ಕೇರಳ-ಕರ್ನಾಟಕ ರೈಲ್ವೆ ಸಂಪರ್ಕ ಯೋಜನೆಗೆ ತೀವ್ರ ವಿರೋಧ: ‘ಬಂಡೀಪುರ ಉಳಿಸಿ’ ಅಭಿಯಾನ ಆರಂಭ

Date:

ಕೇರಳದ ನೀಲಾಂಬುರ್ ಮತ್ತು ಕರ್ನಾಟಕದ ನಂಜನಗೂಡಿಗೆ ವಯನಾಡಿನ ಮೂಲಕ ರೈಲು ಸಂಪರ್ಕ ಕಲ್ಪಿಸುವ ನೀಲಾಂಬುರ್ – ನಂಜನಗೂಡು ರೈಲ್ವೆ ಯೋಜನೆಗೆ ಪರಿಸರ ಪ್ರೇಮಿಗಳಿಂದ ತೀವ್ರ ವಿರೋಧ ವ್ಯಕ್ತವಾಗುತ್ತಿದ್ದು, ‘ಬಂಡೀಪುರ ಉಳಿಸಿ’ ಎಂಬ ಅಭಿಯಾನ ಆರಂಭಿಸಿದ್ದಾರೆ.

ಕೇರಳ ಸರ್ಕಾರದ ಒತ್ತಡದ ತಂತ್ರಕ್ಕೆ ಕರ್ನಾಟಕ ಸರ್ಕಾರವು ಸೊಪ್ಪು ಹಾಕಬಾರದು ಎಂದು ಆಗ್ರಹಿಸಿ ಮೈಸೂರಿನಲ್ಲಿ ಗಂಧದ ಗುಡಿ ಫೌಂಡೇಶನ್, ಪರಿಸರವಾದಿಗಳು ಹಾಗೂ ಸಾಮಾಜಿಕ ಕಾರ್ಯಕರ್ತರು ಹಳೆ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ವನ್ಯಜೀವಿ ಸಂರಕ್ಷ ಣೆ ಹಾಗೂ ವನ್ಯಪ್ರಾಣಿಗಳ ಅಸ್ವಾಭಾವಿಕ ಸಾವು ತಡೆಯಬೇಕು ಎಂದು ಒತ್ತಾಯಿಸಿದ ಪ್ರತಿಭಟನಾಕಾರರು, ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ರಾತ್ರಿ ಸಂಚಾರ ನಿಷೇಧವನ್ನು ಹಿಂಪಡೆಯದಂತೆ ಹಾಗೂ ಬಂಡೀಪುರ ಮತ್ತು ನಾಗರಹೊಳೆ ಅರಣ್ಯ ಪ್ರದೇಶದಲ್ಲಿ ರಸ್ತೆ ವಿಸ್ತರಣೆ ಕಾಮಗಾರಿ ಕೈಗೆತ್ತಿಕೊಳ್ಳದಂತೆ ರಾಜ್ಯ ಸರ್ಕಾರವನ್ನು ಒತ್ತಾಯಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಪರಿಸರ ತಜ್ಞ ಹಾಗೂ ವನ್ಯಜೀವಿ ಆಸಕ್ತ ಎಂ.ಕೆ.ಸಪ್ತ ಗಿರೀಶ್, “ರಾಜ್ಯದಲ್ಲಿ ಶೇ.13-16ರಷ್ಟು ಅರಣ್ಯ ಪ್ರದೇಶವಿದೆ. ವನ್ಯಜೀವಿಗಳ ರಕ್ಷಣೆಗಾಗಿ ಅರಣ್ಯ ಪ್ರದೇಶವನ್ನು ಶೇ.33ಕ್ಕೆ ಹೆಚ್ಚಿಸುವ ಅಗತ್ಯವಿದೆ. ಬಂಡೀಪುರದಲ್ಲಿ ಟ್ರಾಫಿಕ್ ಕಾರಿಡಾರ್ ನಿರ್ಮಿಸಲು ಕೇರಳ ಸರ್ಕಾರ ಮುಂದಾಗಿತ್ತು. ಇದರಿಂದ ಕಾಡು ಪ್ರಾಣಿಗಳ ಓಡಾಟಕ್ಕೆ ತೊಂದರೆಯಾಗುವುದಲ್ಲದೆ ಈಗಿರುವ ಆನೆ ಕಾರಿಡಾರ್‌ಗಳಿಗೂ ತೊಂದರೆಯಾಗಲಿದೆ. ಮಾನವ-ಪ್ರಾಣಿ ಸಂಘರ್ಷಗಳನ್ನು ತಡೆಯಲು ರಾಜ್ಯ ಸರ್ಕಾರಗಳು ಕ್ರಮ ಕೈಗೊಳ್ಳಬೇಕು” ಎಂದು ಹೇಳಿದರು.

