ಮಂಡ್ಯ | ಶೈಕ್ಷಣಿಕ ವರ್ಷದ ನಡುವೆಯೇ ಆಂಗ್ಲ ಮಾಧ್ಯಮ ವಿಭಾಗ ಆರಂಭಕ್ಕೆ ಅನುಮತಿ: ಬಡ ಪೋಷಕರ ಬೇಸರ

Date:

ಈ ವರ್ಷದ ‘ಶೈಕ್ಷಣಿಕ ವರ್ಷ’ ಶುರುವಾಗಿ ಈಗಾಗಲೇ ನಾಲ್ಕು ತಿಂಗಳು ಕಳೆದಿವೆ. ಈ ನಡುವೆಯೇ ರಾಜ್ಯ ಸರ್ಕಾರವು ಆಂಗ್ಲ ಮಾಧ್ಯಮ ಶಾಲೆಗಳ ಆರಂಭಕ್ಕೆ ಅನುಮತಿ ನೀಡಿದೆ. ಇದರಿಂದ ಸಾಕಷ್ಟು ಬಡ ಪಾಲಕರು ಬೇಸರಗೊಂಡಿದ್ದಾರೆ.

373 ಪ್ರಾಥಮಿಕ ಶಾಲೆಗಳಲ್ಲಿ ಆಂಗ್ಲ ಮಾಧ್ಯಮ (ದ್ವಿಭಾಷಾ) ವಿಭಾಗಗಳನ್ನು ಪ್ರಾರಂಭಿಸಲು ರಾಜ್ಯ ಸರ್ಕಾರ ಅನುಮೋದನೆ ನೀಡಿದೆ. 2024-25ನೇ ಶೈಕ್ಷಣಿಕ ವರ್ಷದ ಆರಂಭದಲ್ಲಿ 1,419 ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಆಂಗ್ಲ ಮಾಧ್ಯಮ ಆರಂಭಿಸಲು ಅನುಮತಿ ನೀಡಲಾಗಿತ್ತು. ಬೇಡಿಕೆ ಪರಿಗಣಿಸಿ ಕನಿಷ್ಠ 100 ವಿದ್ಯಾರ್ಥಿಗಳಿರುವ 373 ಶಾಲೆಗಳಿಗೆ ಅನುಮತಿ ನೀಡಲಾಗಿದೆ ಎಂದು ಶಿಕ್ಷಣ ಇಲಾಖೆ ತಿಳಿಸಿತ್ತು.

ಬೆಂಗಳೂರು ದಕ್ಷಿಣ, ರಾಮನಗರ, ಕೋಲಾರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಶಿವಮೊಗ್ಗ, ತುಮಕೂರು, ಬಾಗಲಕೋಟೆ, ಗದಗ, ಹಾವೇರಿ, ಉತ್ತರ ಕನ್ನಡ, ಶಿರಸಿ, ಮೈಸೂರು, ಹಾಸನ, ವಿಜಯಪುರ ಮತ್ತು ಚಿಕ್ಕಮಗಳೂರಿನ ಶಾಲೆಗಳಿಗೆ ಅನುಮತಿ ನೀಡಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸಾಮಾನ್ಯವಾಗಿ ಖಾಸಗಿ ಶಾಲೆಗಳಲ್ಲಿ ಏಪ್ರಿಲ್ ಇಲ್ಲವೇ ಮೇ ತಿಂಗಳಿನಲ್ಲೇ ಪ್ರವೇಶ ಪ್ರಕ್ರಿಯೆ ಪೂರ್ಣಗೊಳ್ಳುತ್ತದೆ. ಆದರೆ ರಾಜ್ಯ ಸರ್ಕಾರ ಶೈಕ್ಷಣಿಕ ಮಧ್ಯೆಯೇ ಆರಂಭಿಸಿರುವುದರಿಂದ ಬಡ ಪಾಲಕರು ಬೇಸರಗೊಂಡಿದ್ದಾರೆ.

