ಬೀದರ್ | ಅಂತರ್ಜಾತಿ ವಿವಾಹದಿಂದ ಸಮಾನತೆ ಸಾರಿದ ಶರಣರು : ಸಚಿವ ಈಶ್ವರ ಖಂಡ್ರೆ

Date:

12ನೆಯ ಶತಮಾನದಲ್ಲಿ ಬಸವಾದಿ ಶರಣರು ಜಾತಿವ್ಯವಸ್ಥೆ, ಕಂದಾಚಾರ, ಮೌಢ್ಯತೆ ವಿರುದ್ಧ ಸಮರ ಸಾರಿದ್ದರು. ಅಂತರ್ಜಾತಿ ವಿವಾಹ ನಡೆಸಿ ಮನುಕುಲ ಒಂದೇ ಎಂಬುದನ್ನು ಸಾರಿದರು ಎಂದು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಹೇಳಿದರು.

ಭಾಲ್ಕಿ ಪಟ್ಟಣದ ಹಿರೇಮಠ ಸಂಸ್ಥಾನದಲ್ಲಿ ಮರಣವೇ ಮಹಾನವಮಿ ಮತ್ತು ಕಲ್ಯಾಣ ಕ್ರಾಂತಿ ವಿಜಯೋತ್ಸವ ನಿಮಿತ್ತ ಶನಿವಾರ ಆಯೋಜಿಸಿದ್ದ ವಚನ ಸಾಹಿತ್ಯದ ಪಲ್ಲಕ್ಕಿಗೆ ಪೂಜೆ ನೆರವೇರಿಸಿ ಮಾತನಾಡಿದರು.

ಶರಣರು ಮನುಕುಲದ ಸಮಾನತೆಗಾಗಿ ಹೋರಾಟ ನಡೆಸಿದ್ದರು. ಜಾತಿವ್ಯವಸ್ಥೆ ಅಳಿಸಲು ಅಂತರ್ಜಾತಿ ವಿವಾಹ ನಡೆಸಿ ಸಮಾನತೆ ತತ್ವ ಸಾರಿದರು. ಇದು ಕಲ್ಯಾಣ ಕ್ರಾಂತಿಗೆ ಕಾರಣವಾಯಿತು. ಮಹಾನವಮಿ ದಿನದಂದು ಶರಣರು ಎಳೆಹೂಟ ಶಿಕ್ಷೆ ಅನುಭವಿಸಿದರು. ಶರಣರ ಮೇಲೆ ದಬ್ಬಾಳಿಕೆ, ಹತ್ಯೆ ನಡೆಯಿತು. ಆದರೂ ಶರಣರು ಯಾವುದಕ್ಕೂ ಭಯ ಪಡದೇ ಎಲ್ಲವನ್ನೂ ಮೆಟ್ಟಿನಿಂತೂ ವಿಜಯೋತ್ಸವ ಸಾರಿದರುʼ ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬಸವ ಗುರುವಿನ ಪೂಜೆ ನೆರವೇರಿಸಿದ ಮಾಜಿ ಶಾಸಕ ಪ್ರಕಾಶ ಖಂಡ್ರೆ ಮಾತನಾಡಿ, ʼಮನುಕುಲದ ಸಾರ್ಥಕ ಜೀವನಕ್ಕೆ ಬಸವಾದಿ ಶರಣರ ವಚನ ಸಾಹಿತ್ಯ ಪೂರಕವಾಗಿದೆʼ ಎಂದು ತಿಳಿಸಿದರು.

ಸಾನ್ನಿಧ್ಯ ವಹಿಸಿದ ಬಸವಕಲ್ಯಾಣ ಅನುಭವ ಮಂಟಪ ಟ್ರಸ್ಟ್ ಅಧ್ಯಕ್ಷ ಡಾ.ಬಸವಲಿಂಗ ಪಟ್ಟದ್ದೇವರು ಮಾತನಾಡಿ, ʼಬಸವಾದಿ ಶರಣರು ತತ್ವ ಸಿದ್ದಾಂತಕ್ಕಾಗಿ ಹೋರಾಟ ನಡೆಸಿದರು. ಸಮಾನತೆ, ಜಾತಿ ರಹಿತ ಸಮಾಜ ಕಟ್ಟುವ ಪ್ರಯತ್ನ ಮಾಡಿದರು. ವಚನ ಸಾಹಿತ್ಯದ ರಕ್ಷಣೆಗಾಗಿ ಹೋರಾಟ ನಡೆಸಿದರುʼ ಎಂದು ತಿಳಿಸಿದರು.