ಗಂಧದ ಗುಡಿ ಪ್ರತಿಷ್ಠಾನದ ಅಧ್ಯಕ್ಷ ಆರ್ಯನ್, ಉಪಾಧ್ಯಕ್ಷ ಕುಮಾರಗೌಡ ಇತರರು ಇದ್ದರು.

ಸಾಮಾಜಿಕ ಜಾಲತಾಣದಲ್ಲಿ ‘ಬಂಡೀಪುರ ಉಳಿಸಿ’ ಅಭಿಯಾನ

ನೀಲಾಂಬುರ್-ನಂಜನಗೂಡು ರೈಲ್ವೆ ಯೋಜನೆಗಾಗಿ ವೈಮಾನಿಕ ಸಮೀಕ್ಷೆ ಪೂರ್ಣಗೊಂಡ ನಂತರ ಸಾಮಾಜಿಕ ಮಾಧ್ಯಮದಲ್ಲಿ ‘ಬಂಡಿಪುರ ಉಳಿಸಿ’ ಪೋಸ್ಟ್‌ಗಳು ಟ್ರೆಂಡಿಂಗ್ ಆಗಿವೆ. ಪರಿಸರ ಪ್ರೇಮಿಗಳು‌ ಬಂಡೀಪುರ ಉಳಿಸಿ ಎಂಬ ಅಭಿಯಾನ ಆರಂಭಿಸಿದ್ದಾರೆ.

Save Bandipur

ಇತ್ತೀಚೆಗೆ ರಾಜ್ಯದ ಅರಣ್ಯ ಸಚಿವ ಈಶ್ವರ್ ಖಂಡ್ರೆ ಬಂಡೀಪುರ ಹುಲಿ‌ ಸಂರಕ್ಷಿತ ಪ್ರದೇಶಕ್ಕೆ ಭೇಟಿ ನೀಡಿದ್ದರು. ಈ ವೇಳೆ ನೆರೆ ರಾಜ್ಯವಾದ ಕೇರಳ ಸರ್ಕಾರದ ಮನವಿ ಪುರಸ್ಕರಿಸುವ ಸುಳಿವು ನೀಡಿದ್ದರು. ಈ ವೇಳೆ ಸಚಿವರು ಬಂಡೀಪುರ ಪ್ರದೇಶದಲ್ಲಿ ರಾತ್ರಿ ಸಂಚಾರ ನಿಷೇಧ ಸಡಿಲಿಕೆಗೊಳಿಸುವ ಸುಳಿವನ್ನು ನೀಡಿದ್ದರು.

ಕೇರಳ ರಾಜ್ಯದ ನೀಲಾಂಬುರ್ ಮತ್ತು ಕರ್ನಾಟಕದ ನಂಜನಗೂಡಿಗೆ ರೈಲು ಮಾರ್ಗ ಕಲ್ಪಿಸಲಾಗುತ್ತಿದೆ. ವಯನಾಡಿನ ಮೂಲಕ ರೈಲು ಸಂಪರ್ಕ ಕಲ್ಪಿಸುವ ಯೋಜನೆ ಹಾಕಿಕೊಳ್ಳಲಾಗಿದೆ. ನೀಲಾಂಬುರ್–ನಂಜನಗೂಡು ರೈಲ್ವೆ ಯೋಜನೆಗೆ ಅಂತಿಮ ಹಂತದ ವರದಿಯಾಗಿದೆ. ವರದಿ ಸಿದ್ದಪಡಿಸಲು ವೈಮಾನಿಕ ಸಮೀಕ್ಷೆಯು ಪೂರ್ಣಗೊಂಡಿದೆ.

ಸದ್ಯ ಈ ಯೋಜನೆಯು ಪರಿಸರ ಪ್ರೇಮಿಗಳು ಅಕ್ರೋಶಕ್ಕೆ ಗುರಿಯಾಗಿದ್ದು, ಕಾಡನ್ನು ನಾಶ ಮಾಡಿ ಯಾವುದೇ ಅಭಿವೃಧ್ಧಿ ಕೆಲಸಗಳನ್ನು ಮಾಡುವುದು ಬೇಡ ಎಂಬ ಆಕ್ರೋಶ ಹೊರಹಾಕುತ್ತಿದ್ದಾರೆ. ಜೊತೆಗೆ ‘ಬಂಡೀಪುರ ಉಳಿಸಿ’ ಎಂಬ ಅಭಿಯಾನವನ್ನು ಮಾಡುತ್ತಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...