“ಈ ಬಗ್ಗೆ ಸರ್ಕಾರ ಮೊದಲೇ ಮಾಹಿತಿ ನೀಡಿದ್ದಿದ್ದರೆ, ನಮ್ಮ ಮಕ್ಕಳನ್ನು ಖಾಸಗಿ ಶಾಲೆಗೆ ಸೇರಿಸುತ್ತಿರಲಿಲ್ಲ. ನಾವು ಸಾಲ ಮಾಡಿ ಮಕ್ಕಳನ್ನು ಶಾಲೆಗೆ ಸೇರಿಸುವಂತಹ ಸನ್ನಿವೇಶ ಬರುತ್ತಿರಲಿಲ್ಲ” ಎಂದು ಪೋಷಕರಾದ ಪೃಥ್ವಿರಾಜ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

madhu

“ಕನ್ನಡ ಶಾಲೆಗಳು ಮುಚ್ಚುತ್ತಿವೆ. ರಾಜ್ಯ ಸರ್ಕಾರವು ಕನ್ನಡ ಕಲಿಕೆಯ ಶಾಲೆಗಳನ್ನು ಇಂಗ್ಲಿಷ್ ಕಲಿಕೆ ಶಾಲೆಗಳಾಗಿ ಬದಲಾಯಿಸುತ್ತಿವೆ. ಪರಿಸರದ ನುಡಿಯಲ್ಲಿ ಕಲಿಕೆ ಮಾಡೋದು ಬಹಳ ಅರಿಮೆ (scientific) ಅಂತ ಎಲ್ಲರಿಗೂ ಗೊತ್ತಿದೆ. ತಂದೆ-ತಾಯಿಗಳ ಅನಿಸಿಕೆಗಳಿಗೆ ಸರ್ಕಾರವು ಮಣಿದಿದೆ ಎಂದು ಮೇಲ್ನೋಟಕ್ಕೆ ಅನಿಸಿದರೂ, ಸರ್ಕಾರವು ಸೋತಂತೆ ಕಾಣುತ್ತಿದೆ. ಆಳಿಕೆ ತನ್ನ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ” ಎಂದು ಕಾಗೆಪುರ ಚೇತನ್ ಎಂಬವರು ತಿಳಿಸಿದ್ದಾರೆ.

ಇದನ್ನು ಓದಿದ್ದೀರಾ? ರಾಯಚೂರು | ಪ್ರಾಥಮಿಕ ಆರೋಗ್ಯ ಕೇಂದ್ರ ಸ್ಥಾಪನೆಗೆ ಒತ್ತಾಯಿಸಿ ಜಿಲ್ಲಾಧಿಕಾರಿಗೆ ಮನವಿ

ಮದ್ದೂರಿನ ಬಿಇಓ ಕಾಳೀರಯ್ಯ ಮಾತನಾಡಿ, “2024-25ನೇ ಶೈಕ್ಷಣಿಕ ಸಾಲಿನ ಶುರುವಿಲ್ಲಿ 1,419 ಪ್ರಾಥಮಿಕ ಶಾಲೆಗಳಲ್ಲಿ ಇಂಗ್ಲಿಷ್ ಕಲಿಕೆಗೆ ಶುರು ಮಾಡಲು ಒಪ್ಪಿಗೆ ನೀಡಲಾಗಿತ್ತು. ಬೇಡಿಕೆ ಪರಿಗಣಿಸಿ 1ನೇ ತರಗತಿಯಲ್ಲಿ 16 ಮಕ್ಕಳಿಗಿಂತ ಹೆಚ್ಚಿರುವ, ಒಟ್ಟಾರೆ ಶಾಲೆಯಲ್ಲಿ ಕನಿಷ್ಠ 100 ವಿದ್ಯಾರ್ಥಿಗಳಿರುವ 373 ಶಾಲೆಗಳಿಗೆ ಅನುಮತಿ ನೀಡಲಾಗಿದೆ. ಬೆಂಗಳೂರು ದಕ್ಷಿಣ, ರಾಮನಗರ, ಕೋಲಾರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಶಿವಮೊಗ್ಗ, ತುಮಕೂರು, ಬಾಗಲಕೋಟೆ, ಗದಗ, ಹಾವೇರಿ, ಉತ್ತರ ಕನ್ನಡ, ಶಿರಸಿ, ಮೈಸೂರು, ಹಾಸನ, ವಿಜಯಪುರ ಮತ್ತು ಚಿಕ್ಕಮಗಳೂರಿನ ಜಿಲ್ಲೆಗಳ ಶಾಲೆಗಳಿಗೆ ಅನುಮತಿ ನೀಡಲಾಗಿದೆ” ಎಂದರು.

