚ್ಚಿಸುವಂತೆ ಕೋರಿ ಸರ್ಕಾರಕ್ಕೆ ಪ್ರಸ್ತಾವನೆ ಕಳುಹಿಸಲಾಗುವುದು” ಎಂದು ಮಧ್ಯಾಹ್ನದ ಬಿಸಿಯೂಟ ಯೋಜನೆ ನಿರ್ದೇಶಕ ಬಿ.ಎಸ್.ರಘುವೀರ್ ತಿಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...