ಮಡಿಕೇರಿ | ಫೇಸ್ಬುಕ್ ಪರಿಚಯ; ಹಣಕ್ಕಾಗಿ ಬ್ಲಾಕ್ಮೇಲ್, ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆರೋಪ

Date:

ಫೇಸ್‌ಬುಕ್ ಮೂಲಕ ಪರಿಚಯವಾದ ಯುವತಿಯೊಬ್ಬಳು ಹಣದ ಅವಶ್ಯಕತೆ ಹೇಳಿ ಹಣ ಪಡೆದು, ನಂತರ ಯುವಕನನ್ನು ಬ್ಲ್ಯಾಕ್‌ಮೇಲ್ ಮಾಡಿ, ಮಾರಣಾಂತಿಕವಾಗಿ ಹಲ್ಲೆ ನಡೆಸಿರುವ ಘಟನೆ ಮಡಿಕೇರಿಯಲ್ಲಿ ನಡೆದಿದ್ದು, ಆರೋಪದ ಸಂಬಂಧ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮಂಡ್ಯ ಜಿಲ್ಲೆ, ಮದ್ದೂರು ಮೂಲದ ಹೆಚ್.ಪಿ. ಮಹದೇವ ನೀಡಿದ ದೂರಿನ ಅನ್ವಯ, ಮಡಿಕೇರಿಯ ರಚನಾ ಎಂಬ ಯುವತಿಯೊಂದಿಗೆ ಫೇಸ್‌ಬುಕ್‌ನಲ್ಲಿ ಪರಿಚಯವಾಗಿದ್ದು, ಹಣದ ಅಗತ್ಯವಿದೆ ಎಂದು ಹೇಳಿ ದಿನಾಂಕ-20-11-2025 ರಂದು ₹5,000 ರೂಪಾಯಿ ಹಾಗೂ ದಿನಾಂಕ-28-11-2025 ರಂದು ಮತ್ತೊಮ್ಮೆ ₹5,000 ರೂಪಾಯಿಗಳನ್ನು ಫೋನ್‌ಪೇ ಮೂಲಕ ಪಡೆದುಕೊಂಡಿದ್ದಾಳೆ. ಬಳಿಕ ಹಣ ವಾಪಸ್ ಕೇಳಿದಾಗ, ನಿನಗೆ ಬೇಕಾದ ಸುಖ ಕೊಡುತ್ತೇನೆ, ಮೈಸೂರು ಅಥವಾ ಕುಶಾಲನಗರಕ್ಕೆ ಬಾ ಎಂದು ಆಮಿಷ ಒಡ್ಡಿದ್ದಾಳೆ ಎಂದು ಆರೋಪಿಸಲಾಗಿದೆ.

