ರಾಯಚೂರು | ರಾಜ್ಯ ಸರ್ಕಾರದ ರೈತ ವಿರೋಧಿ ನೀತಿ ವಿರೋಧಿಸಿ ರೈತರು ಧರಣಿ

Date:

ರಾಜ್ಯ ಸರ್ಕಾರದ ರೈತ ವಿರೋಧಿ ನೀತಿಗಳನ್ನು ಖಂಡಿಸಿ ಕರ್ನಾಟಕ ರಾಜ್ಯ ರೈತ ಸಂಘ ಜಿಲ್ಲಾ ಘಟಕದ ಪದಾಧಿಕಾರಿಗಳು ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಧರಣಿ ನಡೆಸಿ, ಜಿಲ್ಲಾಡಳಿತದ ಮೂಲಕ ಮುಖ್ಯಮಂತ್ರಿಗಳಿಗೆ ಹಕ್ಕೊತ್ತಾಯ ಪತ್ರ ಸಲ್ಲಿಸಿದರು.

ʼರೈತರು ಕೃಷಿ ಪಂಪ್ ಸೆಟ್‌ಗೆ ವಿದ್ಯುತ್ ಸಂಪರ್ಕ ಪಡೆಯಲು ರೈತರೇ ವೆಚ್ಚ ಭರಿಸಲು ಸೂಚಿಸಿರುವ ಆದೇಶ ಹಿಂಪಡೆಯಬೇಕು. 2 ರಿಂದ 3 ಲಕ್ಷ ಹಣವನ್ನು ರೈತರು ಭರಿಸಲು ಸಾಧ್ಯವಾಗುದಿಲ್ಲʼ ಎಂದು ಆಕ್ರೋಶ ವ್ಯಕ್ತಪಡಿಸಿದರು.

ʼರಾಜ್ಯದಲ್ಲಿ ಕಳೆದ ವರ್ಷ ಏಪ್ರಿಲ್‌ನಿಂದ ಈವರಗೆ 1182 ರೈತರು ಆತ್ಮಹತ್ಯೆ ಮಾಡಿಕೊಂಡಿದ್ದು, ಇದರಲ್ಲಿ ಅತಿಹೆಚ್ಚು ಯುವ ರೈತರೇ ಆತ್ಮಹತ್ಯೆಗೆ ಶರಣಾಗಿದ್ದಾರೆ. ಕೂಡಲೇ ಸರ್ಕಾರ ರೈತರಲ್ಲಿ ಆತ್ಮಸೈರ್ಯ ಹೆಚ್ಚಿಸಲು ಮುಂದಾಗಬೇಕು. ಕೃಷಿ ಬೆಲೆ ಆಯೋಗವನ್ನು ಸಬಲೀಕರಣಗೊಳಿಸಿ ರಾಜ್ಯ ಸರ್ಕಾರವೇ ಬೆಂಬಲ ಬೆಲೆ ನಿಗದಿಪಡಿಸಬೇಕು. ಬ್ಯಾಂಕ್‌ಗಳು ಬರಗಾಲದಲ್ಲೂ ಒತ್ತಾಯದಿಂದ ಸಾಲ ವಸೂಲಾತಿಗೆ ಮಾಡುತ್ತಿರುವುದು ತಡೆಯಬೇಕುʼ ಎಂದು ಒತ್ತಾಯಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ʼಎಲ್ಲ ಬೆಳೆಗಳಿಗೆ ಫಸಲ್ ಭೀಮಾ ಯೋಜನೆಯಡಿ ವಿಸ್ತರಿಸಿ ಗ್ರಾಮ ಮಟ್ಟದಲ್ಲಿ ಬೆಳೆಹಾನಿ ನಿರ್ಧರಿಸಿ ವಿಮಾ ಕಂಪನಿಗಳು ಬಾಕಿ ಉಳಿಸಿಕೊಂಡ ಬೆಳೆಹಾನಿ ಪರಿಹಾರ ಬಿಡುಗಡೆಗೊಳಿಸಬೇಕು, ಫಸಲ್ ಭೀಮಾ, ಪಹಣಿ , ಪಕ್ಕ ಪೋಡಿ, ಹದ್ದುಬಸ್ತು ಶುಲ್ಕ ಹೆಚ್ಚಳ ಹಿಂಪಡೆಯಬೇಕು. ಖರೀದಿ ಕೇಂದ್ರದ ಮೂಲಕ ರೈತರಿಂದ ಜೋಳ, ರಾಗಿ ಖರೀದಿಸಿ ಬಾಕಿ ಉಳಿಸಿಕೊಂಡ ರೈತರ ಹಣ ಪಾವತಿಸಬೇಕುʼ ಎಂದರು.

