ಮೈಸೂರು | ಅ.18 ರಂದು ಯಾದಗಿರಿಯಲ್ಲಿ ರೈತ ಸಮಾವೇಶ : ಬಡಗಲಪುರ ನಾಗೇಂದ್ರ

Date:

ಮೈಸೂರಿನ ಪತ್ರಕರ್ತರ ಭವನದಲ್ಲಿ ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯಾಧ್ಯಕ್ಷರಾದ ಬಡಗಲಪುರ ನಾಗೇಂದ್ರ ಮಾತನಾಡಿ, ಇದೇ ಅಕ್ಟೋಬರ್.18 ರಂದು ಯಾದಗಿರಿಯಲ್ಲಿ ರೈತ ಸಮಾವೇಶ ನಡೆಯಲಿದೆ ಎಂದು ಮಾಹಿತಿ ನೀಡಿದರು.

“ಅತಿವೃಷ್ಟಿ, ಅನಾವೃಷ್ಟಿಯಿಂದ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ರಾಜ್ಯ ಸರ್ಕಾರಕ್ಕಾಗಲಿ, ಕೇಂದ್ರ ಸರ್ಕಾರಕ್ಕಾಗಲಿ ರೈತರ ಕಾಳಜಿಯಿಲ್ಲ. ಇಂತಹ ಸಂದರ್ಭದಲ್ಲಿ ರೈತರ ಪರವಾಗಿ ನಿಲ್ಲಬೇಕಿದೆ. ರೈತರ ಸಾಲ ಮನ್ನಾ ಸೇರಿದಂತೆ, ಹೆಚ್ಚು ಮಳೆಯಿಂದ, ಬರದಿಂದ ನಷ್ಟ ಹೊಂದಿದ ರೈತರಿಗೆ ಪರಿಹಾರ ಕಲ್ಪಿಸುವಂತೆ ಆಗ್ರಹಿಸಿ ‘ರೈತ ಸಮಾವೇಶ’ ನಡೆಸುತ್ತಿರುವುದಾಗಿ” ಹೇಳಿದರು.

ಸತತವಾಗಿ ರೈತರು ಒಂದಲ್ಲಾ ಒಂದು ಸಮಸ್ಯೆಗೆ ಸಿಲುಕುತಿದ್ದಾರೆ. ರಾಜ್ಯದಲ್ಲಿ ಒಂದೊಂದು ಕಡೆ ಮಳೆಯಾಗದೆ ಬರದ ಪರಿಸ್ಥಿತಿ, ಇನ್ನೊಂದು ಕಡೆ ಬರಪೂರ ಮಳೆ. ರೈತ ಬೆಳೆ ಬೆಳೆಯಲು, ಬೆಳೆದ ಬೆಳೆ ಉಳಿಸಿಕೊಳ್ಳಲು ಪರದಾಡುವ ಪರಿಸ್ಥಿತಿ ಎದುರಾಗಿದೆ. ಅದಲ್ಲದೆ, ಇತ್ತೀಚಿಗೆ ವರ್ಷದ ಮಳೆಯಾಗಿ ಪರಿಣಮಿಸಿದ್ದರಿಂದ ರೈತ ಯಾವ ಸಂದರ್ಭದಲ್ಲಿ ಏನು ಮಾಡಬೇಕು ಎನ್ನುವುದೇ ತಿಳಿಯದ ಪರಿಸ್ಥಿತಿಯು ನಿರ್ಮಾಣವಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಅಂಕಿ ಅಂಶಗಳ ಪ್ರಕಾರ ಹೇಳುವುದಾದರೆ 2002 ನೇ ಸಾಲಿನಿಂದ ಈಚೆಗೆ 23 ವರ್ಷಗಳ ಅವಧಿಯಲ್ಲಿ 17 ಬಾರಿ ಅತಿವೃಷ್ಟಿ, 4 ಬಾರಿ ಬರ ಕಂಡಿದ್ದೇವೆ. ಹೀಗಾದರೆ ರೈತರ ಕಥೆಯೇನು? ಎನ್ನುವುದು ನಮ್ಮುಂದಿರುವ ಪ್ರಶ್ನೆ.

ಒಂದೆಡೆ ಅತಿಯಾದ ಮಳೆಯಿಂದ ಬೆಳೆ ನೆಲ ಕಚ್ಚಿದೆ, ಇನ್ನೊಂದೆಡೆ ಬರದಿಂದ ಬೆಳೆಯಾಗಿಲ್ಲ, ಕೆಲವು ಕಡೆ ಕಳಪೆ ಬಿತ್ತನೆ ಬೀಜದಿಂದ ರೈತ ನಷ್ಟ ಅನುಭವಿಸಿದ್ದಾನೆ ಇದನ್ನೆಲ್ಲಾ ಪರಿಗಣಿಸಿ ಸರ್ಕಾರ ಸೂಕ್ತವಾದ ಪರಿಹಾರವನ್ನು ಎಕರೆ ಅನುಸಾರ ನೀಡಬೇಕು ಎಂದು ಆಗ್ರಹಿಸಿದರು.

ಸುದ್ದಿ ಓದಿದ್ದೀರಾ? ಮೈಸೂರು | ಮಾಹಿತಿ ಹಕ್ಕು ಅನುಷ್ಠಾನ ಸಭೆ; ಜಿಲ್ಲಾ ಮಟ್ಟದ ಅಧಿಕಾರಿಗಳು ಭಾಗಿ

ಪತ್ರಿಕಾಗೋಷ್ಠಿಯಲ್ಲಿ ವಿಭಾಗಿಯ ಪ್ರಧಾನ ಕಾರ್ಯದರ್ಶಿ ಹೊಸಕೋಟೆ ಬಸವರಾಜು, ರಾಜ್ಯ ಪ್ರಧಾನ ಕಾರ್ಯದರ್ಶಿ ನೇತ್ರಾವತಿ, ಮೈಸೂರು ಗ್ರಾಮಾಂತರ ಕಾರ್ಯದರ್ಶಿ ಮಂಟಕಳ್ಳಿ ಮಹೇಶ್ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...