ಚಿಕ್ಕಬಳ್ಳಾಪುರ | ಪ್ರಧಾನಿ ಮೋದಿ ನಾಟಕವಾಡುವುದರಲ್ಲಿ ನಿಸ್ಸೀಮರು : ರೈತ ಮುಖಂಡ ಸಿ ವಿ ಲೋಕೇಶ್ ಗೌಡ

Date:

“ಪ್ರಧಾನಿ ನರೇಂದ್ರ ಮೋದಿ ನಾಟಕ ಆಡುವುದರಲ್ಲಿ ನಿಸ್ಸೀಮರು. ಮಾಧ್ಯಮಗಳ ಮೂಲಕ ಸುಳ್ಳು ಪ್ರಚಾರ ಮಾಡುವುದರಲ್ಲೂ ಬಿಜೆಪಿಗರು ಎತ್ತಿದ ಕೈ” ಎಂದು ರಾಜ್ಯ ರೈತ ಸಂಘಟನೆಗಳ ಒಕ್ಕೂಟದ ರಾಜ್ಯ ಸಂಚಾಲಕ ಸಿ ವಿ ಲೋಕೇಶ್ ಗೌಡ ವಾಗ್ದಾಳಿ ನಡೆಸಿದರು.

ಚಿಕ್ಕಬಳ್ಳಾಪುರ ನಗರದಲ್ಲಿ ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, “ಕೇಂದ್ರ ಸರಕಾರ ಕಿವುಡುತನ ಪ್ರದರ್ಶನ ಮಾಡುತ್ತಿದೆ. ಲೋಕಸಭೆ ಚುನಾವಣೆಯ ಸಂದರ್ಭದಲ್ಲಿ ರೈತರ ಬೇಡಿಕೆಗಳನ್ನು ಈಡೇರಿಸುವ ಭರವಸೆ ನೀಡಿ, ರೈತರ ಹೋರಾಟ ಹಿಂಪಡೆಯುವಂತೆ ಮನವಿ ಮಾಡಿದ್ದರು. ಆನಂತರ ಯಾವುದೇ ಭರವಸೆಗಳನ್ನು ಈಡೇರಿಸಲಿಲ್ಲ. ಈ ರೀತಿ ರೈತರನ್ನ ನಂಬಿಸಿ, ನಂಬಿಕೆ ದ್ರೋಹ ಬಗೆದಿದ್ದಾರೆ” ಎಂದು ಕೇಂದ್ರದ ವಿರುದ್ಧ ಕಿಡಿಕಾರಿದರು.

“ದೆಹಲಿಯಲ್ಲಿ ನಡೆದ ರೈತರ ಹೋರಾಟದಲ್ಲಿ ಹಲವು ಮಂದಿ ಸಾವನ್ನಪ್ಪಿದ್ದರೆ, ಸಾಕಷ್ಟು ಮಂದಿ ಗಾಯಗೊಂಡಿದ್ದಾರೆ. ಕೆಲವರು ಕಣ್ಣು ಕಳೆದುಕೊಂಡರು. ಹೀಗೆ ಪೆಟ್ಟು ತಿಂದು ಬೀದಿಗಿಳಿದ ರೈತರಿಗೆ ಕೇಂದ್ರ ಸರಕಾರ ಅನ್ಯಾಯ ಮಾಡಿದೆ. ಈ ಬಾರಿ ದೇಶದ ಸುಮಾರು 90 ಕ್ಷೇತ್ರಗಳಲ್ಲಿ ಬಿಜೆಪಿ ಸೋಲಿಗೆ ರೈತ ಸಂಘಟನೆಗಳು ಪ್ರಮುಖ ಕಾರಣ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಎಂ.ಎಸ್.ಪಿ ಜಾರಿಗೆ ತಂದಿದ್ದೇವೆ ಎಂದು ಹೇಳುತ್ತಾರೆ. ಆದರೆ ಯಾವ ರೀತಿ ಜಾರಿಗೆ ಬಂದಿದೆ ಎಂದು ಪ್ರಧಾನಿ ಮೋದಿ ವಿವರಣೆ ನೀಡಲಿ. ಕಾರ್ಪೊರೇಟ್ ಕಂಪೆನಿಗಳಿಗೆ ಅನುಕೂಲವಾಗುವ ನಿಟ್ಟಿನಲ್ಲಿ ವಿಶ್ವ ವ್ಯಾಪಾರ ಒಪ್ಪಂದಕ್ಕೆ ಕೇಂದ್ರ ಸರಕಾರ ಮುಂದಾಗಿದೆ. ಈ ಒಪ್ಪಂದವನ್ನು ಕೈಬಿಡಬೇಕು” ಎಂದು ಸಿ.ವಿ.ಲೋಕೇಶ್ ಗೌಡ ಆಗ್ರಹಿಸಿದರು.

ಮೊಸಳೆ ಕಣ್ಣೀರಿನ ಪ್ರಣಾಳಿಕೆ

ರೈತ ವಿರೋಧಿ ಕಾಯ್ದೆಗಳನ್ನು ಹಿಂಪಡೆಯುವ ನಿಟ್ಟಿನಲ್ಲಿ ರೈತರ ಪರ ಧ್ವನಿ ಎತ್ತಲು ಆಯಾ ಭಾಗದ ಸಂಸದರಿಗೆ ಮನವಿ ಮಾಡಲಾಗಿದೆ. ಕೇಂದ್ರ ಸರಕಾರ ತಮ್ಮ ಪ್ರಣಾಳಿಕೆಯಲ್ಲಿ ಹಾಕಿರುವ ಮೊಸಳೆ ಕಣ್ಣೀರಿನ ಭರವಸೆಗಳನ್ನು ಈಡೇರಿಸಬೇಕು. ಇಲ್ಲವಾದಲ್ಲಿ ಉಗ್ರ ಹೋರಾಟ ಖಂಡಿತ ಎಂದು ಎಚ್ಚರಿಕೆ ನೀಡಿದರು.

