ಮಂಡ್ಯ | ಸಾಹಿತ್ಯ ಸಮ್ಮೇಳನ ಪ್ರತಿನಿಧಿ ನೋಂದಣಿ ಅವಧಿ ವಿಸ್ತರಣೆಗೆ ಸಜಗೌ ಒತ್ತಾಯ

Date:

ಮಂಡ್ಯ ನಗರದಲ್ಲಿ ಡಿಸೆಂಬರ್‌ 20ರಿಂದ ಮೂರು ದಿನಗಳ ಕಾಲ ನಡೆಯಲಿರುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಭಾಗವಹಿಸಲು ಇಚ್ಛಿಸುವ ಪ್ರತಿನಿಧಿಗಳ ನೋಂದಣಿಯ ಅವಧಿಯನ್ನು ಡಿ.12ರವರೆಗೆ ವಿಸ್ತರಿಸುವಂತೆ ಜಿಲ್ಲಾ ಯುವ ಬರಹಗಾರರ ಬಳಗದ ಅಧ್ಯಕ್ಷ ಟಿ ಸತೀಶ್ ಜವರೇಗೌಡ(ಸಜಗೌ) ಒತ್ತಾಯಿಸಿದ್ದಾರೆ.

ಮಾಧ್ಯಮ ಹೇಳಿಕೆ ನೀಡಿರುವ ಇವರು, “ನಾಡಿನ ಹಲವು ಜಿಲ್ಲೆಗಳಿಂದ ತುಂಬಾ ಮಂದಿ ಸಾಹಿತ್ಯಾಸಕ್ತರು ತಮಗೆ ಕರೆ ಮಾಡಿ ‘ಸಾಹಿತ್ಯ ಸಮ್ಮೇಳನದಲ್ಲಿ ಭಾಗವಹಿಸಲು ಆಸಕ್ತರಾಗಿದ್ದೇವೆ. ಆದರೆ, ಆನ್‌ಲೈನ್‌ ನೋಂದಣಿಯಾದ್ದರಿಂದ, ಸಕಾಲಕ್ಕೆ ನೋಂದಣಿ ಮಾಡಿಕೊಳ್ಳಲು ಸಾಧ್ಯವಾಗಿಲ್ಲ. ಮತ್ತೊಮ್ಮೆ ನೋಂದಣಿಗೆ ಕಡೆಯ ದಿನಾಂಕ ವಿಸ್ತರಿಸಲು ಸ್ವಾಗತ ಸಮಿತಿ ಗಮನಕ್ಕೆ ತನ್ನಿ’ರೆಂದು ಕೋರಿದ್ದಾರೆ. ಹಾಗಾಗಿ ಅವಧಿ ವಿಸ್ತರಿಸಬೇಕು” ಎಂದು ಮನವಿ ಮಾಡಿದ್ದಾರೆ.

ಇದನ್ನು ನೋಡಿದ್ದೀರಾ? ಚನ್ನಪಟ್ಟಣ | ‘ಯೋಗೇಶ್ವರ್‌ಗೆ ಜೈ ಎಂದ ಮತದಾರ!

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಸಾಹಿತ್ಯ ಸಮ್ಮೇಳನದಲ್ಲಿ ಪ್ರತಿನಿಧಿಯಾಗಿ ಪಾಲ್ಗೊಳ್ಳಲು ಇಚ್ಛಿಸುವವರು ‘ಆನ್‌ಲೈನ್’ ಮೂಲಕವೇ ನೋಂದಣಿ ಮಾಡಿಕೊಳ್ಳಬೇಕಿದೆ. ಎಲ್ಲರಿಗೂ ಆನ್‌ಲೈನ್‌ ಮೂಲಕ ನೋಂದಣಿ ಮಾಡಿಕೊಳ್ಳಲು ಬರುವುದಿಲ್ಲ. ಬರುವವರು ನೋಂದಣಿ ಮಾಡಿಕೊಳ್ಳಲು ಯತ್ನಿಸಿದಾಗ, ಹಲವು ತಾಂತ್ರಿಕ ಸಮಸ್ಯೆಗಳನ್ನು ಎದುರಿಸಿದ್ದಾರೆ. ಕೆಲವರು ನೋಂದಣಿ ಮಾಡಲಾಗದೆ ನಿರಾಶರಾಗಿದ್ದಾರೆ. ಆದ್ದರಿಂದ ಪ್ರತಿನಿಧಿ ನೋಂದಣಿಗೆ ಆನ್‌ಲೈನ್ ಮತ್ತು ಆಫ್‌ಲೈನ್ ಎರಡೂ ವ್ಯವಸ್ಥೆ ಮಾಡಬೇಕು” ಎಂದು ಸಲಹೆ ನೀಡಿದ್ದಾರೆ.

