ಧಾರವಾಡ | ಬತ್ತಿದ ಕೆರೆಗೆ ನೀರು ಹರಿಸುವ ರೈತ; ಪ್ರಾಣಿ-ಪಕ್ಷಿಗಳಿಗೆ ಆಸರೆ

Date:

ಕಳೆದ ಎರಡು ದಿನಗಳಿಂದ ರಾಜ್ಯದ ಕೆಲ ಭಾಗಗಳಲ್ಲಿ ಮಳೆ ಬೀಳುತ್ತಿದೆ. ಆದರೆ, ರಾಜ್ಯದಲ್ಲಿ ತಾಪಮಾನ 40° ಸೆಲ್ಸಿಯಸ್‌ ದಾಟುತ್ತಿದೆ. ಬರಗಾಲದಿಂದಾಗಿ ಕೆರೆ-ಕಟ್ಟೆ-ನದಿಗಳು ಬತ್ತಿಹೋಗಿವೆ. ಜನ-ಜಾನುವಾರುಗಳು ನೀರಿನ ಸಮಸ್ಯೆ ಎದುರಿಸುಂತಾಗಿದೆ. ವನ್ಯ ಪ್ರಾಣಿ, ಪಕ್ಷಿಗಳು ನೀರು ಹುಡುವುದೇ ಕಷ್ಟವಾಗಿದೆ. ಇಂತಹ ಸಮಯದಲ್ಲಿ ಧಾರವಾಡ ಜಿಲ್ಲೆಯ ರೈತರೊಬ್ಬರು ಕೆರೆಗೆ ನೀರು ಹರಿಸುವ ಮೂಲಕ ಜಾನುವಾರು, ಪ್ರಾಣಿ, ಪಕ್ಷಿಗಳಿಗೆ ನೀರುಣಿಸುತ್ತಿದ್ದಾರೆ.

ಧಾರವಾಡ ಜಿಲ್ಲೆಯ ಕಲಘಟಗಿ ತಾಲೂಕಿನ ಮಸಳಿಕಟ್ಟಿ ಗ್ರಾಮದ ರೈತ ಗೋವಿಂದ ಗುಂಡಪ್ಪ ಗುಂಡ್ಕಲ್ ಅವರು ತಮ್ಮ ಬೋರ್‌ವೆಲ್‌ನಿಂದ ತಮ್ಮೂರಿನ ಕರೆಗೆ ನೀರು ತುಂಬಿಸಿದ್ದಾರೆ. ಅವರು ಕಳೆದ ಮೂರು ವರ್ಷಗಳಿಂದಲೂ ಬೇಸಿಗೆ ಕಾಲದಲ್ಲಿ ಕೆರೆಗೆ ನೀರು ತುಂಬಿಸುವ ಕಾಯಕ ಮಾಡುತ್ತಿದ್ದಾರೆ. ಪ್ರಾಣಿಗಳ ದಾಹ ತಣಿಸುತ್ತಿದ್ದಾರೆ.

“ನನ್ನ ಜಮೀನಿನ ಪಕ್ಕದ ಕೆರೆಯಲ್ಲಿ ನಮ್ಮ ದನಗಳನ್ನು ನೀರು ಕುಡಿಸಲು ಕರೆದೊಯ್ಯುತ್ತಿದ್ದೆ. ಆದರೆ, ಮೂರು ವರ್ಷಗಳ ಹಿಂದೆ ಕೆರೆ ಬತ್ತಿ ಹೋಗಿತ್ತು. ನಮ್ಮ ಜಾನುವಾರುಗಳ ದಾಹ ನೀಗಿಸಲು ನನ್ನ ಜಮೀನಿನ ಬೋರ್‌ವೆಲ್‌ ನೀರನ್ನು ಬಳಸುತ್ತಿದ್ದೆ. ಆದರೆ, ಇತರ ಪ್ರಾಣಿಗಳು ಕೆರೆಗೆ ಬಂದು ನೀರಿಲ್ಲದೆ ಹಿಂತಿರುಗುತ್ತಿರುವುದನ್ನು ಗಮನಿಸಿದೆ. ಅವುಗಳಿಗೂ ನೀರು ದೊರೆಯಬೇಕೆಂದು ಕೆರೆ ನೀರು ತುಂಬಿಸಲು ಆರಂಭಿಸಿದೆ” ಎಂದು ಗುಂಡಪ್ಪ ಹೇಳಿರುವುದಾಗಿ ಟಿಎನ್‌ಐಇ ವರದಿ ಮಾಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಮಳೆಗಾಲದಲ್ಲಿ ಮಾತ್ರ ಕೆರೆಯಲ್ಲಿ ನೀರು ಇರುತ್ತದೆ. ಫೆಬ್ರುವರಿ ಮತ್ತು ಬೇಸಿಗೆಯ ತಿಂಗಳುಗಳಲ್ಲಿ ಕೆರೆ ಒಣಗಿ ಹೋಗುತ್ತದೆ. ಪ್ರತಿ ವರ್ಷ ಸುಮಾರು ನಾಲ್ಕು ತಿಂಗಳ ಕಾಲ ಪಂಪ್‌ಸೆಟ್‌ನಿಂದ ಕೆರೆಗೆ ನೀರು ತುಂಬಿಸುತ್ತೇನೆ. ಪ್ರತಿದಿನ ಸುಮಾರು ನಾಲ್ಕು ಗಂಟೆಗಳ ಕಾಲ ಕೆರೆಗೆ ನೀರು ಹರಿಸುತ್ತೇನೆ” ಎಂದು ಅವರು ಹೇಳಿದ್ದಾರೆ.

