ಮೈಸೂರು | ಜಿಲ್ಲಾಧ್ಯಂತ ಭತ್ತ,ರಾಗಿ ಖರೀದಿ ಕೇಂದ್ರ ಸ್ಥಾಪನೆ, ರೈತ ಸಂಘದ ಹೋರಾಟದ ಫಲ : ಹೊಸೂರು ಕುಮಾರ್

Date:

ಜಿಲ್ಲಾಧ್ಯಂತ ಭತ್ತ, ರಾಗಿ ಖರೀದಿ ಕೇಂದ್ರ ತೆರದಿದ್ದು, ಕನಿಷ್ಠ ಬೆಂಬಲ ಬೆಲೆ ನಿಗದಿಗೊಳಿಸಿದೆ. ಮೈಸೂರು, ನಂಜನಗೂಡು, ಟಿ ನರಸೀಪುರ, ಹುಣಸೂರು, ಕೆ ಆರ್ ನಗರ, ಸಾಲಿಗ್ರಾಮ, ಸರಗೂರು, ಪಿರಿಯಾಪಟ್ಟಣ ಎಪಿಎಂಸಿ ಆವರಣ.ಹಾರನಹಳ್ಳಿ, ಬೆಟ್ಟದಪುರ, ರಾವಂದೂರು, ಬನ್ನೂರು,ಬಿಳಿಗೆರೆಯಲ್ಲಿ ರೈತ ಸಂಪರ್ಕ ಕೇಂದ್ರಗಳಲ್ಲಿ ಖರೀದಿ ಕೇಂದ್ರ ತೆರೆಯಲಾಗಿದೆ.

ಆಹಾರ, ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಇಲಾಖೆಯಿಂದ 2024 – 25 ನೇ ಸಾಲಿನಲ್ಲಿ, ನೋಂದಾಯಿತ ರೈತರು ನಿಗದಿತ ದಿನಾಂಕದಂದು ರಾಗಿ, ಭತ್ತ ಮಾರಾಟ ಮಾಡಬಹುದು. ಕನಿಷ್ಠ ಬೆಂಬಲ ಬೆಲೆ (ಎಂ ಎಸ್ ಪಿ ) ರಾಗಿ ಕ್ವಿಂಟಾಲ್ ಗೆ ₹ 4,290 ರೂಪಾಯಿ ಹಾಗೂ ಭತ್ತಕ್ಕೆ ₹ 2,300 ರೂಪಾಯಿ ನಿಗದಿ ಮಾಡಿದೆ. ಈಗಾಗಲೇ ಖರೀದಿಗೆ ಅಗತ್ಯ ವ್ಯವಸ್ಥೆ, ತಯಾರಿಗಳು ಪ್ರಗತಿಯಲ್ಲಿವೆ.

ಇದುವರೆಗೆ ರಾಗಿ, ಭತ್ತ ಖರೀದಿ ಕೇಂದ್ರ ತೆರೆಯದೆ ರೈತರಿಗೆ ತೊಂದರೆಯಾಗಿತ್ತು. ಇದನ್ನೇ ಬಂಡವಾಳ ಮಾಡಿಕೊಂಡ ದಲ್ಲಾಳಿಗಳು ಈಗಾಗಲೇ ರೈತರಿಂದ ಖರೀದಿ ಮಾಡಿ ಶೇಖರಿಸಿಟ್ಟಿವೆ. ರೈತರಿಗೂ ಸಹ ದಾರಿ ಕಾಣದೆ ತುರ್ತು ನಿಮಿತ್ತ ಮಾರಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ರೈತರಿಗಾಗುತಿದ್ದ ಅನಾನುಕೂಲ ಮನಗಂಡು ಕರ್ನಾಟಕ ರಾಜ್ಯ ರೈತ ಸಂಘ ಪ್ರತಿಭಟನೆ ನಡೆಸಿ,ಶೀಘ್ರವೇ ಖರೀದಿ ಕೇಂದ್ರ ತೆರೆಯುವಂತೆ ಆಗ್ರಹಿಸಿತ್ತು. ಈದೀಗ ಜಿಲ್ಲಾಧಿಕಾರಿ ಜಿ ಲಕ್ಷ್ಮಿಕಾಂತ್ ರೆಡ್ಡಿ ಅವರು ಖರೀದಿ ಕೇಂದ್ರ ತೆರೆದಿರುವುದರ ಬಗ್ಗೆ ಪ್ರಕಟಣೆ ನೀಡಿದ್ದಾರೆ. ಇದು ರೈತ ಸಂಘದ ಹೋರಾಟದ ಫಲ ಎಂದು ಮೈಸೂರು ಜಿಲ್ಲಾಧ್ಯಕ್ಷ ಹೊಸೂರು ಕುಮಾರ್ ಬಣ್ಣಿಸಿದ್ದಾರೆ. ಈ ಬಗ್ಗೆ ಈದಿನ. ಕಾಮ್ ಕೂಡ ವಿಸ್ತ್ರತವಾಗಿ ವರದಿ ಮಾಡಿತ್ತು ಎಂದರು.

