ಮೀನಿನ ಕ್ಷಾಮ | ಸಾಲ ನೀಡಿದ ಸಂಸ್ಥೆಗಳಿಂದ ಕಿರುಕುಳ; ಸಂತ್ರಸ್ತರ ನೆರವಿಗೆ ಬರಲು ಜಿಲ್ಲಾಡಳಿತಕ್ಕೆ ಡಿವೈಎಫ್ಐ ಒತ್ತಾಯ

Date:

ಇತ್ತೀಚಿನ ವರ್ಷದಲ್ಲೇ ಅತಿ ಗಂಭೀರವಾಗಿ ಕಾಡಿರುವ ಮೀನಿನ ಕ್ಷಾಮದಿಂದಾಗಿ ಮೀನುಗಾರರು ಹಾಗೂ ಮೀನುಗಾರಿಕೆಯನ್ನು ನಂಬಿರುವ ಕುಟುಂಬಗಳು ಆರ್ಥಿಕ ಸಂಕಷ್ಟಕ್ಕೆ ಸಿಲುಕಿವೆ.

ಮೀನುಗಾರಿಕೆ ನಡೆಸುವ ನೂರಾರು ದೊಡ್ಡ ಬೋಟುಗಳು ಲಂಗರು ಹಾಕಿವೆ. ಮೀನುಗಾರಿಕೆಗೆ ತೆರಳುವ ಬೋಟುಗಳು ಮೀನಿಲ್ಲದೆ ವಾಪಸ್ ಬರುತ್ತಿವೆ. ಬೋಟು ಮಾಲೀಕರು ಬ್ಯಾಂಕ್ ಸಾಲ ಸಂದಾಯ ಮಾಡಲು ಪರದಾಡುತ್ತಿದ್ದರೆ, ಇನ್ನೊಂದೆಡೆ ಮೀನುಗಾರಿಕಾ ವೃತ್ತಿಯಲ್ಲಿರುವ ಒರಿಸ್ಸಾ, ತಮಿಳುನಾಡು ಮೂಲದ ವಲಸೆ ಕಾರ್ಮಿಕರು ಕೆಲಸವಿಲ್ಲದೆ ಬರಿಗೈಯಲ್ಲಿ ತಮ್ಮ ರಾಜ್ಯಗಳಿಗೆ ಹಿಂದಿರುಗುತ್ತಿದ್ದಾರೆ.

“ಮಂಗಳೂರಿನ ಮೀನುಗಾರಿಕಾ ಕಾರ್ಮಿಕರ ಆರ್ಥಿಕ ಪರಿಸ್ಥಿತಿ ತೀರಾ ಶೋಚನೀಯವಾಗಿದೆ.‌
ಮೀನುಗಾರಿಕೆಯಿಂದ ಬರುವ ಆದಾಯವನ್ನು ನಂಬಿಕೊಂಡು ಸ್ವ ಸಹಾಯ ಸಂಘಗಳ ಮೂಲಕ ಕಿರು ಸಾಲ ಪಡೆದ ಕುಟುಂಬಗಳು ಮತ್ಸ್ಯ ಕ್ಷಾಮದಿಂದಾಗಿ ಸಾಲ ಮರುಪಾವತಿ ಮಾಡಲಾಗದೆ ಕಂಗಾಲಾಗಿದ್ದಾರೆ. ಸ್ವ ಸಹಾಯ ಸಂಘಗಳು ಸಾಲ ವಸೂಲಾತಿಗಾಗಿ ತಮ್ಮ ಪ್ರತಿನಿಧಿಗಳ ಮೂಲಕ ಒತ್ತಡ ಹಾಕುವುದು ಮಾತ್ರವಲ್ಲ ಮಾನಸಿಕ ಕಿರುಕುಳ ನೀಡಿ ದೌರ್ಜನ್ಯ ನಡೆಸಿರುವುದಲ್ಲದೆ ಕೆಲವು ಮಹಿಳೆಯರು ಆತ್ಮಹತ್ಯೆಗೂ ಮುಂದಾಗಿರುವ ಘಟನೆಗಳೂ ನಡೆದಿವೆ” ಎಂದು ಡಿವೈಎಫ್ಐ ಹೇಳಿದೆ.‌

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬುಧವಾರ ಮಂಗಳೂರಿನ ಕಸಬಾ ಬೆಂಗರೆಯಲ್ಲಿ ಸಾಲ ಸಂತ್ರಸ್ತ ಮೀನುಗಾರ ಕುಟುಂಬಗಳನ್ನು ಭೇಟಿ ಮಾಡಿ ಸಭೆ ನಡೆಸಿದ ಡಿವೈಎಫ್ಐ ಜಿಲ್ಲಾಧ್ಯಕ್ಷ ಬಿ ಕೆ ಇಮ್ತಿಯಾಜ್ ಮಾತನಾಡಿ, ಕೂಡಲೇ ಜಿಲ್ಲಾಧಿಕಾರಿ ಮದ್ಯಪ್ರವೇಶ ಮಾಡಬೇಕೆಂದು ಆಗ್ರಹಿಸಿದರು.

