ಮಂಡ್ಯ | ಅನಿಷ್ಠ ಪದ್ಧತಿಗಳ ನಿರ್ಮೂಲನೆಗೆ ಎಲ್ಲರ ಸಹಕಾರ ಅಗತ್ಯ

Date:

ಬಾಲ್ಯವಿವಾಹ, ಬಾಲಕಾರ್ಮಿಕ ಪದ್ಧತಿಯಂತಹ ಸಾಮಾಜಿಕ ಅನಿಷ್ಠ, ಪಿಡುಗುಗಳ ನಿರ್ಮೂಲನೆ ನಮ್ಮೆಲ್ಲರ ಆಧ್ಯ ಕರ್ತವ್ಯ, ಎಂದು ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ಸಂರಕ್ಷಣಾ ಆಯೋಗದ ಸದಸ್ಯ ಮಿಕ್ಕೆರೆ ವೆಂಕಟೇಶ್ ಹೇಳಿದ್ದಾರೆ.

ಅವರು ಕೆ.ಆರ್‌ ಪೇಟೆಯಲ್ಲಿ ತಾಲೂಕು ಮಟ್ಟದ ಅಧಿಕಾರಿಗಳು ಹಾಗೂ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳ ಸಭೆಯಲ್ಲಿ ಅವರು ಮಾತನಾಡಿದರು. “ಮಂಡ್ಯ ಜಿಲ್ಲೆಯ ಗಡಿ ತಾಲೂಕು ಕೆ.ಆರ್‌ ಪೇಟೆಯಿಂದ ಮುಂಬೈ ಮಹಾನಗರಕ್ಕೆ ನೇರ ಸಂಪರ್ಕವಿರುವುದರಿಂದ ಮಕ್ಕಳ ಸಾಗಾಣಿಕೆ, ಬಾಲ್ಯ ವಿವಾಹದಂತಹ ಅನಿಷ್ಟ ಪದ್ದತಿಗಳು ಇಂದಿಗೂ ಇಲ್ಲಿ ಜೀವಂತವಾಗಿವೆ. ಆದ್ದರಿಂದ, ತಾಲೂಕು ಮಟ್ಟದ ಅಧಿಕಾರಿಗಳು ಮಕ್ಕಳ ಹಕ್ಕುಗಳ ರಕ್ಷಣೆ ವಿಚಾರದಲ್ಲಿ ಜಾಗೃತರಾಗಿ ಕೆಲಸ ಮಾಡಬೇಕು” ಎಂದು ಹೇಳಿದರು.

“ಕೆ.ಆರ್‌ ಪೇಟೆ ತಾಲೂಕಿನ ಜನರು, ನೆರೆಯ ಮಹಾರಾಷ್ಟ್ರ ಮುಂಬೈ ಮಹಾನಗರದಲ್ಲಿ ನೇರವಾಗಿ ವ್ಯಾಪಾರ, ವಹಿವಾಟು ಸೇರಿದಂತೆ, ಅಲ್ಲಿಯೇ ಜೀವನ ನಡೆಸುತ್ತಿರುವುದರಿಂದ ಮುಂಬೈ ಮಹಾನಗರದ ನಂಟಿದೆ. ತಾಲೂಕಿನಲ್ಲಿ ಮಕ್ಕಳ ಮಾರಾಟ ಜಾಲ ಸೇರಿದಂತೆ, ಬಾಲ್ಯವಿವಾಹ, ಅಸ್ಪೃಶ್ಯತೆ ಆಚರಣೆ, ಸಾಮಾಜಿಕ ಕಟ್ಟುಪಾಡುಗಳ ಆಚರಣೆಯಂತಹ  ಕಾನೂನು ಬಾಹಿರವಾದ ಚಟುವಟಿಕೆಗಳು ನಡೆಯುತ್ತಿವೆ. ತಾಲೂಕು ಮಟ್ಟದ ಅಧಿಕಾರಿಗಳು ಈ ಬಗ್ಗೆ ಎಚ್ಚರವಹಿಸಿ ಸಮಾಜ ವಿರೋಧಿ ಚಟುವಟಿಕೆಗಳನ್ನು ತಡೆಯಲು ಕ್ರಮ ಕೈಗೊಳ್ಳಬೇಕು” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಹೆಣ್ಣು ಮಕ್ಕಳ ಪಾಲಿಗೆ ಶಾಪವಾಗಿರುವ ಬಾಲ್ಯ ವಿವಾಹದಂತಹ ಪ್ರಕರಣಗಳು ನಡೆಯದಂತೆ ನಿರ್ಧಾಕ್ಷಿಣ್ಯ ಕ್ರಮ ಕೈಗೊಳ್ಳಬೇಕು. ಕೆ.ಆರ್.ಪೇಟೆ ತಾಲೂಕಿನಲ್ಲಿ ಮಹಿಳೆಯರು ಮತ್ತು ಮಕ್ಕಳು ಕಾಣೆಯಾಗುವ ಪ್ರಕರಣಗಳು, ಸರ್ವೇ ಸಾಮಾನ್ಯವಾಗಿವೆ. ಗ್ರಾಮದಿಂದ ನಾಪತ್ತೆಯಾದ ಮಹಿಳೆಯರು ಎಲ್ಲಿದ್ದಾರೆ? ಏನು ಮಾಡುತ್ತಿದ್ದಾರೆ? ಎಂಬುದು ಈಗೂ ಗೊತ್ತಾಗುತ್ತಿಲ್ಲ. ಮಹಿಳೆಯರ ಮತ್ತು ಮಕ್ಕಳ ಮಾರಾಟ ಜಾಲಗಳು  ಸಕ್ರಿಯವಾಗಿರುವ ಬಗ್ಗೆ ಆಯೋಗಕ್ಕೆ ಮಾಹಿತಿ ಇದೆ. ಈ ಬಗ್ಗೆ ಮಹಿಳಾ ಮತ್ತು ಮಕ್ಕಳ ಇಲಾಖೆ ಅಧಿಕಾರಿಗಳು, ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಹಾಗೂ ಪೊಲೀಸರು ನಿಗಾವಹಿಸಿ, ಅಕ್ರಮ ದಂಧೆಕೋರರ ವಿರುದ್ಧ ಕಠೀಣ ಕ್ರಮ ಕೈಗೊಳ್ಳಬೇಕು” ಎಂದು ತಿಳಿಸಿದರು.

