ಮೈಸೂರು ಜಿಲ್ಲೆ, ಪಿರಿಯಾಪಟ್ಟಣ ತಾಲ್ಲೂಕಿನ ಬಿಳಗುಂದ ಗ್ರಾಮದ ಶ್ರೀನಿವಾಸ್ (47) ಎಂಬುವರು ಸಾಲಭಾದೆಯಿಂದ ಅಸಹಜ ರೀತಿಯಲ್ಲಿ ಸಾವನ್ನಪ್ಪಿದ್ದಾರೆ.
ಮೃತ ರೈತ ಕುಟುಂಬದವರ ಹೆಸರಿನಲ್ಲಿದ್ದ ಭೂಮಿಯಲ್ಲಿ ಸಹೋದರ ತಿಮ್ಮೇಗೌಡರ ಜೊತೆ ಸೇರಿ ತಂಬಾಕು ಮತ್ತು ಶುಂಠಿ ಬೆಳೆ ಬೆಳೆಯುತ್ತಿದ್ದರು. ವ್ಯವಸಾಯದ ಉದ್ದೇಶದಿಂದ ಮೃತ ರೈತ ಶ್ರೀನಿವಾಸ್ ಖಾಸಗಿ ಫೈನಾನ್ಸ್ ಹಾಗೂ ಮಹಿಳಾ ಸ್ವಸಹಾಯ ಸಂಘ ಸೇರಿದಂತೆ ಕೈಸಾಲವಾಗಿ ಸರಿಸುಮಾರು ₹10 ಲಕ್ಷ ರೂಪಾಯಿ ಸಾಲ ಮಾಡಿದ್ದರು ಎನ್ನಲಾಗಿದೆ.
ಈ ಸುದ್ದಿ ಓದಿದ್ದೀರಾ? ಒಳಮೀಸಲಾತಿಗೆ ಒತ್ತಾಯಿಸಿ ಡಿ.6ರಂದು ಸಿದ್ದರಾಮನಹುಂಡಿಯಿಂದ ಮೈಸೂರಿಗೆ ಕಾಲ್ನಡಿಗೆ ಜಾಥಾ: ಬಸವರಾಜ ಕೌತಾಳ್
ಕಳೆದ ವರ್ಷ ಅತಿಯಾದ ಮಳೆಯಿಂದ ಬೆಳೆ ಸರಿಯಾಗಿ ಬಾರದೆ ವ್ಯವಸಾಯದ ಉದ್ದೇಶದಿಂದ ಮಾಡಿದ ಸಾಲ ಮರುಪಾವತಿ ಮಾಡಲು ಸಾಧ್ಯವಾಗಿರಲಿಲ್ಲ. ಈ ಕೊರಗಿನಲ್ಲಿದ್ದ ರೈತ ಶ್ರೀನಿವಾಸ್ ಮನನೊಂದು ಬುಧವಾರ ಬೆಳಗ್ಗೆ ಜಮೀನಿನ ಬಳಿ ಕ್ರಿಮಿನಾಶಕ ಸೇವಿಸಿ ಒದ್ದಾಡುತಿದ್ದನ್ನು ಗಮನಿಸಿದ ಸ್ಥಳೀಯರು, ಪಿರಿಯಾಪಟ್ಟಣ ಸರ್ಕಾರಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ಕೊಂಡೋಯ್ದಿದ್ದಾರೆ. ವೈದ್ಯರು ಪರೀಕ್ಷಿಸಿ ಶ್ರೀನಿವಾಸ್ ಮೃತಪಟ್ಟಿರುವುದನ್ನು ಖಚಿತಪಡಿಸಿದ್ದಾರೆ. ಮೃತರ ಪತ್ನಿ ಪ್ರತಿಮಾ ಅವರು ಘಟನೆಗೆ ಸಂಬಂಧಿಸಿದಂತೆ ಬೆಟ್ಟದಪುರ ಪೊಲೀಸ್ ಠಾಣೆಯಲ್ಲಿ ದೂರುನೀಡಿದ್ದು, ದೂರಿನನ್ವಯ ಬೆಟ್ಟದಪುರ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಸ್ಥಳ ಮಹಜರು ನಡೆಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.
ಈ ವಿಡಿಯೋ ವೀಕ್ಷಿಸಿ :https://youtu.be/NbzTpJti_6Y?si=tQPn_gWY2xwL_b5c





