ಬಳ್ಳಾರಿ ಜಿಲ್ಲಾಡಳಿತದಿಂದ ನಿರ್ಗಮಿತ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾಗೆ ಆತ್ಮೀಯ ಬೀಳ್ಕೊಡುಗೆ

Date:

ಬಳ್ಳಾರಿ ಜಿಲ್ಲೆಯ ಜಿಲ್ಲಾಧಿಕಾರಿಯಾಗಿ 3 ವರ್ಷ ಸೇವೆ ಸಲ್ಲಿಸಿ ಕಾರ್ಯ ನಿರ್ವಹಿಸುತ್ತಿರುವ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರಿಗೆ ಜಿಲ್ಲಾಡಳಿತದಿಂದ ನಗರದ ವಾಲ್ಮೀಕಿ ಭವನದಲ್ಲಿ ಬುಧವಾರ ಸಂಜೆ ಆತ್ಮೀಯವಾಗಿ ಬಿಳ್ಕೊಡಲಾಯಿತು.‌ ಜತೆಗೆ ನೂತನ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್ ಕೆ ಅವರಿಗೆ ಸ್ವಾಗತ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

“ನಿರಂತರ ಪ್ರಯತ್ನದಿಂದ ಗೆಲ್ಲಬಹುದು. ಸರ್ಕಾರ ನನಗೆ ನೀಡಿದ್ದ ಅವಕಾಶದಲ್ಲಿ ಬಳ್ಳಾರಿಯಲ್ಲಿ ಒಂದಷ್ಟು ಅಭಿವೃದ್ಧಿ ಕೆಲಸ ಮಾಡಿದ್ದೇನೆ. ಜಿಲ್ಲಾಧಿಕಾರಿ ಹುದ್ದೆ ಸುಲಭದ ಕೆಲಸವಲ್ಲ, ನಿತ್ಯವೂ ಸಾಕಷ್ಟು ಸವಾಲುಗಳನ್ನು ಎದುರಿಸಬೇಕಾಗುತ್ತದೆ. ಆ ಎಲ್ಲ ಸವಾಲುಗಳನ್ನು ನಿಭಾಯಿಸಿರುವೆ. ಹೀಗೆಯೇ ನಿರಂತರ ಪ್ರಯತ್ನದಿಂದ ಗೆಲುವು ಸಾಧಿಸಬಹುದು” ಎಂದು‌ ಪ್ರಶಾಂತ್ ಕುಮಾರ ಮಿಶ್ರಾ ಕಿವಿಮಾತು ಹೇಳಿದರು.