ಕೃಷಿ ಕ್ಷೇತ್ರ, ರೈತ ಸಂಘಟನೆಗಳು, ಹೋರಾಟಗಳು ದುರ್ಬಲವಾಗುತ್ತಿರುವ ಸಂದರ್ಭದಲ್ಲಿ ರೈತ ಸಂಘಟನೆಗಳು ಸಮಾನ ಸೂತ್ರದ ನೀತಿಯನ್ನು ಅನುಸರಿಸಬೇಕು. ಎಲ್ಲರೂ ಒಗ್ಗಟ್ಟಾಗಿ ಹೋರಾಟ ರೂಪಿಸಿದರೆ ರೈತರಿಗೆ ನ್ಯಾಯ ಸಿಕ್ಕೆ ಸಿಗುತ್ತದೆ. ಈ ನಿಟ್ಟಿನಲ್ಲಿ ಚಿಕ್ಕಬಳ್ಳಾಪುರ ನಗರದ ಅಂಬೇಡ್ಕರ್ ಭವನದಲ್ಲಿ ಜುಲೈ 21 ರಂದು ರೈತ ಹುತಾತ್ಮರ ದಿನಾಚರಣೆ ಅಂಗವಾಗಿ ರೈತ ಸಮಾವೇಶವನ್ನು ಆಯೋಜಿಸಲಾಗಿದೆ. ಇದಕ್ಕೆ ರೈತ ಸಂಘಟನೆಗಳ ಬೆಂಬಲ ಅತ್ಯಗತ್ಯ ಎಂದರು.

ಬೆಳೆ ವಿಮೆ ನೀತಿ ಜಾರಿಗೊಳಿಸಬೇಕು, ರಸಗೊಬ್ಬರ, ಕೀಟನಾಶಕಗಳ ಮೇಲಿನ ಜಿ.ಎಸ್.ಟಿ ರದ್ದುಗೊಳಿಸಬೇಕು, ಕೃಷಿ ಸಾಲ ಮನ್ನಾ ಸೇರಿದಂತೆ ಹತ್ತಲವು ಬೇಡಿಕೆಗಳನ್ನಿಟ್ಟು ಜುಲೈ 22 ರಂದು ದೆಹಲಿಯ ಜಂತರ್ ಮಂತರ್ ನಲ್ಲಿ ಬೃಹತ್ ಪ್ರತಿಭಟನೆ ಆಯೋಜಿಸಲಾಗಿದೆ ಎಂದು ತಿಳಿಸಿದರು.

“ಕೋಲಾರ ಸಂಸದ ಮಲ್ಲೇಶ್ ಬಾಬು ಅವರಿಗೂ ಮನವಿ ಪತ್ರ ಕೊಟ್ಟಿದ್ದೇವೆ. ನಾವು ಎನ್.ಡಿ.ಎ ಮೈತ್ರಿ ಕೂಟದಲ್ಲಿದ್ದೇವೆ, ನಾವು ಹೇಗೆ ಬೆಂಬಲ ಸೂಚಿಸಲಿ?, ನೀವು ಹೋರಾಟ ಮಾಡಿ” ಎಂದು ಅಸಹಾಯಕತೆ ತೋರಿದರು ಎಂದು ಸಿ.ವಿ.ಲೋಕೇಶ್ ಗೌಡ ಹೇಳಿಕೆ ನೀಡಿದರು.

ನಾರಾಯಣ ರೆಡ್ಡಿ ಬಣದ ರೈತ ಸಂಘ ಜಿಲ್ಲಾಧ್ಯಕ್ಷ ಗೋವಿಂದರೆಡ್ಡಿ ಮಾತನಾಡಿ, “ನೀರಿನ ಸಮಸ್ಯೆ ನಡುವೆ ರೈತರು ಬೆಳೆಯುವ ಬೆಳೆಗಳಿಗೆ ರೋಗಗಳು ಕಾಣಿಸಿಕೊಳ್ಳುತ್ತಿವೆ. ಇದಕ್ಕೆ ಸೂಕ್ತ ಸಲಹೆ ಕೊಡುವ ನಿಟ್ಟಿನಲ್ಲಿ ಇಲಾಖೆಗಳಲ್ಲಿ ಯೋಗ್ಯ ಅಧಿಕಾರಿಗಳು ಇಲ್ಲ. ಇದರಿಂದ ಹೆಚ್ಚು ರೈತರು ನಷ್ಟ ಅನುಭವಿಸುತ್ತಿದ್ದಾರೆ. ಈ ಕುರಿತು ಸರಕಾರ ಗಮನಹರಿಸಬೇಕು” ಎಂದರು.

ಸುದ್ದಿಗೋಷ್ಠಿಯಲ್ಲಿ ರೈತ ಸಂಘದ ಖಜಾಂಚಿ ಕೃಷ್ಣಪ್ಪ, ಬಾಗೇಪಲ್ಲಿ ತಾಲೂಕು ಅಧ್ಯಕ್ಷ ವೆಂಕಟ ಶಿವಾರೆಡ್ಡಿ, ರೈತ ಮುಖಂಡರಾದ ಈಶ್ವರಪ್ಪ, ಅಶ್ವತ್ಥ್, ವೆಂಕಟರಾಮ್ ಮತ್ತಿತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...