ಶ್ರೀನಿವಾಸಪುರ | ಮಾವು ಬೆಳೆಗೆ ಬೆಂಬಲ ಬೆಲೆ ನೀಡದಿದ್ದರೆ ವಿಧಾನಸೌಧದ ಮುಂದೆ ಉಗ್ರ ಹೋರಾಟ: ಚಿನ್ನಪ್ಪ ರೆಡ್ಡಿ

Date:

ರಾಜ್ಯದಲ್ಲಿ ಮಾವಿನ ಬೆಲೆ ಕುಸಿತವಾಗಿದ್ದು ಮಾವು ಬೆಳೆಗಾರರು ಭಾರೀ ನಷ್ಟ ಅನುಭವಿಸುವ ಸನ್ನಿವೇಶ ಉಂಟಾಗಿದೆ. ಆದಕಾರಣ ಸರ್ಕಾರ ಮಾವು ಬೆಳೆಗೆ ಬೆಂಬಲ ಬೆಲೆ ಘೋಷಿಸಬೇಕು. ಇಲ್ಲದೇ ಹೋದಲ್ಲಿ ವಿಧಾನಸೌಧದ ಮುಂದೆ ಪ್ರತಿಭಟನೆ ನಡೆಸುತ್ತೇವೆ ಎಂದು ಕೋಲಾರ ಜಿಲ್ಲಾ ಮಾವು ಬೆಳೆಗಾರರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಚಿನ್ನಪ್ಪ ರೆಡ್ಡಿ ಎಚ್ಚರಿಕೆ ನೀಡಿದ್ದಾರೆ.

ಒಂದು ಟನ್ ಮಾವು ಬೆಳೆದು ಮಾರುಕಟ್ಟೆಗೆ ಹಾಕುವವರೆಗೂ ಸುಮಾರು 10 ರಿಂದ 12 ಸಾವಿರ ಖರ್ಚಾಗುತ್ತದೆ. ಆದರೆ ಮಾವು ಬೆಲೆ ಕುಸಿತದಿಂದ ಒಂದು ಟನ್ 4 ಸಾವಿರ ಸಿಗುತ್ತಿದ್ದು, ರೈತರಿಗೆ ಭಾರೀ ನಷ್ಟವಾದ ಕಾರಣ ಸರ್ಕಾರ ಒಂದು ಟನ್ ಗೆ 8 ಸಾವಿರ ಬೆಂಬಲ ಬೆಲೆ ನೀಡಿದರೆ ಮಾವು ಬೆಳೆಗಾರರಿಗೆ ಅನುಕೂಲವಾಗುತ್ತದೆ ಎಂದು ತಿಳಿಸಿದ್ದಾರೆ.

ಆಂಧ್ರಪ್ರದೇಶದಲ್ಲಿ ಸರ್ಕಾರ ಒಂದು ಟನ್ ಗೆ 4 ಸಾವಿರ ಬೆಂಬಲ ಬೆಲೆ ನೀಡ್ತಿದೆ‌ ಹಾಗೂ ಜ್ಯೂಸ್ ಕಂಪನಿಗಳು 8 ಸಾವಿರ ಬೆಂಬಲ ಬೆಲೆ ನೀಡುವ ರೀತಿ ನಮ್ಮ ರಾಜ್ಯದಲ್ಲಿಯೂ ನೀಡಬೇಕು. ಆಗ ಮಾತ್ರ ವ್ಯವಸ್ಥಿತವಾಗಿ ಎಲ್ಲವೂ ನಡೆದುಕೊಂಡು ಹೋಗುತ್ತದೆ ಎಂದು ಒತ್ತಾಯಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕೋಲಾರ ಜಿಲ್ಲಾ ಉಸ್ತುವಾರಿ ಸಚಿವರಾದ ಬೈರತಿ ಸುರೇಶ್ ಜೊತೆ ಸಭೆ ಮಾಡಿ ಎಲ್ಲಾ ಬೆಳವಣಿಗೆ ಹಾಗೂ ಮಾವು ಬೆಳೆಗಾರರಿಗೆ ಆದ ತೊಂದರೆ, ನಷ್ಟದ ಬಗ್ಗೆ ಮನವರಿಕೆ ಮಾಡಿ ನಮ್ಮ ಬೇಡಿಕೆ ಈಡೇರಿಕೆಗೆ ಮನವಿ ನೀಡಿದ್ದೇವೆ. ಸಚಿವರು ಸಹ ನಮ್ಮ ಮನವಿಗೆ ಸ್ಪಂದಿಸಿ ಕ್ಯಾಬಿನೆಟ್ ಮೀಟಿಂಗ್ ನಲ್ಲಿ ಮುಖ್ಯಮಂತ್ರಿಗಳ ಜೊತೆ ಚರ್ಚೆ ಮಾಡ್ತೇವೆ ಎಂದು ಆಶ್ವಾಸನೆ ನೀಡಿದ್ದಾರೆ ಎಂದು ಕೋಲಾರ ಜಿಲ್ಲಾ ಮಾವು ಬೆಳೆಗಾರರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಚಿನ್ನಪ್ಪ ರೆಡ್ಡಿ ಮಾಹಿತಿ ನೀಡಿದ್ದಾರೆ.

