ಉತ್ತರ ಕರ್ನಾಟಕ | 2.5 ಲಕ್ಷ ಮಂದಿ ವಲಸೆ ಮತದಾರರ ಸಂಪರ್ಕಕ್ಕೆ ಮುಂದಾದ ಚುನಾವಣಾ ಆಯೋಗ

Date:

ಕಳೆದ ಎರಡು ತಿಂಗಳಲ್ಲಿ ಉತ್ತರ ಕರ್ನಾಟಕದ 14 ಜಿಲ್ಲೆಗಳಿಂದ ವಲಸೆ ಬಂದಿರುವ ಮತದಾರರ ಸಂಖ್ಯೆಯನ್ನು ರಾಜ್ಯ ಚುನಾವಣಾ ಆಯೋಗ ಕೇಳಿದೆ. ಗ್ರಾಮೀಣ ಪ್ರದೇಶಗಳಿಂದ ಜನರ ವಾರ್ಷಿಕ ವಲಸೆ ಸಾಮಾನ್ಯವಾಗಿ ಏಪ್ರಿಲ್‌ನಲ್ಲಿ ಪ್ರಾರಂಭವಾಗುತ್ತದೆ. ಆದರೆ ಇದೀಗ ಎದುರಾಗಿರುವ ಬರಗಾಲದಿಂದ ಈ ವರ್ಷ ಫೆಬ್ರವರಿಯಲ್ಲಿಯೇ ವಲಸೆ ಪ್ರಾರಂಭವಾಗಿದೆ.

ಚುನಾವಣಾ ಆಯೋಗದ ಅಂದಾಜಿನ ಪ್ರಕಾರ, ಉತ್ತರ ಕರ್ನಾಟಕದ ಪ್ರದೇಶದ ಸುಮಾರು 2,52,630 ಮಂದಿ ಅರ್ಹ ಮತದಾರರು ಉದ್ಯೋಗವನ್ನು ಹುಡುಕಿಕೊಂಡು ಇತರ ಸ್ಥಳಗಳಿಗೆ ವಲಸೆ ಹೋಗಿದ್ದಾರೆ. ಮತದಾನದ ಶೇಕಡಾವಾರು ಹೆಚ್ಚಿಸಲು ಚುನಾವಣೆಯ ಸಮಯದಲ್ಲಿ ಅವರನ್ನು ಕರೆತರಲು ಬಸ್ ವ್ಯವಸ್ಥೆ ಮಾಡಲು ಪ್ರಯತ್ನಿಸಲಾಗುವುದು” ಎಂದು ತಿಳಿಸಿದೆ.

“ಈಗ ಜಿಲ್ಲೆಯ ಸ್ವೀಪ್ ಸಮಿತಿಗಳ (ವ್ಯವಸ್ಥಿತ ಮತದಾರರ ಶಿಕ್ಷಣ ಮತ್ತು ಚುನಾವಣಾ ಭಾಗವಹಿಸುವಿಕೆ ಕಾರ್ಯಕ್ರಮ) ಅಧ್ಯಕ್ಷರಾಗಿರುವ ಸಿಇಒಗಳು ತಮ್ಮ ಮನೆಗಳಿಂದ ಸ್ಥಳಾಂತರಗೊಂಡ ಅರ್ಹ ಮತದಾರರ ಸಂಪರ್ಕ ಸಂಖ್ಯೆಯನ್ನು ಕೋರಿದ್ದಾರೆ. ಬೂತ್ ಮಟ್ಟದ ಅಧಿಕಾರಿಗಳು (ಬಿಎಲ್ಒಗಳು) ಈಗಾಗಲೇ ಡೇಟಾವನ್ನು ಸಂಗ್ರಹಿಸಿದ್ದು, ವಲಸೆ ಮತದಾರರ ಸಂಪರ್ಕ ಸಂಖ್ಯೆಗಳು ದೊರೆತ ಬಳಿಕ ನಾವು ಅವರನ್ನು ಸಂಪರ್ಕಿಸಲು ಪ್ರಯತ್ನಿಸುತ್ತೇವೆ. ಮೇ 7ರಂದು ಮತ ಚಲಾಯಿಸುವಂತೆ ಮನವೊಲಿಸುತ್ತೇವೆ” ಎಂದು ಅಧಿಕಾರಿಯೊಬ್ಬರು ವಿವರಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ವಲಸೆ ಬಂದ ಮತದಾರರನ್ನು ಪಟ್ಟಿ ಮಾಡುವುದರ ಜತೆಗೆ, ಬಿಎಲ್ಒಗಳು ಮೃತ ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ತೆಗೆದುಹಾಕುತ್ತಾರೆ. ಮುಂದಿನ ಕೆಲವು ವಾರಗಳಲ್ಲಿ ತಿದ್ದುಪಡಿಗಳು ಮತ್ತು ಹೆಚ್ಚುವರಿ ಕೆಲಸಗಳನ್ನು ಮಾಡಲಾಗುವುದು. ವಲಸೆ ಬಂದ ಮತದಾರರ ಹತ್ತಿರದ ಸಂಬಂಧಿಕರನ್ನು ಬಿಎಲ್ಒಗಳು ಸಂಪರ್ಕಿಸುತ್ತಿದ್ದು, ಅವರು ಎಲ್ಲಿದ್ದಾರೆ ಮತ್ತು ಅವರನ್ನು ಹೇಗೆ ತಲುಪಬೇಕು ಎಂಬುದನ್ನು ತಿಳಿದುಕೊಳ್ಳುತ್ತಿದ್ದಾರೆ.

