ಮೈಸೂರು | ಜಿಲ್ಲೆಯಾದ್ಯಂತ ಭತ್ತ, ರಾಗಿ, ಜೋಳ ಖರೀದಿ ಕೇಂದ್ರ ತೆರೆಯುವಂತೆ ರೈತ ಸಂಘದ ಒತ್ತಾಯ

Date:

ಕರ್ನಾಟಕ ರಾಜ್ಯ ರೈತ ಸಂಘ ಭತ್ತ, ರಾಗಿ, ಜೋಳ ಖರೀದಿ ಕೇಂದ್ರ ತೆರೆಯುವಂತೆ ಆಗ್ರಹಿಸಿ ಜಿಲ್ಲೆಯಾದ್ಯಂತ ತಾಲ್ಲೂಕು ಕಛೇರಿ ಆವರಣದಲ್ಲಿ ಪ್ರತಿಭಟನೆ ನಡೆಸಿ, ತಹಶೀಲ್ದಾರ್ ಅವರಿಗೆ ಮನವಿ ಸಲ್ಲಿಸಿದೆ.

ಕೃಷ್ಣರಾಜ ನಗರ, ಪಿರಿಯಾಪಟ್ಟಣ, ಹೆಗ್ಗಡದೇವನ ಕೋಟೆ, ಟಿ ನರಸೀಪುರ, ನಂಜನಗೂಡು, ಸಾಲಿಗ್ರಾಮ, ಮೈಸೂರು ಸೇರಿದಂತೆ ಜಿಲ್ಲೆಯೆಲ್ಲೆಡೆ ಫಸಲು ಕಟಾವು ಆರಂಭವಾಗಿದೆ. ರೈತರು ಕೊಯ್ಲು ಮಾಡಿದ ಧಾನ್ಯ ಶೇಕರಿಸಿಡಲು, ಸಂರಕ್ಷಿಸಲು ಕಷ್ಟಕರವಾದ ಸಂದರ್ಭ. ಶೀತ ಹಾಗೂ ಮಳೆಯ ವಾತಾವರಣ ಇರುವುದರಿಂದ. ಬೆಳೆದ ಬೆಳೆಯನ್ನು ಆಯಾ ಅಗತ್ಯ ಅನುಸಾರ ಖರೀದಿ ಕೇಂದ್ರ ತೆರೆದಲ್ಲಿ ರೈತರಿಗೆ ಅನುಕೂಲ ಆಗುತ್ತದೆ. ಮದ್ಯವರ್ತಿಗಳ ಹಾವಳಿ ತಪ್ಪುತ್ತದೆ ಎನ್ನುವುದು ರೈತ ಸಂಘದ ಆಗ್ರಹ.

