ಮಂಡ್ಯ | ಉದ್ಘಾಟನೆಗೆ ಸಿದ್ದವಾದ ‘ ರೈತ ಶಾಲೆ ‘

Date:

ಮಂಡ್ಯ ಜಿಲ್ಲೆ, ಗ್ರಾಮಾಂತರ ತಾಲ್ಲೂಕಿನ ಆಲಕೆರೆ ಗ್ರಾಮದಲ್ಲಿ ರಾಜ್ಯದಲ್ಲೇ ಮೊಟ್ಟ ಮೊದಲ ಬಾರಿಗೆ ‘ ರೈತ ಶಾಲೆ ‘ ನಿರ್ಮಿಸಿದ್ದು ಉದ್ಘಾಟನೆಗೆ ಸಿದ್ದವಾಗಿದೆ.

ರೈತರಿಗೆ ಅಗತ್ಯ ಇರುವ ಕೃಷಿಗೆ ಪೂರಕವಾದ ಮಾಹಿತಿ ನೀಡುವುದು. ವಿದ್ಯಾವಂತರನ್ನು ಕೃಷಿಯ ಕಡೆಗೆ ಆಕರ್ಶಿಸುವಂತೆ ಮಾಡುವುದು ಹಾಗೂ ಉದ್ಯೋಗಕ್ಕಾಗಿ ಪರ ಊರಿಗೆ ಗುಳೆ ಹೋಗದಂತೆ ತಡೆಯುವ ನಿಟ್ಟಿನಲ್ಲಿ ಶಿಕ್ಷಕರ ತಂಡವೊಂದು ಮಹತ್ವದ ಪ್ರಯತ್ನಕ್ಕೆ ಕೈಹಾಕಿದೆ.

ಏಳು ಶಿಕ್ಷಕರ ತಂಡ ಸೇರಿ ಕೃಷಿಯ ಸಾಧಕ – ಬಾಧಕ ಚರ್ಚಿಸಿ, ಹೆಚ್ಚುತ್ತಿರುವ ರೈತರ ಆತ್ಮಹತ್ಯೆ, ಬರದಿಂದ ರೈತರು ಅನುಭವಿಸಿದ ಸಂಕಷ್ಟಗಳು, ಬೆಳೆದ ಬೆಳೆಗೆ ಬೆಲೆ ಸಿಗದಿರುವುದು ಜೊತೆಗೆ ಮಾರುಕಟ್ಟೆ ಸಮಸ್ಯೆ, ಸಾಲ ಇಂತಹ ವಿಚಾರಗಳನ್ನು ಬಹು ಮುಖ್ಯವಾಗಿರಿಸಿಕೊಂಡು ಉಪನ್ಯಾಸಕ ಸತ್ಯಮೂರ್ತಿ ಅವರ ನೇತೃತ್ವದಲ್ಲಿ ‘ ರೈತ ಶಾಲೆ ‘ ನಿರ್ಮಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

₹6 ಲಕ್ಷ ರೂಪಾಯಿ ವೆಚ್ಚದಲ್ಲಿ ಕೆಂಪೇಗೌಡ ಒಕ್ಕಲಿಗರ ಕ್ಷೇಮಾಭಿವೃದ್ಧಿ ಸಂಘ ಹಾಗೂ ಶಿಕ್ಷಕರ ತಂಡದ ಜೊತೆಗೆ 80 ಜನರು ಸೇರಿ ಸುಸರ್ಜಿತವಾದ ಕಟ್ಟಡ ಕಟ್ಟಿದ್ದಾರೆ. ಈ ತಂಡ ಬೇರೆ ಬೇರೆ ಊರುಗಳಿಗೆ ಭೇಟಿ ಕೊಟ್ಟು ಕೃಷಿ ತಜ್ಞರು, ಪ್ರಗತಿಪರ ರೈತರಿಂದ ಮಾಹಿತಿ ಪಡೆದು ರೈತರಿಗೆ ಶಿಕ್ಷಣದ ಜೊತೆಗೆ ತರಬೇತಿ ಶಿಬಿರ, ಮಾದರಿ ಕೃಷಿ ಕ್ಷೇತ್ರಗಳಿಗೆ ಭೇಟಿ ನೀಡುವುದು, ತಜ್ಞರನ್ನು ಕರೆದು
ಮಾಹಿತಿ ಕೊಡಿಸುವುದು ಇದರ ಉದ್ದೇಶವಾಗಿದೆ.