ಒಂದು ವೇಳೆ ಎರಡು ಮೂರು ದಿನಗಳಲ್ಲಿ ರೈತರಿಗೆ ಬೆಂಬಲ ಬೆಲೆ ಘೋಷಣೆ ಮಾಡಿಲ್ಲದಿದ್ದರೆ ಕೋಲಾರ ಜಿಲ್ಲೆ ಬಂದ್ ಮಾಡಿ ನಂತರ ವಿಧಾನಸೌಧದ ಮುಂದೆ ಮಾವು ಸುರಿದು ಉಗ್ರವಾದ ಹೋರಾಟ ಮಾಡುತ್ತೇವೆ ಎಂದು ಎಚ್ಚರಿಕೆ ನೀಡಿದ್ದಾರೆ.

ಮಾವು ಬೆಳೆಗಾರರಿಗೆ ಸರ್ಕಾರ ಬೆಂಬಲ ಬೆಲೆ ಕೊಡ್ಬೇಕು, ಆದರೆ ಮಾವಿನ ಉಪ ಉತ್ಪನ್ನ ಮಾಡಿ ಸರ್ಕಾರ ಮಾರ್ಕೆಟಿಂಗ್ ಮಾಡಬೇಕು ಎಂದು ರೈತ ಉತ್ಪಾದಕ ಸಂಸ್ಥೆ ಸಿಇಓ ವಾಸುದೇವ ಅವರು ಅಭಿಪ್ರಾಯಪಟ್ಟಿದ್ದಾರೆ.

ವಿಶ್ವ ವಿಖ್ಯಾತ ಮಾವಿನ ನಗರಿ ಎಂದೇ ಕರೆಯುವ ಶ್ರೀನಿವಾಸಪುರದಲ್ಲಿ ಪ್ರಸ್ತುತವಾಗಿ ಮಾವಿನ ಬೆಲೆ ತೀವ್ರ ಕುಸಿತವಾಗಿರೋದು ಮಾವು ಬೆಳೆದ ರೈತರು ಸಂಕಷ್ಟಕ್ಕೆ ಸಿಲುಕುವಂತಾಗಿದೆ. ಎರಡು ದಿನಗಳ ಹಿಂದಷ್ಟೇ ಸರ್ಕಾರದ ಗಮನ ಸೆಳೆಯಲು ರೈತರು ಶ್ರೀನಿವಾಸಪುರವನ್ನು ಬಂದ್ ಮಾಡಿ ಮಾವು ಬೆಳೆಗಾರರಿಗೆ ಸರ್ಕಾರ ಬೆಂಬಲ ಬೆಲೆ ನೀಡಬೇಕೆಂದು ದೊಡ್ಡ ಮಟ್ಟದಲ್ಲಿ ಪ್ರತಿಭಟನೆ ಮಾಡಿ ಒತ್ತಾಯಿಸಿದ್ದರು.

ಶ್ರೀನಿವಾಸಪುರ ಬಂದ್ ದಿನ ಸ್ಥಳಕ್ಕೆ ಬಂದ ಕೋಲಾರ ಜಿಲ್ಲಾಧಿಕಾರಿ ರವಿ ರೈತರ ಮನವೊಲಿಸಲು ಪ್ರಯತ್ನ ಪಟ್ಟು ಕೋಲಾರ ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಸುರೇಶ್ ಅವರನ್ನು ಭೇಟಿ ಮಾಡಿಸುತ್ತೇನೆ ಎಂದು ಆಶ್ವಾಸನೆ ನೀಡಿ ಅದರಂತೆ ಮಾವು ಬೆಳೆಗಾರರ ಸಂಘದ ಮುಖಂಡರು ಹಾಗೂ ರೈತರನ್ನು ಸಚಿವ ಬೈರತಿ ಸುರೇಶ್ ಜೊತೆ ಸಭೆಯನ್ನು ಸಹ ನಡೆಸಿದರು.