“ಮೀನಿನ ಕ್ಷಾಮವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿ ಸರ್ಕಾರ ವಿಶೇಷ ಪ್ಯಾಕೇಜ್ ಘೋಷಿಸಿ ಮೀನುಗಾರ ಕುಟುಂಬಗಳು ಸ್ವಸಹಾಯ ಸಂಘಗಳಿಂದ ಪಡೆದಿರುವ ಸಾಲಮನ್ನಾ ಮಾಡಲು ಕೂಡಲೇ ಕ್ರಮ ಕೈಗೊಳ್ಳಬೇಕು. ಸಾಲ ವಸೂಲಾತಿಯ ಹೆಸರಿನಲ್ಲಿ ಕಿರುಕುಳ ನೀಡುವ ಹಣಕಾಸು ಸಂಸ್ಥೆಗಳ ವಿರುದ್ಧ ಕಠಿಣ ಕ್ರಮ ಜರಗಿಸಬೇಕು” ಎಂದು ಇಮ್ತಿಯಾಜ್ ಒತ್ತಾಯಿಸಿದರು.

“ಕಿರುಕುಳ ನೀಡುವ ಹಣಕಾಸು ಸಂಸ್ಥೆಗಳ ವಿರುದ್ಧ ಕ್ರಮಕೈಗೊಳ್ಳಲು ಜಿಲ್ಲಾಡಳಿತ ವಿಫಲವಾದರೆ ಪ್ರತಿಭಟನೆ ನಡೆಸಬೇಕಾಗುತ್ತದೆ” ಎಂದು ಇಮ್ತಿಯಾಜ್ ಎಚ್ಚರಿಕೆ ನೀಡಿದರು.

ಡಿವೈಎಫ್ಐ ನಗರಾಧ್ಯಕ್ಷ ಜಗದೀಶ್ ಬಜಾಲ್ ಮಾತನಾಡಿ, “ಸ್ವ ಸಹಾಯ ಸಂಘಗಳ ಮೂಲಕ ಸಾಲ ನೀಡಿರುವ ಹಣಕಾಸು ಸಂಸ್ಥೆಗಳು ರಿಸರ್ವ್ ಬ್ಯಾಂಕಿನ ನಿರ್ದೇಶನಗಳನ್ನು ಉಲ್ಲಂಘನೆ ಮಾಡಿದೆ. ಸಾಲಗಾರ ಸಂತ್ರಸ್ತರಿಗೆ ಸರಿಯಾದ ಮಾಹಿತಿ ನೀಡದೆ ವಂಚನೆ ಮಾಡುತ್ತಿದೆ” ಎಂದು ಆರೋಪಿಸಿದರು.

ಈ ಸುದ್ದಿ ಓದಿದ್ದೀರಾ? ಹಿಂದೆ ಹಲವು ಕೋಟೆಗಳು ಉರುಳಿವೆ, ಮಹಾರಾಷ್ಟ್ರದಲ್ಲೇ ಹಿಂದುತ್ವದ ಕೋಟೆ ಉಳಿದಿಲ್ಲ: ಬಿ ಕೆ ಹರಿಪ್ರಸಾದ್

ಸಾಲ ಸಂತ್ರಸ್ತರ ಪರವಾಗಿ ರೇಷ್ಮಾ, ಸುಹಾನ, ಸೌದ, ರಝಿಯಾ ಮಾತನಾಡಿದರು. ಇದೇ ವೇಳೆ ಡಿವೈಎಫ್ಐ ಜಿಲ್ಲಾ ಸಹ ಕಾರ್ಯದರ್ಶಿ ತಯ್ಯುಬ್ ಬೆಂಗ್ರೆ, ಸಿಪಿಎಂ ಬೆಂಗರೆ ಕಾರ್ಯದರ್ಶಿ ಎ ಬಿ ನೌಷಾದ್, ಗ್ರಾಮ ಸಮಿತಿ ಅಧ್ಯಕ್ಷ ಹನೀಫ್ ಬೆಂಗ್ರೆ, ಮುಖಂಡ ಜಮ್ಶೀರ್ ಬೆಂಗ್ರೆ ಇದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...