ಬೀದರ್‌ | ಭೀಮಾ ಕೋರೆಗಾಂವ್ ಸೈನಿಕರಂತೆ ಸ್ವಾಭಿಮಾನ ಬದುಕಿಗಾಗಿ ಹೋರಾಡಿ

Date:

ಶೋಷಣೆ ವಿರುದ್ಧ ಸ್ವಾಭಿಮಾನಕ್ಕಾಗಿ ನಡೆದ ಭೀಮಾ ಕೋರೆಗಾಂವ್ ಕದನದಲ್ಲಿ 30 ಸಾವಿರ ಪೇಶ್ವೆ ಸೈನಿಕರ ವಿರುದ್ಧ ಹೋರಾಡಿದ 500 ಮಹರ್ ರೆಜಿಮೆಂಟ್ ವೀರರಂತೆ ನೀವು ದೈಹಿಕ ಹಾಗೂ ಮಾನಸಿಕವಾಗಿ ಸಿದ್ದರಾಗಬೇಕು ಹುಲಸೂರ ತಾಲೂಕು ಕಸಾಪ ಉಪಾಧ್ಯಕ್ಷ, ಸಾಮಾಜಿಕ ಚಿಂತಕ ಬಸವಕುಮಾರ ಕವಟೆ ಹೇಳಿದರು.

ಹುಲಸೂರ ಪಟ್ಟಣದ ಇಂದಿರಾ ನಗರದಲ್ಲಿ ಸೋಮವಾರ ನಡೆದ 206ನೇ ಭೀಮಾ ಕೋರೆಗಾಂವ್ ವಿಜಯೋತ್ಸವ ದಿನ ಕಾರ್ಯಕರ್ಮದಲ್ಲಿ ಭಾಗವಹಿಸಿ ಮಾತನಾಡಿ, “ಇಂದು ಶೋಷಿತ ವರ್ಗಗಳ ಯುವಕರು ದೈಹಿಕವಾಗಿ ಮಾನಸಿಕವಾಗಿ ಯಾವುದೇ ದುಶ್ಚಟಗಳಿಗೆ ಬಲಿಯಾಗದೆ ದೇಶದ ಗಡಿ ರಕ್ಷಣೆಗೆ ಸಿದ್ಧರಾಗಬೇಕು. ಸುಶಿಕ್ಷಿತರಾಗಿ ಉನ್ನತ ಅಧಿಕಾರಿಗಳಾಗಿ ವಂಚಿತ ಸಮುದಾಯದ ಏಳಿಗೆಗಾಗಿ ಶ್ರಮಿಸಬೇಕು” ಎಂದು ಸಲಹೆ ನೀಡಿದರು.

ತಹಶೀಲ್ದಾರ್ ಶಿವಾನಂದ ಮೇತ್ರೆ ಅವರು ಬುದ್ದ ಹಾಗೂ ಡಾ.ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪೂಜೆ ಪುಷ್ಪ ಸಲ್ಲಿಸಿ ಮಾತನಾಡಿ, “ಶಿಕ್ಷಣದಿಂದ ಮಾತ್ರ ಸಾಮಾಜಿಕ ಶೋಷಣೆ ಮುಕ್ತವಾಗಲು ಸಾಧ್ಯ, ಇತಿಹಾಸ ಮರೆತರೆ ಇತಿಹಾಸ ರಚಿಸಲು ಸಾಧ್ಯವಿಲ್ಲ ಎಂಬುವಂತೆ ಸಮಾಜದ ಬದಲಾವಣೆಗಾಗಿ ಪೂರ್ವಜರ ತ್ಯಾಗ, ಬಲಿದಾನದ ಸ್ಮರಣೆ ಇಂದಿನ ಯುವ ಸಮೂಹಕ್ಕೆ ದಾರಿದೀಪವಾಗಬೇಕು” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಬಿಹಾರ | ದಲಿತ ಮಹಿಳೆಗೆ ಮನಬಂದಂತೆ ಲಾಠಿಯಿಂದ ಬಡಿದ ಪೊಲೀಸ್; ವಿಡಿಯೋ ವೈರಲ್

ಕಾರ್ಯಕ್ರಮದಲ್ಲಿ ಭಾರತೀಯ ಬೌದ್ಧ ಮಹಾಸಭಾ ತಾಲೂಕ ಶಾಖೆ ಅಧ್ಯಕ್ಷ ದತ್ತಾ ಮೋರೆ, ವಂಚಿತ ಬಹುಜನ ಅಘಾಡಿ ತಾಲೂಕು ಅಧ್ಯಕ್ಷ ಸತೀಶ್ ಗಾಯಕವಾಡ, ಭಾರತೀಯ ದಲಿತ ಪ್ಯಾಂಥರ್ಸ್ ತಾಲೂಕು ಕಾರ್ಯದರ್ಶಿ ಸಂದೀಪ ಸೂರ್ಯವಂಶಿ ಸೇರಿದಂತೆ ಪ್ರಮುಖರಾದ ಗೌಸೋದ್ದೀನ್ ಬಿರಿವಾಲೆ, ಲೋಕೇಶ್ ಧಬಾಲೆ, ದಯಾನಂದ ನಿಮಾಣೆ, ಅಶೋಕ ಮೆಘಶಾಮ, ಸುಮಿತ್ ಮೋರೆ, ನಾಗನಾಥ ಮೋರೆ, ವಿಶಾಲ ಕೂಸೆ, ಅನೀಲ ಮೋರೆ, ಚಂದ್ರಕಾಂತ ಮೆಘಶಾಮ, ದಯಾನಂದ ಗವಾರೆ, ಅರ್ಜುನ್ ಅಲಗೊಡ್ಕಕರ್, ಜಗದೇವಿ ಮೋರೆ, ಪ್ರಿಯಾಂಕಾ ಮೋರೆ, ಬಾಲಿಕಾ ಮೋರೆ, ಮಹಾದೇವಿ ಮೆಘಶಾಮ ಸೇರಿದಂತೆ ಬೌದ್ಧ ಧರ್ಮದ ಅನುಯಾಯಿಗಳು ಪಾಲ್ಗೊಂಡಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...