ಚಿಕ್ಕಮಗಳೂರು l ತೋಟದಲ್ಲಿ ಪ್ರತ್ಯಕ್ಷವಾದ ಆನೆ ಗುಂಪು: ಜೀವ ಭಯದಿಂದ ಓಡಿದ ಕಾರ್ಮಿಕರು

Date:

ಚಿಕ್ಕಮಗಳೂರು ತಾಲೂಕಿನ ಆಲ್ಲೂರಿನ ಸುತ್ತಮುತ್ತಲ ಗ್ರಾಮಗಳಲ್ಲಿ ಬೀಟಮ್ಮ ಗುಂಪಿನ ಆನೆಗಳು ಕಾಣಿಸಿಕೊಂಡಿವೆ. ತುಡುಕೂರು ಗ್ರಾಮದ ಉದಯಗೌಡ ಮತ್ತು ಮಹೇಶಗೌಡ ಎಂಬುದವರ ತೋಟದಲ್ಲಿ ಗೇಟ್ ಮುರಿದು ಸುಮಾರು 20 ಆನೆಗಳು ತೋಟಕ್ಕೆ ನುಗ್ಗಿದ್ದರಿಂದ ಕಾಫಿಹಣ್ಣನ್ನು ರಸ್ತೆಯಲ್ಲಿ ಚೆಲ್ಲಿಕೊಂಡು ಕಾರ್ಮಿಕರು ಜೀವ ಭಯದಿಂದ ಓಡಿ ಹೋದ ಘಟನೆ ನಡೆದಿದೆ.

ಆನೆ ದಾಳಿಯ ವಿಷಯ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಅರಣ್ಯ ಅಧಿಕಾರಿಗಳು ಭೇಟಿ ನೀಡಿದ್ದು, ಆನೆಗಳ ಹಿಂಡಿನ ವಿವರಗಳನ್ನು ಪರಿಶೀಲನೆ ನಡೆಸಿದ್ದಾರೆ.

ಕೆಲವು ತಿಂಗಳ ಹಿಂದೆ ಇದೇ ಆನೆಯ ಹಿಂಡು ಸಕಲೇಶಪುರದಿಂದ ಬೇಲೂರು, ಕೆ.ಆ‌ರ್.ಪೇಟೆಯ ಮೂಲಕ ಚಿಕ್ಕಮಗಳೂರು ತಾಲೂಕನ್ನು ಪ್ರವೇಶಿಸಿದ್ದವು. ವಸ್ತಾರೆ, ಆಣೂರು ಜೋಳದಾಳ್‌ ಮೂಲಕ ತಳಿಹಳ್ಳ, ಜಗ್ಗನಹಳ್ಳಿಯ ತೋಟಗಳಲ್ಲಿ ಬೀಡುಬಿಟ್ಟಿದ್ದವು. ಇನ್ನೇನು ಭದ್ರ ಅಭಯಾರಣ್ಯಕ್ಕೆ ಮುಖ ಮಾಡುತ್ತವೆ ಎನ್ನುವಷ್ಟರಲ್ಲಿ ಯೂಟರ್ನ್ ಹೊಡೆದು ನಲ್ಲೂರು ಗುಡ್ಡಕ್ಕೆ ಆನೆಗಳು ಬಂದಿದ್ದವು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಅರಣ್ಯ ಇಲಾಖೆ ಅಧಿಕಾರಿಗಳು ಮತ್ತು ಸಿಬ್ಬಂದಿಗಳು, ಆನೆಕಾವಲು ಪಡೆ, ಪೊಲೀಸರು ಗೃಹರಕ್ಷಕ ಸಿಬ್ಬಂದಿಗಳು ಪಟಾಕಿ ಸಿಡಿಸಿ ಆನೆಗಳು ಬಂದ ದಾರಿಯಲ್ಲೇ ಹಿಂದಿರುಗುವಂತೆ ಪ್ರಯತ್ನಿಸಲಾಗಿತ್ತು ಎಂದು ಅರಣ್ಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಆಲ್ಲೂರು ಸಮೀಪದ ತುಡಕೂರು, ಮಡೆನೆರಲು, ನೊಜ್ಜೆಪೆಟೆ, ಹಳೆ ಆಲ್ಲೂರು, ಆಲ್ಲೂರು ಹೊಸಳ್ಳಿ, ಎಲಗುಡಿಗೆ ಈ ಗ್ರಾಮದ ಸುತ್ತ ಮುತ್ತ ಇರುವ ಗ್ರಾಮಸ್ಥರು ಹಾಗೂ ತೋಟದಲ್ಲಿ ಕೆಲಸ ಕುವ ಕಾರ್ಮಿಕರು ಮತ್ತು ವಾಹನ ನಿವಾರರೂ ಎಚ್ಚರಿಕೆಯಿಂದ ಇರಬೇಕಾಗಿದೆ. ಸಕಲೇಶಪುರ ಆಲೂರು ಭಾಗದಲ್ಲಿದ್ದ ಬೀಟಮ್ಮ ಮತ್ತು ಭುವನೇಶ್ವರಿ ಗುಂಪಿನ ಆನೆಗಳಲ್ಲಿ ಒಟ್ಟು 20 ಆನೆಗಳು ಈಗ ಚಿಕ್ಕಮಗಳೂರು ಜಿಲ್ಲೆಗೆ ಬಂದಿವೆ. ಚೀಕನಹಳ್ಳಿ, ಚಟ್ನಳ್ಳಿ, ನಂದೀಪು ಮಾರ್ಗವಾಗಿ ಈಗ ಆಲ್ಲೂರು ಭಾಗದಲ್ಲಿ ಸಂಚರಿಸುತ್ತಿವೆ. ಈ ಗುಂಪಿನಲ್ಲಿ ಒಂದು ಮರಿಯಿದ್ದು, ಮತ್ತೊಂದು ಆನೆ ಮದಬಂದಿತ್ತು ಎಂದು ಅಲ್ಲೂರು ವಲಯ ಅರಣ್ಯ ಅಧಿಕಾರಿಗಳು ತಿಳಿಸಿದ್ದಾರೆ.

