ಉಡುಪಿ | ಮೀನು ಮಾರಾಟ ಫೆಡರೇಷನ್‌ಗೆ ನೀಡಿದ 9 ಎಕರೆ ಜಾಗವನ್ನು ಕೂಡಲೇ ರದ್ದುಪಡಿಸಿ : ಧನಂಜಯ ಕಾಂಚನ್

Date:

ಮೀನು ಮಾರಾಟ ಫೆಡರೇಶನ್‌ಗೆ ಗುತ್ತಿಗೆ ಆಧಾರದಲ್ಲಿ ನೀಡಿರುವ ಬಂದರು ಇಲಾಖೆಯ ಮಲ್ಪೆಯ 9 ಎಕರೆ ಜಾಗವನ್ನು ಕೂಡಲೇ ವಾಪಸು ಪಡೆಯಬೇಕೆಂದು ಮಲ್ಪೆ ಹನುಮಾನ್ ನಗರದ ಶ್ರೀ ಹನುಮಾನ್ ವಿಠೋಬಾ ಭಜನಾ ಮಂದಿರದ ಸದಸ್ಯರು ಆಗ್ರಹಿಸಿದ್ದಾರೆ. ಇಲ್ಲದಿದ್ದರೆ ಹೋರಾಟಕ್ಕೂ ಮುಂದಾಗುವುದಾಗಿ ಅವರು ಎಚ್ಚರಿಸಿದ್ದಾರೆ.

ಈ ಬಗ್ಗೆ ಇಂದು ಮಲ್ಪೆಯ ಶ್ರೀ ಹನುಮಾನ್ ವಿಠೋಬಾ ಭಜನಾ ಮಂದಿರದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಮಂದಿರದ ಪ್ರಮುಖರದಾದ ಧನಂಜಯ ಕಾಂಚನ್, ಮಲ್ಪೆ ಸೀವಾಕ್ ಜಟ್ಟಿಯಿಂದ ಬಾಲಕರ ಶ್ರೀರಾಮ ಭಜನಾ ಮಂದಿರವರೆಗೆ ಹರಡಿರುವ 9 ಎಕರೆ ಜಾಗವನ್ನು ಫೆಡರೇಶನ್‌ಗೆ ಗುತ್ತಿಗೆ ಆಧಾರದಲ್ಲಿ ನೀಡಲಾಗಿದೆ. ಆದರೆ ಫೆಡರೇಶನ್ ತಮ್ಮ ಆಡಳಿತ ಮಂಡಳಿಯೊಡನೆ ಯಾವುದೇ ಚರ್ಚೆ ನಡೆಸದೆ, ಕೇವಲ ಶಾಸಕ ಯಶ್ಪಾಲ್ ಸುವರ್ಣ ಅವರ ಸ್ವಹಿತಾಸಕ್ತಿಯಿಂದ ಈ ಜಾಗವನ್ನು ಪಡೆದಿದ್ದಾರೆ. ಜಾಗವನ್ನು ಮೀನುಗಾರಿಕೆ ಚಟುವಟಿಕೆಯ ಹೆಸರಿನಲ್ಲಿ ಪಡೆದುಕೊಂಡರೂ, ವಾಸ್ತವದಲ್ಲಿ ಇಲ್ಲಿ ಜಲಕ್ರೀಡೆ, ಹೋಮ್ ಸ್ಟೇ ಮುಂತಾದ ವಾಣಿಜ್ಯ ಚಟುವಟಿಕೆ ನಡೆಸುವ ಪ್ಲಾನ್ ಹಾಕಿಕೊಂಡಿರುವುದಾಗಿ ಹೇಳಿದ್ದಾರೆ.

WhatsApp Image 2025 11 18 at 10.25.39 PM 1

ಈ ಕುರಿತು ಐದು ಭಜನಾ ಮಂದಿರಗಳ ಸದಸ್ಯರು ಸಹ ವಿರೋಧ ವ್ಯಕ್ತಪಡಿಸಿದ್ದರು. ಈ ಬಗ್ಗೆ ಶಾಸಕರನ್ನು ಸಂಪರ್ಕಿಸಿದಾಗ, ಮಂದಿರಕ್ಕೆ ತೊಂದರೆ ಆಗುವುದರಿಂದ ಯೋಜನೆಯನ್ನು ಕೈಬಿಡಲು ಸಿದ್ಧ ಎಂದು ಅವರು ಹೇಳಿಕೆ ನೀಡಿದ್ದರು. ಆದರೆ ಇತ್ತೀಚೆಗೆ ಅವರು ಹನುಮಾನ್ ವಿಠೋಬಾ ಮಂದಿರದ ಎದುರಿನ ಜಾಗವನ್ನು ಮಾತ್ರ ಬಿಟ್ಟು ಉಳಿದ ಪ್ರದೇಶವನ್ನು ಪಡೆಯುವ ಬಗ್ಗೆ ಹೊಸ ಹೇಳಿಕೆ ನೀಡಿದ್ದಾರೆ. ನಮ್ಮ ಆಗ್ರಹ ಕೇವಲ ಎದುರಿನ ಜಾಗಕ್ಕೆ ಮಾತ್ರ ಸೀಮಿತವಲ್ಲ. ಸಂಪೂರ್ಣ 9 ಎಕರೆ ಜಾಗದ ಗುತ್ತಿಗೆ ಆದೇಶವನ್ನು ರದ್ದುಪಡಿಸಲೇಬೇಕು ಎಂದು ಅವರು ಸ್ಪಷ್ಟಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮಂದಿರದ ಸದಸ್ಯರು ಬೇಡಿಕೆಯನ್ನು ತಕ್ಷಣ ಅಂಗೀಕರಿಸುವಂತೆ ಸಂಬಂಧಿತ ಇಲಾಖೆ ಹಾಗೂ ಸರ್ಕಾರಕ್ಕೆ ಮನವಿ ಮಾಡಿದ್ದು, ನಿರಾಕರಿಸಿದಲ್ಲಿ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ಮಾಡಲು ಸಿದ್ದ ಎಂದು ಎಚ್ಚರಿಸಿದ್ದರು.

ಪತ್ರಿಕಾಗೋಷ್ಟಿಯಲ್ಲಿ ಮಂದಿರದ ಅಧ್ಯಕ್ಷರಾದ ಸತೀಶ್‌ ಬಂಗೇರ, ಪ್ರಮುಖರಾದ ಸುರೇಶ್‌ ಸಾಲ್ಯಾನ್‌, ಶೇಖರ್‌ ಪುತ್ರನ್‌, ವಿಜಯ ಸುವರ್ಣ, ಸುಂದರ್‌ ಸಾಲ್ಯಾನ್‌, ತುಕರಾಂ ಮೈಂದನ್‌ ಹಾಗೂ ಮಹಿಳಾ ಘಟಕದ ಅಧ್ಯಕ್ಷೆ ಮಮತಾ ಕಾಂಚನ್‌ ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...