ಕಲ್ಯಾಣ ಕರ್ನಾಟಕ ಜಿಲ್ಲೆಗಳಲ್ಲಿ ರೈತರ ಆತ್ಮಹತ್ಯೆ ಇಳಿಮುಖ

Date:

ಕಲ್ಯಾಣ ಕರ್ನಾಟಕ ಜಿಲ್ಲೆಗಳಲ್ಲಿ ಕಳೆದ ಎರಡೂವರೆ ವರ್ಷಗಳಲ್ಲಿ ಉಂಟಾಗಿರುವ ಅತಿವೃಷ್ಟಿ, ಅನಾವೃಷ್ಟಿ ನಡುವೆಯೂ ರೈತರ ಆತ್ಮಹತ್ಯೆ ಪ್ರಕರಣಗಳ ಸಂಖ್ಯೆ ಇಳಿಮುಖ ಕಂಡಿರುವುದು ಈ ಭಾಗದ ಜನರಲ್ಲಿ ಕೊಂಚ ನೆಮ್ಮದಿ ಮೂಡಿಸಿದೆ.

ಸಾಲದ ಹೊರೆ, ಬರ, ಬೆಲೆ ಕುಸಿತ ಸೇರಿ ವಿವಿಧ ಕಾರಣದಿಂದ 2023-24ನೇ ಸಾಲಿನಲ್ಲಿ ಕಲ್ಯಾಣ ಕರ್ನಾಟಕದ ಏಳು ಜಿಲ್ಲೆಗಳಲ್ಲಿ ಒಟ್ಟು 339 ರೈತರು ಆತ್ಮಹತ್ಯೆ ಮಾಡಿಕೊಂಡ ಪ್ರಕರಣಗಳು ವರದಿಯಾಗಿದವು. ಕಲಬುರಗಿ, ಬೀದರ್‌ ಹಾಗೂ ಯಾದಗಿರಿ ಜಿಲ್ಲೆಗಳಲ್ಲಿ ಹೆಚ್ಚು ಅನ್ನದಾತರು ಆತ್ಮಹತ್ಯೆ ಮಾಡಿಕೊಂಡಿದ್ದರು.

2024-25ನೇ ಸಾಲಿನಲ್ಲಿ ರೈತರ ಆತ್ಮಹತ್ಯೆ ಸಂಖ್ಯೆ 279ಕ್ಕೆ ಇಳಿಕೆಯಾಗಿದೆ. ಆದರೆ, ತೊಗರಿ ಕಣಜ ಕಲಬುರಗಿ, ರಾಯಚೂರು ಜಿಲ್ಲೆಗಳಲ್ಲಿ ಆತ್ಮಹತ್ಯೆ ಸಂಖ್ಯೆ ಏರಿಕೆ ಕಂಡಿದ್ದು ಬಿಟ್ಟರೆ ಉಳಿದ ಜಿಲ್ಲೆಗಳಲ್ಲಿ ಕಡಿಮೆ ಆಗಿರುವುದು ತುಸು ಸಂತಸಕ್ಕೆ ಕಾರಣವಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕಂದಾಯ ಇಲಾಖೆ ನೀಡಿದ ಅಂಕಿ-ಅಂಶಗಳ ಪ್ರಕಾರ 2025-26ನೇ ಸಾಲಿನಲ್ಲಿ ಜುಲೈ ಅಂತ್ಯದವರೆಗೆ ಕಲ್ಯಾಣ ಕರ್ನಾಟಕದ ಜಿಲ್ಲೆಗಳಲ್ಲಿ 21 ರೈತರು ಆತ್ಮಹತ್ಯೆ ಮಾಡಿಕೊಂಡ ಪ್ರಕರಣಗಳು ವರದಿಯಾಗಿವೆ. ಇದು ಇತ್ತೀಚಿನ ವರ್ಷಗಳಲ್ಲೇ ಕನಿಷ್ಠ ಪ್ರಕರಣಗಳು ದಾಖಲಾಗಿರುವ ಅವಧಿ ಎಂದು ಹೇಳಬಹುದು.

