ಮಂಡ್ಯ | ಏಕೀಕರಣಗೊಂಡ ರೈತಸಂಘದ ಅಡಿಯಲ್ಲಿ ರೈತ ದಿನಾಚರಣೆ

Date:

ವಿಶ್ವ ರೈತ ದಿನಾಚರಣೆ ಅಂಗವಾಗಿ ಸೋಮವಾರ ಮಂಡ್ಯದಲ್ಲಿ ಏಕೀಕರಣಗೊಂಡ ರೈತಸಂಘಗಳ ಅಡಿಯಲ್ಲಿ ಮೇಲುಕೋಟೆ ಶಾಸಕರು ಹಾಗೂ ರೈತ ಮುಖಂಡರಾದ ದರ್ಶನ್ ಪುಟ್ಟಣ್ಣಯ್ಯ ಕಛೇರಿಯಲ್ಲಿ ರೈತ ದಿನಾಚರಣೆಯನ್ನು ಆಚರಿಸಲಾಯಿತು.

IMG 20241224 WA0011

ಮಂಡ್ಯ, ಮದ್ದೂರು, ಶ್ರೀರಂಗಪಟ್ಟಣ, ಮಳವಳ್ಳಿ, ಪಾಂಡವಪುರ, ರೈತ ಮುಖಂಡರುಗಳು ದರ್ಶನ್ ಪುಟ್ಟಣ್ಣಯ್ಯ ಅಧ್ಯಕ್ಷತೆಯಲ್ಲಿ ಪುಟ್ಟಣ್ಣಯ್ಯ ಹಾಗೂ ಭಾರತದ ಮಾಜಿ ಪ್ರಧಾನಿ ಚೌಧರಿ ಚರಣ್ ಸಿಂಗರ ಜನ್ಮದಿನವನ್ನು ವಿಶೇಷವಾಗಿ ಒಟ್ಟಿಗೆ ಆಚರಿಸಲಾಯಿತು.

ರೈತ ದಿನಾಚರಣೆಯ ನೆಪದಲ್ಲಿ ಕರ್ನಾಟಕ ರಾಜ್ಯ ರೈತ ಸಂಘಗಳ ಒಗ್ಗೂಡಿಸುವ ಯತ್ನಕ್ಕೆ ವೇಗ ಸಿಕ್ಕಿದೆ. ‌ ಈ ನಡೆ ಜಿಲ್ಲೆಯಲ್ಲಿ ಮತ್ತು ರಾಜ್ಯದಲ್ಲಿ ರೈತರ ನಡುವೆ ಆಶಾಕಿರಣ ಮೂಡಿಸಿದೆ. ಒಂದೇ ಸೂರಿನಡಿ, ಸಿದ್ದಾಂತ ಆಧಾರದ ಮೇಲೆಯೇ ಚಳುವಳಿಗಳು ನಡೆಸುವ ಇಚ್ಚೆಗೆ ಇಂಬು ಸಿಕ್ಕಿದೆ. ಮಂಡ್ಯ ಜಿಲ್ಲೆಯ ರೈತ ಸಂಘಗಳ ಒಗ್ಗೂಡಿವಿಕೆ ಆದ್ಯತೆ ಇರಬೇಕು ಎಂಬುದು ಸಭೆಯಲ್ಲಿ ಹಾಜರಿದ್ದ ರೈತ ಮುಖಂಡರ ಅಂಬೋಣ ಆಗಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಒಗ್ಗೂಡಿಸುವ ಯತ್ನಕ್ಕೆ ಶಾಸಕರು ಕೂಡ ಕೈಜೋಡಿಸಿದ್ದಾರೆ. ಈಗಾಗಲೇ ಸಾಕಷ್ಟು ಪ್ರಮಾಣದಲ್ಲಿ ಪ್ರಯತ್ನಗಳು ಮುನ್ನೆಲೆಗೆ ಬಂದಿವೆ. ಹಂತ ಹಂತವಾಗಿ ಕಾರ್ಯ ರೂಪಕ್ಕೆ ತರಲು ಎಲ್ಲರ ಸಹಕಾರ, ಸಹಮತ ಅಗತ್ಯ‌. ಜಿಲ್ಲೆಯ ರೈತ ಮುಖಂಡರ ಸಭೆ ಮಾಡಿ ಒಗ್ಗೂಡಿಸುವ ಮೂಲಕ ಹೊಸ ದಿಕ್ಕು ಆರಂಭಿಸುವ ಆಲೋಚನೆ ಮಾಡೋಣ ಎಂಬ ಇಂಗಿತ ಎಲ್ಲರ ನಡುವೆ ವ್ಯಕ್ತವಾಗಿದೆ.

ಇದನ್ನು ಓದಿದ್ದೀರಾ? ರಾಮನಗರ | ಮೇಡನಹಳ್ಳಿ ಸರಕಾರಿ ಶಾಲೆಯ ಗ್ರಂಥಾಲಯಕ್ಕೆ ಕನ್ನಡ ಪುಸ್ತಕಗಳ ಕೊಡುಗೆ

ಇತಿಹಾಸ ಹೊಂದಿರುವ ರೈತ ಚಳವಳಿಯನ್ನು ಉಳಿಸುವ ಪ್ರಯತ್ನ ಆಗಲೇಬೇಕು ಎಂದು ರೈತ ಮುಖಂಡರು ಸಭೆಯಲ್ಲಿ ಪ್ರಸ್ತಾಪಿಸಿದರು. ಸಭೆಯಲ್ಲಿ ಶಾಸಕರಾದ ದರ್ಶನ್ ಪುಟ್ಟಣ್ಣಯ್ಯ ಇಂಡವಾಳು ಚಂದ್ರಶೇಖರ್, ಮಂಜೇಶ್ ಗೌಡ, ಮರಿ ಚನ್ನೇಗೌಡ, ಶಿವಳ್ಳಿ ಚಂದ್ರು, ಅಣ್ಣೂರು ಮಹೇಂದ್ರ, ಶಂಭೂನಳಹಳ್ಳಿ ಸುರೇಶ, ಬಾಲು, ಪ್ರಭುಲಿಂಗ, ವೆಂಕಟೇಶ್, ಮರಲಿಂಗಯ್ಯ, ಲಿಂಗರಾಜು, ಪುಟ್ಟಸ್ವಾಮಿ, ಸುರೇಶ್, ಇಂಡುವಾಳು ಸಿದ್ದೇಗೌಡ ಇನ್ನೂ ಮುಂತಾದ ರೈತ ಮುಖಂಡರು ಚಿಂತನಾ ಸಭೆಯಲ್ಲಿ ಹಾಜರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...