ಒಂದು ಟನ್ ಮಾವಿನ ಹಣ್ಣು 4 ಸಾವಿರಕ್ಕೆ ಆಕ್ಷನ್ ಹೋಗ್ತಿದೆ. ಮಾರುಕಟ್ಟೆಯಲ್ಲಿ, ನಾವು ಮಾವು ಬೆಳೆದು ಮಾರುಕಟ್ಟೆಗೆ ಮಾರಾಟ ಮಾಡುವವರೆಗೂ ಸುಮಾರು 10 ರಿಂದ 12 ಸಾವಿರ ರೂಪಾಯಿ ಖರ್ಚಾಗುತ್ತೆ. ಆದರೆ ಮಾರುಕಟ್ಟೆಯಲ್ಲಿ ಕೇವಲ 4 ಸಾವಿರ ರೂಪಾಯಿಗೆ ಮಾರಾಟವಾಗುತ್ತಿದ್ದು, ನಮಗೆ ಶೇ. 50ಕ್ಕೂ ಹೆಚ್ಚು ನಷ್ಟ ಆಗ್ತಿದೆ ಎಂದು ಮಾವು ಬೆಳೆಗಾರರು ದೂರಿದ್ದಾರೆ.

ಇದನ್ನು ಓದಿದ್ದೀರಾ..? ಬೆಂಗಳೂರು | ರಸ್ತೆ ಗುಂಡಿಗಳನ್ನು ತ್ವರಿತವಾಗಿ ಮುಚ್ಚಿ : ಬಿಬಿಎಂಪಿ ಕಮಿಷನರ್ ಮಹೇಶ್ವರ್ ರಾವ್

ಸರ್ಕಾರ ಕನಿಷ್ಠ ಒಂದು ಟನ್ ಮಾವಿಗೆ ಕನಿಷ್ಠ 5 ಸಾವಿರ ಬೆಂಬಲ ಬೆಲೆ ಕೊಡ್ಬೇಕು. ಆಂಧ್ರದಲ್ಲಿ ಜ್ಯೂಸ್ ಕಂಪನಿ ಅವರು ಒಂದು ಟನ್ ಗೆ 8 ಸಾವಿರ ರೂಪಾಯಿ ಕೊಡುತ್ತಿದ್ದಾರೆ. ಆದ್ರೆ ನಮ್ಮ ಶ್ರೀನಿವಾಸಪುರದಲ್ಲಿ ಆ ತರಹದ ಕಂಪನಿಗಳು ಇಲ್ಲ. ಕರ್ನಾಟಕದಲ್ಲಿ ಸುಮಾರು 45 ಜ್ಯೂಸ್ ಕಂಪನಿಗಳಿವೆ. ಅವರು ಮಾವು ಬೆಳೆಗಾರರಿಗೆ ಒಂದು ಟನ್ ಮಾವು ಖರೀದಿ ಮಾಡಿ 7 ಸಾವಿರ ಕೊಡ್ಬೇಕು ಹಾಗೂ ಸರ್ಕಾರ 4 ಸಾವಿರ ಕೊಟ್ರೆ ಇದರ ಮೂಲಕ ನಮಗೆ ಲಾಭ ಸಿಗದೇ ಇದ್ದರೂ ಬಂಡವಾಳ ವಾಪಸ್ ಬರುತ್ತದೆ. ಸರ್ಕಾರ ಮಾವು ಬೆಳೆಗಾರರಿಗೆ ಬೆಂಬಲ ಬೆಲೆ ನೀಡಬೇಕು ಇಲ್ಲದಿದ್ದರೆ ಎಲ್ಲಾ ಮಾವು ಬೆಳೆಗಾರರು ಸೇರಿ ಕೋಲಾರ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಮಾವು ಸುರಿದು ಪ್ರತಿಭಟನೆ ಮಾಡ್ಬೇಕಾಗುತ್ತದೆ ಎಂದು ಮಾವು ಬೆಳೆಗಾರರಾದ ನವೀನ್ ಎಚ್ಚರಿಕೆ ನೀಡಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...