ಬೀದರ್‌ | ಸುಸ್ತಿ ಸಾಲಗಳ ಬಡ್ಡಿ ಮನ್ನಾ; ಅವಧಿ ವಿಸ್ತರಿಸಲು ರೈತ ಸಂಘ ಆಗ್ರಹ

Date:

ಭೀಕರ ಬರಗಾಲಕ್ಕೆ ತುತ್ತಾದ ರಾಜ್ಯದ ರೈತರು ಆರ್ಥಿಕ ಸಂಕಷ್ಟ ಅನುಭವಿಸುತ್ತಿದ್ದಾರೆ. ಸತತವಾಗಿ ಅತಿವೃಷ್ಟಿ ಮತ್ತು ಅನಾವೃಷ್ಟಿಗೆ ಸಿಲುಕಿದ ರೈತರ ಸಂಪೂರ್ಣ ಸಾಲ ಮನ್ನಾ ಮಾಡುವಂತೆ ಕರ್ನಾಟಕ ರಾಜ್ಯ ರೈತ ಸಂಘ ಜಿಲ್ಲಾ ಘಟಕದ ಪದಾಧಿಕಾರಿಗಳು ಆಗ್ರಹಿಸಿದರು.

ಈ ಕುರಿತು ಬೀದರ್ ಜಿಲ್ಲಾಧಿಕಾರಿಗಳ ಕಚೇರಿ‌ ಮುಂದೆ ಪ್ರತಿಭಟನೆ ನಡೆಸಿ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಬರೆದ ಹಕ್ಕೊತ್ತಾಯ ಪತ್ರವನ್ನು ಸಹಾಯಕ ಆಯುಕ್ತರಿಗೆ ಸಲ್ಲಿಸಿದರು.

“ರಾಜ್ಯದ ಸಹಕಾರ ಸಂಸ್ಥೆಗಳ ಮೂಲಕ ಸಾಲ ಪಡೆದು ಸುಸ್ತಿ ಆಗಿರುವ ಮಧ್ಯಮಾವಧಿ ಹಾಗೂ ದೀರ್ಘಾವಧಿ ಕೃಷಿ ಹಾಗೂ ಕೃಷಿ ಸಂಬಂಧಿತ ಸಾಲಗಳ ಅಸಲು ಫೆ.28ರ ಒಳಗಾಗಿ ಪಾವತಿಸಿದಲ್ಲಿ ಅದರ ಮೇಲಿನ ಬಡ್ಡಿ ಮನ್ನಾ ಮಾಡಲು ಘೋಷಿಸಿದ ರಾಜ್ಯ ಸರ್ಕಾರ ಯಾವ ಮಾನದಂಡ ಆಧರಿಸಿದೆ” ಎಂದು ಪ್ರಶ್ನಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಮೊದಲೇ ಜಿಲ್ಲೆಯ ರೈತರು ಬರಗಾಲದಿಂದ ತತ್ತರಿಸಿದ್ದಾರೆ.ಈ ಮಧ್ಯೆ ಎನ್‌ಡಿಆರ್‌ಎಫ್ ಮತ್ತು ಎಸ್‌ಡಿಆರ್‌ಎಫ್ ಹಣ ಸಹಿತ ಇನ್ನೂ ಕೊಟ್ಟಿಲ್ಲ. ಸಕ್ಕರೆ ಕಾರ್ಖಾನೆಗೆ ಕಬ್ಬು ಪೂರೈಸಿ ರೈತರಿಗೆ 3-4 ತಿಂಗಳಾದರೂ ಕಬ್ಬಿನ ಬಿಲ್‌ ಪಾವತಿಸಿಲ್ಲ. ಇಂತಹ ಸಂಕಷ್ಟ ಎದುರಿಸುತ್ತಿರುವ ರೈತರು ಫೆ.28 ರ ಒಳಗಾಗಿ ಸಾಲದ ಅಸಲು ಪಾವತಿಸಲು ಹೇಗೆ ಸಾಧ್ಯವಿದೆ. ಸರ್ಕಾರಕ್ಕೆ ರೈತರ ಸಾಲದ ಬಡ್ಡಿ ಮನ್ನಾ ಮಾಡುವ ಉದ್ದೇಶವಿದ್ದರೆ ಕೂಡಲೇ ಸಕ್ಕರೆ ಕಾರ್ಖಾನೆಗಳಿಂದ ರೈತರಿಗೆ ಕಬ್ಬಿನ ಬಿಲ್ ಕೊಡಿಸಬೇಕು” ಎಂದು ಒತ್ತಾಯಿಸಿದರು.