“ಕಾನೂನಿಗಿಂತ ಯಾರೂ ದೊಡ್ಡವರಲ್ಲ, ನಾಗರೀಕ ಸಮಾಜದಲ್ಲಿ ವಾಸ ಮಾಡುವ ಪ್ರತಿಯೊಬ್ಬರೂ ಕಾನೂನಿನ ಪರಿಮಿತಿಯೊಳಗೆ ಜೀವನ ನಡೆಸಬೇಕು. ತಂದೆ, ತಾಯಿಗಳು ಹಾಗೂ ಪೋಷಕರು ಮಕ್ಕಳ ಹಕ್ಕುಗಳನ್ನು ಸಂರಕ್ಷಣೆ ಮಾಡಿ, ಮಕ್ಕಳನ್ನು ಕಡ್ಡಾಯವಾಗಿ ಶಾಲೆಗೆ ಕಳಿಸಿ, ವಿದ್ಯಾವಂತರನ್ನಾಗಿ ಮಾಡುವ ಮೂಲಕ ಭವಿಷ್ಯದ ನಾಯಕರನ್ನಾಗಿ ತಯಾರು ಮಾಡಬೇಕು. ಈ ದಿಕ್ಕಿನಲ್ಲಿ ತಾಲೂಕು ಮಟ್ಟದ ಅಧಿಕಾರಿಗಳು ಮಕ್ಕಳ ಹಕ್ಕುಗಳ ಸಂರಕ್ಷಣಾ ಆಯೋಗಕ್ಕೆ ಸಹಕಾರ ನೀಡಬೇಕು” ಎಂದು ಹೇಳಿದರು.

ಕೆ.ಆರ್.ಪೇಟೆ ಪಟ್ಟಣ ಪೊಲೀಸ್ ಠಾಣೆ ಇನ್ಸ್ಪೆಕ್ಟರ್ ಸುಮಾರಾಣಿ ಮಾತನಾಡಿ, “ಬಾಲ್ಯ ವಿವಾಹ ಮತ್ತು ಶಾಲೆಗೆ ಹೋಗಬೇಕಿರುವ ಮಕ್ಕಳನ್ನು,  ಬಾಲಕಾರ್ಮಿಕ ರನ್ನಾಗಿ ಬಳಸಿಕೊಂಡು ಶೋಷಣೆ ಮಾಡುತ್ತಿರುವ ಪ್ರಕರಣಗಳು, ನಮ್ಮ ಗಮನಕ್ಕೆ ಬಂದ ಕೂಡಲೇ ಕಾರ್ಯೋನ್ಮುಖರಾಗಿ ಕ್ರಿಮಿನಲ್ ಪ್ರಕರಣ ದಾಖಲಿಸಿ, ಮಕ್ಕಳ ಹಕ್ಕುಗಳನ್ನು ಸಂರಕ್ಷಣೆ ಮಾಡಿದ್ದೇವೆ. ನಾಗರೀಕ ಸಮಾಜಕ್ಕೆ ಶಾಪವಾಗಿರುವ ಬಾಲ್ಯವಿವಾಹ ಹಾಗೂ ಬಾಲಕಾರ್ಮಿಕ ಪದ್ಧತಿಯನ್ನು ಅಳಿಸಿ ಹಾಕುವ ದಿಕ್ಕಿನಲ್ಲಿ ನಾವು ಕ್ರಿಯಾಶೀಲವಾಗಿದ್ದೇವೆ” ಎಂದರು.

ಸಭೆಯಲ್ಲಿ ತಹಸೀಲ್ದಾರ್‌ ನಿಸರ್ಗಪ್ರಿಯ, ಕ್ಷೇತ್ರ ಶಿಕ್ಷಣಾಧಿಕಾರಿ ಆರ್. ಎಸ್. ಸೀತಾರಾಮ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಅಧಿಕಾರಿ ಅರುಣ್ ಕುಮಾರ್, ತಾಲೂಕು ಸಮಾಜ ಕಲ್ಯಾಣ ಅಧಿಕಾರಿ ಬಸವರಾಜು, ತಾಲೂಕು ಹಿಂದುಳಿದ ವರ್ಗಗಳ ವಿಸ್ತರಣಾಧಿಕಾರಿ ವೆಂಕಟೇಶ್, ಸೇರಿದಂತೆ ತಾಲೂಕು ಮಟ್ಟದ ಅಧಿಕಾರಿಗಳು ಸಭೆಯಲ್ಲಿ ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...