“ನೋಂದಣಿ ಮಾಡಲಾಗದ ಸಾಹಿತ್ಯಾಸಕ್ತರು ಮತ್ತು ಈಗಾಗಲೇ ನೋಂದಣಿ ಮಾಡಿಕೊಂಡಿರುವ ಪ್ರತಿನಿಧಿಗಳು ಸಮ್ಮೇಳನ ಕುರಿತ ಅಗತ್ಯ ಮಾಹಿತಿಗಾಗಿ ನೋಂದಣಿ ಸಮಿತಿಯವರಿಗೆ ಕರೆ ಮಾಡಿದರೆ ಯಾರೂ ಸ್ವೀಕರಿಸುವುದಿಲ್ಲವೆಂದು ತಮ್ಮ ಬಳಿ ದೂರವಾಣಿ ಮೂಲಕ ಅಲವತ್ತುಕೊಂಡಿದ್ದಾರೆ. ಆದ್ದರಿಂದ ಸಾಹಿತ್ಯ ಸಮ್ಮೇಳನದ ಪ್ರತಿನಿಧಿಗಳಿಗೆ ಅಗತ್ಯ ಮಾಹಿತಿ ಕೊಡಲು ‘ಸಹಾಯ ವಾಣಿ’ ಆರಂಭಿಸಬೇಕು” ಎಂದು ಸತೀಶ್ ಜವರೇಗೌಡ ಒತ್ತಾಯಿಸಿದ್ದಾರೆ.

ಇದನ್ನು ಓದಿದ್ದೀರಾ? ಬೆಂಗಳೂರು | ಮಾಹಿತಿ ಆಯುಕ್ತರ ಜರೂರು ನೇಮಕಕ್ಕೆ ಸಾರ್ವಜನಿಕರ ಆಗ್ರಹ

“ಪ್ರತಿನಿಧಿಗಳಾಗಿ ಭಾಗವಹಿಸುವ ನೋಂದಾಯಿತ ಸಾಹಿತ್ಯಾಸಕ್ತರಿಗೆ ‘ಬೆಲ್ಲ ಅಥವಾ ಸಕ್ಕರೆ’ಯ ಕೊಡುಗೆ ಕೊಡುವ ಬದಲು, ಮಂಡ್ಯ ಜಿಲ್ಲೆಯ ಸಾಹಿತಿಗಳ ಪರಿಚಯ, ಅವರ ಕೊಡುಗೆ, ಸಾಂಸ್ಕೃತಿಕ ಸಂಘ, ಸಂಸ್ಥೆಗಳ ಸೇವೆ, ಮಂಡ್ಯದ ಸಾಧಕ ಗಣ್ಯರು, ಪ್ರೇಕ್ಷಣೀಯ ಸ್ಥಳಗಳ ಮಾಹಿತಿಯೂ ಸೇರಿದಂತೆ ವಿವಿಧ ಕ್ಷೇತ್ರದ ಸಾಧನೆಯಗಳನ್ನು ಬಿಂಬಿಸುವ ಮತ್ತು ‘ಮಂಡ್ಯದ ಸಾಹಿತ್ಯ – ಸಾಂಸ್ಕೃತಿಕತನ’ವನ್ನು ಸಾರುವ ಕಿರುಹೊತ್ತಿಗೆ ಪ್ರಕಟಿಸಿ ಉಚಿತ ಕೊಡುಗೆಯಾಗಿ ನೀಡುವುದು ಸೂಕ್ತ” ಎಂದು ಸಲಹೆಯಿತ್ತಿದ್ದಾರೆ.

“ನೋಂದಣಿ ಉಪಸಮಿತಿ ರಚನೆಯಾದ ದಿನದಿಂದ ಈವರೆಗೆ ಎರಡು ಭಾರಿಯಷ್ಟೇ ಸಭೆ ನಡೆದಿದೆ. ಸಮಿತಿಯ ಸದಸ್ಯರಲ್ಲಿ ಹುರುಪು ಕಾಣುತ್ತಿಲ್ಲ. ಸಾಹಿತ್ಯ ಸಮ್ಮೇಳನದ ದಿನಾಂಕ ಹತ್ತಿರವಾಗುತ್ತಿರುವುದರಿಂದ, ಮತ್ತಷ್ಟು ಸಭೆಗಳು ನಡೆದು, ನೋಂದಾಯಿತ ಪ್ರತಿನಿಧಿಗಳ ಸಮಸ್ಯೆಗಳ ನಿವಾರಣೆಗೆ ಬಯಸುವ ಮಾಹಿತಿಗಳಿಗೆ ‘ತುರ್ತು ಸಹಾಯ ವಾಣಿ’ ಆರಂಭಿಸಬೇಕು” ಎಂದು ಆಗ್ರಹಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...