ಇದರ ಮೂಲಕ ರೈತರಿಗೆ ಬೀಜಗಳನ್ನು ವಿತರಿಸಿ ಅವುಗಳನ್ನು ಭವಿಷ್ಯಕ್ಕೆ ಸಂರಕ್ಷಿಸಲು ಉತ್ತೇಜನ ನೀಡಬೇಕಿದೆ. ಬೀಜಕ್ಕಾಗಿ ಕಂಪನಿಗಳ ಮೊರೆ ಹೋಗದಂತೆ ತಡೆಯಬೇಕಿದೆ. ಜೊತೆಗೆ ಸ್ವಾವಲಂಬಿಗಳಾಗಿ ಕೃಷಿ ನಡೆಸುವುದು ಬಹು ಮುಖ್ಯವಾದ ಗುರಿ ಎಂದು ಸತ್ಯಮೂರ್ತಿ ತಿಳಿಸಿದ್ದಾರೆ.

ಮುಂಬರುವ ದಿನಗಳಲ್ಲಿ ಭತ್ತ ಕಟಾವು ಯಂತ್ರ, ಕೃಷಿ ಸಲಕರಣೆಗಳು ರೈತರಿಗೆ ಕಡಿಮೆ ಬೆಲೆಯಲ್ಲಿ ಬಾಡಿಗೆ ನೀಡುವ ಯೋಜನೆಯನ್ನು ಸಹ ಸಿದ್ದಪಡಿಸಲಾಗಿದೆ. ಸಾವಯವ ಕೃಷಿ ಹಾಗೂ ನೈಸರ್ಗಿಕ ಕೃಷಿಯನ್ನು ಕೈಗೊಳ್ಳಲು ಪ್ರೋತ್ಸಾಹ ನೀಡುವುದಾಗಿ ರಾಸಾಯನಿಕ ಹಾಗೂ ಕೀಟನಾಶಕ ಮುಕ್ತ ಕೃಷಿ ನಡೆಸುವಂತೆ ಅಣಿ ಮಾಡುವುದಾಗಿದೆ ಎಂದರು.

ಈ ಸುದ್ದಿ ಓದಿದ್ದೀರಾ? ಚಾಮರಾಜನಗರ | ಬಿಳಿಗಿರಿರಂಗನ ಬೆಟ್ಟದ ರೇಷ್ಮೆ ಕೃಷಿ ಕೇಂದ್ರಕ್ಕೆ ಭೇಟಿ ನೀಡಿದ ಸಚಿವ ಕೆ. ವೆಂಕಟೇಶ್

ಜೂನ್. 16 ರಂದು ಆದಿಚುಂಚನಗಿರಿ ಕ್ಷೇತ್ರದ ಪೀಠಧ್ಯಕ್ಷರಾದ ಡಾ. ನಿರ್ಮಲಾನಂದನಾಥ ಸ್ವಾಮೀಜಿ ರೈತ ಶಾಲೆ ಉದ್ಘಾಟಿಸಲಿದ್ದಾರೆ. ರೈತರಿಗೆ ಪ್ರವೇಶ ಉಚಿತವಾಗಿದ್ದು ಜಿಲ್ಲೆಯ ಯಾವುದೇ ಭಾಗದಿಂದ ರೈತರು ಬಂದು ವ್ಯವಸಾಯದ ಮಾಹಿತಿ ಪಡೆಯಬಹುದು. ಇದಕ್ಕಾಗಿ ಅಗತ್ಯ ವ್ಯವಸ್ಥೆ ಕೈಗೊಳ್ಳಲಾಗಿದೆ ಎಂದು ಮಾಹಿತಿ ನೀಡಿರುತ್ತಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...