ನೇತೃತ್ವ ವಹಿಸಿದ ಪೀಠಾಧಿಪತಿ ಗುರುಬಸವ ಪಟ್ಟದ್ದೇವರು ಮಾತನಾಡಿ, ʼಡಾ.ಚನ್ನಬಸವ ಪಟ್ಟದ್ದೇವರು ಪಲ್ಲಕ್ಕಿಯಲ್ಲಿ ವಚನ ಸಾಹಿತ್ಯದ ಮೆರವಣಿಗೆ ನಡೆಸಿ ಹೊಸ ಪರಂಪರೆಗೆ ನಾಂದಿ ಹಾಡಿದರು. ಅದನ್ನು ನಾಡೋಜ ಡಾ.ಬಸವಲಿಂಗ
ಪಟ್ಟದ್ದೇವರು ಮುನ್ನಡೆಸಿಕೊಂಡು ಬರುತ್ತಿದ್ದಾರೆʼ ಎಂದು ತಿಳಿಸಿದರು.

ʼಈ ಬಾರಿಯ ಮೈಸೂರು ದಸರಾ ಜಂಬುಸವಾರಿಯಲ್ಲಿ ಭಾಲ್ಕಿ ಹಿರೇಮಠದ ಲಿಂಗೈಕ್ಯ ಡಾ.ಚನ್ನಬಸವ ಪಟ್ಟದ್ದೇವರ ಸ್ತಬ್ದಚಿತ್ರ ಪ್ರದರ್ಶನಗೊಂಡಿರುವುದು ಅತ್ಯಂತ ಖುಷಿ ತಂದು ಕೊಟ್ಟಿದೆ. ಮುಂಬರುವ ದಿನಗಳಲ್ಲಿ ದೆಹಲಿ ಪರೇಡ್ ಬಲ್ಲಿ ಪೂಜ್ಯರ ಸ್ತಬ್ದಚಿತ್ರ ಪರ್ದರ್ಶನಗೊಂಡರೇ ಮತ್ತಷ್ಟು ಮೆರಗು ಬರಲಿದೆʼ ಎಂದರು.

ಇದೇ ವೇಳೆ ವಿದ್ಗಾರ್ಥಿನಿಯರಾದ ಶ್ರಾವ್ಯ ಸುರೇಶ, ವಿಶ್ವಜ್ಯೋತಿ ಪ್ರಭು, ವಚನಾಂಬಿಕಾ ಜಗದೀಶ, ಐಶ್ವರ್ಯ ಪ್ರಕಾಶ, ಮಹೇಶ್ವರಿ ಶಿವು, ಆರಾಧ್ಯ ಆನಂದ, ಐಶ್ವರ್ಯ ಅಶೋಕ, ಸುಸ್ಮೀತಾ ಸಂಗಮೇಶ, ಸಂಜನ ಸೂರಜ್, ಶ್ರದ್ಧಾ ಸಂತೋಷ, ಆದಿತ್ಯ ಶಶಿಧರ, ಓಂಪ್ರಕಾಶ ಸಂಗಮೇಶ ವಚನ ಪಾರಾಯಣ ನಡೆಸಿ ಕೊಟ್ಟರು.

ಈ ಸುದ್ದಿ ಓದಿದ್ದೀರಾ? ಗೌರಿ ಲಂಕೇಶ್ ಹತ್ಯೆ ಪ್ರಕರಣ | ಜಾಮೀನಿನ ಮೇಲೆ ಹೊರಬಂದ ಆರೋಪಿಗಳಿಗೆ ಸಂಘಪರಿವಾರದಿಂದ ಸನ್ಮಾನ!

ಕಾರ್ಯಕ್ರಮದಲ್ಲಿ ಮಹಾಲಿಂಗ ಸ್ವಾಮೀಜಿ, ಅನಿಲ ಮಹಾರಾಜರು, ಶಂಕರಲಿಂಗ ಸ್ವಾಮೀಜಿ ಸಮ್ಮುಖ ವಹಿಸಿದರು. ಬೀದರ್ ಸಂಸದ ಸಾಗರ ಖಂಡ್ರೆ, ಶಶಿಧರ ಕೋಸಂಬೆ, ಬಸವರಾಜ ಮರೆ, ಸಂಗಮೇಶ ಹುಣಜೆ ಮದಕಟ್ಟಿ, ರವೀಂದ್ರ ಚಿಡಗುಪ್ಪೆ, ರಾಜಕುಮಾರ ಬಿರಾದಾರ್, ಕಾಶಿನಾಥ ಲದ್ದೆ, ಮಲ್ಲಮ್ಮ ನಾಗನಕೇರೆ, ಚಂದ್ರಕಲಾ ಪ್ರಭು ಡಿಗ್ಗೆ ಸೇರಿದಂತೆ ಹಲವರು ಇದ್ದರು. ದೀಪಕ ಠಮಕೆ ನಿರೂಪಿಸಿ, ವಂದಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...