ಚಿತ್ರದುರ್ಗ | ಮೀಸಲು ಅರಣ್ಯದಲ್ಲಿ ಬೆಂಕಿ; ನೂರಾರು ಎಕರೆ ಗಿಡ-ಮರಗಳಿಗೆ ಹಾನಿ

Date:

  • ಬೆಂಕಿ ನಂದಿಸಲು ಅಗ್ನಿಶಾಮಕ ದಳ, ಅರಣ್ಯ ಸಿಬ್ಬಂದಿ ಜಂಟಿ ಕಾರ್ಯಚರಣೆ
  • 368 ಹೆಕ್ಟೇರ್ ಪ್ರದೇಶದಲ್ಲಿ ಹಲವು ಜಾತಿಯ ಗಿಡಗಳನ್ನು ಪೋಷಿಸಲಾಗಿತ್ತು

ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ನಾಯಕನಹಟ್ಟಿ ಹೋಬಳಿಯ ವರವು ಕಾವಲಿನ ನಾಲ್ಕನೇ ಹಂತದ ಮೀಸಲು ಅರಣ್ಯಕ್ಕೆ ಶನಿವಾರ ರಾತ್ರಿ ಬೆಂಕಿ ಬಿದ್ದಿದ್ದು, ನೂರಾರು ಎಕರೆ ಪ್ರದೇಶದಲ್ಲಿ ಅರಣ್ಯ ಆಹುತಿಯಾಗಿದೆ.

ನಾಯಕನಹಟ್ಟಿ ಹೋಬಳಿಯ ನೆಲಗೇತನಹಟ್ಟಿ ಮತ್ತು ರಕ್ಷಣಾ ಸಂಶೋಧನಾ ಮತ್ತು ಅಭಿವೃದ್ಧಿ ಸಂಸ್ಥೆಯ (ಡಿಆರ್ ಡಿಒ) ಕಾಂಪೌಂಡ್, ಬೊಮ್ಮಕ್ಕನಹಳ್ಳಿ, ನಕ್ಲರಹಟ್ಟಿ, ಮಟ್ಟಿದಿನ್ನೆಗೆ ಹೊಂದಿಕೊಂಡಿರುವ “ವರವು ಕಾವಲಿ”ನ 4ನೇ ಹಂತದ ಕಾಯ್ದಿರಿಸಿದ ಅರಣ್ಯ ಪ್ರದೇಶವಿದೆ. ಐದು ವರ್ಷದಿಂದ ಅರಣ್ಯ ಇಲಾಖೆಯು ಸುಮಾರು 368 ಹೆಕ್ಟೇರ್ ಪ್ರದೇಶದಲ್ಲಿ ಹಲವು ಜಾತಿಯ ಗಿಡಗಳನ್ನು ನೆಟ್ಟು ಪೋಷಣೆ ಮಾಡಿತ್ತು.

ಕಮರ, ಹೊಂಗೆ, ತಬಸೇ, ನೇರಳೆ, ಚಳ್ಳ ಉದಯ, ಆಲ, ಬೇಗ, ಅರಳಿ, ಸೀತಾಫಲ, ಸಿಮರುಬಾ, ಹಲಸು ಸೇರಿದಂತೆ ಹತ್ತಾರು ಜಾತಿಯ ಕಾಡು ಮರಗಳನ್ನು ನೆಟ್ಟು ಜಾಗರೂಕತೆಯಿಂದ ರಕ್ಷಣೆ ಮಾಡಲಾಗಿತ್ತು. ನೈಸರ್ಗಿಕವಾಗಿ ನೂರಾರು ಜಾತಿಯ ಕಾಡು ಮರಗಳು ಬೆಳೆದಿದ್ದವು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇನ್ನೂ ಐದು ವರ್ಷಗಳು ಕಳೆದಿದ್ದರೆ ಜಿಲ್ಲೆಯಲ್ಲಿ ಅತ್ಯಂತ ದೊಡ್ಡ ಅರಣ್ಯ ಸಂಪತ್ತು ಇದಾಗಲಿತ್ತು. ಹಾಗೆ ನೈಸರ್ಗಿಕವಾಗಿ ಬೆಳೆದ ಈ ಅರಣ್ಯ ಪ್ರದೇಶದಲ್ಲಿ ಹುಲ್ಲುಗಾವಲು ಹೆಚ್ಚಾಗಿತ್ತು. ಕಳೆದ ಒಂದೂವರೆ ತಿಂಗಳಿನಿಂದ ಅತ್ಯಂತ ಬಿರು ಬಿಸಿಲಿಗೆ ಹುಲ್ಲುಗಾವಲು ಒಣಗಿತ್ತು.

