ಬೀದರ್‌ | ಪರೀಕ್ಷೆಯಲ್ಲಿ ಸುಳ್ಳು ಮಾಹಿತಿ; ಇಬ್ಬರು ಪೊಲೀಸ್‌ ಸಿಬ್ಬಂದಿ ಅಮಾನತು

Date:

ಪೇದೆ ಹುದ್ದೆಗಳ ಭರ್ತಿಗಾಗಿ ದೇಹ ದಾರ್ಢ್ಯತೆ ಮತ್ತು ದೇಹ ಸಹಿಷ್ಣುತೆ ಪರೀಕ್ಷೆ ವೇಳೆ ಹಿರಿಯ ಅಧಿಕಾರಿಗಳಿಗೆ ಸುಳ್ಳು ಮಾಹಿತಿ ನೀಡಿ ದುರ್ನಡತೆ ತೋರಿದ ಹಿನ್ನಲೆ ಪೊಲೀಸ್ ಇಲಾಖೆಯ ಇಬ್ಬರು ಪೇದೆಗಳನ್ನು ಸೇವೆಯಿಂದ ಅಮಾನತುಗೊಳಿಸಲಾಗಿದೆ ಎಂದು ಬೀದರ್ ಎಸ್‌ಪಿ ಚನ್ನಬಸವಣ್ಣ ಲಂಗೋಟಿ ತಿಳಿಸಿದ್ದಾರೆ.

ಪೊಲೀಸ್ ಇಲಾಖೆಯಲ್ಲಿ ನಾಗರೀಕ ಪೊಲೀಸ್ ಪೇದೆ ಹುದ್ದೆಗಳ ಭರ್ತಿಗಾಗಿ ಲಿಖಿತ ಪರೀಕ್ಷೆ ಪಾಸಾದ ಅಭ್ಯರ್ಥಿಗಳಿಗೆ ‌2024ರ ಮಾರ್ಚ್ 1ರಂದು ಬೀದರ್ ಜಿಲ್ಲಾ ಪೊಲೀಸ್ ಕಚೇರಿಯ ಕವಾಯತು ಮೈದಾನದಲ್ಲಿ ದೇಹ ದಾರ್ಢ್ಯತೆ ಮತ್ತು ದೇಹ ಸಹಿಷ್ಣುತೆ (ಪಿ.ಎಸ್.ಟಿ. & ಪಿ.ಇ.ಟಿ.) ಪರೀಕ್ಷೆಗಳನ್ನು ನಡೆಸಲಾಯಿತು.

ಸದರಿ ಪರೀಕ್ಷೆಯಲ್ಲಿ ಅಭ್ಯರ್ಥಿಯಾಗಿದ್ದ ಪೇದೆ ಐವಾನ್ 1600 ಮೀ. ಓಟವನ್ನು 6 ನಿಮಿಷ 30 ಸೆಕೆಂಡ್‌ಗಳಲ್ಲಿ ಪೂರ್ಣಗೊಳಿಸಬೇಕಾಗಿತ್ತು. ಇವರ ಓಟದ ಸಮಯ ನಿರೀಕ್ಷೆಗಾಗಿ ಜನವಾಡ ಪೊಲೀಸ್‌ ಠಾಣೆಯ ಸಿಪಿಸಿ ಶಫಿಕ್ ಅವರನ್ನು ನೇಮಿಸಲಾಗಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪಿ.ಇ.ಟಿ. ಪರೀಕ್ಷೆಗೆ ಹಾಜರಾದ ಅಭ್ಯರ್ಥಿ ಐವಾನ್ 1600 ಮೀಟರ್ ಓಟ ಪೂರ್ಣಗೊಳಿಸಲು ಕವಾಯತು ಮೈದಾನಕ್ಕೆ ನಾಲ್ಕು ಸುತ್ತು ಹಾಕಿ ಪೂರ್ಣಗೊಳಿಸಬೇಕಾಗಿರುತ್ತದೆ. ಆದರೆ, ಅಭ್ಯರ್ಥಿ ಐವಾನ್ ಕವಾಯತು ಮೈದಾನದ ಸುತ್ತಲು ಕೇವಲ ಮೂರು ಸುತ್ತುಗಳು ಮಾತ್ರ ಪೂರ್ಣಗೊಳಿಸಿ ನಾಲ್ಕು ಸುತ್ತುಗಳನ್ನು ಪೂರ್ಣಗೊಳಿಸಿದ್ದೇನೆ ಎಂದು ಅಧಿಕಾರಿಗಳಿಗೆ ಸುಳ್ಳು ಮಾಹಿತಿ ನೀಡಿ ದುರ್ನಡತೆ ತೋರಿದ್ದಾನೆ.