“ಇಂಗ್ಲಿಷ್ ಕಲಿಕೆಗೆ ಸ್ಥಳೀಯ ಸಂಪನ್ಮೂಲ ಬಳಕೆ ಮಾಡಿಕೊಳ್ಳಲು ಇಲಾಖೆ ಸೂಚಿಸಿದೆ. ಅಗತ್ಯವಿರುವ ಅತಿಥಿ ಶಿಕ್ಷಕರ ಸೇವೆ ಬಳಸಿಕೊಳ್ಳಲು ತೀರ್ಮಾನಿಸಲಾಗಿದೆ. ಪಾಲಕರು, ಜನಪ್ರತಿನಿಧಿಗಳು, ಶಾಲಾ ಅಭಿವೃದ್ಧಿ ಸಮಿತಿಗಳಿಂದ ಹಾಗೂ ಅಧಿಕಾರಿಗಳಿಂದ ಇಂಗ್ಲಿಷ್ ಕಲಿಕೆ ಮಾಧ್ಯಮ ಬೋಧನೆಗೆ ಬೇಡಿಕೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಸರ್ಕಾರವು ಹೆಚ್ಚಿನ ಶಾಲೆಗಳಲ್ಲಿ ಇಂಗ್ಲಿಷ್ ಮಾಧ್ಯಮ ತರಗತಿಗಳನ್ನು ಆರಂಭಿಸಿದೆ” ಎಂದು ಮಾಹಿತಿ ನೀಡಿದರು.

ರಾಮನಗರ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ದಿನೇಶ್ ಬಿಳಗುಂಬ ಮಾತನಾಡಿ, “ಕನ್ನಡವನ್ನು ಭಾವನಾತ್ಮಕವಾಗಿ ನೋಡಿ ಉಳಿಸಿಕೊಳ್ಳಲು ಸಾಧ್ಯವಿಲ್ಲ. ಬಳಕೆಗೆ ಬರಬಲ್ಲ ಪರಿಹಾರ ಬೇಕಿದ. ಅರಿಮೆ ಆಯಾಮ ಬಿಟ್ಟು ಕನ್ನಡದಲ್ಲಿ ಕಲಿತವರಿಗೆ ಇಲ್ಲವೇ ಕನ್ನಡ ಬಲ್ಲವರಿಗೆ ಒಂದಷ್ಟು ಆಳಿಕೆ ಕೆಲಸ ಸಿಗುತ್ತದೆ ಅಂತ ಏನಾದರೂ ನಿಯಮ ಬಂದರೆ ಮಕ್ಕಳನ್ನು ಕನ್ನಡ ಕಲಿಕೆಗೆ ಕಳಿಸಲು ತಂದೆತಾಯಿಗಳಿಗೆ ಉತ್ತೇಜನ ಇರುತ್ತದೆ” ಎಂದರು.

ಸೋರುವ ಸೂರು, ಬೀಳುವ ಸ್ಥಿತಿಯಲ್ಲಿರುವ ಗೋಡೆಗಳು, ಸುತ್ತ ಕಲುಷಿತ ವಾತಾವರಣವಿರುವ ಕಟ್ಟಡಗಳಲ್ಲಿ ಯಾವ ನುಡಿಯಲ್ಲಿ ಪಾಠ ಮಾಡಿದರೂ ಉಪಯೋಗವಿಲ್ಲ. ಆಳಿಕೆಯು ‘ಇಂಗ್ಲಿಷ್ ಮೀಡಿಯಂ’ ಎಂಬ ಅರಿಮೆಗೇಡಿನ ಹಮ್ಮುಗೆಯ ಬದಲು, ಶಾಲೆಗಳನ್ನು ಸುಸ್ಥಿತಿಯಲ್ಲಿಡುವ, ಬೇಕಾದ ಸವಲತ್ತುಗಳನ್ನು ಒದಗಿಸಿ ಆಳಿಕೆಯ ಶಾಲೆಗಳದ್ದೇ ಒಂದು ಬ್ರಾಂಡ್ ಹುಟ್ಟು ಹಾಕುವ ಕಡೆ ಗಮನ ಕೊಡಲಿ ಎಂಬುದು ಎಲ್ಲರ ಆಶಯ.

Untitled 24
ನಗರಕೆರೆ ಜಗದೀಶ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...