ಯಾದಗಿರಿ | ಬೆಂಬೆಲ ಬೆಲೆಗೆ ಹತ್ತಿ ಖರೀದಿಸುವಂತೆ ರೈತ ಸಂಘ ಒತ್ತಾಯ

Date:

ಕೇಂದ್ರ ಸರ್ಕಾರ ಘೋಷಿಸಿದ ಬೆಂಬಲ ಬೆಲೆ ಯೋಜನೆಯಡಿ ಹತ್ತಿ ಖರೀದಿಸುವುದು ಸೇರಿದಂತೆ ವಿವಿಧ ಬೇಡಿಕೆಗಳು ಈಡೇರಿಕೆಗೆ ರೈತ ಸಂಘದ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ಸುರುಪುರ ಪಟ್ಟಣದಲ್ಲಿ ಕರ್ನಾಟಕ ರಾಜ್ಯ ರೈತ ಸಂಘ , ಹಸಿರು ಸೇನೆ ಹಾಗೂ ಸಾಮೂಹಿಕ ನಾಯಕತ್ವ ತಾಲೂಕು ಸಮಿತಿಯಿಂದ ಪ್ರತಿಭಟಿಸಿ ತಹಶೀಲ್ದಾರ್ ಮುಖಾಂತರ ಜಿಲ್ಲಾಧಿಕಾರಿಗಳಿಗೆ ಹಕ್ಕೊತ್ತಾಯ ಪತ್ರವನ್ನು ಸಲ್ಲಿಸಿದರು.

“ಬರಗಾಲದ ಸಂಕಷ್ಟದ ಪರಿಸ್ಥಿತಿಯಲ್ಲಿ ಕೂಡ ಅಲ್ಪ-ಸ್ವಲ್ಪ ಮಳೆಗೆ ರೈತರು ಸಾಲ ಸೂಲ ಮಾಡಿ ಬೀಜ, ಗೊಬ್ಬರ ಖರೀದಿಸಿ ಬಿತ್ತನೆ ಮಾಡಿದ ರೈತರು ಅತಂತ್ರಕ್ಕೆ ಸಿಲುಕಿದ್ದಾರೆ. ಮಳೆ ಕೊರತೆಯಿಂದ ತಾಲೂಕಿನಾದ್ಯಂತ ರೈತರು ಹತ್ತಿ ಬೆಳೆ ನಿರೀಕ್ಷೆಯಂತೆ ಬೆಳೆದಿಲ್ಲ, ಮಳೆ ಅಭಾವದಲ್ಲಿಯೂ ಬಿತ್ತನೆ ಮಾಡಿದ ಬೆಳೆ ಇದೀಗ ಕಟಾವಿಗೆ ಬಂದಿದೆ. ಆದರೆ ಸೂಕ್ತ ಬೆಲೆಯಿಲ್ಲದ ಕಾರಣ ಫಸಲಿಗೆ ಖರ್ಚು ಮಾಡಿದ ವೆಚ್ಚವೂ ಬಾರದ ರೀತಿಯಲ್ಲಿ ಖರೀದಿಸುತ್ತಾರೆ” ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಕಳೆದ ವರ್ಷವೂ ಹತ್ತಿ ಬೇಕಾಬಿಟ್ಟಿಯಾಗಿ ಖರೀದಿಸಿದ ಪರಿಣಾಮ ರೈತರು ಸಂಕಷ್ಟ ಅನುಭವಿಸಿದ್ದಾರೆ. ಇದರಿಂದ ರೈತರು ಆತ್ಮಹತ್ಯೆಗೆ ಶರಣಾಗುವ ಪರಿಸ್ಥಿತಿ ಬಂದೊದಗಿದೆ. ಇದನ್ನು ಅರಿತುಕೊಂಡು ಸಂಬಂಧಪಟ್ಟ ಕೃಷಿ ಇಲಾಖೆ, ಕೃಷಿ ಮಾರುಕಟ್ಟೆ ಅಧಿಕಾರಿಗಳು ರೈತರ ನೆರವಿಗೆ ಧಾವಿಸಬೇಕು. ನಿರ್ಲಕ್ಷವಹಿಸದಲ್ಲಿ ಸಂಬಂಧಪಟ್ಟ ಇಲಾಖೆಯ ಕಚೇರಿ ಮುಂದೆ ಉಗ್ರ ಹೋರಾಟ ಮಾಡುವುದಾಗಿ ಎಚ್ಚರಿಸಿದರು.

