ಬಾಗಲಕೋಟೆ | ಅಮುಲ್ ಉತ್ಪಾದನೆಗಳ ಮಾರಾಟ ನಿಲ್ಲಿಸುವಂತೆ ಕರವೇ ಆಗ್ರಹ

Date:

  • ಅಮುಲ್ ವಿರುದ್ಧ ಅಭಿಯಾನ ಆರಂಭಿಸಿದ ಕರವೇ
  • ʼಕನ್ನಡಿಗರ ಹೆಮ್ಮೆಯ ಸಂಸ್ಥೆ ನಂದಿನಿಯನ್ನು ನುಂಗುತ್ತಿದ್ದಾರೆʼ

ಕನ್ನಡಿಗರು ಕಷ್ಟಪಟ್ಟು ಕಟ್ಟಿ ಬೆಳೆಸಿದ ಸಂಸ್ಥೆ ಕೆಎಂಎಫ್ (ನಂದಿನಿ). ಈ ಸಂಸ್ಥೆಯನ್ನು ನಾಶಪಡಿಸಿ ಗುಜರಾತ್‌ನ ಅಮುಲ್ ಸಂಸ್ಥೆಯನ್ನು ಕರ್ನಾಟಕದ ಒಳಗೆ ಅಕ್ರಮವಾಗಿ ತರುತ್ತಿರುವುದನ್ನು ನಿಲ್ಲಿಸಬೇಕೆಂದು ಆಗ್ರಹಿಸಿ ಬಾಗಲಕೋಟೆಯಲ್ಲಿ ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ.

ಕರ್ನಾಟಕದಲ್ಲಿ ಅಮುಲ್ ಉತ್ಪನ್ನಗಳ ಮಾರಾಟವನ್ನು ತಕ್ಷಣದಿಂದಲೇ ನಿಲ್ಲಿಸುವಂತೆ ತಹಶೀಲ್ದಾರ್ ಮುಖಾಂತರ ಪ್ರಧಾನ ಮಂತ್ರಿ ನೆರೇಂದ್ರ ಮೋದಿ ಅವರಿಗೆ ಕರವೇ ಕಾರ್ಯಕರ್ತರು ಹಕ್ಕೊತ್ತಾಯ ಸಲ್ಲಿಸಿದ್ದಾರೆ.

ಪ್ರತಿಭಟನೆಯಲ್ಲಿ ಕರವೇ ಜಿಲ್ಲಾಧ್ಯಕ್ಷ ಬಸವರಾಜ ಧರ್ಮಂತಿ ಮಾತನಾಡಿ, “ಅಮುಲ್ ಮತ್ತು ನಂದಿನಿಯನ್ನು ವಿಲೀನಗೊಳಿಸುವುದಾಗಿ ಕೇಂದ್ರ ಗೃಹಸಚಿವ ಅಮಿತ್ ಶಾ ಮಂಡ್ಯದಲ್ಲಿ ನಡೆದ ಕಾರ್ಯಕ್ರಮದಲ್ಲಿ ಘೋಷಿಸಿದ್ದರು. ಅನಂತರ ಅಮುಲ್ ಸಂಸ್ಥೆ ತನ್ನ ಹಾಲು, ಮೊಸರನ್ನು ಕರ್ನಾಟಕದಲ್ಲಿ ಮಾರಾಟ ಮಾಡುವುದಾಗಿ ಘೋಷಿಸಿದೆ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಹೆಲಿಪ್ಯಾಡ್‌ ಬಳಿ ಆಕಸ್ಮಿಕ ಬೆಂಕಿ : ಸಿಎಂಗೆ ಎದುರಾದ ಅಗ್ನಿ ಆತಂಕ

“ಒಂದು ವೇಳೆ ಅಮೂಲ್ ತೆಕ್ಕೆಗೆ ನಂದಿನಿ ಹೋದಲ್ಲಿ, ಕರ್ನಾಟಕದ ಲಕ್ಷಾಂತರ ರೈತರು ಬೀದಿಪಾಲಾಗುತ್ತಾರೆ. ಕನ್ನಡಿಗರು ಕಟ್ಟಿದ ಬ್ಯಾಂಕ್‌ಗಳನ್ನು ಕಬಳಿಸಿದವರು, ಈಗ ಕನ್ನಡಿಗರ ಹೆಮ್ಮೆಯ ಸಂಸ್ಥೆ ನಂದಿನಿಯನ್ನು ನುಂಗುತ್ತಿದ್ದಾರೆ. ಇದನ್ನು ಕರ್ನಾಟಕ ರಕ್ಷಣಾ ವೇದಿಕೆ ಸಹಿಸುವುದಿಲ್ಲ” ಎಂದು ಅಸಮದಾನ ವ್ಯಕ್ತಪಡಿಸಿದರು.

“ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ಟಿ ಎ ನಾರಾಯಣಗೌಡರ ನೇತೃತ್ವದಲ್ಲಿ ಈಗಾಗಲೇ ಅಮುಲ್ ವಿರುದ್ಧ ಚಳುವಳಿ ಆರಂಭಿಸಿದ್ದೇವೆ. ಇ-ಕಾಮರ್ಸ್ ಸಂಸ್ಥೆಗಳ ಮೂಲಕ ಅಮುಲ್ ಹಾಲು, ಮೊಸರು ವ್ಯಾಪಾರ ನಡೆಸಲು ಮುಂದಾದರೆ ಅಂಥ ಸಂಸ್ಥೆಗಳ ವಿರುದ್ಧ ಕರವೇ ಚಳುವಳಿ ರೂಪಿಸಲಿದೆ. ಆಗುವ ಅನಾಹುತಗಳಿಗೆ ಆ ಸಂಸ್ಥೆಗಳೇ ಜವಾಬ್ದಾರಿ ಹೊರಬೇಕು” ಎಂದು ಕರವೇ ಎಚ್ಚರಿಕೆ ನೀಡಿದೆ.

ಭಾಗ್ಯ ಬೇಟಗೇರಿ, ಮಲ್ಲು ಕಟ್ಟಿಮನಿ, ಬಸವರಾಜ ಅಂಬಿಗೇರ, ಸಲಿಂ ಜಮಾದಾರ, ರಾಹುಲ್ ಶೆಟ್ಟರ್, ಗಣೇಶ ನಾಯಕ್ ಸೇರಿದಂತೆ ಕರವೇ ಕಾರ್ಯಕರ್ತರು ಉಪಸ್ಥಿತರಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...