ಮೈಸೂರು | ಚಾಮರಾಜನಗರ ಜಿಲ್ಲೆಯ ಹಾಡಿಗಳಿಗೆ ವಿದ್ಯುತ್ ಸೌಲಭ್ಯ : ಶಾಸಕ ರಮೇಶ್ ಬಂಡಿಸಿದ್ದೇಗೌಡ

Date:

ಮೈಸೂರಿನ ವಿಜಯನಗರ 2ನೇ ಹಂತದಲ್ಲಿರುವ ಸೆಸ್ಕ್‌ ಪ್ರಧಾನ ಕಚೇರಿಯಲ್ಲಿ ನಡೆದ ಚಾಮರಾಜನಗರ ಜಿಲ್ಲಾ ಪ್ರಗತಿ ಪರಿಶೀಲನಾ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದ ಸೆಸ್ಕ್ ಅಧ್ಯಕ್ಷ ಹಾಗೂ ಶಾಸಕ ರಮೇಶ್ ಬಂಡಿಸಿದ್ದೇಗೌಡ ” ಚಾಮರಾಜನಗರ ಜಿಲ್ಲೆಯ ಹಾಡಿಗಳಿಗೆ ವಿದ್ಯುತ್‌ ಪೂರೈಸಲು ಅಗತ್ಯವಿರುವ ಕೆಲಸವನ್ನು ಅಧಿಕಾರಿಗಳು ಕೂಡಲೇ ಆರಂಭಿಸಬೇಕು. ನಂತರದಲ್ಲಿ ಯಾವುದೇ ಅಡೆತಡೆಗಳು ಅಥವಾ ಸಮಸ್ಯೆ ಉಂಟಾದಲ್ಲಿ ಖುದ್ದಾಗಿ ನಾನೇ ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಸರ್ಕಾರದ ಜೊತೆ ಮಾತುಕತೆ ನಡೆಸಿ ಅನುಮತಿ ಕೊಡಿಸುತ್ತೇನೆ ” ಎಂದು ಭರವಸೆ ನೀಡಿದರು.

ಚಾಮರಾಜನಗರ ಜಿಲ್ಲಾಧಿಕಾರಿ ಶಿಲ್ಪಾ ನಾಗ್‌ ಮಾತನಾಡಿ, ” ಜಿಲ್ಲೆಯ ವ್ಯಾಪ್ತಿಯಲ್ಲಿರುವ 31 ಹಾಡಿಗಳಿಗೆ ವಿದ್ಯುತ್‌ ಪೂರೈಕೆ ಮಾಡುವ ನಿಟ್ಟಿನಲ್ಲಿ ಸೆಸ್ಕ್‌ ವತಿಯಿಂದ ಉತ್ತಮ ಸಹಕಾರ ಸಿಕ್ಕಿದೆ. 31 ಹಾಡಿಗಳ 2000 ಕುಟುಂಬಕ್ಕೆ ವಿದ್ಯುತ್‌ ಪೂರೈಸಲು ಸರ್ಕಾರ ₹42 ಕೋಟಿ ರೂಗಳನ್ನು ಖರ್ಚು ಮಾಡುತ್ತಿದೆ. ಆದರೆ, ಹಾಡಿಗಳಿಗೆ ವಿದ್ಯುತ್‌ ಪೂರೈಕೆ ಮಾಡಲು ಜಿಲ್ಲೆಯ ಹೆಚ್ಚಿನ ಭೂ ಪ್ರದೇಶ ಅರಣ್ಯ ಇಲಾಖೆಗೆ ಸೇರಿರುವುದು ದೊಡ್ಡ ಸವಾಲಾಗಿದೆ. ಅದನ್ನು ಸರಿಪಡಿಸಲು ಅಗತ್ಯ ಕ್ರಮ ವಹಿಸಲಾಗುವುದು” ಎಂದರು.

