ಮೈಸೂರು | ಹೇಮಾವತಿಯಿಂದ ನಾಲೆಗೆ ನೀರು ಹರಿಸಿ; ರೈತರಿಂದ ಪ್ರತಿಭಟನೆ

Date:

ಕರ್ನಾಟಕ ರಾಜ್ಯ ರೈತ ಸಂಘದ ಮುಖಂಡರು ಹಾಗೂ ಕಾರ್ಯಕರ್ತರು ಮೈಸೂರಿನ ಪ್ರಾದೇಶಿಕ ಆಯುಕ್ತರ ಕಚೇರಿ ಮುಂಭಾಗ ಜಮಾಯಿಸಿ ಹೇಮಾವತಿಯಿಂದ ಕೆರೆಗಳಿಗೆ ನೀರು ಹರಿಸುವಂತೆ ಹಾಗೂ ಕಾವೇರಿ ಕೊಳ್ಳದ ಎಲ್ಲ ಕೆರೆಕಟ್ಟೆಗಳಿಗೆ ನೀರು ಹರಿಸಿ ತುಂಬಿಸುವಂತೆ ಆಗ್ರಹಿಸಿ ಪ್ರತಿಭಟನೆ ನಡೆಸಿದರು.

ಪಾಂಡವಪುರ, ಕೆ ಆರ್ ಪೇಟೆ , ನಾಗಮಂಗಲ, ಮಂಡ್ಯ ತಾಲ್ಲೂಕಿನ ಅಚ್ಚುಕಟ್ಟು ಪ್ರದೇಶದಲ್ಲಿ ಬೆಳೆದ ಬೆಳೆಗಳಿಗೆ ನೀರಿಲ್ಲದೆ ಒಣಗುತ್ತಿವೆ.ಈ ಸಂಭಂದ ತಿಂಗಳು ಗಟ್ಟಲೆಯಿಂದ ಕೆ ಆರ್ ಪೇಟೆ ತಾಲ್ಲೂಕು ಕಛೇರಿ ಮುಂಭಾಗದಲ್ಲಿಯೂ ಸಹ ಪ್ರತಿಭಟನೆ ನಡೆಸಿ, ರೈತ ಸಂಘ ಜಿಲ್ಲಾದ್ಯಂತ ನಿರಂತರವಾಗಿ ಪ್ರತಿಭಟಿಸಿ, ಸಬಂಧಪಟ್ಟ ಅಧಿಕಾರಿಗಳಿಗೆ, ಇಲಾಖೆಗೆ ಮನವಿ ಮಾಡಿದರು ಇದುವರೆಗೆ ಸ್ಪಂದಿಸಿಲ್ಲ.

ಕೂಡಲೇ ನಾಲೆಗಳಿಗೆ ನೀರು ಹರಿಸಬೇಕು, ರೈತರ ಬೆಳೆ ಉಳಿಸಬೇಕು.ಸರಿಯಾದ ಸಮಯಕ್ಕೆ ನೀರು ಬಿಡದೆ ಹೋದರೆ ಬೆಳೆ ನಷ್ಟವಾಗಿ, ರೈತ ಸಾಲಕ್ಕೆ ಗುರಿಯಾಗಬೇಕಾಗುತ್ತದೆ.ಅಧಿಕಾರಿಗಳು ಈ ಬಗ್ಗೆ ಸ್ಪಂದಿಸಬೇಕು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬೇಸಿಗೆಯ ಬಿಸಿಲಿಗೆ ಕಾವೇರಿ ಕೊಳ್ಳದ ಕೆರೆಕಟ್ಟೆಗಳು ಒಣಗಿದ್ದು ನೀರು ಹರಿಸಿ ತುಂಬಿಸಬೇಕು, ಜಾನುವಾರು, ರೈತರಿಗೆ ಅನುಕೂಲ ಆಗುವಂತೆ ಮಾಡಬೇಕಾಗಿ ವಿನಂತಿ ಮಾಡಿದರು.

ರೈತರ ಕೃಷಿ ಪಂಪ್ ಸೆಟ್ ಗಳಿಗೆ ಕನಿಷ್ಠ 7 ಗಂಟೆವರೆಗಿನ ತ್ರಿ ಫೇಸ್ ವಿದ್ಯುತ್ ಪೂರೈಕೆ ಮಾಡಬೇಕು ಎಂದು ರಾಜ್ಯಾಧ್ಯಕ್ಷ ಬಡಗಲಪುರ ನಾಗೇಂದ್ರ ಒತ್ತಾಯಿಸಿದರು.

ಈ ಸುದ್ದಿ ಓದಿದ್ದೀರಾ? ಮೈಸೂರು | ಮುಂಗಾರಿನ ಮೊದಲ ಉಳುಮೆ ‘ ಹೊನ್ನಾರು ‘

ಪ್ರತಿಭಟನೆಯಲ್ಲಿ ರೈತಸಂಘದ ಹಿರಿಯ ಮುಖಂಡರಾದ ಜಯರಾಂ,ಮಂಡ್ಯ ಜಿಲ್ಲಾಧ್ಯಕ್ಷ ಕೆಂಪುಗೌಡ,ರಾಜ್ಯ ಕಾರ್ಯದರ್ಶಿ ಹೊಸಕೋಟೆ ಬಸವರಾಜು,ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪಿ ಮರಂಕಯ್ಯ, ತಾಲ್ಲೂಕು ಅಧ್ಯಕ್ಷರುಗಳಾದ ಪುಟ್ಟೇಗೌಡ, ಆನಂದೂರು ಪ್ರಭಾಕರ್ ಸೇರಿದಂತೆ ಇನ್ನಿತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...