ಅರಣ್ಯ ಭೂಮಿ ಸಾಗುವಳಿ ರೈತರಿಗೆ ಪಟ್ಟಾ ಭೂಮಿ ನೀಡುವುದು, ಭೂ ಸುಧಾರಣಾ ತಿದ್ದುಪಡಿ ಕಾಯ್ದೆ ಮತ್ತು ಗೋಹತ್ಯೆ ನಿಷೇದ ಕಾಯ್ದೆ ಹಿಂಪಡೆಯಬೇಕು. ತುಂಗಭದ್ರ ಎಡದಂಡೆ ಕಾಲುವೆ ವ್ಯಾಪ್ತಿಯಲ್ಲಿ ಅನಧಿಕೃತ ನೀರಾವರಿ ತಡೆದು ಕೆಳಭಾಗದ ರೈತರ ಜಮೀನಿಗೆ ನೀರು ಒದಗಿಸಬೇಕು. ನಾರಾಯಣಪುರ ಬಲದಂಡೆ ಕಾಲುವೆ 18 ವಿತರಣಾ ಕಾಲುವೆ ದುರಸ್ತಿ ಅರಬರೆಯಾಗಿದ್ದು ಕಳಪೆಯಾಗಿದೆ. ಕೂಡಲೇ ಗುಣಮಟ್ಟ ಕಾಮಗಾರಿ ಪೂರ್ಣಗೊಳಿಸುವುದು ಸೇರಿದಂತೆ ವಿವಿಧ ಬೇಡಿಕೆಗಳಿಗೆ ರೈತ ಮುಖಂಡರು ಆಗ್ರಹಿಸಿದರು.

ಈ ಸುದ್ದಿ ಓದಿದ್ದೀರಾ? ಬೀದರ್-ಬೆಂಗಳೂರು ವಿಮಾನ ಸೇವೆ: 2 ವಾರದಲ್ಲಿ ವರದಿ ಸಲ್ಲಿಸಲು ಸಚಿವ ಎಂ.ಬಿ.ಪಾಟೀಲ್ ಸೂಚನೆ

ಪ್ರತಿಭಟನೆಯಲ್ಲಿ ಕರ್ನಾಟಕ ರಾಜ್ಯ ರೈತ ಸಂಘದ ಗೌರವಾಧ್ಯಕ್ಷ ಚಾಮರಸ ಮಾಲಿಪಾಟೀಲ್, ಜಿಲ್ಲಾಧ್ಯಕ್ಷ ಪ್ರಭಾಕರ ಪಾಟೀಲ್ ಇಂಗಳದಾಳ, ವೆಂಕಪ್ಪ ಕಾರಬಾರಿ, ಮಲ್ಲಣ್ಣದಿನ್ನಿ, ಬಸನಗೌಡ ಮಲ್ಲಿಗೆಮಡಗು, ಲಿಂಗಾರೆಡ್ಡಿ ಪಾಟೀಲ್, ಗೋವಿಂದ ನಾಯಕ, ಮಲ್ಲಮ್ಮ ಹುನಕುಂಟಿ, ಸಿದ್ದಯ್ಯಸ್ವಾಮಿ ಮಾನವಿ, ಹುಚ್ಚಪೀರಸಾಬ ಮಲ್ದಕಲ್, ಉಮಣ್ಣ ಮಲದಕಲ್, ದೇವರಾಜ ನಾಯಕ, ಬ್ರಹ್ಮಯ್ಯ ಆಚಾರಿ, ರವಿಕುಮಾರ ಗಬ್ಬೂರು, ಸೂಗರೆಡ್ಡಿ ಕುನ್ನಿ, ಕಲ್ಲೂರಾಯ, ಬಯ್ಯಾರೆಡ್ಡಿ, ಶಿವರಾಜ, ಚನ್ನಬಸವ, ವೀರೇಶ ಗವಿಗಟ್ಟ, ಶಂಕ್ರಪ್ಪಗೌಡ, ರಮೇಶ ಅಬಕಾರಿ ಸುಂಕೇಶ್ವರಹಾಳ ಸೇರಿದಂತೆ ಅನೇಕರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...