ಕಾಂಗ್ರೆಸ್‌-ಬಿಜೆಪಿ ನಡುವಿನ ಹೋರಾಟವಲ್ಲ, ಕೋಮುವಾದ ವಿರುದ್ಧದ ಜನರ ಹೋರಾಟ: ಸಿಎಂ ಸಿದ್ದರಾಮಯ್ಯ

Date:

ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ನಡೆದಿದ್ದು ಬಿಜೆಪಿ ಮತ್ತು ಕಾಂಗ್ರೆಸ್‌ ನಡುವಿನ ಹೋರಾಟವಲ್ಲ, ಕೋಮುವಾದ ಮತ್ತು ಜನರ ನಡುವಿನ ಹೋರಾಟ. ಇಂದು ಸಮಾಜದಲ್ಲಿ ಬಸವಣ್ಣ, ಕುವೆಂಪು, ಎಚ್‌.ಎಸ್‌ ದೊರೆಸ್ವಾಮಿ ಅವರ ಆಶಯಗಳನ್ನು ಈಡೇರಿಸಲು ಎಲ್ಲರೂ ಕೆಲಸ ಮಾಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಚುನಾವಣಾ ಸಮಯದಲ್ಲಿ ಕೋಮುವಾದದ ವಿರುದ್ಧ ಜನರಲ್ಲಿ ಜಾಗೃತ್ತಿ ಮೂಡಿಸಿ, ಕೋಮುವಾದಿ ಬಿಜೆಪಿಯನ್ನು ಸೋಲಿಸಲು ಹಲವಾರು ಸಂಘಟನೆಗಳು ‘ಎದ್ದೇಳು ಕರ್ನಾಟಕ’ ಅಭಿಯಾನದಡಿ ದುಡಿದಿದ್ದವು. ಅಭಿಯಾನದಲ್ಲಿ ತೊಡಗಿಸಿಕೊಂಡಿದ್ದ ಎಲ್ಲ ಕಾರ್ಯಕರ್ತರಿಗೂ ಅಭಿನಂದನೆ ಮತ್ತು ಹೊಸ ಸರ್ಕಾರಕ್ಕೆ ಹೊಣೆಗಾರಿಕೆಗಳನ್ನು ಸಲ್ಲಿಸಲು ಅಭಿಯಾನವು ಸಮಾವೇಶ ಆಯೋಜಿಸಿತ್ತು.

ಸಮಾವೇಶದಲ್ಲಿ ಭಾಗಿಯಾಗಬೇಕಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ದೆಹಲಿಯಲ್ಲಿದ್ದ ಕಾರಣ, ತಮ್ಮ ಮಾತುಗಳನ್ನು ಬರೆದು ಕಳಿಸಿದ್ದರು. ಅವರ ಮಾತುಗಳು ಹೀಗಿದ್ದವು, “ಸಂವಿಧಾನದ ಆಶಯಗಳಿಗಾಗಿ ದುಡಿದ ಸ್ವಾತಂತ್ರ್ಯ ಸೇನಾನಿ ದೊರೆಸ್ವಾಮಿ, ಗೌರಿ ಲಂಕೇಶ್, ಎಂ.ಎಂ ಕಲಬುರಗಿ ಅವರನ್ನು ಸ್ಮರಿಸುತ್ತಿರುವ ಕಾರ್ಯಕ್ರಮದಲ್ಲಿ ನಾನೂ ಭಾಗಿಯಾಗಬೇಕಿತ್ತು. ಆದರೆ, ಕಾರಣಾಂತರಗಳಿಂದ ಬರಲಾಗಲಿಲ್ಲ. ಜನಾಂದೋಲನಗಳು ಚುನಾವಣಾ ಸಮಯದಲ್ಲಿ ಪ್ರಮುಖ ಪಾತ್ರವಹಿಸುತ್ತವೆ. ಚುನಾವಣೆ ವೇಳೆ, ರೈತ ಸಂಘಟನೆಗಳು, ದಲಿತ ಸಂಘಟನೆಗಳ ನಿರ್ಣಯವೇನು ಎಂದು ಎದುರು ನೋಡುತ್ತಿದ್ದ ಕಾಲವೊಂದಿತ್ತು” ಎಂದು ಅವರು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಆದರೆ, ಅಂತಹದೊಂದು ಸಂದರ್ಭದಲ್ಲಿ ಇತ್ತೀಚಿನ ದಿನಗಳಲ್ಲಿ ಕಾಣೆಯಾಗಿದೆ. ದೇಶದಲ್ಲಿ ಪ್ರಜಾಪ್ರಭುತ್ವ ದುರ್ಬಲಗೊಳ್ಳುತ್ತಿದೆ. ಕೋಮುವಾದಿ ಶಕ್ತಿಗಳು ಪ್ರಬಲವಾಗುತ್ತಿವೆ. ಇಂತಹ ಸಮಯದಲ್ಲಿ ಎದ್ದೇಳು ಕರ್ನಾಟಕ ಆಂದೋಲನ ನಡೆದದ್ದು ಪ್ರಶಂಸನೀಯ” ಎಂದಿದ್ದಾರೆ.