“ಕಾರ್ಖಾನೆಗಳು ಕಬ್ಬು ಪುರೈಸಿದ ರೈತರಿಗೆ 15 ದಿನಗಳಲ್ಲಿ ಹಣ ಪಾವತಿಸುವ ನಿಯಮವಿದೆ. ಇಲ್ಲದಿದ್ದರೆ ಶೇ.14% ಬಡ್ಡಿ ಸಹಿತ ಹಣ ರೈತರಿಗೆ ನೀಡಬೇಕೆಂಬ ನಿಯಮವಿದೆ. ಆದರೆ ರೈತರು ನಿಗದಿತ ಸಮಯಕ್ಕೆ ಬ್ಯಾಂಕಿಗೆ ಹಣ ಕಟ್ಟದಿದ್ದರೆ ಚಕ್ರ ಬಡ್ಡಿ ಸಹಿತ ವಸೂಲಿ ಮಾಡುವ ಸರ್ಕಾರಕ್ಕೆ ರೈತರಿಗೆ ಬಡ್ಡಿ ಸಹಿತ ಹಣ ಪಾವತಿಸಲು ಆಗುವುದಿಲ್ಲ” ಎಂದರು.

“ರಾಜ್ಯದಲ್ಲಿ ಹಾಗೂ ಜಿಲ್ಲೆಯಲ್ಲಿ ತೀವ್ರ ಮಳೆ-ಬೆಳೆ ಕೊರತೆಯಿಂದ ಈ ವರ್ಷ ಬರಗಾಲ ಆವರಿಸಿದೆ. ರೈತರು ತೀವ್ರ ಸಂಕಷ್ಟದಲ್ಲಿರುವ ರೈತರಿಗೆ ಜಿಲ್ಲೆಯ ಎಲ್ಲ ಶಾಸಕರು, ಮಂತ್ರಿಗಳು ಪಕ್ಷಾತೀತವಾಗಿ ಚರ್ಚಿಸಿ ಜಿಲ್ಲೆಯ ರೈತರಿಗೆ ನ್ಯಾಯ ಒದಗಿಸಬೇಕು. ಇಲ್ಲದಿದ್ದರೆ ಶಾಸಕ, ಸಚಿವರ ಮುನೆ ಎದುರು ಧರಣಿ ನಡೆಸಿ ಘೇರಾವ್‌ ಹಾಕಲಾಗುವುದು” ಎಂದು ಎಚ್ಚರಿಸಿದರು.

ಈ ಸುದ್ದಿ ಓದಿದ್ದೀರಾ? ಬೀದರ್‌ | ಸಂವೇದನಶೀಲರು ವಚನ ಪರಂಪರೆಯ ಮುಂದುವರಿಕೆಗೆ ಶ್ರಮಿಸಬೇಕು : ವಿಕ್ರಮ ವಿಸಾಜಿ

ಈ ಸಂದರ್ಭದಲ್ಲಿ ರೈತ ಸಂಘದ ಮಹಿಳಾ ಘಟಕ ಜಿಲ್ಲಾಧ್ಯಕ್ಷ ಶಾಂತಮ್ಮಾ ಮೂಲಗೆ, ಬೀದರ್‌ ತಾಲೂಕಾಧ್ಯಕ್ಷ ಬಸವರಾಜ ಅಷ್ಟೂರ್‌, ಬಸವಕಲ್ಯಾಣ ತಾಲೂಕಾಧ್ಯಕ್ಷ ರುದ್ರಯ್ಯಾ ಸ್ವಾಮಿ,  ವಿಠ್ಠಲ ರೆಡ್ಡಿ  ಸೇರಿದಂತೆ ಪ್ರಮುಖರಾದ ವಿಠ್ಠಲರಾವ್‌ ಮೇತ್ರೆ, ಶಿವಕಾಂತ ಖಂಡೆ, ವಿಜಯಕುಮಾರ್‌ ಬಾವಗೆ ಸೇರಿದಂತೆ ಇತರರಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...