ಕೆರೆಗೆ ನೀರು ತುಂಬಿಸಲು ಕಾರಣವಾದ ಘಟನೆಯನ್ನು ನೆನಪಿಸಿಕೊಂಡ ಗೋವಿಂದ್ ಅವರ ಮಗ ಮಾರುತಿ, “ಒಮ್ಮೆ ತನ್ನ ತಂದೆ, ಕೆರೆ ಬತ್ತಿ ಹೋಗಿದ್ದರಿಂದ ಜಿಂಕೆಯೊಂದು ನೀರು ಕುಡಿಯದೆ ಹಿಂತಿರುಗುವುದನ್ನು ನೋಡಿದರು. ಆಗ, ನಮ್ಮ ಬೋರ್‌ವೆಲ್‌ನಿಂದ ಕೆರೆಗೆ ನೀರು ತುಂಬಿಸಲು ನಿರ್ಧರಿಸಿದರು. ಕಳೆದ ಮೂರು ವರ್ಷಗಳಿಂದ ಇದನ್ನೇ ಮಾಡುತ್ತಿದ್ದಾರೆ. ನಾವು 1.5 ಎಕರೆ ಜಮೀನು ಹೊಂದಿದ್ದು, ನಮ್ಮ ಬೋರ್‌ವೆಲ್‌ನ ನೀರು ಈ ಭೂಮಿಗೆ ನೀರಾವರಿ ಮಾಡಲು ಸಾಕು. ಗುತ್ತಿಗೆ ಪಡೆದ ನಾಲ್ಕು ಎಕರೆ ಜಮೀನಿಗೂ ನೀರುಣಿಸುತ್ತೇವೆ” ಎಂದು ಹೇಳಿದ್ದಾರೆ.

ಗೋವಿಂದ್ ಅವರ ಕೆಲಸದ ಬಗ್ಗೆ ಸಂತಸ ವ್ಯಕ್ತಪಡಿಸಿರುವ ಗ್ರಾಮದ ಗೌಲಿ ಬುಡಕಟ್ಟಿನ ನಿವಾಸಿಯೊಬ್ಬರು, “ಗೋವಿಂದ್‌ ಹೊಳೆಗೆ ನೀರು ಪೂರೈಸುವುದರಿಂದ ದನಗಳಷ್ಟೇ ಅಲ್ಲ, ಕಾಡು ಪ್ರಾಣಿಗಳಿಗೂ ಅನುಕೂಲವಾಗುತ್ತಿದೆ. ಗ್ರಾಮವು ಪಶ್ಚಿಮ ಘಟ್ಟಗಳ ಅಂಚಿನಲ್ಲಿದೆ. ವನ್ಯಪ್ರಾಣಿಗಳು ನೀರನ್ನು ಅರಸಿ ನಮ್ಮ ಗ್ರಾಮಕ್ಕೆ ಬರುತ್ತವೆ. ಗೋವಿಂದ್ ಅವರು ಪೂರೈಸುವ ನೀರು ಅವುಗಳ ದಾಹವನ್ನು ನೀಗಿಸುತ್ತದೆ. ರಾಜ್ಯಾದ್ಯಂತ ಮಾನವ-ಪ್ರಾಣಿ ಸಂಘರ್ಷಗಳ ಬಗ್ಗೆ ನಾವು ಕೇಳುತ್ತೇವೆ. ಆದರೆ, ನಮ್ಮ ಹಳ್ಳಿಯ ಕಥೆ ವಿಭಿನ್ನವಾಗಿದೆ” ಎಂದು ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...