800 ಎಕರೆಗೂ ಹೆಚ್ಚು ಪ್ರದೇಶದಲ್ಲಿ ಅಭಿವೃದ್ಧಿಪಡಿಸಿರುವ ಅರಣ್ಯ ಸಂಪತ್ತಿನ ರಕ್ಷಣೆಗಾಗಿ ಸುತ್ತಲೂ ತಂತಿ ಬೇಲಿ ನಿರ್ಮಿಸಲು ಮುಂದಾಗಿದ್ದೇವೆ. ಈಗಾಗಲೇ ಬಹುತೇಕ ರಕ್ಷಣಾ ಬೇಲಿ ಕಾಮಗಾರಿ ಮುಕ್ತಾಯದ ಹಂತ ತಲುಪಿದೆ. ಇದರಿಂದ ಅಸಮಾಧಾನಗೊಂಡ ಸಮೀಪದ ಹಳ್ಳಿಯ ಕಿಡಿಗೇಡಿಗಳು ಶನಿವಾರ ರಾತ್ರಿ 7.30ರ ಸುಮಾರಿಗೆ ಅರಣ್ಯ ಪ್ರದೇಶದಲ್ಲಿ ಒಣಗಿರುವ ಹುಲ್ಲಿಗೆ ಬೆಂಕಿ ಹಚ್ಚಿದ್ದಾರೆ. ರಾತ್ರಿ ಗಾಳಿಯ ವೇಗ ಹೆಚ್ಚಾಗಿದ್ದು, ಬೆಂಕಿಯ ಕೆನ್ನಾಲಿಗೆ ರಭಸವಾಗಿ ಹಬ್ಬಿದೆ ಎಂದು ಅರಣ್ಯ ಇಲಾಖೆಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಕಳೆದ ಎರಡು ತಿಂಗಳಿನಿಂದ ಈ ಭಾಗದಲ್ಲಿ ಮಳೆಯಾಗದೆ ಇಲ್ಲಿನ ಹುಲ್ಲು ಸಂಪೂರ್ಣವಾಗಿ ಒಣಗಿತ್ತು. ಇದರಿಂದ ಬೆಂಕಿಯ ಹರಡುವಿಕೆಯ ವೇಗ ಹೆಚ್ಚಾಗಿ ಬೆಂಕಿಯನ್ನು ನಂದಿಸಲು ಹರಸಾಹಸ ಪಡಬೇಕಾಯಿತು.

ಈ ಸುದ್ದಿ ಓದಿದ್ದೀರಾ? ಚಾಮರಾಜನಗರ | ಕಾಡಾನೆ ದಾಳಿಯಿಂದ ಪಾರಾದ ವಿಚಾರವಾದಿ ಕೆ ಎಸ್‌ ಭಗವಾನ್‌

ಭಾನುವಾರ ನಸುಕಿನ ಹೊತ್ತಿಗೆ ಅಗ್ನಿಶಾಮಕ ದಳ ಮತ್ತು ಚಳ್ಳಕೆರೆ ವಿಭಾಗ ವ್ಯಾಪ್ತಿಯ ಎಲ್ಲ ಅರಣ್ಯ ಸಿಬ್ಬಂದಿ ಸೇರಿ ಬೆಂಕಿಯನ್ನು ಸಂಪೂರ್ಣವಾಗಿ ನಂದಿಸಿದ್ದೇವೆ. ಎಷ್ಟು ಪ್ರದೇಶದ ಅರಣ್ಯ ಸಂಪತ್ತು ಬೆಂಕಿಗೆ ಆಹುತಿಯಾಗಿದೆ ಎಂಬುದನ್ನು ತಿಳಿಯಬೇಕಿದೆ ಎಂದು ಅರಣ್ಯ ಇಲಾಖೆಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಎರಡು ತಿಂಗಳಿಂದ ಕಾಡಿನಲ್ಲಿದ್ದ ಹುಲ್ಲುಗಾವಲು ಸಂಪೂರ್ಣ ಒಣಗಿದ್ದು, ಯಾರೋ ಕಿಡಿಗೇಡಿಗಳು ಬೆಂಕಿ ಹಚ್ಚಿರುವ ಮಾಹಿತಿ ಇದೆ, ಈ ಬಗ್ಗೆ ತನಿಖೆ ನಡೆಯುತ್ತದೆ ಅಗ್ನಿಶಾಮಕ ಇಲಾಖೆಯ ಸಿಬ್ಬಂದಿಗಳ ಸಹಕಾರದಿಂದ ಬೆಂಕಿಯನ್ನು ಸಂಪೂರ್ಣವಾಗಿ ಹತೋಟಿಗೆ ತಂದು ನಂದಿಸಿದ್ದೇವೆ, ಕಿಡಿಗೇಡಿಗಳ ಪತ್ತೆಗೆ ಕ್ರಮ ಕೈಗೊಳ್ಳಲಿದ್ದೇವೆ ಎಂದು ಅರಣ್ಯ ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...