ವರ್ಷ ಪೂರ್ತಿ ಮಳೆ. ಬೆಳೆದ ಬೆಳೆ ಕಾಪಾಡಿಕೊಳ್ಳುವುದೇ ಸವಾಲಾಗಿದೆ. ಇನ್ನ ದುಬಾರಿ ಖರ್ಚಿನ ವ್ಯವಸಾಯದಲ್ಲಿ ಮತ್ತೆ ತಿಂಗಳಾನುಗಟ್ಟಲೆ ಮನೆಯಲ್ಲಿ ಸಂಗ್ರಹಿಸಿ ಇಡುವುದು ಆರ್ಥಿಕವಾಗಿ ಹೊರೆಯಾಗಿ ಪರಿಣಮಿಸಲಿದೆ. ಹೀಗಾಗಿ, ಮುಂದಿನ ವ್ಯವಸಾಯದ ದೃಷ್ಟಿಯಿಂದ, ಈ ವ್ಯವಸಾಯದ ಸಾಲಸೋಲ ತೀರಿಸಿ ಒಂದಷ್ಟು ಆರ್ಥಿಕ ಸ್ಥಿತಿಗತಿ ಸುಧಾರಿಸಲು ಸರ್ಕಾರ ಕೂಡಲೇ ಖರೀದಿ ಕೇಂದ್ರ ತೆರೆಯಬೇಕು. ರೈತರಿಂದ ನೇರವಾಗಿ ಖರೀದಿ ಮಾಡಬೇಕು. ಯಾವುದೇ ವಿಳಂಬ ಮಾಡದೆ ಹಣ ಪಾವತಿ ಮಾಡುವುದು ಅತ್ಯಗತ್ಯ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಖರೀದಿ ಕೇಂದ್ರ ತೆರೆಯುವುದು ತಡವಾದಲ್ಲಿ ರೈತರು ದಲ್ಲಾಳಿಗಳಿಗೆ ಮಾರಿಕೊಳ್ಳಬೇಕಾದ ಪರಿಸ್ಥಿತಿ ನಿರ್ಮಾಣವಾಗುತ್ತದೆ. ಇದರಿಂದ, ರೈತ ಬೆಳೆದ ಬೆಳೆಗೆ ತಕ್ಕ ಬೆಲೆ ಸಿಗದೆ ಸಾಲದ ಸುಳಿಗೆ ಸಿಲುಕಲಿದ್ದಾನೆ. ಭತ್ತವನ್ನು ಕನಿಷ್ಠ ಬೆಂಬಲ ಬೆಲೆಗೆ ಖರೀದಿಸಬೇಕು. ಪಡಿತರ ವ್ಯವಸ್ಥೆಗೆ ಬೇಕಾದ ಅಕ್ಕಿಯನ್ನು ರೈತರಿಂದ ಖರೀದಿಸಿ ನೇರವಾಗಿ ಪೂರೈಕೆ ಮಾಡಬೇಕು. ಇದರಿಂದ ಸರ್ಕಾರಕ್ಕೂ ಅನುಕೂಲ, ರೈತರಿಗೂ ಆರ್ಥಿಕ ಬೆಂಬಲ ದೊರೆತಂತಗುತ್ತದೆ.

ಈ ಹಿಂದೆ ರೈಸ್ ಮಿಲ್ ಗಳಲ್ಲಿ ಕನಿಷ್ಠ ಬೆಂಬಲ ಬೆಲೆಗೆ ಕೊಳ್ಳುವ ವ್ಯವಸ್ಥೆ ಇತ್ತು. ಅದನ್ನೇ ಮತ್ತೆ ಜಾರಿಗೆ ತರಬೇಕು. ಮುಸುಕಿನ ಜೋಳ ಬೆಲೆಯಲ್ಲಿ ಇಳಿಕೆ ಕಂಡಿದೆ, ರೈತರು ಕಂಗಾಲಾಗಿದ್ದಾರೆ. ಹಾಗಾಗಿ, ಈ ಕೂಡಲೇ ಖರೀದಿ ಕೇಂದ್ರ ತೆರೆಯುವಂತೆ ಆಗ್ರಹಿಸಿದ್ದಾರೆ.

ಮೈಸೂರಿನಲ್ಲಿ ನಡೆದ ಪ್ರತಿಭಟನೆಯಲ್ಲಿ ಜಿಲ್ಲಾಧ್ಯಕ್ಷ ಹೊಸೂರು ಕುಮಾರ್, ಪ್ರಧಾನ ಕಾರ್ಯದರ್ಶಿ ಪಿ. ಮರಂಕಯ್ಯ, ಸಂಘಟನಾ ಕಾರ್ಯದರ್ಶಿ ಹೊಸಕೋಟೆ ಬಸವರಾಜು, ಗ್ರಾಮಾಂತರ ತಾಲ್ಲೂಕು ಅಧ್ಯಕ್ಷ ಆನಂದೂರು ಪ್ರಭಾಕರ್, ಮಂಡಕಳ್ಳಿ ಮಹೇಶ್, ನಾಗನಹಳ್ಳಿ ಚಂದ್ರಶೇಖರ್ ಸೇರಿದಂತೆ ಇನ್ನಿತರರು ಇದ್ದರು.

