ಬೀದರ್‌ | ಕಾಡುಪ್ರಾಣಿಗಳ ಹಾವಳಿ ತಡೆಗೆ ರೈತ ಸಂಘ ಒತ್ತಾಯ

Date:

ಕಾಡು ಹಂದಿ, ಜಿಂಕೆ ಸೇರಿದಂತೆ ಇತರೆ ವನ್ಯಜೀವಿಗಳ ಹಾವಳಿಯಿಂದ ರೈತರ ಬೆಳೆ ಸಂಪೂರ್ಣ ಹಾಳಾಗುತ್ತಿದ್ದು, ಕಾಡುಪ್ರಾಣಿಗಳ ರಕ್ಷಣೆಗೆ ಇಲಾಖೆ ಮುಂದಾಗಬೇಕು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ತಾಲೂಕು ಘಟಕ ಒತ್ತಾಯಿಸಿದೆ.

ಬೀದರ್‌ ಜಿಲ್ಲೆ ಔರಾದ ತಾಲೂಕಿನ ಸಂತಪೂರ ಪಟ್ಟಣದ ಬಸವೇಶ್ವರ ವೃತ್ತದಿಂದ ಪ್ರಾದೇಶಿಕ ಅರಣ್ಯ ವಲಯ ಅಧಿಕಾರಿ ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿ ಅರಣ್ಯಾಧಿಕಾರಿ ಅಂಕುಶ ಅವರಿಗೆ ಹಕ್ಕೊತ್ತಾಯ ಪತ್ರ ಸಲ್ಲಿಸಿದರು.

ಔರಾದ ತಾಲೂಕಿನಾದ್ಯಂತ ಪ್ರಸಕ್ತ ಸಾಲಿನಲ್ಲಿ ರೈತರು ತಮ್ಮ ಜಮೀನುಗಳಲ್ಲಿ ಬಿತ್ತನೆ ಕಾರ್ಯ ಪೂರ್ಣಗೊಳಿಸಿದ್ದು, ಉತ್ತಮ ಫಸಲು ಬೆಳೆಯುವ ನಿರೀಕ್ಷೆಯಲ್ಲಿ ಮಳೆಗಾಗಿ ಕಾಯುತ್ತಿದ್ದಾರೆ. ಮಳೆ ಅಭಾವದಿಂದ ರೈತರು ಸಂಕಷ್ಟದಲ್ಲಿರುವ ವೇಳೆ ಕಾಡುಹಂದಿ, ಜಿಂಕೆ, ಮಂಗ ಸೇರಿದಂತೆ ಇನ್ನಿತರ ಕಾಡುಪ್ರಾಣಿಗಳ ಹಿಂಡು ರೈತರ ಹೊಲಗಳಿಗೆ ನುಗ್ಗಿ ಸಂಪೂರ್ಣ ಬೆಳೆ ನಾಶಪಡಿಸುತ್ತಿವೆ. ಕೃಷಿಯನ್ನೇ ನಂಬಿಕೊಂಡು ಬದುಕುತ್ತಿರುವ ರೈತರು ವನ್ಯಜೀವಿಗಳ ಹಾವಳಿಯಿಂದ ತತ್ತರಿಸಿದ್ದಾರೆ” ಎಂದು ರೈತ‌ ಸಂಘದ ಜಿಲ್ಲಾ ಕಾರ್ಯದರ್ಶಿ ಶ್ರೀಮಂತ ಬಿರಾದಾರ ಅಸಮಾಧಾನ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಸುಮಾರು ವರ್ಷಗಳಿಂದ ತಮ್ಮ ಇಲಾಖೆಗೆ ರೈತರು ಮೌಖಿಕ ಮತ್ತು ಲಿಖಿತವಾಗಿ ಮನವಿ ಸಲ್ಲಿಸಿದರೂ, ಯಾವುದೇ ಪ್ರಯೋಜನವಾಗಿಲ್ಲ. ವನ್ಯಜೀವಿಗಳಿಂದ ಬೆಳೆ ರಕ್ಷಿಸಿಕೊಳ್ಳಲು ಪರಿಹಾರ ಸೂಚಿಸಬೇಕು. ಪ್ರಾಣಿಗಳಿಂದ ರೈತರಿಗೆ ಅನಾನೂಕೂಲವಾಗದಂತೆ ತಡೆ ಹಿಡಿಯಬೇಕು. ವಾರದೊಳಗೆ ಕಾಡು ಪ್ರಾಣಿಗಳ ಹಾವಳಿ ನಿಯಂತ್ರಣ ಮಾಡದಿದ್ದರೆ ಮುಂದೆ ಆಗುವ ಅನಾಹುತಕ್ಕೆ ಖುದ್ದಾಗಿ ತಾವೇ ಜವಾಬ್ದಾರರು” ಎಂದು ಪ್ರತಿಭಟನಾ ರೈತರು ಎಚ್ಚರಿಸಿದರು.

ಈ ಸುದ್ದಿ ಓದಿದ್ದೀರಾ? ರಾಯಚೂರು | ಬರಪೀಡಿತ ಪ್ರದೇಶ ಘೋಷಣೆಗೆ ಒತ್ತಾಯ

ರೈತ ಸಂಘದ ಕಾರ್ಯಾಧ್ಯಕ್ಷ ಶ್ರೀಮಂತ ಬಿರಾದಾರ, ಔರಾದ ತಾಲೂಕು ಅಧ್ಯಕ್ಷ ಪ್ರಕಾಶ್ ಬಾವಗೆ ಸೇರಿದಂತೆ ಪ್ರಮುಖಋುಗಳಾದ ಬಸವರಾಜ ಘೂಳೆ, ಪ್ರಭುದಾಸ, ವಿಶ್ವನಾಥ್ ಧರಣೆ, ಝರಣೆಪ್ಪ ದೇಶಮುಖ, ಕೃಷ್ಣಾರೆಡ್ಡಿ, ಹಣಮಂತರಾವ ಬಿರಾದರ, ಪ್ರಕಾಶ್ ಪಾಟೀಲ್, ಮಲ್ಲಿಕಾರ್ಜುನ ಕೋರೆ, ಗಣಪತಿ ದೇಶಪಾಂಡೆ, ಬಸವರಾಜ ಪಾಟೀಲ ಸೇರಿದಂತೆ ಇತರರು ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...