ಚಾಮರಾಜನಗರ | ಅಂಬೇಡ್ಕರ್‌ಗೆ ನಿಂದನೆ ಆರೋಪ; ದೂರು-ಪ್ರತಿದೂರು ದಾಖಲು

Date:

  • ಸಿಮ್ಸ್‌ ನಿರ್ದೇಶಕನ ಮುಖಕ್ಕೆ ಮಸಿ ಬಳಿದು, ಕಾರಿಗೆ ಹಾನಿ ಮಾಡಲಾಗಿತ್ತು
  • ಹೊರಗುತ್ತಿಗೆ ನೌಕರರು ಪ್ರತಿಭಟನೆ ನಡೆಸಿದ್ದರಿಂದ ನಿಂದನೆ ಆರೋಪ

ಚಾಮರಾಜನಗರ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ (ಸಿಮ್ಸ್‌) ಡೀನ್ ಮತ್ತು ನಿರ್ದೇಶಕ ಡಾ. ಸಂಜೀವ್ ರೆಡ್ಡಿ, ಡಾ. ಬಿ ಆರ್‌ ಅಂಬೇಡ್ಕರ್‌ ಅವರಿಗೆ ನಿಂದಿಸಿದ್ದಾರೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಚಾಮರಾಜನಗರ ಗ್ರಾಮಾಂತರ ಪೊಲೀಸ್‌ ಠಾಣೆಯಲ್ಲಿ ದೂರು ಪ್ರತಿದೂರು ದಾಖಲಾಗಿದೆ.

ಸಿಮ್ಸ್‌ನ ನಾಲ್ವರು ನೌಕರರ ಮುಂದೆ ಅಂಬೇಡ್ಕರ್ ಅವರನ್ನು ನಿಂದಿಸಿದ್ದಾರೆ ಎಂಬ ಆರೋಪ ಕೇಳಿ ಬಂದಿದ್ದು, ಈ ಕುರಿತು ಮೂವರು ವೈದ್ಯರು, ಮುಖ್ಯ ಆಡಳಿತಾಧಿಕಾರಿ ಸೇರಿದಂತೆ ನೌಕರರು ಚಾಮರಾಜನಗರ ಜಿಲ್ಲಾಧಿಕಾರಿಗೆ ದೂರು ಸಲ್ಲಿಸಿದ್ದರು.

ಅಂಬೇಡ್ಕರ್ ಅವರನ್ನು ಅವಮಾನಿಸಿದ ಆರೋಪದ ಹಿನ್ನೆಲೆ ನಿರ್ದೇಶಕರ ವಿರುದ್ಧ ತನಿಖೆ ನಡೆಸಬೇಕೆಂದು ವೈದ್ಯರು ಒತ್ತಾಯಿಸಿದ್ದರು. ಈ ಪತ್ರದ ಆಧಾರದ ಮೇಲೆ ಬಿಎಸ್‌ಪಿ ಜಿಲ್ಲಾಧ್ಯಕ್ಷ ಎನ್ ನಾಗಯ್ಯ ಅವರು ನಿರ್ದೇಶಕರ ವಿರುದ್ಧ ಚಾಮರಾಜನಗರ ಗ್ರಾಮಾಂತರ ಪೊಲೀಸ್ ಠಾಣೆಗೆ ದೂರು ನೀಡಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಎಸ್‌ಸಿ, ಎಸ್‌ಟಿಗಳ ಮೇಲಿನ ದೌರ್ಜನ್ಯ ತಡೆ ಕಾಯ್ದೆಯ ಅಡಿಯಲ್ಲಿ ಸಿಮ್ಸ್‌ ನಿರ್ದೇಶಕ ಡಾ. ಸಂಜೀವ್ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪದ್ಮಿನಿ ಸಾಹೂ ಸುದ್ದಿಗಾರರಿಗೆ ತಿಳಿಸಿದ್ದರು.

