ಚುನಾವಣೆ ನೀತಿ ಸಂಹಿತೆ: ‘ಅಂಬೇಡ್ಕರ್‌ ಜಯಂತಿ’ ಕುರಿತು ಸಮಾಜ ಕಲ್ಯಾಣ ಇಲಾಖೆ ಸ್ಪಷ್ಟನೆ

Date:

ಭಾರತ ರತ್ನ ಡಾ.ಬಿ ಆರ್‌ ಅಂಬೇಡ್ಕರ್‌ ಹಾಗೂ ಬಾಬು ಜಗಜೀವನ್‌ ರಾಂ ಅವರ ಜಯಂತಿಗಳನ್ನು ಪ್ರತಿ ವರ್ಷ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಆಚರಿಸಲಾಗುತ್ತಿದೆ. ಎರಡು ಜಯಂತಿಗಳ ಆಚರಣೆಗೆ ಸಂಬಂಧಿಸಿದ ವಿಷಯಗಳು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ವ್ಯಾಪ್ತಿಗೆ ಒಳಪಟ್ಟಿರುವುದಿಲ್ಲ. ಹೀಗಾಗಿ, ಆ ಇಲಾಖೆ ಹೊರಡಿಸಿದ್ದ ಪ್ರಕಟಣೆಯಲ್ಲಿ ಈ ಇಬ್ಬರು ನಾಯಕರ ಜಯಂತಿಗಳ ಕುರಿತು ಉಲ್ಲೇಖಿಸಿರಲಿಲ್ಲ ಎಂದು ಸಮಾಜ ಕಲ್ಯಾಣ ಇಲಾಖೆಯ ಬೆಂಗಳೂರು ಆಯುಕ್ತ ರಾಖೇಶ್‌ ಕುಮಾರ್‌ ಸ್ಪಷ್ಟನೆ ನೀಡಿದ್ದಾರೆ.

ಚುನಾವಣಾ ನೀತಿ ಸಂಹಿತೆ ಜಾರಿ ಹಿನ್ನೆಲೆಯಲ್ಲಿ 2023ರ ಏಪ್ರಿಲ್‌ ಮತ್ತು ಮೇ ತಿಂಗಳಿನಲ್ಲಿರುವ ಜಯಂತಿಗಳನ್ನು ಸರಳ ಮತ್ತು ಸಾಂಕೇತಿಕವಾಗಿ ಆಚರಣೆ ಮಾಡುವಂತೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಆದೇಶ ಹೊರಡಿಸಿತ್ತು. ಈ ಆದೇಶದಲ್ಲಿ ಅಂಬೇಡ್ಕರ್‌ ಮತ್ತು ಬಾಬು ಜಗಜೀವನ್‌ ರಾಂ ಅವರ ಜಯಂತಿಗಳನ್ನು ಉಲ್ಲೇಖಿಸಿರಲಿಲ್ಲ. ಇದನ್ನು ಖಂಡಿಸಿ ಸಾರ್ವಜನಿಕರು ಸಾಮಾಜಿಕ ಜಾಲಾತಾಣಗಳಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದರು. ಈ ಬಗ್ಗೆ ಸ್ಪಷ್ಟನೆ ನೀಡುವ ಮೂಲಕ ಸಾರ್ವಜನಿಕರ ಆಕ್ರೋಶವನ್ನು ಶಮನ ಮಾಡುವ ಪ್ರಯತ್ನವನ್ನು ಸಮಾಜ ಕಲ್ಯಾಣ ಇಲಾಖೆ ಆಯುಕ್ತರು ಮಾಡಿದ್ದಾರೆ.

ಹಸಿರು ಕ್ರಾಂತಿಯ ಹರಿಕಾರ ಡಾ. ಬಾಬು ಜಗಜೀವನ್‌ ರಾಂ ಮತ್ತು ಸಂವಿಧಾನ ಶಿಲ್ಪಿ  ಡಾ. ಬಿ ಆರ್‌ ಅಂಬೇಡ್ಕರ್‌ ಅವರ ಜಯಂತಿಯನ್ನು ರಾಜ್ಯ, ಜಿಲ್ಲೆ ಹಾಗೂ ತಾಲೂಕು ಮಟ್ಟದಲ್ಲಿ ಸಮಾಜ ಕಲ್ಯಾಣ ಇಲಾಖೆ ಮೂಲಕ ಸರ್ಕಾರ ಪ್ರತಿ ವರ್ಷವೂ ಆಚರಿಸಲಾಗುತ್ತದೆ.  ದಿನಾಂಕ 05/04/2023 ರಂದು ಬಾಬು ಜಗಜೀವನ್‌ ರಾಂ ಅವರ ಜನ್ಮ ದಿನಾಚರಣೆಯನ್ನು ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಆಚರಿಸಲಾಗಿದೆ ಎಂದು ಇಲಾಖೆಯ ಆಯುಕ್ತ ರಾಖೇಶ್‌ ಕುಮಾರ್‌ ಸ್ಪಷ್ಟಪಡಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಚುನಾವಣೆ ನೀತಿ ಸಂಹಿತೆ ಜಾರಿ; ಅಂಬೇಡ್ಕರ್‌ ಜಯಂತಿ ಕೈಬಿಟ್ಟ ಕನ್ನಡ ಮತ್ತು ಸಂಸ್ಕೃತಿ ಇಲಾಖೆ

ಈ ಸಂಬಂಧ ಈ ದಿನ.ಕಾಮ್‌ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಯನ್ನು ಸಂಪರ್ಕಿಸಿದಾಗ ಪ್ರತಿಕ್ರಿಯಿಸಿದ್ದು, “ಬಾಬು ಜಗಜೀವನ್‌ ರಾಂ ಮತ್ತು ಅಂಬೇಡ್ಕರ್‌ ಜಯಂತಿಗಳನ್ನು ಪ್ರತಿ ವರ್ಷ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಆಚರಿಸುತ್ತೇವೆ. ಈ ಬಾರಿ ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಸರಳ ಮತ್ತು ಅರ್ಥಪೂರ್ಣವಾಗಿ ನಡೆಸುತ್ತೇವೆ. ಈಗಾಗಲೇ ಏಪ್ರಿಲ್‌ 5ರಂದು ಬಾಬು ಜಗಜೀವನ್‌ ರಾಂ ಜಯಂತಿ ನಡೆಸಿದ್ದು, ಏ.14ರಂದು ಅಂಬೇಡ್ಕರ್‌ ಜಯಂತಿ ನಡೆಸುತ್ತೇವೆ” ಎಂದು ತಿಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...