ಬಾಗೇಪಲ್ಲಿ | ಬಾರದ ಮಳೆಯಿಂದಾಗಿ ಬೆಳೆ ನಷ್ಟ: ‘ಬರಪೀಡಿತ ತಾಲೂಕು’ ಎಂದು ಘೋಷಿಸಲು ಮನವಿ

Date:

ಬಾಗೇಪಲ್ಲಿ ತಾಲೂಕಿನಲ್ಲಿ ಸರಿಯಾಗಿ ಮಳೆ ಬಾರದ ಹಿನ್ನೆಲೆಯಲ್ಲಿ ರೈತರಿಗೆ ಸಂಕಷ್ಟ ಎದುರಾಗಿದ್ದು, ಸರ್ಕಾರ ಕೂಡಲೇ ತಾಲೂಕಿನ ಬರಪೀಡಿತ ಎಂದು ಘೋಷಿಸಬೇಕು ಎಂದು ರೈತರು ಆಗ್ರಹಿಸಿದ್ದಾರೆ.

ತಾಲೂಕಿನ ಪಾತಪಾಳ್ಯ ಹೋಬಳಿಯ ಬಿಳ್ಳೂರು ಗ್ರಾಮ ಪಂಚಾಯತಿ ವ್ಯಾಪ್ತಿಯ ಉಗ್ರಾಣಂಪಲ್ಲಿ ಗ್ರಾಮದಲ್ಲಿ ಪ್ರಗತಿಪರ ಹಾಗೂ ರೈತ ಹಾಗೂ ಮುಖಂಡರಾದಂತಹ ನರಸಿಂಹರೆಡ್ಡಿಯವರು ಮಳೆಯಾಶ್ರಿತವಾಗಿ ಸುಮಾರು 5 ಎಕರೆಯಲ್ಲಿ ಮೆಕ್ಕೆಜೋಳದ ಬೆಳೆಯನ್ನು ಹಾಕಿರುತ್ತಾರೆ. ಆದರೆ ಸಕಾಲದಲ್ಲಿ ಮಳೆ ಬಾರದ ಹಿನ್ನೆಲೆಯಲ್ಲಿ ಬಹುತೇಕ ನಷ್ಟವನ್ನು ಅನುಭವಿಸುತ್ತಿದ್ದು, ಸಾಲದ ಸುಳಿಗೆ ಸಿಗುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ.‌ ಹಾಗಾಗಿ ಸರಕಾರಗಳು ಈ ರೀತಿಯ ಬೆಳೆ ನಷ್ಟವಾಗಿರುವ ಕಡೆ ಸೂಕ್ತ ರೀತಿಯಲ್ಲಿ ಸಮೀಕ್ಷೆ ನಡೆಸಿ ಬರಪೀಡಿತ ಪ್ರದೇಶವನ್ನಾಗಿ ಬಾಗೇಪಲ್ಲಿ ತಾಲೂಕನ್ನು ಘೋಷಿಸಲು ಆಗ್ರಹಿಸಿದ್ದಾರೆ.

ಅಷ್ಟೇ ಅಲ್ಲದೆ, ರೈತರ ಸಾಲ ಮನ್ನಾ ಮಾಡಿ,‌ ಸಾಲ ನೀಡುವುದನ್ನು ಮುಂದುವರಿಸಬೇಕು ಮತ್ತು ರೈತರಿಗೆ ನಷ್ಟ ಪರಿಹಾರಗಳು ಶೀಘ್ರವಾಗಿ ದೊರೆಯುವಂತೆ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
1001870125

ತೆನೆಕಟ್ಟದ ಜೋಳ

ತಾಲೂಕಿನ ಬಹುತೇಕ ಮಳೆಯಾಶ್ರಿತ ಮೆಕ್ಕೆ ಜೋಳದ ಬೆಳೆಯು ತೆನೆ ಕಟ್ಟುವ ವೇಳೆ ಮಳೆ ಬಾರದ ಹಿನ್ನೆಲೆಯಲ್ಲಿ‌ ತೆನೆ ಬಿಡದೆ, ಬೆಳೆ ಕಮರಿ ಹೋಗಿದೆ.

ಇದರಿಂದಾಗಿ ರೈತನು ಬೆಳೆ ನಿರ್ವಹಣೆಯ ಖರ್ಚು ಸಿಗದಂತಾಗಿ ಕಂಗಾಲಾಗಿದ್ದಾರೆ. ಹಾಗೆಯೇ ಶೇಂಗಾ ಬೆಳೆಯೂ ಕಾಯಿ ಬಲಿಯುವಾಗ ಮಳೆ ಬಾರದೆ, ಬೆಳೆ ನಷ್ಟವಾಗಿದೆ. ಇದರಿಂದಾಗಿ ತಾಲೂಕಿನ ಗೂಳೂರು, ಪಾತಪಾಳ್ಯ, ಕಸಬಾ ಸೇರಿದಂತೆ ಬಹುತೇಕ ಎಲ್ಲ ಹೋಬಳಿಗಳಲ್ಲೂ ಬೆಳೆ ನಷ್ಟ ಅನುಭವಿಸುತ್ತಿದ್ದಾರೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...