ಕೋಮುವಾದಿಗಳ ಜೊತೆ ರಾಜಿ ಪ್ರಶ್ನೆಯೇ ಇಲ್ಲ, ನನ್ನ ಹೆಣ ಕೂಡ ಬಿಜೆಪಿಗೆ ಹೋಗಲ್ಲ: ಸಿದ್ದರಾಮಯ್ಯ

Date:

  • ಕುಮಾರಸ್ವಾಮಿ ಆರೋಪಕ್ಕೆ ಸಿದ್ದರಾಮಯ್ಯ ತಿರುಗೇಟು
  • ಬರಗಾಲ: 62 ತಾಲ್ಲೂಕುಗಳು ಗುರುತಿಸಲಾಗಿದೆ: ಸಿಎಂ

ನನ್ನ ರಾಜಕೀಯ ಜೀವನದಲ್ಲಿ ಕೋಮುವಾದಿ ಪಕ್ಷಗಳ ವಿರುದ್ಧ ಹೋರಾಟ ಮಾಡಿಕೊಂಡು ಬಂದಿರುವೆ. ನನ್ನ ಹೆಣ ಕೂಡ ಬಿಜೆಪಿಗೆ ಹೋಗುವುದಿಲ್ಲ. ಜೆಡಿಎಸ್‌ನವರು ಅವರು ಕುಟುಂಬ ರಾಜಕಾರಣಕ್ಕಾಗಿ ಬಿಜೆಪಿಯವರೊಂದಿಗೆ ಒಪ್ಪಂದ ಮಾಡಿಕೊಂಡಿದ್ದಾರೆ. ನಾನು ಯಾವುದೇ ಕಾರಣಕ್ಕೂ ಕೋಮುವಾದಿಗಳ ಜೊತೆ ರಾಜಿ ಮಾಡಿಕೊಳ್ಳುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಸಿದ್ದರಾಮಯ್ಯನವರು ಹಿಂದೆ ಬಿಜೆಪಿ ಪಕ್ಷಕ್ಕೆ ಹೋಗಲು ಪ್ರಯತ್ನಿಸಿದ್ದರು ಎಂಬ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿಯವರ ಆರೋಪಕ್ಕೆ ಸೋಮವಾರ ಮೈಸೂರಿನಲ್ಲಿ ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದರು.

“ಬರ ಮಾರ್ಗಸೂಚಿಯೊಳಗೆ 62 ತಾಲ್ಲೂಕುಗಳನ್ನು ಗುರುತಿಸಲಾಗಿದೆ. 136 ತಾಲ್ಲೂಕು ಬರಪೀಡಿತ ಪರಿಸ್ಥಿತಿಯ ವರದಿ ಪಡೆಯಲಾಗುತ್ತಿದೆ. ಈ ವರದಿ ಬಂದ ನಂತರ ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಈ ತಾಲ್ಲೂಕುಗಳನ್ನು ಬರಪೀಡಿತ ಎಂದು ಘೋಷಣೆ ಮಾಡುವ ಬಗ್ಗೆ ತೀರ್ಮಾನ ಕೈಗೊಳ್ಳಲಾಗುವುದು” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸರ್ವಪಕ್ಷ ಸಭೆಯಲ್ಲಿ ಕಾವೇರಿ ವಿವಾದದ ಕುರಿತು ಬೆಂಬಲಿಸುವುದಾಗಿ ತಿಳಿಸಿದ ಬಿಜೆಪಿ ಈಗ ಕೆಆರ್‌ಎಸ್‌ನಲ್ಲಿ ಬಂದು ರೈತರ ಅಹವಾಲುಗಳನ್ನು ಸರ್ಕಾರ ಕಡೆಗಣಿಸುತ್ತಿದೆ ಎಂದಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, “ಮೇಕೆದಾಟು ಯೋಜನೆಗೆ ಅನುಮತಿ ನೀಡದಿರುವುದು ಕೇಂದ್ರ ಬಿಜೆಪಿ ಸರ್ಕಾರ, ಈ ಯೋಜನೆಗೆ ತಕರಾರು ಮಾಡಲು ತಮಿಳುನಾಡಿಗೆ ಯಾವುದೇ ವಿಚಾರವಿಲ್ಲ. ರಾಜ್ಯಕ್ಕೆ ನಿಗದಿಪಡಿಸಿರುವ 177.25 ಟಿಎಂಸಿ ಸಾಮಾನ್ಯ ವರ್ಷಗಳಲ್ಲಿ ನೀರು ಬಿಡಬೇಕು. ಸಂಕಷ್ಟದ ಸಮಯದಲ್ಲಿ ಸಂಕಷ್ಟದ ಸೂತ್ರ ಅನುಸರಿಸಬೇಕು ಎಂದಿದೆ. ಆದರೆ ತಮಿಳುನಾಡಿನವರು ಅನಗತ್ಯವಾಗಿ ಕ್ಯಾತೆ ತೆಗೆಯುತ್ತಿದ್ದಾರೆ. ಈ ಯೋಜನೆಗೆ ಸಂಬಂಧಿಸಿದ ಡಿಪಿಆರ್ ನೀಡಲಾಗಿದೆ” ಎಂದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಅಸಮಾಧಾನದ ಕಿಡಿ ಜ್ವಾಲೆಯಾಗಿ ಸರ್ಕಾರವನ್ನು ಸುಡದಿರಲಿ