“ಕಳೆದ ಎರಡು ವರ್ಷದ ಹಿಂದೆ ಬಳ್ಳಾರಿ ಜಿಲ್ಲೆಗೆ ಬಂದಾಗ ನೂರೆಂಟು ಸವಾಲುಗಳನ್ನು ಎದುರಿಸಲು ಸಿದ್ದನಾಗಿ ಬಂದಿದ್ದೆ. ಎಲ್ಲವನ್ನೂ ಸಾಧ್ಯವಾದ ಮಟ್ಟಿಗೆ ನಿಭಾಯಿಸಿರುವೆ. ಜಿಲ್ಲೆಯಲ್ಲಿ ಕೈಗೊಂಡ ಲೋಕಸಭೆ ಚುನಾವಣೆ ಹೊಸ ಅನುಭವವನ್ನು ನೀಡಿದೆ. ಜಿಲ್ಲಾಡಳಿತದ ಎಲ್ಲ ಅಧಿಕಾರಿ, ಸಿಬ್ಬಂದಿ ವರ್ಗದ ಸಹಾಯ, ಸಹಕಾರದಿಂದ ಜಿಲ್ಲೆಯ ಅಭಿವೃದ್ಧಿಗೆ ಕೆಲಸ ಮಾಡಿದ್ದೇನೆ. ಕೆಲವು ಸಂದರ್ಭಗಳಲ್ಲಿ ಕೆಲ ನಿರ್ಧಾರಗಳನ್ನು ಮಾಡುವಾಗ ಗೊಂದಲಕ್ಕೆ ಸಿಲುಕುತ್ತೇವೆ. ಅದೆಲ್ಲವೂ ನಿಭಾಯಿಸುವುದು ಅಷ್ಟು ಸುಲಭದ ಮಾತಲ್ಲ” ಎಂದು ಅಭಿಪ್ರಾಯಪಟ್ಟರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ನೂತನ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್ ಕೆ ಮಾತನಾಡಿ, “ಬಳ್ಳಾರಿ ಜಿಲ್ಲೆಯು ಆಡಳಿತಕ್ಕೆ ಹೆಸರುವಾಸಿ. ಹಾಗೆಯೇ ಅನೇಕ ಸವಾಲುಗಳಿಂದ ಕೂಡಿದ ಜಿಲ್ಲೆಯಾಗಿದ್ದು, ಅಭಿವೃದ್ಧಿ ಕಾರ್ಯಗಳ ನಿರೀಕ್ಷೆಯಲ್ಲಿದೆ. ಪ್ರಶಾಂತ್ ಕುಮಾರ್ ಮಿಶ್ರಾ ಅವರ ಕಾಲಾವಧಿಯಲ್ಲಿ ಜಿಲ್ಲೆಯು ಕಂದಾಯ ಆಡಳಿತ ಕಾರ್ಯದಲ್ಲಿ ರಾಜ್ಯದಲ್ಲಿಯೇ ಪ್ರಥಮ ಸ್ಥಾನ ಪಡೆದಿತ್ತು. ಜಿಲ್ಲೆಯಲ್ಲಿ ಅವರು ಮಾಡಿರುವ ಅಭಿವೃದ್ದಿ ಹಾಗೂ ಪ್ರಗತಿಪರ ಕೆಲಸಗಳು ಮುಂದುವರೆಯಲಿವೆ. ಅಧಿಕಾರಿ ವರ್ಗ ನನಗೂ ಸಹಕಾರ ನೀಡಬೇಕು” ಎಂದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಶೋಭಾರಾಣಿ ವಿ ಜೆ ಮಾತನಾಡಿ, “ಜಿಲ್ಲಾಧಿಕಾರಿಯಾಗಿದ್ದ ಸಂದರ್ಭದಲ್ಲಿ ಪ್ರಶಾಂತ್ ಕುಮಾರ್ ಮಿಶ್ರಾ ಅವರೊಂದಿಗಿನ ಬಾಂಧವ್ಯ, ಅವರ ಜತೆಯಲ್ಲಿ ಕರ್ತವ್ಯ ನಿರ್ವಹಿಸಿರುವುದಕ್ಕೆ ಹೆಮ್ಮೆ ಇದೆ” ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಈ ಸುದ್ದಿ ಓದಿದ್ದೀರಾ? ಬಾಗೇಪಲ್ಲಿ | ಮಹಾನಾಯಕ ಬಿ ಆರ್ ಅಂಬೇಡ್ಕರ್‌ ಸೇನೆ ಪದಾಧಿಕಾರಿಗಳ ಆಯ್ಕೆ

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮಹಮ್ಮದ್ ಹ್ಯಾರೀಸ್ ಸುಮೈರ್ ಮಾತನಾಡಿ, “ಪ್ರಶಾಂತ್ ಕುಮಾರ್ ಮಿಶ್ರಾ ಅವರಿಂದ ಹಲವು ಹೊಸ ವಿಚಾರಗಳನ್ನು ಕಲಿಯಲು ಅವಕಾಶ ದೊರೆಯಿತು. ಅವರೊಬ್ಬ ಶಿಸ್ತಿನ ಸಿಪಾಯಿಯಂತಿದ್ದರು” ಎಂದು ಅಭಿಮತ ವ್ಯಕ್ತಪಡಿಸಿದರು.

ಬಳ್ಳಾರಿ ವಲಯ ಉಪ ಅರಣ್ಯ ಸಂರಕ್ಷಣಾಧಿಕಾರಿ ಡಾ. ಕೆ ಎನ್ ಬಸವರಾಜ, ಅಪರ ಜಿಲ್ಲಾಧಿಕಾರಿ ಮಹಮ್ಮದ್ ಎನ್ ಝುಬೇರ್, ಸಹಾಯಕ ಆಯುಕ್ತ ಪಿ ಪ್ರಮೋದ್, ಜಿಲ್ಲಾ ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು, ಸಿಬ್ಬಂದಿ ವರ್ಗ ಮತ್ತು 5 ತಾಲೂಕುಗಳ ತಹಶೀಲ್ದಾರರು ಸೇರಿದಂತೆ ಬಹುತೇಕರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...