ತುಮಕೂರು ಜಿಲ್ಲೆಗೆ 2025ಕ್ಕೆ ಹರಿಯಲಿದೆ ಎತ್ತಿನಹೊಳೆ ನೀರು : ಗೃಹ ಸಚಿವ ಪರಮೇಶ್ವರ್

Date:

ಎತ್ತಿನಹೊಳೆ ಯೋಜನೆಯ ಮೊದಲ ಹಂತದ ಕಾಮಗಾರಿ ಪೂರ್ಣಗೊಂಡಿದ್ದು ಸೆ.8ರಂದು ಚಾಲನೆ ನೀಡಲಾಗುತ್ತಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ. ಜಿ.ಪರಮೇಶ್ವರ ತಿಳಿಸಿದರು.

ತುಮಕೂರು ಜಿಲ್ಲಾಧಿಕಾರಿ ಕಾರ್ಯಾಲಯದಲ್ಲಿ ಬುಧವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನೀರಿನ ಯಂತ್ರಗಳು ತುಕ್ಕು ಹಿಡಿದ ಹಿನ್ನೆಲೆಯಲ್ಲಿ ಸ್ಪೋಟಗೊಂಡಿದ್ದವು. ಉಪ ಮುಖ್ಯಮಂತ್ರಿ ಡಿ‌.ಕೆ.ಶಿವಕುಮಾರ್ ಅವರು ಪ್ರಾಯೋಗಿಕವಾಗಿ ಪರೀಕ್ಷೆ ನಡೆಸಿದ್ದ ಯಶಶ್ವಿಯಾಗಿವೆ. ಸೆ.6ರಂದು ಚಾಲನೆ ನೀಡಲಾಗುತ್ತಿದೆ. ಈ ನೀರನ್ನು ವಾಣಿವಿಲಾಸ ಸಾಗರ ಅಣೆಕಟ್ಟೆಗೆ 1500 ಕ್ಯೂಸೆಕ್ ನೀರನ್ನು ಹರಿಸಲಾಗುತ್ತಿದೆ. ಆ ಭಾಗಕ್ಕೆ ಉಪಯೋಗವಾಗಲಿದೆ. ಮುಂದಿನ ವರ್ಷ ಅರಸಿಕೆರೆ, ತಿಪಟೂರು ಭಾಗದಲ್ಲಿನ ಕಾಮಗಾರಿ ಪೂರ್ಣಗೊಳ್ಳಲಿದ್ದು ತುಮಕೂರಿಗೆ ನೀರು ಬರಲಿದೆ ಎಂದು ತಿಳಿಸಿದರು.

WhatsApp Image 2024 09 04 at 9.22.17 PM 1

ಪರಮಶಿವಯ್ಯನವರು ಹಾಸನ, ಚಿಕ್ಕಮಗಳೂರು, ತುಮಕುರು, ಕೋಲಾರ, ಚಿಕ್ಕಬಳ್ಳಾಪುರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳ ಬಯಲುಸೀಮೆ ಪ್ರದೇಶಗಳಿಗೆ ಕುಡಿಯುವ ನೀರಿನ ಯೋಜನೆ ಮಾಡಬೇಕೆಂದು ಪ್ರಸ್ತಾಪ ಮಾಡಿದ್ದರು. ಇದಕ್ಕೆ ನೇತ್ರಾವತಿಯ ತಿರುವು ಎಂದು ಹೆಸರಿಟ್ಟಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದಕ್ಕೆ ಮಂಗಳೂರಿನಲ್ಲಿ ತೀವ್ರ ವಿರೋಧ ವ್ಯಕ್ತವಾಗಿತ್ತು. ಇದರಿಂದ ಯೋಜನೆ ಕೈ ಬಿಡುವ ಸ್ಥಿತಿ ಬಂದಿತ್ತು. ಇದಾದ ಬಳಿಕ ನೀರಾವರಿ ತಜ್ಞರು ವಿಶೇಷವಾಗಿ ಮಳೆಗಾಲದಲ್ಲಿ ಹೆಚ್ಚು ಮಳೆಯಾಗುವ ಪ್ರದೇಶವನ್ನು ಗುರುತಿಸಿದರು. ಎತ್ತಿನಹೊಳೆ, ಕಾಡುಮನೆಹೊಳೆ, ಹೊಂಗದಹಳ್ಳ, ಕೇದಿಹೊಳೆ. ಇದೆಲ್ಲವು ಕ್ರೂಡಿಕ್ರುತವಾಗಿ ಒಂದುಕಡೆ ಬಂದರೆ 24 ಟಿಎಂಸಿ ಬರುತ್ತದೆ. ಈ ಯೋಜನೆಯ ಸಾಧಕ-ಬಾಧಕಗಳನ್ನು, ನೀರು ತೆಗೆದುಕೊಳ್ಳುವ ಸಾಧ್ಯ-ಅಸಾಧ್ಯತೆಯ ಕುರಿತು ಸರ್ಕಾರಕ್ಕೆ ವರದಿ ನೀಡಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇದಕ್ಕೆ ಬೇಕಾದ ಹಣಕಾಸು, ತಾಂತ್ರಿಕತೆಯನ್ನು ಅಧ್ಯಯನ ನಡೆಸಿ, ₹ 12,912.36 ಕೋಟಿ ಹಣವನ್ನು ಬಜೆಟ್‌ನಲ್ಲಿ ಒದಗಿಸಿ, 17-2-2014ರಲ್ಲಿ ಆಡಳಿತಾತ್ಮಕ ಅನುಮೋದನೆ ನೀಡಿದರು. ಯೋಜನೆಯ ಇವತ್ತಿನ ಮೊತ್ತ ₹ 23,251 ಕೋಟಿ ತಲುಪಿದೆ. ಈ ಯೋಜನೆಯು ಮುಂಬರುವ ಮಾರ್ಚ್ 2027ಕ್ಕೆ ಸಂಪೂರ್ಣಗೊಳ್ಳಲಿದೆ ಎಂದು ತಿಳಿಸಿದರು.

ತುಮಕೂರು ಜಿಲ್ಲೆಯಲ್ಲಿ 150 ಕಿ.ಮೀ.ಕೆನಾಲ್:
ಜಿಲ್ಲೆಯಲ್ಲಿ ಮುಖ್ಯ ಕೆನಾಲ್ 150 ಕಿ.ಮೀ ಇದೆ. ಇದರಲ್ಲಿ 102 ಕಿ.ಮೀ ಕೆನಾಲ್ ಕಾಮಗಾರಿ ಪೂರ್ಣಗೊಂಡಿದೆ. 121 ಕಿ.ಮೀ ಫೀಡರ್ ಕೆನಾಲ್‌ನಲ್ಲಿ 106 ಕಿ.ಮೀ. ಪೂರ್ಣಗೊಂಡಿದೆ. ಜುಲೈ 2025ರೊಳಗೆ ಕಾಮಗಾರಿ ಪೂರ್ಣಗೊಳ್ಳಲಿದೆ. ಜಿಲ್ಲೆಯಲ್ಲಿ ಸುಮಾರು 63 ಎಕರೆ ಅರಣ್ಯ ಭೂಮಿ ಈ ಯೋಜನೆಯಲ್ಲಿ ಬರುತ್ತದೆ ಎಂದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...