ಪ್ರಧಾನಿ ಭೇಟಿಗೆ ಸಮಯ ನಿಗದಿಪಡಿಸಲಿ

“ಕೇಂದ್ರ ಸರ್ಕಾರದ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರಕ್ಕೆ ಬಿಜೆಪಿಯವರು ಯೋಜನೆ ಅನುಮತಿ ದೊರಕಿಸಿಸಿಕೊಡಲು ಮನವಿ ಮಾಡಿಕೊಳ್ಳಬೇಕು. ಆದರೆ ರಾಜ್ಯ ಬಿಜೆಪಿಯವರು ಸರ್ವಪಕ್ಷ ಸಭೆಯಲ್ಲಿ ಕಾವೇರಿ ವಿಷಯದಲ್ಲಿ ರಾಜ್ಯ ಸರ್ಕಾರಕ್ಕೆ ಸಹಕರಿಸುವುದಾಗಿ ತಿಳಿಸಿ, ಇಲ್ಲಿ ಇದೇ ವಿಷಯದ ಬಗ್ಗೆ ರಾಜಕೀಯ ಮಾಡುತ್ತಿದ್ದಾರೆ. ಯಾವುದೇ ಕಾರಣಕ್ಕೂ ರಾಜ್ಯದ ರೈತರ ಹಿತರಕ್ಷಣೆಯ ವಿಷಯದಲ್ಲಿ ರಾಜಕಾರಣ ಬೇಡ. ಈ ವಿಚಾರವಾಗಿ ಸರ್ವಪಕ್ಷ ನಿಯೋಗದ ಭೇಟಿಗೆ ಪ್ರಧಾನ ಮಂತ್ರಿಗಳ ಸಮಯ ಕೋರಿದ್ದು, ಯಾವುದೇ ಉತ್ತರ ಬಂದಿಲ್ಲವಾದ್ದರಿಂದ, ರಾಜ್ಯ ಬಿಜೆಪಿ ಸಂಸದರು, ಭೇಟಿಗೆ ಸಮಯ ನಿಗದಿಪಡಿಸಲಿ” ಎಂದು ಒತ್ತಾಯಿಸಿದರು.

