ಕಲಬುರಗಿ | ಸೋಲುವ ಭಯದಿಂದ ಮಲ್ಲಿಕಾರ್ಜುನ ಖರ್ಗೆ ಚುನಾವಣೆ ಕಣದಿಂದ ದೂರ : ಆರ್.‌ ಅಶೋಕ್

Date:

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರು ಕಳೆದ ಚುನಾವಣೆಯಲ್ಲಿ ಸೋಲು ಕಂಡಂತೆ ಈ ಬಾರಿಯೂ ಸೋಲು ಖಚಿತ ಎಂಬ ಭಯದಿಂದಲೇ ಚುನಾವಣೆ ಕಣದಿಂದ ದೂರ ಸರಿದಿದ್ದಾರೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ ಟೀಕಿಸಿದರು.

ಕಲಬುರಗಿ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಕಾಂಗ್ರೆಸ್‌ನಲ್ಲಿ ಅಳಿಯ, ಮಕ್ಕಳು, ಕೋ ಬ್ರದರ್ಸ್, ಸೊಸೆ ಇವರೇ ಅಭ್ಯರ್ಥಿಗಳಾಗಿದ್ದಾರೆ” ಎಂದು ಕುಟುಕಿದರು.

“ಲೋಕಸಭೆ ಚುನಾವಣೆ ಘೋಷಣೆ ಮುನ್ನ ಬಹಳ ಅಭ್ಯರ್ಥಿಗಳು ಮೋದಿ ಹವಾದಲ್ಲಿ ಗೆಲ್ಲುತ್ತೇವೆ ಎಂದು ಅರ್ಜಿ ಹಾಕಿದ್ದರು. ನಂತರ ರಾಜ್ಯ ಮತ್ತು ಕೇಂದ್ರ ನಾಯಕರು ಅಭ್ಯರ್ಥಿಗಳನ್ನು ಆಯ್ಕೆ ಮಾಡಿದ್ದಾರೆ. ಬೀದರ್‌ ಅಭ್ಯರ್ಥಿ ಬಗ್ಗೆ ಸಾಕಷ್ಟು ಗೊಂದಲ ಸೃಷ್ಟಿಯಾಗಿತ್ತು. ಹಾಗಾಗಿ ಕಳೆದ ವಾರ ಬೀದರ್‌ಗೆ ಬರುತ್ತೇನೆ ಎಂದು ಹೇಳಿದ್ದೆ. ಶಾಸಕರು ಮತ್ತು ಪದಾಧಿಕಾರಿಗಳ ಜೊತೆ ಮಾತುಕತೆ ನಡೆಸುತ್ತೇನೆ. ಬೀದರ್-ಕಲಬುರಗಿ ಕ್ಷೇತ್ರದಲ್ಲಿ ನಾವೇ ಗೆಲ್ಲುತ್ತೇವೆ” ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬರ ಪರಿಹಾರದ ವಿಚಾರಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಮೊರೆ ಹೋದ ವಿಚಾರವಾಗಿ ಮಾತನಾಡಿದ ಅಶೋಕ್‌, ರಾಜ್ಯದ ಕಾಂಗ್ರೆಸ್ ನಾಯಕರಿಗೆ ನಾಚಿಕೆಗೇಡಿನ ಸಂಗತಿ. ರಾಜ್ಯದ ಕಾಂಗ್ರೆಸ್ ನಾಯಕರು, ಪಕ್ಕದ ತೆಲಂಗಾಣದ ಸಿಎಂ ರೇವಂತ ರೆಡ್ಡಿ ನೋಡಿ ಕಲಿಯಬೇಕು, ಅವರು ಸಹ ಕಾಂಗ್ರೆಸ್ ಪಕ್ಷದವರೇ ಆಗಿದ್ದಾರೆ. ಆದರೆ ಮೊನ್ನೆ ಪ್ರಧಾನಿ ಮೋದಿ ತೆಲಂಗಾಣ ಬಂದ ವೇಳೆ ದೇಶದ ಪ್ರಧಾನಿ ಜೊತೆಗೆ ಯಾವ ರೀತಿ ನಡೆದುಕೊಂಡಿದ್ದಾರೆ ಎಂಬುದು ರಾಜ್ಯದ ಕಾಂಗ್ರೆಸ್ ನಾಯಕರು ನೋಡಿ ಕಲಿತುಕೊಳ್ಳಲಿ ಎಂದರು.