ಈಗಾಗಲೇ ತಡವಾಗಿ ಖರೀದಿ ಕೇಂದ್ರ ತೆರೆಯಲಾಗಿದೆ, ದಲ್ಲಾಳಿಗಳು ಶೇಖರಿಸಿಟ್ಟ ಧಾನ್ಯ ರೈತರ ಹೆಸರಿನಲ್ಲಿಯೇ ಮಾರಾಟ ಆಗುತ್ತೆ. ಇನ್ನ ರೈತರು ಮಾರಾಟ ಮಾಡಿದರು ಕೂಡಲೇ ಹಣ ಏನು ಸಿಗುವುದಿಲ್ಲ. ಅದಕ್ಕೂ ಕಾಯುವಂತ ಪರಿಸ್ಥಿತಿ.

ಇನ್ನೇನು ಮಳೆ ಬಿದ್ದರೆ ಕೃಷಿ ಚಟುವಟಿಕೆ ಕಡೆಗೆ ರೈತರು ಮುಖ ಮಾಡಬೇಕು. ಖರ್ಚು ವೆಚ್ಚ ಇದ್ದೇ ಇರುತ್ತೆ. ಭತ್ತಕ್ಕೆ ನಿಗದಿ ಪಡಿಸಿದ ಕನಿಷ್ಠ ಬೆಂಬಲ ಬೆಲೆ ವೈಜ್ಞಾನಿಕವಾಗಿಲ್ಲ. ತೀರ ಕಡಿಮೆ ಬೆಲೆ ನಿಗದಿಯಾಗಿದೆ. ಖರೀದಿ ಕೇಂದ್ರ ಯಾವದೋ ಸಮಯದಲ್ಲಿ ತೆರೆಯುವಂತದ್ದು ಅಲ್ಲ. ವರ್ಷಪೂರ್ತಿ ತೆರೆದಿರಬೇಕು, ರೈತ ಬೆಳೆದ ಬೆಳೆಯನ್ನ ಆಗತ್ಯಾನುಸಾರ ಮಾರಾಟ ಮಾಡಲು ಅನುಕೂಲ ಆಗುತ್ತೆ.

ಖರೀದಿ ಕೇಂದ್ರ ಸರಿಯಾದ ಬೆಲೆಯಲ್ಲಿ ಖರೀದಿ ಮಾಡಿದರೆ ರೈತರು ಮಾರಾಟ ಮಾಡುತ್ತಾರೆ, ಇಲ್ಲವೇ, ಮಾರುಕಟ್ಟೆ ದರ ರೈತರಿಗೆ ಪೂರಕವಾಗಿ ಸಿಕ್ಕರೆ ಅಲ್ಲಿ ಮಾರಾಟ ಮಾಡಬಹುದು. ಇದ್ಯಾವುದು ಮಾಡದೆ ದಲ್ಲಾಳಿ ಪರವಾಗಿ ನಿಂತು. ಸಮಯವಲ್ಲದ ಸಮಯದಲ್ಲಿ ಖರೀದಿ ಕೇಂದ್ರ ತೆರೆದರೆ ಇದು ರೈತರಿಗೆ ಅನುಕೂಲ ಮಾಡಲು ಸಾಧ್ಯವೇ ಇಲ್ಲ. ರೈತ ಬೆಳೆದ ಬೆಳೆ ರಕ್ಷಣೆ ಮಾಡೋದ? ಇಲ್ಲ ಮಾರಾಟ ಮಾಡಬೇಕಾ! ಗೊಂದಲದಲ್ಲಿ, ಕಷ್ಟಕ್ಕೆ ಸಿಲುಕುವ ಪರಿಸ್ಥಿತಿಗೆ ವ್ಯವಸ್ಥಿತವಾಗಿ ತಳ್ಳಲ್ಪಡುವ ಮಾರ್ಗವಾಗಿವೆ ಎಂದು ಆರೋಪಿಸಿದರು.

ಈ ಸುದ್ದಿ ಓದಿದ್ದೀರಾ? ಮೈಸೂರು | ಪ್ರಾಣಿ,ಪಕ್ಷಿ ಸಂಕುಲ ಉಳಿಸಿ : ನಟ ಪ್ರಜ್ವಲ್ ದೇವರಾಜ್

ವರ್ಷಕ್ಕೆ ಒಮ್ಮೆ ಯಾವುದೋ ಸಮಯದಲ್ಲಿ ತೆರೆದರೆ ರೈತನಿಗೆ ಲಾಭ ಆಗಲ್ಲ, ಲಾಭ ಆಗೋದು ದಲ್ಲಾಳಿಗೆ. ಈ ಸರ್ಕಾರಕ್ಕೆ ಇದರ ಬಗ್ಗೆ ಕನಿಷ್ಠ ಜ್ಞಾನವು ಇಲ್ಲ,ಎಲ್ಲದಕ್ಕೂ ಪ್ರತಿಭಟನೆ ಮಾಡಬೇಕಾದ ಪರಿಸ್ಥಿತಿ ಬಂದೋದಗಿದೆ ಎಂದು ವಿಷಾದ ವ್ಯಕ್ತಪಡಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...