ಒಂದು ರಾಷ್ಟ್ರ, ಒಂದು ಚುನಾವಣೆ ಅಸಾಧ್ಯ

ದೇಶದಲ್ಲಿ ಒಂದು ರಾಷ್ಟ್ರ, ಒಂದು ಚುನಾವಣೆ ಅಗತ್ಯವಿದೆಯೇ ಎಂಬ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿ, “ಒಂದು ರಾಷ್ಟ್ರ, ಒಂದು ಚುನಾವಣೆ ಜಾರಿಗೊಳಿಸುವುದು ಸಾಧ್ಯವಿಲ್ಲ. ಕೆಲವು ರಾಜ್ಯಗಳಲ್ಲಿ ಇತ್ತೀಚೆಗಷ್ಟೇ ಚುನಾವಣೆ ನಡೆದಿದೆ, ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ಈ ಎಲ್ಲ ರಾಜ್ಯ ವಿಧಾನಸಭೆಗಳನ್ನು ವಿಸರ್ಜಿಸಲು ಸಾಧ್ಯವಿದೆಯೇ, ಅಥವಾ ಚುನಾವಣೆ ನಡೆಯುವವರೆಗೂ ರಾಷ್ಟ್ರಪತಿ ಅಧಿಕಾರ ಹೇರಲು ಸಾಧ್ಯವಿದೆಯೇ? ಇಂತಹ ಸಂದರ್ಭಗಳು ಉದ್ಭವಿಸುವ ಸಾಧ್ಯತೆಯಿಂದಾಗಿ ಒಂದು ರಾಷ್ಟ್ರ, ಒಂದು ಚುನಾವಣೆ ಜಾರಿಗೊಳಿಸುವುದು ಸಾಧ್ಯವಿಲ್ಲ. ಕರ್ನಾಟಕ ರಾಜ್ಯದಲ್ಲಿ ಕಾಂಗ್ರೆಸ್ ಗೆಲುವಿನಿಂದಾಗಿ ಪ್ರಧಾನಿಗಳು ಹತಾಶರಾಗಿದ್ದು, ನಾಲ್ಕೈದು ತಿಂಗಳು ಕಳೆದರೂ ವಿರೋಧ ಪಕ್ಷದ ನಾಯಕರನ್ನು ಆಯ್ಕೆ ಮಾಡಿರುವುದಿಲ್ಲ” ಎಂದು ಕಿಡಿ ಕಾರಿದರು.

ಖಾಸಗಿ ಸಾರಿಗೆ ಒಕ್ಕೂಟದ ಬೇಡಿಕೆ ಈಡೇರಿಕೆ ಅಸಾಧ್ಯ

ಬೆಂಗಳೂರಿನ ಖಾಸಗಿ ಸಾರಿಗೆ ಒಕ್ಯಕೂಟದವರು ನಡೆಸುತ್ತಿರುವ ಮುಷ್ಕರದ ಬಗ್ಗೆ ಮಾತನಾಡಿ, “ಪ್ರಜಾಪ್ರಭುತ್ವದಲ್ಲಿ ಮುಷ್ಕರ ಮಾಡುವವರಿಗೆ ಕಡಿವಾಣ ಹಾಕಲು ಸಾಧ್ಯವಿಲ್ಲ. ಖಾಸಗಿ ಸಾರಿಗೆಯವರ ಅಹವಾಲುಗಳನ್ನು ಸರ್ಕಾರ ಆಲಿಸಿದೆ. ಶಕ್ತಿಯೋಜನೆಯಿಂದ ಖಾಸಗಿ ಸಾರಿಗೆಯವರಿಗೆ ನಷ್ಟವುಂಟಾಗುತ್ತಿದ್ದು, ಆ ನಷ್ಟವನ್ನು ಭರಿಸಿಕೊಡಬೇಕು ಎಂಬಂತಹ ಅಸಾಧ್ಯ ಬೇಡಿಕೆಗಳನ್ನು ಈಡೇರಿಸಲು ಸಾಧ್ಯವಿಲ್ಲ. ಹೆಣ್ಣುಮಕ್ಕಳಿಗೆ ಅನುಕೂಲ ಕಲ್ಪಿಸಲು ಶಕ್ತಿ ಯೋಜನೆ ಜಾರಿಗೊಳಿಸಲಾಗಿದೆ” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...