ದಿನಾಂಕ-12-12-2025 ರಂದು ರಚನಾಳ ಮಾತನ್ನ ನಂಬಿ ಮಹದೇವ ಮಡಿಕೇರಿಗೆ ಬಂದಿದ್ದು, ರಾತ್ರಿ ಸುಮಾರು 10-30ರ ವೇಳೆಗೆ ನಕ್ಷತ್ರ ಸೂಪರ್ ಮಾರ್ಕೆಟ್ ಬಳಿ ಕರೆಸಿಕೊಂಡು, ನಂತರ ಮನೆಗೆ ಕರೆದುಕೊಂಡು ಹೋಗಿದ್ದಾಳೆ. ರಾತ್ರಿ 11-45ರ ಸುಮಾರಿಗೆ ರಚನಾಳ ತಾಯಿ ಮಾಲತಿ ಹಾಗೂ ದಿನೇಶ್ ಎಂಬವರು ಆಟೋದಲ್ಲಿ ಮನೆಗೆ ಬಂದು, ದಿನೇಶ್ ಹಣದ ವಿಚಾರದಲ್ಲಿ ಮಾತನಾಡುತ್ತೇನೆ ಎಂದು ಹೇಳಿ ರಚನಾ ಹಾಗೂ ಆಕೆಯ ತಾಯಿಯನ್ನು ಮನೆಯಿಂದ ಹೊರ ಕಳುಹಿಸಿದ್ದಾನೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ನಂತರ, ದಿನೇಶ್ ತನ್ನ ಸ್ನೇಹಿತರಾದ ಸುಜೀತ್ ಹಾಗೂ ದರ್ಶನ್ ಅವರನ್ನು ಕರೆಸಿಕೊಂಡು, ಮೂವರು ಸೇರಿ ದೂರುದಾರ ಮಹದೇವನ ಮೇಲೆ ಕೈ, ದೊಣ್ಣೆ ಹಾಗೂ ಕತ್ತಿಯ ಹಿಡಿಯಿಂದ ಮುಖ, ಬಾಯಿ, ಎದೆ ಭಾಗ ಮತ್ತು ಎಡ ಕಾಲಿನ ಮಂಡಿಗೆ ಹೊಡೆದು ಗಂಭೀರವಾಗಿ ಥಳಿಸಿ, ಗಾಯಗೊಳಿಸಿದ್ದಾರೆ ಎಂದು ದೂರಿನಲ್ಲಿ ಹೇಳಲಾಗಿದೆ.

ಮಹದೇವನ ಬಟ್ಟೆಗಳನ್ನು ಬಲವಂತವಾಗಿ ಬಿಚ್ಚಿಸಿ, ಬೆತ್ತಲೆಯನ್ನಾಗಿಸಿ ಮೊಬೈಲ್‌ನಲ್ಲಿ ವಿಡಿಯೋ ಮಾಡಿಕೊಂಡು, ಏರ್‌ಗನ್ ತಲೆಗೆ ಇಟ್ಟು ₹50 ಲಕ್ಷ ರೂಪಾಯಿ ಹಣ ಕೊಡದಿದ್ದರೆ ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಡುವುದಾಗಿ ಬೆದರಿಕೆ ಹಾಕಿದ್ದಾರೆ ಎನ್ನಲಾಗಿದೆ. ರಾತ್ರಿ ಪೂರ್ತಿ ಮನೆಯಲ್ಲಿ ಬಲವಂತವಾಗಿ ಇರಿಸಿಕೊಂಡು, ರಕ್ತಸಿಕ್ತ ಬಟ್ಟೆಗಳನ್ನು ಮನೆಯೊಳಗೆ ಸುಟ್ಟು ಹಾಕಿರುವ ಆರೋಪ ಉಲ್ಲೇಖಿಸಲಾಗಿದೆ.

ಈ ಸುದ್ದಿ ಓದಿದ್ದೀರಾ? ಮೈಸೂರಿಗೆ ವೇಗ, ಒತ್ತಡದ ಬೆಳವಣಿಗೆ ಬೇಡ: ಪ್ರೊ ಎಂ ಕೃಷ್ಣೆಗೌಡ

ಬೆಳಗಿನ ಜಾವ ಬಾತ್‌ರೂಮಿಗೆ ಹೋಗುವುದಾಗಿ ಹೇಳಿ ಮಹಾದೇವ ಮನೆಯಿಂದ ತಪ್ಪಿಸಿಕೊಂಡು, ಸದರಿ ಪ್ರಕರಣ ಸಂಬಂಧ ರಚನಾ, ಆಕೆಯ ತಾಯಿ ಮಾಲತಿ, ದಿನೇಶ್, ಸುಜೀತ್ ಹಾಗೂ ದರ್ಶನ್ ವಿರುದ್ಧ ಪೊಲೀಸರಿಗೆ ದೂರು ನೀಡಿದ್ದು, ಸದರಿ ದೂರಿನನ್ವಯ ಪೊಲೀಸರು ತನಿಖೆ ಕೈಗೊಂಡಿದ್ದಾರೆಂದು ತಿಳಿದುಬಂದಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...