ಚುನಾವಣಾ ಅಕ್ರಮ | ₹147 ಕೋಟಿ ನಗದು, ₹375 ಕೋಟಿ ಮೌಲ್ಯದ ವಸ್ತುಗಳ ವಶ

Date:

  • 2018ರ ಚುನಾವಣೆಗೆ ಹೋಲಿಸಿದರೆ ಈ ಬಾರಿ 4.5 ಪಟ್ಟು ಹೆಚ್ಚಳ
  • ರಾಜ್ಯಾದ್ಯಂತ 2,896 ಎಫ್​ಐಆರ್​​ ದಾಖಲು; ಚುನಾವಣಾ ಆಯೋಗ

ಕರ್ನಾಟಕ ವಿಧಾನಸಭಾ ಚುನಾವಣೆಯ ಮತದಾನ ನಡೆಯುತಿದ್ದು, ರಾಜ್ಯದಲ್ಲಿ ಹಲವು ರಾಜಕೀಯ ಪಕ್ಷಗಳ ಅಭ್ಯರ್ಥಿಗಳು ಮತದಾರರನ್ನು ಸೆಳೆಯಲು ಹಣದ ಹೊಳೆಯನ್ನೇ ಹರಿಸಿದ್ದಾರೆ ಎಂಬುದಕ್ಕೆ ಚುನಾವಣಾ ಆಯೋಗ ವಶಪಡಿಸಿಕೊಂಡಿರುವ ಭಾರೀ ಮೊತ್ತದ ಹಣ, ಚಿನ್ನ ಮತ್ತು ವಸ್ತುಗಳೇ ಸಾಕ್ಷಿ.

ರಾಜ್ಯ ವಿಧಾನಸಭಾ ಚುನಾವಣೆ ಹಿನ್ನೆಲೆ ನೀತಿ ಸಂಹಿತೆ ಜಾರಿಯಲ್ಲಿದ್ದು, ಈ ವೇಳೆ ಚುನಾವಣಾಧಿಕಾರಿಗಳು ಸಾಕಷ್ಟು ನಗದು ಮತ್ತು ವಸ್ತುಗಳನ್ನು ವಶಕ್ಕೆ ಪಡೆದಿದ್ದಾರೆ. ಅದು 2018ರ ಚುನಾವಣೆಗೆ ಹೋಲಿಸಿದರೆ ಈ ವರ್ಷ ವಶಪಡಿಸಿಕೊಂಡಿರುವ ಒಟ್ಟು ಮೌಲ್ಯ 4.5 ಪಟ್ಟು ಹೆಚ್ಚಳವಾಗಿದೆ.

ಚುನಾವಣಾ ಆಯೋಗ

ರಾಜ್ಯಾದ್ಯಂತ ಚುನಾವಣಾಧಿಕಾರಿಗಳು, ಐಟಿ ಅಧಿಕಾರಿಗಳ ದಾಳಿ ವೇಳೆ ಮತ್ತು ಚೆಕ್​ ಪೋಸ್ಟ್​ಗಳಲ್ಲಿ ಈವರೆಗೆ ಬರೋಬ್ಬರಿ ₹ 147 ಕೋಟಿ ಜಪ್ತಿ ಮಾಡಿದ್ದಾರೆ. ₹ 375 ಕೋಟಿ ರೂ. ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಕರ್ನಾಟಕ ರಾಜ್ಯ ಚುನಾವಣಾ ಆಯೋಗ ಅಧಿಕೃತ ಮಾಹಿತಿ ನೀಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇನ್ನು ಅಕ್ರಮವಾಗಿ ಹಣ ಸಂಗ್ರಹಿಸಿದ್ದ ನೂರಕ್ಕೂ ಅಧಿಕ ಕಡೆ ಐಟಿ ದಾಳಿ ನಡೆಸಿದ್ದು, ಬರೊಬ್ಬರಿ ₹ 42 ಕೋಟಿ ಹಣ ಸೀಜ್​ ಮಾಡಿದೆ. ವಿಜಿಲೆನ್ಸ್​, ಚೆಕ್​ ಪೋಸ್ಟ್​ಗಳಲ್ಲಿ ₹ 105 ಕೋಟಿ ನಗದು ಸೇರಿ ಒಟ್ಟು ₹147.46 ಕೋಟಿ  ವಶಪಡಿಸಿಕೊಳ್ಳಲಾಗಿದೆ.

ಚುನಾವಣೆ - ಚೆಕ್‌ ಪೋಸ್ಟ್

₹ 96.60 ಕೋಟಿಮೌಲ್ಯದ ಚಿನ್ನ ಹಾಗೂ ಬೆಳ್ಳಿ ಆಭರಣಗಳು. ಸೀರೆ, ಕುಕ್ಕರ್ ಸೇರಿ ₹ 24.21 ಕೋಟಿ ಮೌಲ್ಯದ ಹಲವು ಬಗೆಯ ಉಡುಗೊರೆಗಳು, ₹ 83.66 ಕೋಟಿ ಮೌಲ್ಯದ 22.27 ಲಕ್ಷ ಲೀಟರ್‌ ​ಮದ್ಯ, ₹ 23.67 ಕೋಟಿ ಮೌಲ್ಯದ ಮಾದಕ ವಸ್ತುಗಳು (ಡ್ರಗ್) ಸೀಜ್​ ಮಾಡಲಾಗಿದೆ. ಚುನಾವಣೆ ಅಕ್ರಮಕ್ಕೆ ಸಂಬಂಧಿಸಿದಂತೆ ರಾಜ್ಯಾದ್ಯಂತ ಒಟ್ಟು 2,896 ಎಫ್​ಐಆರ್​​ ದಾಖಲಾಗಿವೆ ಎಂದು ಚುನಾವಣಾ ಆಯೋಗ ಮಾಹಿತಿ ನೀಡಿದೆ.

2018ರಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಚುನಾವಣಾಧಿಕಾರಿಗಳು ಒಟ್ಟು ₹ 83.93 ಕೋಟಿ ಮೌಲ್ಯದ ವಸ್ತುಗಳು ಮತ್ತು ನಗದು ವಶಪಡಿಸಿಕೊಳ್ಳಲಾಗಿತ್ತು.

ಈ ಸುದ್ದಿ ಓದಿದ್ದೀರಾ? ಸ್ವಕ್ಷೇತ್ರದಲ್ಲಿ ಕೈ ಮುಗಿದು ಮತಭಿಕ್ಷೆ ಕೇಳಿದ ಎಚ್ಡಿಕೆ, ಡಿಕೆಶಿ, ಬೊಮ್ಮಾಯಿ: ಬಹಿರಂಗ ಪ್ರಚಾರಕ್ಕೆ ತೆರೆ

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...