ತುಮಕೂರಿನಲ್ಲಿ ಈದ್ ಮಿಲಾದ್ ಸಂಭ್ರಮ : ಬೃಹತ್ ಮೆರವಣಿಗೆ

Date:

ಮುಸ್ಲಿಂ ಬಾಂಧವರ ಪವಿತ್ರ ಹಬ್ಬಗಳಲ್ಲಿ ಒಂದಾದ ಈದ್ ಮಿಲಾದ್ ಪ್ರಯುಕ್ತ ಶಾಂತಿನಗರದ ಗೂಡ್‌ಶೆಡ್ ಕಾಲೋನಿಯ ಮೀನಾ ಮಸೀದಿಯಿಂದ ಚಾಂದಿನಿ ಮೆರವಣಿಗೆಯನ್ನು ನಡೆಸಲಾಯಿತು. 

ತುಮಕೂರು ನಗರದ ಗೂಡ್‌ಶೆಡ್ ಕಾಲೋನಿಯ ಮೀನಾ ಮಸೀದಿಯಿಂದ ಶುಕ್ರವಾರ ಮಧ್ಯಾಹ್ನ 1.30ಕ್ಕೆ ಆರಂಭವಾದ ಚಾಂದಿನಿ ಮೆರವಣಿಗೆಯು ಬನಶಂಕರಿ, ಸದಾಶಿವನಗರ, ನಜರಾಬಾದ್, ಚಾಂದಿನಿ ಸರ್ಕಲ್, ಪಿ.ಹೆಚ್. ಕಾಲೋನಿ, ಬಿ.ಜಿ. ಪಾಳ್ಯ ವೃತ್ತದ ಮುಖೇನ ಸಂತೆಪೇಟೆಯಲ್ಲಿ ಸಾಗಿತು. 

ನಂತರ ಮೆರವಣಿಗೆಯು ಮಂಡಿಪೇಟೆ ಮುಖ್ಯ ರಸ್ತೆಯಿಂದ ಗುಂಚಿ ಸರ್ಕಲ್, ಬಾರ್‌ಲೈನ್ ಮಸೀದಿ ಮುಖೇನ ಕುಣಿಗಲ್ ರಸ್ತೆಯಲ್ಲಿರುವ ಈದ್ಗಾ ಮೈದಾನಕ್ಕೆ ತಲುಪಿ ಮುಕ್ತಾಯಗೊಂಡಿತು. 

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
1002009080

ಚಾಂದಿನಿ ಮೆರವಣಿಗೆಯಲ್ಲಿ ಪಾಲ್ಗೊಂಡು ಮಾತನಾಡಿದ ಕಾಂಗ್ರೆಸ್ ಮುಖಂಡ ಇಕ್ಬಾಲ್ ಅಹಮದ್, ಪ್ರವಾದಿಗಳ 1500ನೇ ಹುಟ್ಟುಹಬ್ಬದ ಅಂಗವಾಗಿ ಅವರ ಶಾಂತಿಯ ಸಂದೇಶವನ್ನು ಸಾರುವ ನಿಟ್ಟಿನಿಲ್ಲಿ ಹಮ್ಮಿಕೊಂಡಿರುವ ಈ ಚಾಂದಿನಿ ಮೆರವಣಿಗೆ, ಎಲ್ಲಾ ಧರ್ಮದವರು, ಜಾತಿಯವರು ಸೇರಿ ಮಾಡುವಂತಹ ಕಾರ್ಯವಾಗಿದೆ. ಪ್ರವಾದಿಗಳ ಸಂದೇಶದಂತೆ ನಾವು ನಮ್ಮ ನೆರೆಹೊರೆಯವರ ಜತೆ ಹಾಗೂ ಅನ್ಯ ಧರ್ಮೀಯರ ಜತೆ ಶಾಂತಿಯ ಸಹಬಾಳ್ವೆ ನಡೆಸಿದರೆ ಅದು ದೇವರಿಗೆ ಪ್ರಿಯವಾದ ಕೆಲಸವಾಗಿದೆ. ಹಾಗಾಗಿ ನಮ್ಮಿಂದ ಯಾರಿಗೂ ತೊಂದರೆಯಾಗದ ರೀತಿ ನಾವು ನಡೆದುಕೊಳ್ಳಬೇಕಿದೆ ಎಂದರು.

ಭಾರತ ಬಹುಧರ್ಮ, ಜಾತಿ, ಭಾಷೆ, ಸಂಸ್ಕೃತಿಗಳನ್ನು ಒಳಗೊಂಡ ದೇಶ. ಬಹುತ್ವವೇ ಭಾರತದ ನಿಜವಾದ ಜೀವಾಳ. ಹಾಗಾಗಿ ಪ್ರವಾದಿಗಳ ತತ್ವ ಸಂದೇಶದಂತೆ ನಡೆದುಕೊಂಡಾಗ ಮಾತ್ರ ನಿಜವಾದ ಮುಸ್ಲಿಂನಾಗಲು ಸಾಧ್ಯ. ಬೇರೆಯವರಿಗೆ ತೊಂದರೆಯಾಗದಂತೆ ನಡೆದುಕೊಂಡರೆ ಅದೇ ನಾವು ದೇವರಿಗೆ ಸಲ್ಲಿಸುವ ನಿಜವಾದ ಪ್ರಾರ್ಥನೆ ಎಂದು ಹೇಳಿದರು