“ಕಳೆದ 30 ವರ್ಷದಿಂದ ಬರ ಇದೆ. ಈ ಹಿಂದೆ ನಮ್ಮ ಬಿಜೆಪಿ ಸರಕಾರ ಇದ್ದಾಗ ಬರ ಬಂದಾಗ ಕೇಂದ್ರ ಸರಕಾರ ಬಂದು ಭೇಟಿ ನೀಡಿದೆ. ಐದು ತಿಂಗಳ ಬಳಿಕ ಅವರು ಹಣ ಬಿಡುಗಡೆ ಮಾಡಿದರು. ನಾವು ಅವರ ಹಣ ಬರುವ ಮುನ್ನವೇ ಪರಿಹಾರ ಕೊಟ್ಟಿದ್ದೆವು. ನಮ್ಮದು ಸಮೃದ್ಧ ಸರಕಾರ ಇತ್ತು. ಒಂದು ತಿಂಗಳಲ್ಲಿ ರೈತರಿಗೆ ಕೊಡಬೇಕಾದ ಪರಿಹಾರ ಕೊಟ್ಟಿದ್ದೆವು.

‘ಸಿಎಂ ಸಿದ್ದರಾಮಯ್ಯಗೆ ಧಮ್‌ ಇದ್ದರೆ ಬರ ಬಂದಾಗ ನೀವು ಯಾವಾಗ ಕೊಟ್ಟಿದ್ದೀರಿ? ಎಂದು ನಮಗೆ ಕೇಳಲಿ. ನಾನು ಉತ್ತರ ಕೊಡುತ್ತೇನೆ’ ಎಂದು ಸವಾಲು ಹಾಕಿದರು.

ಈ ಸುದ್ದಿ ಓದಿದ್ದೀರಾ? ಬಿಜೆಪಿ ಜೊತೆ ಕೆಆರ್‌ಪಿಪಿ ವಿಲೀನ; ಸೋಮವಾರ ಜನಾರ್ದನ ರೆಡ್ಡಿ ಬಿಜೆಪಿಗೆ ಸೇರ್ಪಡೆ

“ಬ್ರಹ್ಮ ಯಾವ ಕಾಲಕ್ಕೂ ಭೂ ಲೋಕಕ್ಕೆ ಬರುವುದಿಲ್ಲ. ನಮ್ಮ ಕಾರ್ಯಕರ್ತರು ಕೆ. ಎಸ್‌. ಈಶ್ವರಪ್ಪರನ್ನು ಮನ ಒಲಿಸುತ್ತಾರೆ. ಬ್ರಹ್ಮ ಬಂದರೂ ಮುಂದಿಟ್ಟ ಹೆಜ್ಜೆ ಹಿಂದೆ ಇಡೋದಿಲ್ಲ ಎಂಬ ಕೆ.ಎಸ್‌.ಈಶ್ವರಪ್ಪ ಹೇಳಿಕೆಗೆ ಆರ. ಅಶೋಕ್ ಪ್ರತಿಕ್ರಿಯಿಸಿದರು. ಕಾರ್ಯಕರ್ತರೇ ನಮ್ಮ ಪಾಲಿಗೆ ದೇವರು. ಇನ್ನೂ ಸ್ವಲ್ಪ ದಿನದಲ್ಲೇ ಎಲ್ಲವೂ ಸರಿ ಹೋಗುತ್ತದೆ. ಈಶ್ವರಪ್ಪರನ್ನು ಕಾರ್ಯಕರ್ತರು ಮನವೊಲಿಸಲಿದ್ದಾರೆ” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...