ಮೈಸೂರು | ಬೈಕ್, ಟ್ಯಾಕ್ಸಿ ನಿಷೇಧ ವಾಪಸ್ ಪಡೆಯುವಂತೆ ಆಗ್ರಹಿಸಿ ಉಪವಾಸ ಸತ್ಯಾಗ್ರಹ

Date:

ಮೈಸೂರಿನ ಗಾಂಧಿ ವೃತ್ತದಲ್ಲಿಂದು ಬೈಕ್, ಟ್ಯಾಕ್ಷಿ ನಿಷೇಧ ವಾಪಸ್ ಪಡೆಯುವಂತೆ ಆಗ್ರಹಿಸಿ ಬೆಂಗಳೂರು, ಮಂಡ್ಯ, ದಾವಣಗೆರೆ, ರಾಮನಗರ ಹಾಗೂ ಸ್ಥಳೀಯವಾಗಿ ಚಾಲಕರು ಕುಟುಂಬ ಸಮೇತರಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಸಾರಿಗೆ ಸಚಿವರಾದ ರಾಮಲಿಂಗಾ ರೆಡ್ಡಿ ಅವರಿಗೆ ಬೈಕ್, ಟ್ಯಾಕ್ಸಿಗಳ ನಿಷೇಧ ತೆಗೆದು ಹಾಕಬೇಕೆಂದು ಒತ್ತಾಯಿಸಿ ಉಪವಾಸ ಸತ್ಯಾಗ್ರಹ ಪ್ರಾರಂಭಿಸಿದರು.

ಕರ್ನಾಟಕದಲ್ಲಿ ಬೈಕ್, ಟ್ಯಾಕ್ಸಿ ನಿಷೇಧ ಆದೇಶ ಚಾಲಕರ ಕುಟುಂಬಗಳ ಮೇಲೆ ನೇರ ಪರಿಣಾಮ ಬೀರಿದೆ. ಚಾಲಕ ವೃತ್ತಿಯನ್ನೇ ನಂಬಿರುವ ಕುಟುಂಬಗಳು ಈ ಆದೇಶದಿಂದಾಗಿ ಬೀದಿ ಪಾಲಾಗುವ ಆತಂಕದಲ್ಲಿದ್ದು ಜೀವನೋಪಾಯವನ್ನು ಉಳಿಸಿಕೊಳ್ಳಲು ಹಲವಾರು ಜಿಲ್ಲೆಗಳಿಂದ ಕುಟುಂಬ ಸಮೇತರಾಗಿ ಬಂದು ಉಪವಾಸ ಸತ್ಯಾಗ್ರಹಕ್ಕೆ ಮುಂದಾಗಿದ್ದಾರೆ.

ಚಾಲಕರಿಗೆ ಇದು ಬರೀ ಪ್ರತಿಭಟನೆಯಷ್ಟೇ ಅಲ್ಲಾ ಉಳಿವಿನ ಪ್ರಶ್ನೆ. ಈಗಾಗಲೇ ಬೈಕ್, ಟ್ಯಾಕ್ಸಿ ನಿಷೇಧ ಆದೇಶದಿಂದ ಹತಾಶೆಯಲ್ಲಿರುವ ಕುಟುಂಬಗಳು ತಮ್ಮ ಬದುಕಿಗಾಗಿ ತಮ್ಮ ವೃತ್ತಿಯನ್ನು ಉಳಿಸಿಕೊಳ್ಳಬೇಕಾದ ಸಂದರ್ಭ. ಕುಟುಂಬಗಳು ಬೈಕ್ ಟ್ಯಾಕ್ಸಿ ದುಡಿಮೆಯನ್ನೇ ಆಸರೆಯಾಗಿಸಿಕೊಂಡಿದ್ದು ಬೇರೆ ಮಾರ್ಗ ತೋಚುತಿಲ್ಲ. ಆದೇಶದಿಂದಾಗಿ ಮಕ್ಕಳ ವಿದ್ಯಾಭ್ಯಾಸ, ವಯಸ್ಸಾದವರ ಆರೋಗ್ಯ, ಕುಟುಂಬ ನಿರ್ವಹಣೆ ಮೇಲೆ ಪರಿಣಾಮ ಬೀರುವುದರಿಂದ ಕುಟುಂಬಗಳು ಸಂಕಷ್ಟದಲ್ಲಿವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಹಲವು ವರ್ಷಗಳಿಂದ ಬೈಕ್, ಟ್ಯಾಕ್ಸಿಗಳು ಜನ ಸಮುದಾಯಗಳಿಗೆ ಜೀವನಾಡಿಯಾಗಿವೆ. ಬೆಂಗಳೂರಿನಂತಹ ಮಹಾ ನಗರದಲ್ಲಿ ಜನರಿಗೆ ಟ್ರಾಫಿಕ್ ಒತ್ತಡ ನಿವಾರಿಸಲು ಮತ್ತು ತ್ವರಿತವಾಗಿ ಅಗತ್ಯವಿದ್ದ ಕಡೆಗೆ ಸಂಚರಿಸಲು ನೆರವಾಗುತ್ತವೆ. ಪಟ್ಟಣ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ಬೇರೆ ಉದ್ಯೋಗಗಳಿಲ್ಲದ ಯುವ ಜನರಿಗೆ ಏಕೈಕ ಆದಾಯದ ಮೂಲವಾಗಿದೆ.

