ಕೊಡಗು | ಜನಪರ ಸೇವೆಗೆ ಒತ್ತು ನೀಡಲಾಗುವುದು : ಶಾಸಕ ಎ ಎಸ್ ಪೊನ್ನಣ್ಣ

Date:

ಕೊಡಗು ಜಿಲ್ಲೆ ಅಭಿವೃದ್ಧಿ, ಜನಪರ ಸೇವೆಗೆ ಒತ್ತು ನೀಡಲಾಗುವುದು ಎಂದು ಶಾಸಕ ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಎ. ಎಸ್. ಪೊನ್ನಣ್ಣ ಮಾಹಿತಿ ನೀಡಿದ್ದಾರೆ.

ಮಡಿಕೇರಿ-ಭಾಗಮಂಡಲ, ಭಾಗಮಂಡಲ-ನಾಪೋಕ್ಲು-ವಿರಾಜಪೇಟೆ ರಸ್ತೆ ಸೇರಿದಂತೆ ಹಲವು ರಸ್ತೆಯು ಮಳೆಗೆ ಹಾನಿಯಾಗಿದ್ದು, ಮಳೆ ನಿಂತ ನಂತರ ಸರಿಪಡಿಸಲಾಗುವುದು. ಹೆಚ್ಚಿನ ಮಳೆಯಿಂದಾಗಿ ಹಾಗೂ ಇನ್ನೂ ಸಹ ಮಳೆ ಇರುವುದರಿಂದ ರಸ್ತೆ ಸರಿಪಡಿಸಲು ಸಾಧ್ಯವಾಗಿಲ್ಲ. ಮಳೆ ನಿಂತ ನಂತರ ಎಲ್ಲಾ ರಸ್ತೆಗಳನ್ನು ಸರಿಪಡಿಸಲಾಗುವುದು ಎಂದು ತಿಳಿಸಿದರು.

ಮಳೆಗಾಲದಲ್ಲಿಯೂ ಸಹ ಗುಂಡಿ ಮುಚ್ಚುವ ತಂತ್ರಜ್ಞಾನ ಇದ್ದಲ್ಲಿ ಗುಂಡಿ ಮುಚ್ಚಲಾಗುವುದು. ಜನರ ಟೀಕೆಗೆ ಸ್ಪಂದಿಸುವುದು ನಮ್ಮ ಕರ್ತವ್ಯವಾಗಿದೆ. ಈಗಾಗಲೇ, ಲೋಕೋಪಯೋಗಿ ಇಲಾಖೆ ವ್ಯಾಪ್ತಿಯಲ್ಲಿ ₹40 ಕೋಟಿ ರೂಪಾಯಿ ವೆಚ್ಚದಲ್ಲಿ ರಸ್ತೆ ಸರಿಪಡಿಸಲು ಟೆಂಡರ್ ಆಗಿದ್ದು, ಮುಖ್ಯಮಂತ್ರಿ ಅವರ ವಿಶೇಷ ಅನುದಾನದಡಿ ₹20 ಕೋಟಿ ರೂಪಾಯಿ ಅನುದಾನ ಬಿಡುಗಡೆಯಾಗಿದೆ ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

₹155 ಕೋಟಿ ರೂಪಾಯಿ ವೆಚ್ಚದಲ್ಲಿ ಲೋಕೋಪಯೋಗಿ ಇಲಾಖೆ ವ್ಯಾಪ್ತಿಯ ರಸ್ತೆ ಸರಿಪಡಿಸಲಾಗುವುದು. ಈ ಬಗ್ಗೆ ಶ್ವೇತಪತ್ರ ಹೊರಡಿಸಲು ಸಿದ್ದ. ಕಳೆದ ಎರಡೂವರೆ ವರ್ಷದಲ್ಲಿ ಸರ್ಕಾರದಿಂದ ಎಷ್ಟು ಹಣ ತಂದಿದ್ದೇನೆ. ವರ್ಷವಾರು ಎಷ್ಟು ಹಣ ಅಭಿವೃದ್ಧಿ ಯೋಜನೆಗಳಿಗೆ ಎಂಬುದರ ಬಗ್ಗೆ ಮಾಹಿತಿ ನೀಡುವಂತಾಗಬೇಕು. ಪ್ರಜಾಪ್ರಭುತ್ವದಲ್ಲಿ ಪ್ರಬಲ ವಿರೋಧ ಪಕ್ಷ ಇರಬೇಕು. ಜೊತೆಗೆ ಪ್ರಶ್ನೆ ಮಾಡಬೇಕು. ಹಾಗೆಯೇ, ಪ್ರತಿ ಪಕ್ಷದವರು ಸಹ ಜವಾಬ್ದಾರಿಯಿಂದ ನಡೆದುಕೊಳ್ಳಬೇಕು ಎಂದು ಹೇಳಿದರು.

