ಅಧಿಕಾರದ ದರ್ಪ, ಕುಟುಂಬ ರಾಜಕಾರಣವೇ ಜೆಡಿಎಸ್‌ನ ಹೀನಾಯ ಸ್ಥಿತಿಗೆ ಕಾರಣ: ಕೆ. ಶೇಷಾದ್ರಿ

Date:

  • ‘ಜೆಡಿಎಸ್‌ನ ಪೋಸ್ಟರ್‌ಗಳಲ್ಲಿ ಮತ ತರುವ ಒಂದೇ ಒಂದು ಮುಖಗಳಿಲ್ಲ’
  • ‘ಸೋಲಿನ ಹತಾಶೆಯಿಂದ ಪುಂಖಾನುಪುಂಖವಾಗಿ ಅಪಪ್ರಚಾರ ಮಾಡುತ್ತಿದ್ದಾರೆ’

ಕುಮಾರಸ್ವಾಮಿ ಅವರು ಹೇಳುವಂತೆ ಗಿಫ್ಟ್ ಕಾರ್ಡ್‌ಗಾಗಿ ಮತ ಹಾಕುವ ಮುಟ್ಟಾಳರು ಯಾರೂ ಇಲ್ಲ. ಅಧಿಕಾರದಲ್ಲಿದ್ದಾಗ ತೋರಿದ ದರ್ಪ ಮತ್ತು ಕುಟುಂಬ ರಾಜಕಾರಣವೇ ಅವರ ಇಂದಿನ ಪರಿಸ್ಥಿತಿಗೆ ಕಾರಣ ಎಂದು ರಾಮನಗರ ನಗರಸಭೆ ಮಾಜಿ ಅಧ್ಯಕ್ಷ ಮತ್ತು ಹಾಲಿ ಸದಸ್ಯ ಕೆ. ಶೇಷಾದ್ರಿ ಶಶಿ ಟೀಕಿಸಿದರು.

ರಾಮನಗರದ ಕಾಂಗ್ರೆಸ್‌ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿ, “ಕುಮಾರಸ್ವಾಮಿ ಅವರನ್ನು ಗೆಲ್ಲಿಸಿದರೂ, ಸೋಲಿಸಿದರೂ ಜನರನ್ನು ಅಯೋಗ್ಯರು ಎನ್ನುವುದು ಅವರ ಜಾಯಮಾನ. ಗೆದ್ದಾಗ ಜನ ಅವರ ಪಾಲಿಗೆ ದೇವರಾಗಿದ್ದರು. ಸೋತಾಗ ಗಿಫ್ಟ್ ಕಾರ್ಡ್ ಪಡೆದು ಮತ ಹಾಕಿದರು” ಎಂದು ವಾಗ್ದಾಳಿ ನಡೆಸಿದರು.

“ಜೆಡಿಎಸ್‌ನ ಪೋಸ್ಟರ್‌ಗಳಲ್ಲಿ ಮತ ತರುವ ಒಂದೇ ಒಂದು ಮುಖಗಳಿಲ್ಲ. ಕುಟುಂಬದ ಎಚ್.ಡಿ. ರೇವಣ್ಣ, ಅನಿತಾ ಕುಮಾರಸ್ವಾಮಿ, ಭವಾನಿ ರೇವಣ್ಣ, ಪ್ರಜ್ಜಲ್, ನಿಖಿಲ್ ಹಾಗೂ ಹೆಸರಿಲ್ಲದ ಒಂದೆರಡು ಮುಖಗಳನ್ನು ಬಿಟ್ಟರೆ ಬೇರಾರು ಇಲ್ಲ. ಅಧಿಕಾರದ ದರ್ಪ ಮತ್ತು ಕುಟುಂಬ ರಾಜಕಾರಣವೇ ಜೆಡಿಎಸ್ ಹೀನಾಯ ಸ್ಥಿತಿಗೆ ಕಾರಣ” ಎಂದು ಕುಟುಕಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಕರ್ನಾಟಕದ ಮಾದರಿಯಿಂದ ಜನರ ಬದುಕು ಸಂಪನ್ನವಾಗಲಿ

“ಸೋಲಿನಿಂದ ಹತಾಶರಾಗಿರುವ ಅವರು, ಗೆದ್ದವರ ವಿರುದ್ಧ ಪುಂಖಾನುಪುಂಖವಾಗಿ ಅಪಪ್ರಚಾರ ಮಾಡುತ್ತಿದ್ದಾರೆ. ತಾವು ಸತ್ಯ ಹರಿಶ್ಚಂದ್ರ ಅಂದುಕೊಂಡಿದ್ದಾರೆ. ಅವರು ಮುಖ್ಯಮಂತ್ರಿಯಾಗಿದ್ದಾಗ ನಡೆಯುತ್ತಿದ್ದ ವರ್ಗಾವಣೆ ದಂಧೆ ಬಗ್ಗೆ ಎಲ್ಲರಿಗೂ ಗೊತ್ತಿದೆ. ಹೊಸ ಸರ್ಕಾರ ಅಧಿಕಾರಕ್ಕೆ ಬಂದಾಗ ವರ್ಗಾವಣೆ ಸಹಜ ಪ್ರಕ್ರಿಯೆ ಎಂಬ ಸಾಮಾನ್ಯ ಜ್ಞಾನವೂ ಇವರಿಗಿಲ್ಲ. ಆದರೂ, ಸುಳ್ಳು ಆರೋಪ ಮಾಡುತ್ತಿದ್ದಾರೆ’ ಎಂದು ಹರಿಹಾಯ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...