ʼಕಲ್ಯಾಣ ಕರ್ನಾಟಕʼದಲ್ಲಿ ರೈತರ ಆತ್ಮಹತ್ಯೆ ಪ್ರಕರಣ ವಿವರ

ಜಿಲ್ಲೆಗಳು2023-242024-252025-26
ಬೀದರ್75450
ಕಲಬುರಗಿ8810414
ರಾಯಚೂರ22242
ಕೊಪ್ಪಳ30264
ಬಳ್ಳಾರಿ19100
ಯಾದಗಿರಿ70483
ವಿಜಯನಗರ35220
ಒಟ್ಟು33927921

ಕಳೆದ 31 ತಿಂಗಳಲ್ಲಿ ಕಲ್ಯಾಣ ಕರ್ನಾಟಕದ ಕಲಬುರಗಿ, ರಾಯಚೂರು ಜಿಲ್ಲೆಗಳಲ್ಲಿ ರೈತರ ಆತ್ಮಹತ್ಯೆ ಪ್ರಕರಣಗಳಲ್ಲಿ ಒಂದಿಷ್ಟು ವ್ಯತ್ಯಾಸ ಕಾಣಬಹುದು. ಆದರೆ, ಉಳಿದು ಐದು ಜಿಲ್ಲೆಗಳಲ್ಲಿ ಗಣನೀಯವಾಗಿ ಇಳಿಕೆಯಾಗಿದೆ. ಅದರಲ್ಲೂ ಹೆಚ್ಚು ಅನ್ನದಾತರು ಆತ್ಮಹತ್ಯೆ ಪ್ರಕರಣ ದಾಖಲಾಗುತ್ತಿದ್ದ ಬೀದರ್‌, ಯಾದಗಿರಿ, ಕೊಪ್ಪಳ ಜಿಲ್ಲೆಗಳಲ್ಲಿ ಇಳಿಮುಖ ಕಂಡಿದೆ.

2025-26ನೇ ಸಾಲಿನಲ್ಲಿ ಕಲ್ಯಾಣದ ಏಳು ಜಿಲ್ಲೆಗಳಲ್ಲಿ ಅತಿ ಕಡಿಮೆ ರೈತರ ಆತ್ಮಹತ್ಯೆ ಪ್ರಕರಣಗಳು ದಾಖಲಾಗಿವೆ. ರೈತರ ವಿಚಾರದಲ್ಲಿ ಇನ್ನೊಂದು ನೆಮ್ಮದಿ ವಿಷಯ ಎಂದರೆ, ಕಳೆದ ನಾಲ್ಕು ತಿಂಗಳಲ್ಲಿ ಬೀದರ್‌, ಬಳ್ಳಾರಿ ಹಾಗೂ ವಿಜಯನಗರ ಜಿಲ್ಲೆಗಳಲ್ಲಿ ರೈತರ ಆತ್ಮಹತ್ಯೆ ಪ್ರಕರಣ ಶೂನ್ಯ ದಾಖಲಾಗಿದೆ. ಸದ್ಯಕ್ಕೆ ಕಲ್ಯಾಣ ಕರ್ನಾಟಕ ಜಿಲ್ಲೆಗಳಲ್ಲಿ ರೈತರ ಆತ್ಮಹತ್ಯೆ ಸಂಖ್ಯೆ ಡಬಲ್‌ ಡಿಜಿಟ್‌ ದಾಟಿಲ್ಲ ಎಂಬುದು ಜನರ ನೆಮ್ಮದಿ ಬದುಕಿಗೆ ಸಾಕ್ಷಿಯಾಗಿದೆ.

ʼ2023 ರಿಂದ 2025ರ ಜುಲೈ ಅಂತ್ಯದ ತನಕ ಎರಡೂವರೆ ವರ್ಷಗಳಲ್ಲಿ ರಾಜ್ಯದಲ್ಲಿ ಒಟ್ಟು 2,416 ರೈತ ಆತ್ಮಹತ್ಯೆ ಪ್ರಕರಣಗಳು ವರದಿಯಾಗಿವೆ.ಈ ಪೈಕಿ 2,067 ಅರ್ಹ ಪ್ರಕರಣಗಳೆಂದು ಪರಿಗಣಿಸಲಾಗಿದ್ದು, ಅದರಲ್ಲಿ 1,962 ಪ್ರಕರಣಗಳಿಗೆ ತಲಾ ₹5 ಲಕ್ಷದಂತೆ ಒಟ್ಟು ₹98.10 ಕೋಟಿ ಪರಿಹಾರ ವಿತರಿಸಲಾಗಿದೆʼ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ.