ಇದನ್ನೂ ಓದಿದ್ದೀರಾ?ಹಾಸನ | ಗುತ್ತಿಗೆ ಆಧಾರದ ಮೇಲೆ ಹಲವು ಹುದ್ದೆಗಳಿಗೆ ಅರ್ಜಿ ಆಹ್ವಾನ; ನ.15ರಂದು ಕೊನೆಯ ದಿನ

ಈ ಗುಂಪನ್ನು ಸೂಕ್ಷ್ಮವಾಗಿ ನಿರ್ವಹಿಸುವ ದೊಡ್ಡ ಸವಾಲಿದೆ. ಅರಣ್ಯ ಇಲಾಖೆ ಸಿಬ್ಬಂದಿ ಮತ್ತು ಆನೆ ಕಾರ್ಯಪಡೆ ಸಿಬ್ಬಂದಿ ಇವುಗಳ ಚಲನವಲನದ ಮೇಲೆ ತೀವ್ರ ನಿಗಾ ಇರಿಸಿದ್ದಾರೆ. ಸ್ಥಳೀಯ ಜನರಿಗೆ ಆನೆಗಳ ಚಲನೆಯ ಬಗ್ಗೆ ಮಾಹಿತಿ ನೀಡಲಾಗುತ್ತಿದೆ. ಈ ಆನೆಗಳ ಗುಂಪಿನಲ್ಲಿ ಯಾವುದೇ ಆನೆಗೆ ಕಾಲರ್ ಐಡಿ ಇಲ್ಲದೇ ಇರುವುದು ಸಹ ಅವುಗಳ ಚಲನ ವಲನಗಳ ಬಗ್ಗೆ ನಿಖರ ಮಾಹಿತಿ ಅರಿಯಲು ಅಡ್ಡಿಯಾಗಿದೆ. ಈ ಗುಂಪನ್ನು ಬಂದ ದಾರಿಯಲ್ಲೇ ಮತ್ತೆ ಹಿಂದಿರುಗುವಂತೆ ಮಾಡಲು ಎಲ್ಲಾ ಪ್ರಯತ್ನ ನಡೆಸಲಾಗುತ್ತಿದೆ. ಜನರು ಆದಷ್ಟು ಎಚ್ಚರಿಕೆಯಿಂದ ಇರಬೇಕಾಗಿದೆ ಎಂದು ಅರಣ್ಯ ಡಿಎಫ್ಓ ರಮೇಶ್ ಬಾಬು ಮಾಹಿತಿ ತಿಳಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...