ಸರ್ಕಾರದ ಇಬ್ಬಂದಿ ತನದ ಬಗ್ಗೆ ಬೇಸರ ವ್ಯಕ್ತಪಡಿಸಿದ ಪ್ರತಿಭಟನಾಕರರು ರಾಜ್ಯದಲ್ಲಿ ಬೈಕ್ ಓಡಿಸುವುದನ್ನು ನಿಷೇಧ ಮಾಡುತ್ತಾರೆ. ಆದರೆ, ಅದೇ ಸ್ವಿಗ್ಗಿ, ಜೋಮೊಟೊ, ಆನ್ಲೈನ್ ವ್ಯಾಪಾರಕ್ಕೆ ಅಡ್ಡಿ ಪಡಿಸುವುದಿಲ್ಲ. ನಮ್ಮಿಂದ ತೊಂದರೆ ಏನಾಗುತ್ತದೆ?. ಅವರೆಲ್ಲ ಮನೆ ಮನೆ ತೆರಳಿ ಫುಡ್ ಆರ್ಡರ್ ಕೊಡಬಹುದು. ಅದೇ ನಾವುಗಳು ಪ್ರಯಾಣಿಕರನ್ನು ಕರೆದುಕೊಂಡು ಹೋಗುವಂತಿಲ್ಲ. ಇದು ಯಾವ ನ್ಯಾಯ. ಅವರಿಗಿರದ ಕಾನೂನು ನಮ್ಮ ಮೇಲೆ ಹೇರಿ ನಮ್ಮ ಕುಟುಂಬಗಳನ್ನು ಬೀದಿಗೆ ತರುತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ದ್ವಿಚಕ್ರ ವಾಹನಗಳನ್ನು ಆಹಾರ ಮತ್ತು ಪಾರ್ಸಲ್ ಪೂರೈಕೆಗೆ ಬಳಸಬಹುದಾದರೆ, ಅದೇ ವಾಹನಗಳನ್ನು ಪ್ರಯಾಣಿಕರನ್ನು ಕರೆದುಕೊಂಡು ಹೋಗಲು ಚಾಲಕರಿಗೆ ರೈಡರ್ ದಂಡ ವಿಧಿಸಲಾಗುತ್ತಿದೆ. ಗಿಗ್ ಅರ್ಥವ್ಯವಸ್ಥೆ ಮತ್ತು ಅದೇ ಮೋಟಾರ್ ವಾಹನಗಳ ಕಾಯ್ದೆಯಡಿ ಬರುತ್ತವೆ. ಹಾಗಿದ್ದರೂ, ಏಕೆ ಈ ತಾರತಮ್ಯ?. ನಾವು ವಿಶೇಷವಾಗಿ ಪರಿಗಣಿಸಿ ಎಂದು ಕೇಳುತ್ತಿಲ್ಲ. ನಮ್ಮನ್ನು ನ್ಯಾಯಯುತವಾಗಿ ನೋಡಿ ಎಂದಷ್ಟೇ ಕೇಳುತ್ತಿದ್ದೇವೆ. ನಾವು ಕೆಲಸ ಮಾಡಲಷ್ಟೇ ಬಯಸುತ್ತೇವೆ ಎಂದರು.

ಈ ಸುದ್ದಿ ಓದಿದ್ದೀರಾ? ಕೊಡಗು | ಮಾನವ – ವನ್ಯಜೀವಿ ಸಂಘರ್ಷ ತಡೆಗೆ ಶ್ರಮಿಸಿ : ಸಚಿವ ಎನ್ ಎಸ್ ಭೋಸರಾಜು

ಬೈಕ್, ಟ್ಯಾಕ್ಸಿ ನಿಷೇಧ ಚಾಲಕರುಗಳಿಗೆ ತೀವ್ರ ಹಾನಿಯುಂಟು ಮಾಡಿದೆ. ಹಲವಾರು ಮಂದಿ ಈಗಾಗಲೇ ತಮ್ಮ ಉಳಿತಾಯ ಖಾಲಿ ಮಾಡಿಕೊಂಡಿದ್ದಾರೆ. ಜೀವನ ನಡೆಸಲು ಕಷ್ಟಪಡುತ್ತಿದ್ದಾರೆ. ಕೆಲವರು ತಮ್ಮ ಕುಟುಂಬಗಳನ್ನು ಪೋಷಿಸಲು ಬೀದಿಗಳಲ್ಲಿ ಭಿಕ್ಷೆ ಬೇಡುತ್ತಿದ್ದಾರೆ. ಸಂಕಟವನ್ನು ಯಾರಿಗೂ ಹೇಳಾಲಾರದೆ, ಯಾರನ್ನು ಕೇಳಲಾರದೆ. ಉಪವಾಸ ಸತ್ಯಾಗ್ರಹಕ್ಕೆ ಕುಳಿತಿದ್ದೇವೆ. ಬೈಕ್, ಟ್ಯಾಕ್ಷಿ ನಿಷೇಧ ವಾಪಸ್ ಪಡೆಯಿರಿ ನಾಗರಿಕರಿಗೆ ಉತ್ತಮವಾದ ಸೇವೆಯನ್ನು ಕಡಿಮೆ ದರದಲ್ಲಿ ನೀಡುತ್ತೇವೆ. ನಮ್ಮ ಹಾಗೂ ನಮ್ಮ ಕುಟುಂಬಗಳನ್ನು ಉಳಿಸಿ ಎಂದು ಮನವಿ ಮಾಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...