ತುಮಕೂರು ಜಿಲ್ಲೆಯ ರೈತರ ಬಲಿಗೆ ಸಿದ್ಧವಾದ ಎಕ್ಸ್ ಪ್ರೆಸ್ ಲಿಂಕ್ ಕೆನಾಲ್ ಕಾಮಗಾರಿ : ರೈತ ಸಂಘ ಆಕ್ರೋಶ

Date:

ಹೇಮಾವತಿ ನೀರು ಜಿಲ್ಲೆಯ ಜೀವನಾಡಿಯಾಗಿದೆ. ಕೃಷಿಕರ ಬಾಳಿಗೆ ಬೆಳಕಾಗಿ ಬಂದ ನದಿ ನೀರನ್ನು ಮಾಗಡಿಯತ್ತ ಕೊಂಡೊಯ್ಯುವ ಕೆಲಸ ಮಾಡಿದ ಪ್ರಭಾವಿ ನಾಯಕ ಡಿ.ಕೆ.ಶಿವಕುಮಾರ್ ನಡೆ ರೈತ ವಿರೋಧಿಯಾಗಿದೆ. ಯಾವುದೇ ಕಾನೂನು ಕ್ರಮ ಇಲ್ಲದ ಕಾಮಗಾರಿಯಲ್ಲಿ ನಿಯಮಗಳನ್ನು ಗಾಳಿಗೆ ತೂರಲಾಗಿದೆ. ಮುಜರಾಯಿ ದೇವಾಲಯಕ್ಕೆ ಸಂಬಂಧಿಸಿದ ಜಮೀನನ್ನು ವಶಕ್ಕೆ ಪಡೆದು ಕೆಲಸ ಮಾಡಲಾಗುತ್ತಿದೆ. ಇದನ್ನು ತಡೆಯಬೇಕಾದ ತಾಲ್ಲೂಕು ಆಡಳಿತವೇ ಗುತ್ತಿಗೆದಾರರ ಪರ ನಿಂತು ಸ್ಥಳದಲ್ಲಿ ಹಾಜರಿದ್ದು ಕೆಲಸ ನಡೆಸಿದೆ. ಇದು ಅನ್ಯಾಯ ರೈತ ವಿರೋಧಿ ನೀತಿ ಎಂದು ಆಕ್ರೋಶ ವ್ಯಕ್ತಪಡಿಸಿದ ರೈತ ಸಂಘದ ಸದಸ್ಯರು ದಿಢೀರ್ ರಸ್ತೆಗಿಳಿದು ಕೆಲ ಕಾಲ ಹೆದ್ದಾರಿ ನಡೆಸಿ ಪ್ರತಿಭಟಿಸಿದರು.

ಪಟ್ಟಣದ ಪ್ರವಾಸಿ ಮಂದಿರದಲ್ಲಿ ಸಭೆ ನಡೆಸಿದ ರೈತ ಸಂಘದ ಸದಸ್ಯರು ದಿಢೀರ್ ಬಸ್ ಸ್ಟ್ಯಾಂಡ್ ಬಳಿ ತೆರಳಿ ರಸ್ತೆಗಿಳಿದು ಪ್ರತಿಭಟಿಸಿದ ರೈತರನ್ನು ಕುರಿತು ರೈತ ಸಂಘದ ಜಿಲ್ಲಾಧ್ಯಕ್ಷ ಎ.ಗೋವಿಂದರಾಜು ಮಾತನಾಡಿ ಹೇಮಾವತಿ ಮುಖ್ಯನಾಲೆಯಿಂದ ಅಷ್ಟೇ ತೆಗೆದುಕೊಂಡು ಹೋಗಬೇಕು. ನೀರು ಹಂಚಿಕೆ ಆದೇಶದ ಬಳಿಕ ನೀರು ಹರಿಸುವ ಮುನ್ನ ಇಡೀ ಕಾಮಗಾರಿಯನ್ನು ಅಕ್ರಮವಾಗಿ ಆರಂಭಿಸಿ ಸಾವಿರ ಕೋಟಿ ರೂಗಳನ್ನು ಮಂಜೂರು ಮಾಡಿ ಉಪ ಮುಖ್ಯಮಂತ್ರಿಗಳು ತಮ್ಮ ಪ್ರಭಾವ ಬೀರಿ ಅಧಿಕಾರ ದುರ್ಬಳಕೆ ಮಾಡುತ್ತಿದ್ದಾರೆ. ಇದನ್ನು ನೋಡಿಯೂ ನೋಡದಂತೆ ಶಾಸಕರು, ಸಚಿವರು ಸುಮ್ಮನಿರುವುದು ವಿಪರ್ಯಾಸ. ಸರ್ಕಾರಿ ಜಾಗದಲ್ಲಿ ಕೆಲಸ ಮಾಡಲು ಇದುವರೆವಿಗೂ ಆದೇಶವಿಲ್ಲ. ಅಕ್ರಮವಾಗಿ ಕೆಲಸ ನಡೆಯಲು ಅಧಿಕಾರಿಗಳೇ ಮುಂದಾಳತ್ವ ವಹಿಸಿರುವುದು ರೈತರ ದೌರ್ಭಾಗ್ಯವೇ ಸರಿ. 12 ಅಡಿ ವ್ಯಾಸದ ಪೈಪ್ ಅಳವಡಿಕೆ ನಮ್ಮ ಪಾಲಿನ ಎಲ್ಲಾ ನೀರು ಸೆಳೆಯಲಿದೆ. ಈ ಬಗ್ಗೆ ನೀರಾವರಿ ತಜ್ಞರು ಸಹ ವಿರೋಧಿಸಿದ್ದಾರೆ. ಏನಾಗಲಿ ನೀರು ಹರಿಸುವ ಹಠಕ್ಕೆ ಬಿದ್ದ ಡಿಸಿಎಂ ಅವರ ದರ್ಪ ಈಗ ಪೊಲೀಸರ ಮೂಲಕ ಕಾಣುತ್ತಿದೆ. ರೈತರು ಯಾವುದಕ್ಕೂ ಜಗ್ಗವುದಿಲ್ಲ. ಕಾಮಗಾರಿ ನಡೆಯದಂತೆ ತಡೆಯಲು ಸಿದ್ದರಿದ್ದು ಉಗ್ರ ಹೋರಾಟ ನಡೆಸಿ ಸರ್ಕಾರದ ಗಮನ ಸೆಳೆಯುತ್ತವೆ ಎಂದರು.