131 ಕಿಲೋ ಮೀಟರ್ ರಸ್ತೆ ಸರಿಪಡಿಸುವ ಕಾರ್ಯ ನಡೆಯುತ್ತಿದೆ. ಕೊಡಗು ಜಿಲ್ಲೆ ಗುಡ್ಡಗಾಡು ಪ್ರದೇಶವಾಗಿದ್ದು, ಹೆಚ್ಚಿನ ಮಳೆಯಾಗುವುದರಿಂದ 3-4 ವರ್ಷಕ್ಕೆ ರಸ್ತೆಗಳು ಗುಂಡಿ ಬೀಳುತ್ತವೆ. ಸಿಮೆಂಟ್ ರಸ್ತೆ ನಿರ್ಮಾಣಕ್ಕೆ ಅವಕಾಶ ಕಡಿಮೆ ಇದೆ. ರಸ್ತೆ ಜೊತೆಗೆ ಇತರೆ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಬೇಕಿದೆ.

ವಿರಾಜಪೇಟೆಯ ಸರ್ಕಾರಿ ಆಸ್ಪತ್ರೆಯನ್ನು ಜಿಲ್ಲಾಸ್ಪತ್ರೆಯನ್ನಾಗಿ ಮೇಲ್ದರ್ಜೆಗೆ ಏರಿಸುವ ನಿಟ್ಟಿನಲ್ಲಿ ಸಚಿವ ಸಂಪುಟದಲ್ಲಿ ಅನುಮೋದನೆ ದೊರೆತಿದೆ. ಆ ನಿಟ್ಟಿನಲ್ಲಿ 250 ಹಾಸಿಗೆಯ ಆಸ್ಪತ್ರೆ ನಿರ್ಮಾಣವಾಗಲಿದೆ. ಹಾಗೆಯೇ, ಗೋಣಿಕೊಪ್ಪದಲ್ಲಿ 30 ರಿಂದ 60 ಹಾಸಿಗೆಯ ಆಸ್ಪತ್ರೆ ನಿರ್ಮಾಣವಾಗಲಿದೆ. ಹುದಿಕೇರಿಯಲ್ಲಿ ₹30 ಕೋಟಿ ರೂಪಾಯಿ ವೆಚ್ಚದಲ್ಲಿ ಸಮುದಾಯ ಆರೋಗ್ಯ ಕೇಂದ್ರ ನಿರ್ಮಾಣವಾಗಲಿದೆ ಎಂದರು.

ವಿ.ಬಾಡಗದಲ್ಲಿ 11 ಎಕರೆ ಜಾಗದಲ್ಲಿ ‘ಕ್ರೀಡಾ ತರಬೇತಿ ಕೇಂದ್ರ’ ಆರಂಭಿಸಲು ಉದ್ದೇಶಿಸಲಾಗಿದೆ. ಆ ನಿಟ್ಟಿನಲ್ಲಿ ಸರ್ಕಾರದ ಹಂತದಲ್ಲಿ ಕೆಲಸಗಳು ನಡೆಯುತ್ತಿವೆ. ಕೊಡಗು ಜಿಲ್ಲೆಯಲ್ಲಿ ವಿದ್ಯುತ್ ಬಲವರ್ಧನೆಗೆ ₹208 ಕೋಟಿ ರೂಪಾಯಿ ಬಿಡುಗಡೆಯಾಗಿದೆ. ವಿದ್ಯುತ್ ಕಂಬ, ವಿದ್ಯುತ್ ಪರಿವರ್ತಕಗಳ ಬದಲಿಸುವ ಕೆಲಸಗಳು ನಡೆಯುತ್ತಿವೆ. ಗೋಣಿಕೊಪ್ಪದಲ್ಲಿ ಬಸ್ ನಿಲ್ದಾಣ, 14 ಹಾಡಿಗಳಿಗೆ ವಿದ್ಯುತ್‍ ಸಂಪರ್ಕ ಹಾಗೂ ಕುಡಿಯುವ ನೀರು ಪೂರೈಸಲಾಗಿದೆ ಎಂದರು.