ಬೇಡಿಕೆಗಳು :

1. ತಾಲೂಕಿನ ಗ್ರಾಮೀಣ ಪ್ರದೇಶದ ರಸ್ತೆಗಳು ಮರಳು ಸಾಗಾಣಿಕೆಯಿಂದ ಹದಗೆಟ್ಟಿದ್ದು, ಧೂಳನಿಂದ ರೈತರು ಬೆಳೆದ ಬೆಳೆಗಳು ಸಂಪೂರ್ಣ ನಾಶವಾಗುವುದು ತಡೆಯಬೇಕು.

2. ಗ್ರಾಮೀಣ ಪ್ರದೇಶಗಳಲ್ಲಿ ಹಾಳಾದ ರಸ್ತೆಗಳು ದುರಸ್ತಿಗೊಳಿಸಬೇಕು, ರಸ್ತೆ ರಿಪೇರಿಗೆ ಟೆಂಡರ್ ಕರೆಯಬೇಕು.

3. ರಾಜ್ಯ ಸರ್ಕಾರದಿಂದ ಬಿಡುಗಡೆಯಾದ ಬರ ಪರಿಹಾರ ಹಣ ಜಿಲ್ಲಾಧಿಕಾರಿಗಳ ಖಾತೆಗೆ ಜಮೆಯಾಗಿದೆ ಎಂದು ಹೇಳುತ್ತಿದ್ದು, ಅದನ್ನು ತಕ್ಷಣವೇ ರೈತರ ಖಾತೆಗೆ ಜಮಾ ಮಾಡಬೇಕು.

4. ತಿಪ್ಪನಟಗಿಯಲ್ಲಿ ಸ್ಮಶಾನ ಭೂಮಿ ಅವಶ್ಯಕತೆವಿದ್ದು ಈ ಹಿಂದೆ ತಹಶೀಲ್ದಾರರು ಸರ್ಕಾರಿ ಗಾಯರಾಣ ಜಮೀನು ನೀಡಿ ಆದೇಶಿಸಿದ್ದರು. ಆದರೆ ಅದೇ ಗ್ರಾಮದ ಕೆಲವರು ಇದು ಸರ್ವೇ ನಂ. ನಲ್ಲಿರುವ ನಮ್ಮ ಜಮೀನು ಎಂದು ಅಂತ್ಯಸಂಸ್ಕಾರಕ್ಕೆ ಅಡ್ಡಿಪಡಿಸುತ್ತಿದ್ದಾರೆ. ಕೂಡಲೇ ಇದನ್ನು ಸರಿಪಡಿಸಬೇಕು.

ಈ ಸುದ್ದಿ ಓದಿದ್ದೀರಾ? ಕಲಬುರಗಿಯಲ್ಲಿ ವಕೀಲನ ಬರ್ಬರ ಕೊಲೆ: ಎಲ್ಲೆಡೆ ಭುಗಿಲೆದ್ದ ವಕೀಲರ ಆಕ್ರೋಶ

ಈ ಸಂದರ್ಭದಲ್ಲಿ ಹಣಮಂತ್ರಾಯ ಚಂದಲಾಪೂರ, ಸಾಹೇಬಗೌಡ ಮದಲಿಂಗನಾಳ,ಅಯ್ಯಣ್ಣ ಹಾಲಭಾವಿ, ಭೀಮಣ್ಣ ತಿಪ್ಪನಟಗಿ, ದೇವಿಂದ್ರಪ್ಪ ತಿಪ್ಪನಟಗಿ, ಭೀಮನಗೌಡ ಕರ್ನಾಳ, ಇಮಾಮಸಾಬ ತಿಪ್ಪನಟಗಿ, ಕಾಮರಾಯ, ರಾಮಕೃಷ್ಣ, ನಾಯ್ಕೋಡಿ, ಭೀಮಣ್ಣ ದೊಡ್ಡಮನಿ ಇನ್ನಿತರರು ಉಪಸ್ಥಿತರಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...