ಈ ಸುದ್ದಿ ಓದಿದ್ದೀರಾ? ಟಿ ನರಸೀಪುರ | ಭತ್ತ ಖರೀದಿ ಕೇಂದ್ರ ತೆರೆಯುವಂತೆ ಆಗ್ರಹಿಸಿದ ರೈತ ಸಂಘ

ಪಿರಿಯಾಪಟ್ಟಣ :

ತಾಲ್ಲೂಕು ಅಧ್ಯಕ್ಷ ಕೆ. ಎಸ್. ಸ್ವಾಮಿಗೌಡ, ಉಪಾಧ್ಯಕ್ಷ ಗುರುರಾಜ್, ಕಾವೇರಮ್ಮ, ಬಿ.ವಿ. ಗಣೇಶ್, ಸುರೇಶ, ಯುವ ಘಟಕ ಅಧ್ಯಕ್ಷ ಪಿ. ಮಹದೇವ, ಗೌರವಧ್ಯಕ್ಷ ನವೀನ ರಾಜ ಅರಸ್, ವಿಜಯ ಅರಸ್, ಆಲನಹಳ್ಳಿ ಹರೀಶ್, ಮಹೇಶ್, ಲೋಕೇಶ್, ಸತೀಶ್ ಹಾಗೂ ಹಸಿರು ಸೇನೆಯ ರಾಜ್ಯಾಧ್ಯಕ್ಷ ಆನಂದಗೆರೆಮಂಜುನಾಥ, ಬೆಟ್ಟದಪುರ ಕುಮಾರ್ ಸೇರಿದಂತೆ ಇನ್ನಿತರರು ಇದ್ದರು.

ಹೆಗ್ಗಡದೇವನ ಕೋಟೆ:

ತಾಲ್ಲೂಕು ಅಧ್ಯಕ್ಷ ಮಹದೇವ ನಾಯಕ, ಗೌರವಧ್ಯಕ್ಷ ಜಕ್ಕಳ್ಳಿ ರವಿಕುಮಾರ್, ಕಾರ್ಯಧ್ಯಕ್ಷ ಚಾಮಹಳ್ಳಿ ಮಹದೇವ್, ತಾಲ್ಲೂಕು ಪ್ರಧಾನ ಕಾರ್ಯದರ್ಶಿ ಬಸವರಾಜ್, ಕಾರ್ಯದರ್ಶಿ ಶಿಂಡೇನಹಳ್ಳಿ ರವಿ, ಉಪಾಧ್ಯಕ್ಷ ಚಿಕ್ಕ ಬೋರೇಗೌಡ, ವೆಂಕಟೇಗೌಡ, ಸಂಘಟನಾ ಕಾರ್ಯದರ್ಶಿ, ಸಿದ್ದರಾಮೇಗೌಡ, ಮಹಿಳಾ ಘಟಕದ ಅಧ್ಯಕ್ಷೆ ದೇವಮ್ಮ, ಟೌನ್ ಅಧ್ಯಕ್ಷ ವಿ. ಪ್ರಸಾದ್, ಕುಮಾರ್, ಮಂಜು ಸೇರಿದಂತೆ ಇನ್ನಿತರರು ಇದ್ದರು.

ಕೃಷ್ಣರಾಜನಗರ:

ತಾಲ್ಲೂಕು ಅಧ್ಯಕ್ಷ ಎಂ. ಜೆ. ಮಲ್ಲೇಶ್, ರಾಜ್ಯ ಮಹಿಳಾ ಪ್ರಧಾನ ಕಾರ್ಯದರ್ಶಿ ನೇತ್ರಾವತಿ, ಪ್ರಧಾನ ಕಾರ್ಯದರ್ಶಿ ಹೊಂಬಾಳೆ ಗೌಡ, ಜಿಲ್ಲಾ ಉಪಾಧ್ಯಕ್ಷ ಎಂ. ಎನ್. ನಟರಾಜು, ಬ್ಯಾಡರಹಳ್ಳಿ ಕುಬೇರ, ಅರ್ಜುನ ಹಳ್ಳಿ ಮಂಜುನಾಥ, ಕಗ್ಗೆರೆ ಮಹಾದೇವ, ವಿನಯ್, ಜಗದೀಶ್, ನಂಜುಂಡಸ್ವಾಮಿ, ಸುಕುಂದರಾಜ್, ಗಂಧನಹಳ್ಳಿ ಹರೀಶ್, ಸಾತಿಗ್ರಾಮ ಕಾಳೆಗೌಡ, ಗೋಪಾಲೆಗೌಡ, ಗೋಪಾಲಚಾರ್, ಸುರೇಶ್ ಸೇರಿದಂತೆ ಇನ್ನಿತರರು ಇದ್ದರು

ಸಾಲಿಗ್ರಾಮ:

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...