“ಅನೇಕ ಬಾರಿ, ರಾಜಕೀಯ ಪಕ್ಷಗಳು ರಾಜ್ಯ ಮತ್ತು ದೇಶದ ವಲಸೆ ಮತದಾರರಿಗೆ ಬಸ್ಸುಗಳು, ಪಾರ್ಟಿಗಳು ಮತ್ತು ಉಡುಗೊರೆಗಳನ್ನು ವ್ಯವಸ್ಥೆ ಮಾಡುತ್ತವೆ. ಉದಾಹರಣೆಗೆ, ರಾಜಕೀಯ ಪಕ್ಷವೊಂದು ಚುನಾವಣೆಗೆ ಸ್ವಲ್ಪ ಮೊದಲು ಗೋವಾದಲ್ಲಿ ಉತ್ತರ ಕರ್ನಾಟಕದ ವಲಸಿಗರಿಗೆ ಅದ್ದೂರಿ ಔತಣಕೂಟವನ್ನು ಏರ್ಪಡಿಸಿತ್ತು. ಈ ಬಾರಿ, ಚುನಾವಣಾ ಆಯೋಗ ಮತ್ತು ಸ್ಥಳೀಯ ಆಡಳಿತವು ಮತದಾರರನ್ನು ಮರಳಿ ಕರೆತರಲು ಬಸ್ಸುಗಳನ್ನು ವ್ಯವಸ್ಥೆ ಮಾಡುತ್ತದೆ” ಎಂದು ಅಧಿಕಾರಿ ಹೇಳಿದರು.

ಈ ಸುದ್ದಿ ಓದಿದ್ದೀರಾ? ವಿಜಯಪುರ | ಮಹಿಳಾ ವಿವಿಯಲ್ಲಿ ಅಕ್ರಮ; ಇಪಿಎಫ್‌ ಹಣ ಹಾಕದೆ ವಂಚನೆ ಆರೋಪ

“ಎಲ್ಲ ಕಾರ್ಮಿಕರನ್ನು ಸಂಪರ್ಕಿಸುವುದು ಆಡಳಿತಕ್ಕೆ ಸುಲಭದ ಕೆಲಸವಲ್ಲ. ಆಯೋಗವು ವಿವಿಧ ಮಾಧ್ಯಮಗಳ ಮೂಲಕ ಮತದಾನ ಜಾಗೃತಿ ಅಭಿಯಾನಗಳನ್ನು ಕೈಗೊಳ್ಳಲಿದೆ. ಉದಾಹರಣೆಗೆ, ಬಳ್ಳಾರಿ ಜಿಲ್ಲೆಯಲ್ಲಿ ಸುಮಾರು 15,000 ಮಂದಿ ವಲಸೆ ಮತದಾರರಿದ್ದರೆ. ಕೊಪ್ಪಳ ಜಿಲ್ಲೆಯಲ್ಲಿ ಸುಮಾರು 45,000 ಮಂದಿ ವಲಸೆ ಮತದಾರರಿದ್ದಾರೆ. ಗದಗ, ರಾಯಚೂರು ಮತ್ತು ಕಲಬುರಗಿಯ ಸಂಖ್ಯೆಗಳನ್ನು ಸಂಗ್ರಹಿಸಲಾಗುತ್ತಿದೆ. ಬೇಸಿಗೆಯಲ್ಲಿ ಅತಿ ಹೆಚ್ಚು ವಲಸೆ ಬರುವ ತಾಂಡಾಗಳಿಗೆ (ಕುಗ್ರಾಮಗಳು) ಬಿಎಲ್ಒಗಳು ಭೇಟಿ ನೀಡುತ್ತಾರೆ. ಹಳ್ಳಿಗಳು ಮತ್ತು ಇತರ ಪ್ರದೇಶಗಳಲ್ಲಿ ಬೀದಿ ನಾಟಕಗಳನ್ನು ಆಯೋಜಿಸುವ ಮೂಲಕ ಜಾಗೃತಿ ಮೂಡಿಸಲಾಗುವುದು” ಎಂದು ಅಧಿಕಾರಿ ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...