ರಾಜ್ಯದಲ್ಲಿ 2023-24ನೇ ಸಾಲಿನಲ್ಲಿ 1,250 ರೈತರ ಆತ್ಮಹತ್ಯೆ ಪ್ರಕರಣ ವರದಿಯಾದರೆ, 2024-25ನೇ ಸಾಲಿನಲ್ಲಿ 1,082 ಪ್ರಕರಣ ವರದಿಯಾಗಿದವು. 2025-26ರಲ್ಲಿ ಜುಲೈ ಅಂತ್ಯದವರೆಗೆ 84 ರೈತರು ಆತ್ಮಹತ್ಯೆ ದಾರಿ ತುಳಿದಿದ್ದಾರೆ. ಹಿಂದಿನ ಎರಡು ವರ್ಷಕ್ಕೆ ಹೋಲಿಸಿದರೆ ರಾಜ್ಯದಲ್ಲಿ ರೈತರ ಆತ್ಮಹತ್ಯೆ ಪ್ರಕರಣಗಳು ಗಣನೀಯವಾಗಿ ಇಳಿಮುಖ ಕಂಡಿದೆ. ಅದರಲ್ಲೂ ಪ್ರಸಕ್ತ ಆರ್ಥಿಕ ವರ್ಷದ ಮೊದಲ ಐದು ತಿಂಗಳಲ್ಲಿ 16 ಜಿಲ್ಲೆಗಳಲ್ಲಿ ರೈತರ ಆತ್ಮಹತ್ಯೆ ಪ್ರಕರಣ ಒಂದೂ ವರದಿಯಾಗಿಲ್ಲ.

ಅತಿವೃಷ್ಟಿ ಮತ್ತು ಅನಾವೃಷ್ಟಿಯಿಂದ ಉಂಟಾದ ಬೆಳೆ ಹಾನಿಯಿಂದ ಕೃಷಿ ಬದುಕಿನಲ್ಲಿ ಭರವಸೆ ಕಳೆದುಕೊಂಡು, ಆರ್ಥಿಕ ಹೊರೆ ತಾಳಲಾರದೆ ರೈತರು ಆತ್ಮಹತ್ಯೆ ದಾರಿ ತುಳಿಯುತ್ತಿದ್ದಾರೆ. ಈ ಪೈಕಿ ಬಹುತೇಕ ಪ್ರಕರಣಗಳು ಸಣ್ಣ, ಅತಿ ಸಣ್ಣ ರೈತರೇ ಆಗಿದ್ದಾರೆ ಎಂದರೂ ತಪ್ಪಾಗಲಾರದು.

ಇದನ್ನೂ ಓದಿ : ಬೀದರ್‌ | ವಿದ್ಯಾರ್ಥಿಗಳ ʼಬರʼ : ಬಾಗಿಲು ಮುಚ್ಚಿದ ಸರ್ಕಾರಿ ಪದವಿ ಪೂರ್ವ ಕಾಲೇಜು!

ಕಂದಾಯ ಮತ್ತು ಕೃಷಿ ಇಲಾಖೆಗಳು ಕೈಗೊಳ್ಳುವ ಅರಿವು ಜಾಗೃತಿ ಕಾರ್ಯಕ್ರಮಗಳಿಂದಾಗಿ ಆತ್ಮಹತ್ಯೆ ಮಾಡಿಕೊಳ್ಳುವ ರೈತರ ಸಂಖ್ಯೆ ಕಡಿಮೆಯಾಗುತ್ತಿದೆ. ಕೇಂದ್ರ, ರಾಜ್ಯ ಸರ್ಕಾರ ರೈತರಿಗೆ ಕೃಷಿ ಉತ್ಪನ್ನಗಳ ಮಾರುಕಟ್ಟೆ, ಸಾಲ ನೀಡಿಕೆ, ಬೆಳೆ ವಿಮೆ, ರೈತರ ಮಕ್ಕಳಿಗೆ ವಿದ್ಯಾರ್ಥಿ ವೇತನ, ಜನಕಲ್ಯಾಣ ಯೋಜನೆಗಳು ಅತಿ ಬಡ, ಮಧ್ಯಮ ವರ್ಗದ ರೈತ ಕುಟುಂಬಗಳಲ್ಲಿ ಆರ್ಥಿಕ ಚೇತರಿಕೆ ಕಂಡು ಬಂದಿದೆ. ಇದರಿಂದ ಜನರಲ್ಲಿ ಆತ್ಮಹತ್ಯೆ ಪ್ರವೃತ್ತಿ ಕಡಿಮೆ ಆಗುತ್ತಿದೆ ಎಂದು ಹೇಳಬಹುದು.