1500 ವರ್ಷಗಳ ಹಿಂದೆ ಪ್ರಪಂಚದಲ್ಲಿ ಅತ್ಯಾಚಾರ, ದರೋಡೆ, ಹೆಣ್ಣು ಮಕ್ಕಳು ಜನಿಸಿದರೆ ಜೀವಂತವಾಗಿ ಹೂಳುವುದು ಇತ್ತು. ಆ ಸಂದರ್ಭದಲ್ಲಿ ಜನಿಸಿದ ಪ್ರವಾದಿಗಳು ಇದಕ್ಕೆಲ್ಲಾ ಅಂತ್ಯ ಹಾಡುವ ಮೂಲಕ ಜಗತ್ತಿಗೆ ಶಾಂತಿಯ ಸಂದೇಶವನ್ನು ಸಾರಿದರು ಎಂದರು

1002009094

ಮಾಜಿ ಶಾಸಕ ಹಾಗೂ ಮುಸ್ಲಿಂ ಸಮುದಾಯದ ಹಿರಿಯ ಮುಖಂಡ ಎಸ್. ಷಫಿಅಹಮದ್ ಮಾತನಾಡಿ, ಈದ್ ಮಿಲಾದ್ ಹಬ್ಬ ಆಚರಣೆ ಶಾಂತಿ, ಸಹಬಾಳ್ವೆಯ ಸಂಕೇತ. ಈ ಸುಸಂದರ್ಭದಲ್ಲಿ ಗೌರಿ ಗಣೇಶ ಹಬ್ಬವನ್ನು ಹಿಂದೂ-ಮುಸ್ಲಿಂಸಮುದಾಯದವರೆಲ್ಲರೂ ಸೇರಿ ಆಚರಿಸಿದ್ದೇವೆ. ಮುಂದಿನ ದಿನಗಳಲ್ಲೂ ಸಹ ನಾವೆಲ್ಲರೂ ಅಣ್ಣ ತಮ್ಮಂದಿದಂತೆ ಸಹಬಾಳ್ವೆಯಿಂದ ಬದುಕೋಣ ಎಂದರು. 

ಮಾಜಿ ಶಾಸಕ ಡಾ. ರಫೀಕ್‌ಅಹಮದ್ ಮಾತನಾಡಿ, ಇಂದು ಪ್ರವಾದಿ ಮಹಮದ್ ರವರ 1500ನೇ ಹುಟ್ಟುಹಬ್ಬವನ್ನು ಆಚರಣೆ ಮಾಡುತ್ತಿದ್ದೇವೆ. ಈ ಸುಸಂದರ್ಭದಲ್ಲಿ ಹಿಂದೂ-ಮುಸ್ಲಿಂ, ಕ್ರೖಸ್ತ, ಸಿಖ್ ಎಲ್ಲರೂ ಸಹೋದರತೆಯಿಂದ ಬಾಳೋಣ ಎಂದರು.

ಸಮಾಜದಲ್ಲಿ ಹಿಂದೂ-ಮುಸ್ಲಿಂ ಎಲ್ಲರೂ ಅಣ್ಣ ತಮ್ಮಂದಿರಂತೆ ಬಾಳಬೇಕು ಎಂಬುದು ಪ್ರವಾದಿಗಳ ಸಂದೇಶ. ಪ್ರವಾದಿಗಳು ಇಡೀ ಜಗತ್ತಿಗೆ ಶಾಂತಿಯ ಸಂದೇಶ ಸಾರಿದ್ದಾರೆ ಎಂದರು.

ಇದೆ ಸಂದರ್ಭದಲ್ಲಿ ಮಾಜಿ ಶಾಸಕರಾದ ಷಫಿ ಅಹಮದ್, ರಫೀಕ್ ಅಹಮದ್, ಇಕ್ಬಾಲ್ ಅಹಮದ್, ಅಸ್ಲಾಂ ಪಾಷ, ಮೆಹಬೂಬು ಪಾಷ, ಡಿವೈಎಸ್ಪಿ ಚಂದ್ರಶೇಖರ್, ಕುಮಾರ್, ನಯಾಜ್, ಇನಾಯತ್, ಇಸ್ಮಾಯಿಲ್, ಅಕ್ರಂ, ಜಹೀದ್, ಈದ್ ಮಿಲಾದ್ ಕಮಿಟಿಯ ಮಹಮದ್ ಫೀರ್, ಬಾಬು, ಸೈಯದ್, ಇಮ್ರಾನ್ ಸೇರಿದಂತೆ ಅನೇಕ ಮುಖಂಡರು ಪಾಲ್ಗೊಂಡಿದ್ದರು.

ಚಾಂದಿನಿ ಮೆರವಣಿಗೆ ಸಾಗಿದ ಮಾರ್ಗದುದ್ದಕ್ಕೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಶೋಕ್ ಕೆ.ವಿ. ರವರ ನೇತೃತ್ವದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿತ್ತು. 

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...