ಪ್ರತಿಭಟನಾಕಾರರ ವಿರುದ್ಧ ಪ್ರತಿದೂರು ದಾಖಲು

“ಅಂಬೇಡ್ಕರ್‌ಗೆ ಅವಮಾನಿಸಿರುವ ಬಗ್ಗೆ ಯಾವುದೇ ಸಾಕ್ಷಿ ಆಧಾರವಿಲ್ಲದೆ ನನ್ನ ವಿರುದ್ಧ ದೂರು ನೀಡಿದ್ದು, ಇಲಾಖೆ ಕೆಲಸದ ಮೇಲೆ ತೆರಳುತ್ತಿದ್ದ ನನ್ನ ಮೇಲೆ ಮಾರಣಾಂತಿಕ ಹಲ್ಲೆ ಮಾಡಲು ಪ್ರಚೋದನೆ ನೀಡಿ, ಕಾರಿನ ಮೇಲೆ ದಾಳಿ ಮಾಡಿ, ನನ್ನನ್ನು ಮತ್ತು ನನ್ನ ಪತ್ನಿಯನ್ನು ಎಳೆದಾಡಿ ಜೀವ ಬೆದರಿಕೆ ಒಡ್ಡಿದ್ದಾರೆ” ಎಂದು ಆರೋಪಿಸಿ ಸಿಮ್ಸ್‌ ನಿರ್ದೇಶಕ ಡಾ. ಸಂಜೀವ್‌ ರೆಡ್ಡಿ, ಸಿಮ್ಸ್‌ನ ಡಾ. ಮಾರುತಿ ಹಾಗೂ ಇನ್ನು ಸುಮಾರು 70 ಮಂದಿ ಅಪರಿಚಿತರ ವಿರುದ್ಧ ಚಾಮರಾಜನಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರತಿದೂರು ದಾಖಲಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಚಾಮರಾಜನಗರ | ಅಂಬೇಡ್ಕರ್‌ಗೆ ನಿಂದನೆ ಆರೋಪ; ಸಿಮ್ಸ್‌ ಡೀನ್ ಮುಖಕ್ಕೆ ಮಸಿ

ಘಟನೆ ಹಿನ್ನೆಲೆ

“ಸಿಮ್ಸ್‌ ನಿರ್ದೇಶಕರು ತಮ್ಮ ಕಚೇರಿಯಲ್ಲಿ ಸಿಎಒ ಮಂಜುನಾಥ್, ಡಾ. ಗಿರೀಶ್ ಮತ್ತು ಡಾ. ಹರ್ಷ ಅವರ ಮುಂದೆ ಅಂಬೇಡ್ಕರ್ ಅವರನ್ನು ನಿಂದಿಸಿ ಅವಮಾನಿಸಿದ್ದಾರೆ. ಹೊರಗುತ್ತಿಗೆ ನೌಕರರು ಸಂಬಳಕ್ಕಾಗಿ ಪ್ರತಿಭಟನೆ ನಡೆಸಿದ ಕಾರಣಕ್ಕೆ ಹೀಗೆ ಮಾಡಿದ್ದಾರೆ” ಎಂದು ಆರೋಪಿಸಿ ಸಿಮ್ಸ್‌ ಮೂಳೆ ಚಿಕಿತ್ಸಾ ವಿಭಾಗದ ಮುಖ್ಯಸ್ಥ ಡಾ. ಸಿ ವಿ ಮಾರುತಿ ಅವರು ಜಿಲ್ಲಾಧಿಕಾರಿಗೆ ದೂರು ನೀಡಿದ್ದರು.

ದೂರಿನ ಪ್ರತಿಯು ಅಂಬೇಡ್ಕರ್‌ ಅಭಿಮಾನಿಗಳು ಮತ್ತು ಬಿಎಸ್‌ಪಿ ಕಾರ್ಯಕರ್ತರಿಗೆ ಸಿಕ್ಕಿತ್ತು. ಬಳಿಕ ಸಿಮ್ಸ್‌ ಮುಂದೆ ಜಮಾಯಿಸಿದ ನೂರಾರು ಕಾರ್ಯಕರ್ತರು ದಿಢೀರ್ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದ್ದರು. ಕೋಪಗೊಂಡ ಪ್ರತಿಭಟನಾಕಾರರು ಸಿಮ್ಸ್‌ ನಿರ್ದೇಶಕರ ಡಾ. ಸಂಜೀವ್‌ ರೆಡ್ಡಿ ಮುಖಕ್ಕೆ ಮಸಿ ಬಳಿದು, ಕಾರಿಗೆ ಹಾನಿ ಮಾಡಿದ್ದರು. ಈ ವೇಳೆ ಪೊಲೀಸರು ಮಧ್ಯಪ್ರವೇಶಿಸಿ ನಿರ್ದೇಶಕರನ್ನು ರಕ್ಷಿಸಿ ತಮ್ಮ ಜೀಪಿನಲ್ಲಿ ಬೇರೆಡೆಗೆ ಕರೆದೊಯ್ದಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...