WhatsApp Image 2025 02 06 at 11.55.32 e1738823214905
ಬಾಲಾಜಿ ಕುಂಬಾರ್
+ posts

ಬಾಲಾಜಿ ಕುಂಬಾರ ಅವರು ಔರಾದ್ ತಾಲ್ಲೂಕಿನ ಚಟ್ನಾಳ ಗ್ರಾಮದವರು. ಸಾಹಿತ್ಯ, ಶಿಕ್ಷಣ ಹಾಗೂ ರಾಜಕೀಯ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದ್ದಾರೆ. ಸದ್ಯ 'ಈದಿನ.ಕಾಮ್‌' ಮಾಧ್ಯಮ ಸಂಸ್ಥೆಯಲ್ಲಿ ಬೀದರ್ ಜಿಲ್ಲಾ ಹಿರಿಯ ಸಂಯೋಜಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಕವಿತೆ, ಲೇಖನ, ದೇಶಿ ನುಡಿ ಬರಹ ಬರೆಯುವುದು ಇವರ ಮುಖ್ಯ ಹವ್ಯಾಸ.

ಪೋಸ್ಟ್ ಹಂಚಿಕೊಳ್ಳಿ:

ಬಾಲಾಜಿ ಕುಂಬಾರ್
ಬಾಲಾಜಿ ಕುಂಬಾರ್
ಬಾಲಾಜಿ ಕುಂಬಾರ ಅವರು ಔರಾದ್ ತಾಲ್ಲೂಕಿನ ಚಟ್ನಾಳ ಗ್ರಾಮದವರು. ಸಾಹಿತ್ಯ, ಶಿಕ್ಷಣ ಹಾಗೂ ರಾಜಕೀಯ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದ್ದಾರೆ. ಸದ್ಯ 'ಈದಿನ.ಕಾಮ್‌' ಮಾಧ್ಯಮ ಸಂಸ್ಥೆಯಲ್ಲಿ ಬೀದರ್ ಜಿಲ್ಲಾ ಹಿರಿಯ ಸಂಯೋಜಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಕವಿತೆ, ಲೇಖನ, ದೇಶಿ ನುಡಿ ಬರಹ ಬರೆಯುವುದು ಇವರ ಮುಖ್ಯ ಹವ್ಯಾಸ.

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೈಸೂರು | ನಂಜನಗೂಡಿನಲ್ಲಿ ಮರಗಳ ಹನನ; ಸಂಘಟನೆಗಳಿಂದ ಪ್ರತಿಭಟನೆ

ದಿನಾಂಕ-07-03-2026ರಂದು ಮೈಸೂರು ಜಿಲ್ಲೆ, ನಂಜನಗೂಡಿನ ಹೆಜ್ಜಿಗೆ ಗ್ರಾಮದ ಬಳಿ ಕಪಿಲಾ ನದಿ...

ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬ್ಯಾಲೆಟ್ ಪೇಪರ್ ಬಳಕೆ; ವಿಧಾನಸಭೆಯಲ್ಲಿ ಮಸೂದೆ ಅಂಗೀಕಾರ

ರಾಜ್ಯದ ಸ್ಥಳೀಯ ಸಂಸ್ಥೆಗಳ ಚುನಾವಣಾ ಪ್ರಕ್ರಿಯೆಯಲ್ಲಿ ಬದಲಾವಣೆ ತರಲು ರಾಜ್ಯ ಸರ್ಕಾರ...

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...