ತುಲಾ ಸಂಕ್ರಮಣ ಪವಿತ್ರ ತೀರ್ಥೋದ್ಭವ ಜಾತ್ರೆಗೆ ₹2 ಕೋಟಿ ರೂಪಾಯಿ ಮೀಸಲಿರಿಸಲಾಗಿದೆ. ದೇವಸ್ಥಾನ, ಮಸೀದಿ, ಚರ್ಚ್‍ಗಳ ಅಭಿವೃದ್ಧಿಗೆ ಕ್ರಮ ಕೈಗೊಳ್ಳಲಾಗಿದೆ. ಮದೆನಾಡು ಗ್ರಾಮದಲ್ಲಿ 8 ಎಕರೆ ಭೂಮಿಯಲ್ಲಿ ಕೊಡಗು ಗೌಡ ಸಮಾಜ ಮಡಿಕೇರಿ ಇವರಿಗೆ ‘ಸಾಂಸ್ಕೃತಿಕ ಭವನ’ ನಿರ್ಮಾಣಕ್ಕೆ ಜಾಗ ನಿಗಧಿ ಮಾಡಲಾಗಿದೆ.

ಈ ಸುದ್ದಿ ಓದಿದ್ದೀರಾ? ಕೊಡಗು | ಸಾಮಾಜಿಕ-ಶೈಕ್ಷಣಿಕ ಸಮೀಕ್ಷೆಯಲ್ಲಿ ಪಾಲ್ಗೊಳ್ಳಿ : ಶಾಸಕ ಎ ಎಸ್ ಪೊನ್ನಣ್ಣ

ತಿತಿಮತಿ ಜೊತೆಗೆ ಮತ್ತೊಂದು ಕಡೆ ಮೊರಾರ್ಜಿ ದೇಸಾಯಿ ವಸತಿ ಶಾಲೆ ನಿರ್ಮಾಣಕ್ಕೆ ಕ್ರಮ, 6 ವಿದ್ಯುತ್ ಉಪ ಕೇಂದ್ರಗಳ ನಿರ್ಮಾಣ, ಶಿಕ್ಷಣ, ಆರೋಗ್ಯ, ಕ್ರೀಡೆ ಹೀಗೆ ಹಲವು ಜನಪರ ಸೇವೆ ಮಾಡಲಾಗುತ್ತಿದೆ. ಕಳೆದ ಎರಡೂವರೆ ವರ್ಷದಲ್ಲಿ 300 ರಿಂದ 400 ಜನರಿಗೆ ಉಚಿತ ಆರೋಗ್ಯ ಸೌಲಭ್ಯ ಕಲ್ಪಿಸಲಾಗಿದೆ. ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಶಿಷ್ಯ ವೇತನ ನೀಡಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಕರೆಸಿ 2000 ಹಕ್ಕುಪತ್ರ ನೀಡಲು ಉದ್ದೇಶಿಸಲಾಗಿದೆ. ಪ್ರಜಾಪ್ರಭುತ್ವದಲ್ಲಿ ಆರೋಗ್ಯಕರ ಚರ್ಚೆ ಇರಬೇಕು. ಬಡವರು ಮುಂದೆ ಬರಬೇಕು. ಸಮಗ್ರವಾದ ಅಭಿವೃದ್ಧಿ ಕಲ್ಪನೆ, ಜನತೆ ಸೇವೆಗೆ ಅವಕಾಶ ಸಿಕ್ಕಿದೆ. ಬಗೆಹರಿಸಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುತ್ತದೆ ಎಂದು ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...