ಅಭ್ಯರ್ಥಿಯ ಓಟದ ಸಮಯ ನಿರೀಕ್ಷೆಗಾಗಿ ನಿಗದಿ ಪಡಿಸಿದ ಪೇದೆ ಶಫಿಕ್ ಅವರು ಐವಾನ್ ಅಭ್ಯರ್ಥಿಯು 1600 ಮೀಟರ್ ಓಟ ಪೂರ್ಣಗೊಳಿಸಿದ್ದಾನೆ ಎಂದು ಹಿರಿಯ ಅಧಿಕಾರಿಗಳಿಗೆ ಸುಳ್ಳು ಮಾಹಿತಿ ನೀಡಿ ಕರ್ತವ್ಯ ನಿರ್ವಹಣೆಯಲ್ಲಿ ದುರ್ನಡತೆ, ಬೇಜವಾಬ್ದಾರಿತನ ತೋರಿದ್ದಾನೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಸಿದ್ದರಾಮಯ್ಯನವರ ʼಹಸಿವು ಮುಕ್ತ ಕರ್ನಾಟಕʼಕ್ಕೆ ಬೇಕಿದೆ ಅಧಿಕಾರಿಗಳ ಬದ್ಧತೆ

ಡಿಎಸ್ಪಿ ಡಿಎಆರ್ ಅವರು ಸಲ್ಲಿಸಿರುವ ವರದಿ ಹಾಗೂ ಸಿಸಿಟಿವಿ ಮತ್ತು ವಿಡಿಯೋಗ್ರಾಫಿ ಮೂಲಕ ಮಾಡಿರುವ ರಿಕಾರ್ಡಿಂಗ್ ಪರಿಶೀಲಿಸಿದಾಗ ಇಲಾಖೆಯಲ್ಲಿರುವ ಇಬ್ಬರು ಪೊಲೀಸ್ ಸಿಬ್ಬಂದಿ ಐವಾನ್ ಮತ್ತು ಶಫಿಕ್ ಅವರು ಹಿರಿಯ ಅಧಿಕಾರಿಗಳಿಗೆ ಸುಳ್ಳು ಮಾಹಿತಿ ನೀಡಿ ಇಲಾಖೆಯಲ್ಲಿ ದುರ್ನಡತೆ ತೋರಿಸಿದ್ದಕ್ಕೆ ಇವರಿಗೆ ಸೇವೆಯಿಂದ ಅಮಾನತ್ತುಗೊಳಿಸಲಾಗಿದೆ ಎಂದು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಚನ್ನಬಸವಣ್ಣ ಲಂಗೋಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೈಸೂರು | ನಂಜನಗೂಡಿನಲ್ಲಿ ಮರಗಳ ಹನನ; ಸಂಘಟನೆಗಳಿಂದ ಪ್ರತಿಭಟನೆ

ದಿನಾಂಕ-07-03-2026ರಂದು ಮೈಸೂರು ಜಿಲ್ಲೆ, ನಂಜನಗೂಡಿನ ಹೆಜ್ಜಿಗೆ ಗ್ರಾಮದ ಬಳಿ ಕಪಿಲಾ ನದಿ...

ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬ್ಯಾಲೆಟ್ ಪೇಪರ್ ಬಳಕೆ; ವಿಧಾನಸಭೆಯಲ್ಲಿ ಮಸೂದೆ ಅಂಗೀಕಾರ

ರಾಜ್ಯದ ಸ್ಥಳೀಯ ಸಂಸ್ಥೆಗಳ ಚುನಾವಣಾ ಪ್ರಕ್ರಿಯೆಯಲ್ಲಿ ಬದಲಾವಣೆ ತರಲು ರಾಜ್ಯ ಸರ್ಕಾರ...

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...