ಚಿತ್ರದುರ್ಗ | ಹೊಸಹಳ್ಳಿ ಬ್ಯಾರೇಜ್‌ನಿಂದ ಧರ್ಮಪುರ ಕೆರೆಗೆ ನೀರು ಹರಿಸಲು ಸಚಿವರಿಗೆ ರೈತ ಮುಖಂಡರ ಮನವಿ

Date:

ಹೊಸಹಳ್ಳಿ ಬ್ಯಾರೇಜ್‌ನಿಂದ ಧರ್ಮಪುರ ಕೆರೆಗೆ ನೀರು ಹರಿಸಲು ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಸಚಿವ ಡಿ ಸುಧಾಕರ್ ಅವರಿಗೆ ರೈತ ಮುಖಂಡರ ಮನವಿ ಮಾಡಿದ್ದು, ಈ ಸಂಬಂಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ.

ಭದ್ರಾ ಮೇಲ್ದಂಡೆ ನೀರನ್ನು ಜನವರಿ ಅಂತ್ಯದವರೆಗೆ ಚಿತ್ರದುರ್ಗ ಜಿಲ್ಲೆ ಹಿರಿಯೂರು ತಾಲೂಕಿನ ವಾಣಿವಿಲಾಸ ಸಾಗರಕ್ಕೆ ಹರಿಸಲು ಸರ್ಕಾರದಿಂದ ಆದೇಶವಿದ್ದು, ಜನವರಿ 10 ರೊಳಗೆ ವಾಣಿ ವಿಲಾಸ ಸಾಗರ ಕೋಡಿ ಬೀಳುವ ಸಾಧ್ಯತೆ ಇದೆ. ಜನವರಿ ಅಂತ್ಯದವರೆಗೆ ಬರಬೇಕಾದ ನೀರಿನ ಸದ್ಬಳಕೆ ಮಾಡಿಕೊಳ್ಳಲು ಮುಂಜಾಗ್ರತೆಯಾಗಿ ಹೊಸಹಳ್ಳಿ ಬ್ಯಾರೇಜ್‌ನಿಂದ ಧರ್ಮಪುರ ಭಾಗದ ಏಳು ಕೆರೆಗಳಿಗೆ ನೀರು ಹರಿಸಬೇಕು. ಚಳ್ಳಕೆರೆ, ಮೊಳಕಾಲ್ಮೂರು ಭಾಗದ ಬ್ಯಾರೇಜ್‌ಗಳನ್ನು ಭರ್ತಿ ಮಾಡಬೇಕೆಂದು ಕಸವನಹಳ್ಳಿ ರಮೇಶ್ ನೇತೃತ್ವದಲ್ಲಿ ರೈತರು ಜಿಲ್ಲಾ ಉಸ್ತುವಾರಿ ಸಚಿವ ಡಿ ಸುಧಾಕರ್ ಅವರಿಗೆ ಮನವಿ ಮಾಡಿ ಒತ್ತಾಯಿಸಿದ್ದಾರೆ.

ತೋಟಗಾರಿಕೆ ಬೆಳೆಗಳಲ್ಲಿ ಅಗ್ರಸ್ಥಾನದಲ್ಲಿರುವ ಶಾಶ್ವತ ನೀರಾವರಿ ಸೌಲಭ್ಯದಿಂದ ವಂಚಿತವಾಗಿರುವ ಧರ್ಮಪುರ ಭಾಗದ ಕೆರೆಗಳಿಗೆ ನೀರು ಹರಿಸಲು ನೂರಾರು ವರ್ಷಗಳ ಹೋರಾಟದ ಫಲವಾಗಿ ಯೋಜನೆ ಜಾರಿಯಾಗಿದ್ದು. ಇಂತಹ ಸಂದರ್ಭದಲ್ಲಿ ಕೆರೆಗಳಿಗೆ ನೀರು ತುಂಬಿಸುವ ಮೂಲಕ ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ರಾಜ್ಯ ಯೋಜನೆ ಮತ್ತು ಸಾಂಖ್ಯಿಕ ಸಚಿವರಾದ ಡಿ.ಸುಧಾಕರ್ ರವರು ಧರ್ಮಪುರ ಭಾಗದ ರೈತರ ನೆರವಿಗೆ ಬರಬೇಕೆಂದು ಮನವಿ ಮಾಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ವಿಜಯಪುರ | ನಿತ್ಯವೂ ಮಾನವೀಯ ಮೌಲ್ಯಗಳನ್ನು ನಾವು ಮೈಗೂಡಿಸಿಕೊಳ್ಳಬೇಕು: ನಾಗರತ್ನ ಮನಗೂಳಿ

ವಾಣಿವಿಲಾಸ ಸಾಗರ ಈ ವರ್ಷ ಮೂರನೇ ಬಾರಿ ತುಂಬುತ್ತಿದೆ. ಇಂತಹ ಸುಸಂದರ್ಭದಲ್ಲಿ ಧರ್ಮಪುರ ಭಾಗದ ಕೆರೆಗಳೂ ಸಹ ಭರ್ತಿಯಾಗಲಿ. ಪದೇ ಪದೇ ಭದ್ರಾ ಜಲಾಶಯ ಭರ್ತಿಯಾಗುವುದಿಲ್ಲ. ಅಲ್ಲದೆ ವಾಣಿವಿಲಾಸ ಸಾಗರಕ್ಕೂ ಎಲ್ಲ ವರ್ಷಗಳಲ್ಲಿ ನೀರು ಸಿಗುವುದಿಲ್ಲ. ಸಿಕ್ಕಿರುವಂತ ಸುಸಂದರ್ಭದಲ್ಲಿ ಕೆರೆಗಳನ್ನು ತುಂಬಿಸಿಕೊಂಡು ಮುಂದಿನ ಅಭಾವದ ದಿನಗಳಿಗೆ ಅನುಕೂಲ ಮಾಡಿಕೊಳ್ಳಬಹುದಾದ ದೂರದೃಷ್ಟಿಯಿಂದ ಯೋಚಿಸಬೇಕಾಗಿದೆ. ಆದ್ದರಿಂದ ಸಚಿವರು ಈ ಭಾಗದ ಜನರ ಕನಸನ್ನು ನನಸು ಮಾಡಬೇಕೆಂದು ರೈತ ಮುಖಂಡರು ಸಚಿವರಿಗೆ ಮನವಿ ಪತ್ರ ಸಲ್ಲಿಸಿದರು.

ಈ ಸಂದರ್ಭದಲ್ಲಿ ಪ್ರದಾನ ಕಾರ್ಯದರ್ಶಿ ಆಲೂರು ಸಿದ್ದರಾಮಣ್ಣ, ರಾಮಚಂದ್ರ ಕಸವನಹಳ್ಳಿ, ಸಾಮಾಜಿಕ ಕಾರ್ಯಕರ್ತ ಎಸ್.ವಿ.ರಂಗನಾಥ್, ಕುಮಾರ್, ಹೊಸಯಳನಾಡು ತಿಪ್ಪೇಸ್ವಾಮಿ ಮತ್ತಿತರರು ಉಪಸ್ಥಿತರಿದ್ಧರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...