“ನನಗೆ ತಿಳಿದಂತೆ, ಎದ್ದೇಳು ಕರ್ನಾಟಕ ಅಭಿಯಾನದಲ್ಲಿ 100ಕ್ಕೂ ಹೆಚ್ಚು ಸಂಘಟನೆಗಳು ಭಾಗಿಯಾಗಿ, 130ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಕೋಮುವಾದಿ ಬಿಜೆಪಿಯನ್ನು ಸೋಲಿಸಲು ಶ್ರಮಿಸಿದ್ದಾರೆ. ತಮ್ಮಲ್ಲಿದ್ದ ಸಂಪನ್ಮೂಲಗಳ ಹೊರತಾಗಿಯೂ ಬೃಹತ್ ರ್ಯಾಲಿ, ಸಮಾವೇಶಗಳನ್ನು ನಡೆಸದೇ, ತಳಮಟ್ಟದಲ್ಲಿ ದುಡಿದು, ಜನರನ್ನು ಜಾಗೃತಗೊಳಿಸಿದ್ದಾರೆ” ಎಂದು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

“ಅಭಿಯಾನದಲ್ಲಿ ಸಾಹಿತಿ ದೇವನೂರ ಮಹಾದೇವ, ದಲಿತ ಸಂಘಟನೆಗಳು, ಕರ್ನಾಟಕ ಜನಶಕ್ತಿ, ರೈತ ಸಂಘಟನೆ, ಗ್ರಾಮೀಣ ಕೂಲಿಕಾರರ ಸಂಘಟನೆಗಳ ಶ್ರಮವಹಿಸಿ ದುಡಿದಿದ್ದಾರೆ. ಈ ಸಮಯದಲ್ಲಿ ದೊರೆಸ್ವಾಮಿ ಅವರು ಇದ್ದಿದ್ದರೆ, ಖಂಡಿತಾ ಇಲ್ಲಿರುತ್ತಿದ್ದರು. ಗೌರಿ ಲಂಕೇಶ್, ಕೆ.ಎ ಸುಬ್ಬಯ್ಯ ಇರುತ್ತಿದ್ದರು. ದೊರೆಸ್ವಾಮಿ ಅವರು ನಮ್ಮನ್ನು ಸ್ವಲ್ಪ ಹೊಗಳಿ, ಸ್ವಲ್ಪ ಬೈದು, ಈ ರೀತಿಯಲ್ಲಿ ಕೆಲಸಗಳು ಆಗಬೇಕೆಂದು ಎಚ್ಚರಿಸುತ್ತಿದ್ದರು” ಎಂದು ಎಲ್ಲರನ್ನಗಲಿದ ದೊರೆಸ್ವಾಮಿ, ಗೌರಿ, ಸುಬ್ಬಯ್ಯರನ್ನು ಸ್ಮರಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ?: ವಿಜಯಪುರ | ಮೇ 27ರಿಂದ ‘ಮೇ ಸಾಹಿತ್ಯ ಮೇಳ’: ಹರ್ಷ ಮಂದರ್, ತೀಸ್ತಾ, ಪ್ರಕಾಶ್ ಅಂಬೇಡ್ಕರ್ ಭಾಗಿ

“ಕಾಂಗ್ರೆಸ್‌ ಸರ್ಕಾರದ ವಿರುದ್ಧ ಬಿಜೆಪಿ ಷಂಡ್ಯತ್ರ ರೂಪಿಸುತ್ತಿದೆ. ಸರ್ಕಾರದ ವಿರುದ್ಧ ಅಪಪ್ರಚಾರ ಮಾಡುತ್ತಿದೆ. ಅದಕ್ಕೆಲ್ಲ ಬಗ್ಗದೆ, ಜನರ ಆಶೋತ್ತರಗಳನ್ನು ಈಡೇರಿಸಲು ಕೆಲಸ ಮಾಡುತ್ತೇವೆ. ಇಂತಹ ಸಂದರ್ಭದಲ್ಲಿಯೂ ಈ ಅಭಿಯಾನ ನಮ್ಮೊಂದಿಗಿರಬೇಕು. ನಮ್ಮಿಂದ ತಪ್ಪಾದಾಗ ಎಚ್ಚರಿಸಬೇಕು” ಎಂದು ಮನವಿ ಮಾಡಿದ್ದಾರೆ.

ಕಾರ್ಯಕ್ರಮದಲ್ಲಿ ಸಚಿವ ಸತೀಶ್‌ ಜಾರಕಿಹೊಳಿ, ಶಾಸಕ ಬಿ.ಆರ್ ಪಾಟೀಲ್, ಶಾಸಕ ದರ್ಶನ್ ಪುಟ್ಟಣ್ಣಯ್ಯ, ಎದ್ದೇಳು ಕರ್ನಾಟಕ ಅಭಿಯಾನದ ನೂರ್ ಶ್ರೀಧರ್, ಸಿರಿಮನೆ ನಾಗರಾಜ್, ಬಡಗಲಪುರ ನಾಗೇಂದ್ರ, ರಾಘವೇಂದ್ರ ಕುಷ್ಠಗಿ, ಡಾ. ವಿಜಯ, ಗೌರಿ, ಮಲ್ಲಿಗೆ ಸೇರಿದಂತೆ ಹಲವರು ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...