” ಜಿಲ್ಲೆಯ ಶೇ.52ರಷ್ಟು ಭೂ ಪ್ರದೇಶ ಅರಣ್ಯದಿಂದ ಕೂಡಿರುವ ಕಾರಣ ಅಭಿವೃದ್ಧಿ ಕೆಲಸಗಳಿಗೆ ಅಡ್ಡಿಯಾಗುತ್ತಿದೆ. ಹೀಗಾಗಿ, ಯಾವುದೇ ಅಭಿವೃದ್ಧಿ ಕಾರ್ಯಗಳನ್ನು ಮಾಡಲು ಅರಣ್ಯ ಇಲಾಖೆ ವತಿಯಿಂದ ಕಡ್ಡಾಯವಾಗಿ ಅನುಮತಿ ಪಡೆಯಬೇಕಿದೆ. ಆದರೂ, ಮಲೆ ಮಹದೇಶ್ವರ ಬೆಟ್ಟ ವ್ಯಾಪ್ತಿಯ ಪಾಲಾರ್ ಹಾಡಿಗೆ ವಿದ್ಯುತ್ ಸಂಪರ್ಕ ನೀಡಿರುವುದು ನಮಗೆ ಸಿಕ್ಕಿರುವ ದೊಡ್ಡ ಯಶಸ್ಸು. ಈಗ ಉಳಿದ ಹಾಡಿಗಳಿಗೂ ವಿದ್ಯುತ್‌ ಪೂರೈಕೆ ಮಾಡುವ ನಿಟ್ಟಿನಲ್ಲಿ ಮುಂದಿನ ಕ್ರಮವನ್ನು ಕೈಗೊಳ್ಳಬೇಕಿದೆ. ಇದಕ್ಕಾಗಿ ಮುಂದಿನ ಮೂರು ತಿಂಗಳಲ್ಲಿ ಯೋಜನೆಯನ್ನು ಪೂರ್ಣಗೊಳಸಬೇಕಿದ್ದು, ಇದಕ್ಕಾಗಿ ಜಿಲ್ಲಾಡಳಿತದಿಂದ ಎಲ್ಲ ರೀತಿಯ ಕ್ರಮಗಳನ್ನು ಕೈಗೊಳ್ಳಲಾಗುವುದು”, ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಮೈಸೂರು | ಜಿಲ್ಲೆಯ ಇಂದೂಧರ ಹೊನ್ನಾಪುರ, ಹರಿಹರ ಆನಂದ ಸ್ವಾಮಿ ಸೇರಿದಂತೆ 15 ಮಂದಿ ಸಾಧಕರಿಗೆ ‘ ಅಂಬೇಡ್ಕರ್ ಪ್ರಶಸ್ತಿ ‘

ಸಭೆಯಲ್ಲಿ ಸೆಸ್ಕ್ ವ್ಯವಸ್ಥಾಪಕ ನಿರ್ದೇಶಕ ಮುನಿ ಗೋಪಾಲ್ ರಾಜು, ಮುಖ್ಯ ಆರ್ಥಿಕ ಅಧಿಕಾರಿ ಜಿ. ರೇಣುಕಾ, ಮುಖ್ಯ ಪ್ರಧಾನ ವ್ಯವಸ್ಥಾಪಕಿ ಶರಣಮ್ಮ ಎಸ್‌. ಜಂಗಿನ್‌, ಪ್ರಧಾನ ವ್ಯವಸ್ಥಾಪಕಿ ಬಿ.ಆರ್. ರೂಪ‌, ಮುಖ್ಯ ಪ್ರಧಾನ ವ್ಯವಸ್ಥಾಪಕಿ ಲಿಂಗರಾಜಮ್ಮ, ಪ್ರಧಾನ ವ್ಯವಸ್ಥಾಪಕ ಎಲ್‌. ಲೋಕೇಶ್‌, ಚಾಮರಾಜನಗರ-ಕೊಡಗು ಜಿಲ್ಲೆಗಳ ಅಧೀಕ್ಷಕ ಇಂಜಿನಿಯರ್‌ ಸೋಮಶೇಖರ್‌ ಸೇರಿದಂತೆ ಇನ್ನಿತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...