ರೈತ ಸಂಘದ ತಾಲ್ಲೂಕು ಅಧ್ಯಕ್ಷ ಕೆ.ಎನ್.ವೆಂಕಟೇಗೌಡ ಮಾತನಾಡಿ ಹೇಮಾವತಿ ನೀರು ನಮ್ಮ ಹಕ್ಕು. ನಮ್ಮ ಪಾಲಿನ 24 ಟಿಎಂಸಿ ನೀರು ಜಿಲ್ಲೆಗೆ ಹರಿಸಬೇಕು. ಇದರಲ್ಲೇ ಕದ್ದು ಕೊಂಡೊಯ್ಯುವ ಕೆಲಸ ಸರ್ಕಾರ ಮಾಡುತ್ತಿದೆ. ಜಿಲ್ಲೆಯ ರೈತರು ಸರ್ಕಾರಕ್ಕೆ ಬೇಕಲ್ಲವೇ ಎಂಬುದು ತಿಳಿಯುತ್ತಿಲ್ಲ. ಅಕ್ರಮವಾಗಿ ಪೈಪ್ ಲೈನ್ ಮಾಡಿ ನೀರು ಹರಿಸುವುದು ಸರಿಯಲ್ಲ. ಇದರ ಬಗ್ಗೆ ಸಾವಿರಾರು ರೈತರು ವಿರೋಧ ತೋರಿ ಹೋರಾಟ ನಡೆಸಿದ್ದಾರೆ. ಆದರೆ ಸರ್ಕಾರಿ ಜಾಗ, ದೇವಸ್ಥಾನದ ಜಾಗವನ್ನು ಕಬಳಿಸಿ ಕೆಲಸ ಆರಂಭಿಸಿದ್ದು ಕಾನೂನು ಬಾಹಿರ. ಅಧಿಕಾರಿಗಳೇ ಈ ಅಕ್ರಮಕ್ಕೆ ಸಾಥ್ ನೀಡಿರುವುದು ಜನ ವಿರೋಧಿಯಾಗಿದೆ. ರೈತರನ್ನು ಒಂದು ಮಾತು ಕೇಳದೆ ಕೆಲಸ ಮಾಡಿದ್ದರ ಫಲ ರೈತರೇ ಸರ್ಕಾರಕ್ಕೆ ತೋರುತ್ತಾರೆ. ಹೋರಾಟ ಮುಂದುವರೆಸಿ ಬೃಹತ್ ಮಟ್ಟದಲ್ಲಿ ವಿರೋಧ ಮಾಡಲಿದ್ದೇವೆ. ಸಾವಿರಾರು ರೈತರು ಒಗ್ಗೂಡಿ ಸರ್ಕಾರಕ್ಕೆ ಶಕ್ತಿ ಪ್ರದರ್ಶನ ಮಾಡುತ್ತೇವೆ ಎಂದು ಎಚ್ಚರಿಕೆ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸಂದರ್ಭದಲ್ಲಿ ರೈತಸಂಘದ ಸಿ.ಜಿ.ಲೋಕೇಶ್, ಸಿ.ಟಿ.ಕುಮಾರ್, ಗುರು ಚನ್ನಬಸವಯ್ಯ, ಯತೀಶ್, ಶಿವಕುಮಾರ್, ಸತ್ತಿಗಪ್ಪ, ಪ್ರಕಾಶ್ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...